ಮಡಿಕೇರಿ ಜ.22 NEWS DESK : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಜ.23, 25 ಮತ್ತು 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಜ.23 ರಂದು ಬೆಳಗ್ಗೆ 11 ಗಂಟೆಗೆ ಮಾನ್ಯ ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ 3.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ನೂತನವಾಗಿ ನಿರ್ಮಿಸಿ ಉದ್ಘಾಟನೆಗೆ ಸಿದ್ಧವಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡದ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆಯ ಅಂಬಟ್ಟಿ ಗ್ರಾಮದ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಮುಖ್ಯಮಂತ್ರಿಯವರೊಂದಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ…
ಲೇಖಕ: admin
ಮಡಿಕೇರಿ ಜ.22 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿಶೇಷ ಅಭಿಯಾನ ಮೂಲಕ ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ನಮೂನೆ-6, ನಮೂನೆ-7 ಮತ್ತು ನಮೂನೆ-8 ರಲ್ಲಿ ಯುವ ಮತದಾರರ ಸೇರ್ಪಡೆ ಮತ್ತಿತರ ಕಾರ್ಯಗಳನ್ನು ಬಿಎಲ್ಒ ಮೂಲಕ ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ ಎಂದರು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಮತದಾರರು ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದರು. ಸದ್ಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸಂಬಂಧಿಸಿದಂತೆ ವೋಟರ್ ಆಪ್ ಮೂಲಕ ತಮ್ಮ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 546 ಮತಗಟೆಗಳಿದ್ದು, ಒಟ್ಟು 4,63,414 ಮತದಾರರು ಇದ್ದಾರೆ. ಅದರಲ್ಲಿ 2,27,339 ಪುರುಷ ಮತದಾರರು, 2,36,059 ಮಹಿಳಾ ಮತದಾರರು ಇದ್ದಾರೆ. ಹಾಗೂ 16…
ಮಡಿಕೇರಿ ಜ.22 NEWS DESK : ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ವಿದ್ಯಾಭ್ಯಾಸ ಪಡೆದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು. ಇಡೀ ವಿಶ್ವ ಒಂದು ಹಳ್ಳಿಯಾಗಿದೆ ಎಂದು ಹೇಳುತ್ತೇವೆ. ಆದರೆ ಜಾತಿಯತೆ ಹೋಗಿದೆಯೇ ಎಂಬುದನ್ನು ಆತ್ಮವಲೋಕನ ಮಾಡಿಕೊಳ್ಳಬೇಕು. ಮೌಡ್ಯ ಹಾಗೂ ಕಂದಾಚಾರಗಳಿಂದ ದೂರ ಇರಬೇಕು ಎಂದರು. ಅಲ್ಲಮಪ್ರಭು, ಬಿಜ್ಜಳ ಸೇರಿದಂತೆ ಬಸವಾದಿ ಶರಣರು ಸಮಾನತೆಗಾಗಿ ಎಲ್ಲರನ್ನೂ ಒಟ್ಟುಗೂಡಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು.…
ಚೆಟ್ಟಳ್ಳಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು. ತಕ್ಕ ಮುಖ್ಯಸ್ಥರ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ದೇವಾಲಯ ಸಮಿತಿಯ ಅಧ್ಯಕ್ಷ ಕ್ಯಾ. ಮುಳ್ಳಂಡ ಪಿ.ತಿಮ್ಮಯ್ಯ ಮಾತನಾಡಿ, ಅಯೋಧ್ಯೆಯ ನೆಲೆಯಲ್ಲಿ ಶ್ರೀ ರಾಮಲಾಲನ ಪ್ರಾಣಪ್ರತಿಷ್ಠಾ ಕಾರ್ಯ ಸಂದರ್ಭ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಶ್ರೀ ರಾಮ ಎಲ್ಲರಿಗೂ ಒಳಿತನ್ನು ಮಾಡಲೆಂದು ಪ್ರಾರ್ಥಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು.
ಮಡಿಕೇರಿ ಜ.22 NEWS DESK : ಶತ ಶತಮಾನಗಳ ಹಿಂದೂ ಸಮಾಜದ ನಿರೀಕ್ಷೆಗಳು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರತಿಷ್ಠಾಪನೆಯ ಮೂಲಕ ಸಾಕಾರಗೊಳ್ಳುವ ಹಂತದಲ್ಲಿ, ಕೊಡಗು ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀ ರಾಮ ನಾಮಸ್ಮರಣೆ ನಡೆಯಿತು. ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಬಹುತೇಕ ದೇವಸ್ಥಾನಗಳಲ್ಲಿ ನೇರ ಪ್ರಸಾರದ ವೀಕ್ಷಣೆಗೆ ಅನುವಾಗುವಂತೆ ಎಲ್ಇಡಿ ಪರದೆಗಳನ್ನು ಅಳವಡಿಸಲಾಗಿತ್ತು, ಅತ್ಯಂತ ಭಕ್ತಿ ಭಾವದಿಂದ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಹಿಂದೂ ಬಾಂಧವರು ಅಷ್ಟೇ ಕುತೂಹಲ ಆಸಕ್ತಿಗಳಿಂದ ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿ ಸಂಭ್ರಮಿಸಿದ್ದು ವಿಶೇಷ. ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಆಂಜನೇಯ ದೇಗುಲದಲ್ಲಿ ಅಳವಡಿಸಲಾಗಿದ್ದ ಎಲ್ಇಡಿ ಪರದೆಯ ಮೂಲಕ ನೂರಾರು ಭಕ್ತರು ಪ್ರಾಣ ಪ್ರತಿಷ್ಠಾಪನೆಯನ್ನು ವೀಕ್ಷಿಸಿ, ಅದಾಗಲೆ ಹಿಂದೂ ಪರ ಸಂಘಟನೆಗಳಿಂದ ವಿತರಿಸಲಾಗಿದ್ದ ಅಯೋಧ್ಯೆ ಮಂತ್ರಾಕ್ಷತೆಯನ್ನು ಶಿರಕ್ಕೆ ಹಾಕಿಕೊಂಡು ಶ್ರೀರಾಮನಿಗೆ ನಮಿಸಿದರು. ಸೋಮವಾರ ಬೆಳಗ್ಗಿನಿಂದಲೆ ಶ್ರೀ ಆಂಜನೇಯ ದೇಗುದಲ್ಲಿ ವಿಶೇಷ ಪೂಜೆಯೊಂದಿಗೆ ಶ್ರೀ ರಾಮ ತಾರಕ ಹೋಮ ಭಕ್ತಾದಿಗಳ ಸಮ್ಮುಖದಲ್ಲಿ ನೆರವೇರಿತು. ಇದೇ ಹಂತದಲ್ಲಿ ದೇಗುಲದ ಆವರಣದಲ್ಲಿ…
ಮಡಿಕೇರಿ ಜ.22 NEWS DESK : ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಗಾಗಿ ಒತ್ತಾಯಿಸಿ ಗಣರಾಜ್ಯೋತ್ಸವದ ದಿನವಾದ ಜ.26 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಅತ್ಯಂತ ಸೂಕ್ಷ್ಮ ಜನಾಂಗವಾಗಿರುವ ಆದಿಮಸಂಜಾತ ಕೊಡವರಿಗೆ ಕೊಡವ ಲ್ಯಾಂಡ್ ಮೂಲಕ ಸಾಂವಿಧಾನಿಕ ಭದ್ರತೆ ನೀಡಿದಾಗ ಮಾತ್ರ ಗಣರಾಜ್ಯೋತ್ಸವದ ದಿನ ಪರಿಪೂರ್ಣವಾಗಲು ಸಾಧ್ಯವೆಂದು ಅಭಿಪ್ರಾಯಪಟ್ಟಿದ್ದಾರೆ. ಆಂತರಿಕ ಸ್ವ-ನಿರ್ಣಯದ ಹಕ್ಕುಗಳಿಗಾಗಿ ಕಳೆದ 34 ವರ್ಷಗಳಿಂದ ಸಿಎನ್ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಬೇಡಿಕೆ ಈಡೇರದ ಕಾರಣ ಈ ಬಾರಿಯ 74ನೇ ಗಣರಾಜ್ಯೋತ್ಸವದಂದು ಕೂಡ ಕೊಡವ ಆತ್ಮಸಾಕ್ಷಿ, ಕೊಡವ ಒಮ್ಮತ ಮತ್ತು ಕೊಡವ ಪ್ರಜ್ಞೆಯ ಅಭಿವ್ಯಕ್ತಿಯನ್ನು ದೃಢೀಕರಿಸಲಾಗುವುದು. ಶುಕ್ರವಾರ ಬೆಳಿಗ್ಗೆ 10.30 ರಿಂದ 11.30 ಗಂಟೆಯವರೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಲ್ಯೂ…
ಕುಶಾಲನಗರ ಜ.22 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದಿಂದ ಕುಶಾಲನಗರದಲ್ಲಿ ಆರಂಭಿಸಿದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ನೂತನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವವರು ಸಂಘದ ನಿರ್ದೇಶಕರಾಗಿದ್ದಾರೆ. ಎಲ್ಲರ ಅನುಭವದಿಂದ ಸಮುದಾಯದ ಸಹಕಾರ ಸಂಘ ಜಿಲ್ಲೆಯ ಇತರೆ ಸಂಘಗಳಂತೆ ಮಾದರಿ ಸಂಘವಾಗಿ ಬೆಳವಣಿಗೆ ಹೊಂದಲಿದೆ. ಹಣ ನಿಂತ ನೀರಾಗಬಾರದು. ಸದಾ ಚಲನೆಯಲ್ಲಿರುವ ಮೂಲಕ ಇತರರಿಗೆ ಸಹಕಾರವಾಗುವಂತಿರಬೇಕು ಎಂದರು. ಸಭಾಂಗಣ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಅಮ್ಮತ್ತಿಯ ಕನ್ನಡ ಮಠದ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ಶ್ರೀರಾಮ ಪ್ರಾಣ ಪ್ರತಿಷ್ಠಾಪನ ಶುಭ ದಿನದಲ್ಲಿ ಉದ್ಘಾಟನೆಗೊಂಡಿರುವ ಈ ಸಂಘ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಹೊಂದಿ ಹಲವು ಶಾಖೆಗಳನ್ನು ತೆರೆಯುವಂತಾಗಲಿ ಎಂದು ಶುಭಹಾರೈಸಿದರು. ಕೊಡಗು ಜಿಲ್ಲೆಯಲ್ಲಿ ಹಲವು ವಿಶೇಷ ಕಾರ್ಯಕ್ರಮಗಳಿಗೆ ಹೆಸರುವಾಸಿಯಾದ ವೀರಶೈವ ಲಿಂಗಾಯತ ಸಮುದಾಯ ಇದೀಗ ಸಹಕಾರ ಸಂಘ ಸ್ಥಾಪಿಸಿರುವುದು ಶ್ಲಾಘನೀಯ…
ಚೆಯ್ಯಂಡಾಣೆ ಜ 22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ನರಿಯಂದಡ ಭಗವತಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯ ನೆರವೇರಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಸತ್ಯನಾರಾಯಣ ಪೂಜೆ, ವಿಷ್ಣು ಶಾಸ್ತ್ರನಾಮ, ನಾರಾಯಣ ಸೂಕ್ತ ಪಾರಾಯಣ, ಪುರುಷ ಸೂಕ್ತ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಮಧ್ಯಾಹ್ನ ಮಹಾ ಪೂಜೆ ನಂತರ ಭಕ್ತದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ಭಜನೆ ಹಾಗೂ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ಸಂದರ್ಭ ಮಂಗಳವಾದ್ಯ, ಶಂಖ, ಜಗಟೆ, ವಾಧ್ಯದೊಂದಿಗೆ ನೇರ ಪ್ರಸಾರ ವೀಕ್ಷಣೆ ನಡೆಯಿತು. ಪೂಜಾ ಕಾರ್ಯಕ್ರಮದ ನೇತೃತ್ವವನ್ನು ಅರ್ಚಕರಾದ ಶಿವ ಶರ್ಮ ವಹಿಸಿದರು. ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅಧಿಕ ಸಂಖ್ಯೆಯಲ್ಲಿ ಭಕ್ತಧಿಗಳುಪಾಲ್ಗೊಂಡಿದ್ದರು. ಈ ಸಂದರ್ಭ ವೇದ ಮೂರ್ತಿ ನರಸಿಂಹ ಭಟ್, ಭಗವತಿ ದೇವಸ್ಥಾನದ ಅಧ್ಯಕ್ಷ ಬಟ್ಟಿಯಂಡ ಜಯರಾಂ, ಉಪಾಧ್ಯಕ್ಷ ಛಾಯಾ ಪ್ರಕಾಶ್, ಕಾರ್ಯದರ್ಶಿ ಮಕ್ಕಿಮನೆ ಸುಧೀರ್, ಸಹ ಕಾರ್ಯದರ್ಶಿ ಮುಂಡಿಯೋಳಂಡ ದಿನು ಚಂಗಪ್ಪ, ಪ್ರಮುಖರಾದ ಕುಕ್ಕೆಮನೆ…
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ನೀರಗುಂದ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ಶ್ರೀ ರಾಮನ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ ಮಹಾ ಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು. ಈ ಸಂದರ್ಭದಲ್ಲಿ ಗ್ರಾಮದ ಬಾಲಕಿ ಎನ್.ಎ.ರಶ್ವಿಕ ಶ್ರೀ ಬಾಲರಾಮನ ವೇಷ ತೊಟ್ಟು ಪೂಜೆಯಲ್ಲಿ ಪಾಲ್ಗೊಂಡಿದ್ದು, ವಿಷೇಶವಾಗಿತ್ತು.
ಬೆಂಗಳೂರು ಜ.22 NEWS DESK : ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು. ಈ ಸಂದರ್ಭ ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು.






