ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮನ ಬಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ ನೇತೃತ್ವದಲ್ಲಿ ಅರ್ಚಕರಾದ ಸುಬ್ರಮಣ್ಯ ಕೇಕುನ್ನಾಯ ಶ್ರೀರಾಮನಿಗೆ ವಿಶೇಷ ಪೂಜೆ ನೆರವೇರಿಸಿದರು. ಭದ್ರಕಾಳಿ ದೇವಿಗೆ ಮಹಾಮಂಗಳಾರತಿ ಸೇರಿದಂತೆ ಶ್ರೀ ರಾಮನ ಸ್ತೋತ್ರವನ್ನ ಪಠಣ ಮಾಡುವ ಮೂಲಕ ವಿವಿಧ ಪೂಜಾವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಪ್ರಸಾದ ವಿನಿಯೋಗದ ಬಳಿಕ ನೆರೆದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಮಾಜಿ ಅಧ್ಯಕ್ಷ ಚಮ್ಮಟೀರ ಡಿಕ್ಕಿ ಕುಶಾಲಪ್ಪ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀರಾಮನ ಬಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ನಗರದ ಆಂಜನೇಯ ದೇವಾಲಯ, ಕೋದಂಡ ರಾಮ ದೇವಾಲಯ, ಚೌಡೇಶ್ವರಿ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶ್ರೀ ವಿಷ್ಣು ಸಹಸ್ರ ನಾಮಾರ್ಚನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಮಧ್ಯಾಹ್ನ ಮಹಾಪೂಜೆ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಾಲಯ ಆವರಣದಲ್ಲಿ ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮ ಪ್ರತಿಷ್ಠಾಪನಾ ಕಾರ್ಯದ ದೃಶ್ಯಗಳನ್ನು ಇದೇ ಸಂದರ್ಭ ಪರದೆಯಲ್ಲಿ ಪ್ರಸಾರ ಮಾಡಲಾಯಿತು.
ಬೆಂಗಳೂರು ಜ.22 NEWS DESK : ಪಿ.ಎಸ್.ಐ. ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಯೋಧ್ಯೆ ಜ.22 NEWS DESK : ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹಕ್ಕೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಅಧಿಕೃತವಾಗಿ ರಾಮಮಂದಿರ ಉದ್ಘಾಟನೆಯಾಗಿದ್ದು, ಮಧ್ಯಾಹ್ನ 12:29:03ಕ್ಕೆ ಆರಂಭವಾದ ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಧಾರ್ಮಿಕ ವಿದ್ವಾಂಸರ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ಮೋದಿ ಅವರು ಶ್ರೀ ರಾಮ ಜನ್ಮಭೂಮಿಯಲ್ಲಿನ ರಾಮ ಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಿದರು. ಸುಮಾರು 500 ವರ್ಷಗಳಿಂದ ಭಾರತದ ಕೋಟ್ಯಾಂತರ ಭಕ್ತರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ವಿಶೇಷ ಹೆಲಿಕಾಪ್ಟರ್ನಲ್ಲಿ ರಾಮಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಿಯ ಛತ್ರಿವನ್ನು ಹಿಡಿದುಕೊಂಡು ರಾಮಮಂದಿರ ಪ್ರವೇಶಿಸಿದರು. ಇದಾದ ಬಳಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಅವರು, ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ಕೈಂಕರ್ಯ ನೆರವೇರಿಸಿದರು. ಮಂತ್ರ ಘೋಷಗಳು ಮತ್ತು ಮಂಗಳ ವಾದ್ಯಗಳ ಸಂಗೀತದ ನಡುವೆ ಕಾಶಿಯ ಪ್ರಸಿದ್ಧ ವಿದ್ವಾಂಸ ಗಣೇಶ್ವರ್ ದ್ರಾವಿಡ್, ಲಕ್ಷ್ಮೀಕಾಂತ್ ದೀಕ್ಷಿತ್ ಹಾಗೂ ಇಬ್ಬರು ಪ್ರಮುಖ…
ಮಡಿಕೇರಿ ಜ.22 NEWS DESK : ಸ್ಪೂರ್ತಿ ಭಿನ್ನ ಸಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರ ವತಿಯಿಂದ ಕೂರ್ಗ್ ಬ್ಲಡ್ ಫೌಂಡೇಶನ್ ಸಂಸ್ಥೆಯ ಸದಸ್ಯ ಸಿದ್ದಿಕ್ ಪಾಂಡವರಕಲ್ಲು ಅವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಸಮಾಜ ಸೇವೆಯನ್ನು ಗುರುತಿಸಿ ಸ್ಪೂರ್ತಿ ಭಿನ್ನ ಸಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರ ಪ್ರಮುಖರು ಹಾಗೂ ಸಿಬ್ಬಂದಿಗಳು ಸ್ಮರಣಿಕೆ ನೀಡಿ ಗೌರವಿಸಿದರು.
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸೋಮವಾರಪೇಟೆಯ ಶ್ರೀ ರಾಮ ಮಂದಿರ ಹಾಗೂ ಆಂಜನೇಯಸ್ವಾಮಿ ದೇವಾಲಯಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಡಿಕೇರಿ ಜ.22 NEWS DESK : ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಸಿದ್ದಪಡಿಸಿರುವ 111 ಅಡಿ ಉದ್ದದ ಅಗರಬತ್ತಿ ಬೆಳಗಿಸುವ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಶಾಸಕರಾದ ಟಿ.ಎಸ್ ಶ್ರೀವತ್ಸ, ರಂಗ ಕುಟುಂಬದ ಸದಸ್ಯರಾದ ಆರ್.ಗುರು, ಕಿರಣ್ ರಂಗ, ವಿಷ್ಣು ರಂಗ, ಅನಿರುದ್ದ ರಂಗ ಮತ್ತು ನಿಖಿಲ್ ರಂಗ ಉಪಸ್ಥಿತರಿದ್ದರು.
ಮಡಿಕೇರಿ ಜ.22 NEWS DESK : ಕೊಡಗು ನೆಹರು ಯುವ ಕೇಂದ್ರದ ವತಿಯಿಂದ ನಡೆದ “ಮೈ ಭಾರತ್-ವೀಕ್ಷಿತ್ ಭಾರತ್@2047” ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಜಿಲ್ಲೆಯ ಯುವಕ ಅಬ್ದುಲ್ ರಝಕ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸ್ಪರ್ಧೆಯ ತೀರ್ಪುಗಾರರಾಗಿ ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಪ್ರಕಾಶ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕನ್ನಿಕಾ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಿಂದಿ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಖುರ್ಷಿದಾ, ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ರಂಜಿತಾ, ದೀಪ್ತಿ ಕಾರ್ಯನಿರ್ವಹಿಸಿದರು.
ಮಡಿಕೇರಿ ಜ.22 NEWS DESK : ಭಾರತ ಸರ್ಕಾರ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮಡಿಕೇರಿ ಸಂಚಾರಿ ಪೊಲೀಸ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ನಡೆಯಿತು. ಹಿರಿಯ ಪಾರ್ಥಮಿಕ ಶಾಲೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಸ್ಐ ಸಿ.ವಿ.ಶ್ರೀಧರ್ ಮಾತನಾಡಿ, ಮಕ್ಕಳಿಗೆ ಸಂಚಾರಿ ನಿಯಮಗಳು ತುರ್ತು ಸಂದರ್ಭದಲ್ಲಿ ಯಾವ ನಂಬರ್ ಸಹಾಯ ಪಡೆಯಬೇಕು ಹೀಗೆ ಹಲವಾರು ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಎಎಸ್ಐ ರಂಗೇಗೌಡ, ಎಎಸ್ಐ ನಂದ, ಪೊಲೀಸ್ ಕಾನ್ಸ್ಟೇಬಲ್ ಮಂಜು ಪಾಲ್ಗೊಂಡು ಮಾತನಾಡಿ, ಪೊಲೀಸ್ ಸಿಗ್ನಲ್ ಪಾಲಿಸಿ, ನಿಮ್ಮ ವಾಹನವನ್ನು “ಪಾರ್ಕಿಂಗ್ ಏರಿಯಾಗಳಲ್ಲಿ” ಮಾತ್ರ ನಿಲುಗಡೆ ಮಾಡಿ, ರಸ್ತೆಯ ಮಧ್ಯದಲ್ಲಿ ನಿಮ್ಮ ವಾಹನವನ್ನು ನಿಲ್ಲಿಸಬೇಡಿ, ಚಾಲನೆ ಮಾಡುವಾಗ ಎಂದಿಗೂ ಮದ್ಯದ ಪ್ರಭಾವಕ್ಕೆ ಒಳಗಾಗಬೇಡಿ, ಜೀಬ್ರಾ ಕ್ರಾಸಿಂಗ್ನಲ್ಲಿ ಪಾದಚಾರಿಗಳು ರಸ್ತೆ ದಾಟುವಾಗ ನಿಮ್ಮ ವಾಹನವನ್ನು ನಿಲ್ಲಿಸಿ ಎಂದರು. ಬ್ಲೈಂಡ್ ಕಾರ್ನರ್ಗಳಲ್ಲಿ ಓವರ್ಟೇಕ್ ಮಾಡಬೇಡಿ, ಮುಂಬರುವ ವಾಹನಕ್ಕೆ ದಾರಿ ನೀಡಿ, ಪ್ರಯಾಣಿಕರೊಂದಿಗೆ ನಿಮ್ಮ…
ನಾಪೋಕ್ಲು ಜ.22 : NEWS DESK : ಯೂನಿಯನ್ ಬ್ಯಾಂಕ್ ನ ವತಿಯಿಂದ ಬೆಟ್ಟಗೇರಿಯ ಉದಯ ಶಾಲೆಯ ಸಭಾಂಗಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ನಡೆಯಿತು. ಗ್ರಾ.ಪಂ ಅಧ್ಯಕ್ಷ ಚಳಿಯಂಡ ಕಮಲ ಉತ್ತಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸೌಲಭ್ಯಗಳ ಕುರಿತು ಸ್ವಸ್ತಿಕ್ ತುಮಕೂರು, ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಬಿನೋದ್ ಬ್ಯಾಂಕ್ ನಲ್ಲಿ ದೊರಕುವ ಸಾಲ ಸೌಲಭ್ಯಗಳು ಹಾಗೂ ವಿಮಾ ಪಾಲಿಸಿಗಳ ಬಗ್ಗೆ ಮಾಹಿತಿ ನೀಡಿದರು. ವಿಜಯ ವಿನಾಯಕ ಗ್ಯಾಸ್ ಎಂಜನ್ಸಿಯ ವ್ಯವಸ್ಥಾಪಕ ಎನ್.ಕೆ.ನಿರ್ಮಲ ಉಜ್ವಲ ಯೋಜನೆಯ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಉದಯ ಮಾತನಾಡಿ, ಹಸಿ ಕಸ-ಒಣ ಕಸ ಹಾಗೂ ಸ್ಯಾನಿಟರಿ ಕಸದ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಜನರಿಗೆ ಆಯುಷ್ಮಾನ್ ಭಾರತ, ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ, ಪ್ರಧಾನಮಂತ್ರಿ ಕಿಸಾನ್…






