ಲೇಖಕ: admin

ಮಡಿಕೇರಿ ಜ.5 NEWS DESK : ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಭವನ ಸಂಘಟನೆಯು ಜ.18 ರಂದು ರಜತ ಮಹೋತ್ಸವ ಆಚರಿಸುತ್ತಿದ್ದು, ಈ ಸಂದರ್ಭ ಹಲವು ರಾಜ್ಯಗಳ ಕನ್ನಡ ಹರಿಕಾರರು, ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ವಾಮನ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ. ಪ್ರತಿಷ್ಠಿತ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಶಕ್ತಿಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. ಹಲವು ಪ್ರಶಸ್ತಿಗಳಿಗೆ ಭಾಗಜರಾಗಿರುವ ಬಿ.ಜಿ.ಅನಂತಶಯನ ಅವರನ್ನು ಆಯ್ಕೆ ಮಾಡಲಾಗಿದೆ. “ಕನ್ನಡ ಪಯಶ್ವಿನಿ” ಅಂತರರಾಜ್ಯ ಪ್ರಶಸ್ತಿಯನ್ನು ಕೊಡಗಿನ ಹಿರಿಯ ಸಾಹಿತಿ, ನಿವೃತ್ತ ಸೇನಾನಿ ಕಿಗ್ಗಾಲು ಗಿರೀಶ್, ಸಾಹಿತಿ ಭಾರಧ್ವಜ್ ಕೆ.ಆನಂದತೀರ್ಥ ಬರಹ ಮತ್ತು ಸಿನಿಆ ಕ್ಷೇತ್ರಗಳಲ್ಲಿ ಪ್ರಶಸ್ತಿಗಳಿಗೆ ಭಾಜನರಾಗಿರುವ ಈರಮಂಡ ಹರಿಣಿ ವಿಜಯ್, ಲೇಖಕಿ, ನಿರೂಪಕಿ, ಪ್ರಾಧ್ಯಾಪಕಿ ಪ್ರತಿಮಾ ರೈ, ಗೌರಮ್ಮ ಪ್ರಶಸ್ತಿ ವಿಜೇತೆ ಸಾಹಿತಿ ಸಂಗೀತ ರವಿರಾಜ್ ಅವರುಗಳಿಗೆ ನೀಡಿ ಗೌರವಿಸಲಾಗುತ್ತಿದೆ. ಜಿಲ್ಲೆಯ ಮಾಧ್ಯಮ ಹಾಗೂ ಇತರ ಕ್ಷೇತ್ರಗಳಲ್ಲಿರುವ…

Read More

ಮಡಿಕೇರಿ ಜ.5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.27 ರಿಂದ ಮೇ 17ರವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಜನಾಂಗದ ಒಗ್ಗಟ್ಟು, ಅಭಿವೃದ್ಧಿ, ಹಕ್ಕೊತ್ತಾಯ, ಕ್ರೀಡೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಾಗಿ ಕಳೆದ ಹಲವು ವರ್ಷಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಇದೀಗ ಬಾಳಾಡಿ ಮನೋಜ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಗೌಡ ವೇದಿಕೆಯ ನೂತನ ಸಮಿತಿ ರಚನೆಯಾಗಿದ್ದು, ಈ ಸಮಿತಿ ವತಿಯಿಂದ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. 10 ಕುಟುಂಬ 18 ಗೋತ್ರದ ಗೌಡ ಜನಾಂಗದ 27ನೇ ವರ್ಷದ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟವು ಏ.27 ರಿಂದ ಮೇ 17ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಕುಟುಂಬವಾರು ಟೆನ್ನಿಸ್…

Read More

ಮಡಿಕೇರಿ ಜ.5 NEWS DESK : ಮಡಿಕೇರಿಯಲ್ಲಿ ‘ನೀನಾಸಂ ತಿರುಗಾಟ’ ನಾಟಕ ಪ್ರದರ್ಶನವನ್ನು ಜ.9 ಮತ್ತು 10 ರಂದು ನಗರದ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿನ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದಲ್ಲಿ ಆಯೋಜಿಸಲಾಗಿದೆ.  ಶುಕ್ರವಾರ ಸಂಜೆ 6.30 ಕ್ಕೆ ಬಾನು ಮುಷ್ತಾಕ್ ಅವರ ಕಥೆಯನ್ನು ಆಧರಿಸಿದ ರಂಗಪ್ರಸ್ತುತಿ ‘ಹೃದಯದ ತೀರ್ಪು’ ಪ್ರದರ್ಶನ ಇದ್ದು ರಂಗರೂಪಕ್ಕೆ ಡಾ. ಎಂ ಗಣೇಶ್ ನಿರ್ದೇಶನ ಇದೆ. ಜ.10 ರಂದು ಸಂಜೆ 6.30 ಗಂಟೆಗೆ ಜಿ. ಶಂಕರ ಪಿಳ್ಳೆ ರಚನೆಯ, ದಾಮೋದರ ಶೆಟ್ಟಿ ಕನ್ನಡಕ್ಕೆ ಅನುವಾದಿಸಿರುವ ಶಂಕರ ವೆಂಕಟೇಶ್ವರನ್ ನಿರ್ದೇಶನದ ಅವತರಣಮ್ ಭ್ರಾಂತಾಲಯಮ್ ನಾಟಕ ಪ್ರದರ್ಶನ ಇದೆ. ಎರಡೂ ನಾಟಕಗಳಿಗೂ ಉಚಿತ ಪ್ರವೇಶ ಇರುತ್ತದೆ ಎಂದು ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ಕಾರ್ಯದರ್ಶಿ ಬಾಲಾಜಿ ಕಶ್ಯಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನಾಪೋಕ್ಲು ಜ.5 NEWS DESK  : ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಕೊಡಗಿನ ಜೆ.ಡಿ.ಸ್ವಾತಿ ಆಯ್ಕೆಯಾಗಿದ್ದಾರೆ. ಮೈಸೂರಿನ ಸೆಂಟ್ ಫಿಲೋಮಿನಾಸ್ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸ್ವಾತಿ ಎನ್ ಸಿ ಸಿ ಇಂದ ಜೂನಿಯರ್ ಅಂಡರ್ ಆಫೀಸರ್ ಆಗಿ ಜ.26 ರಂದು ದೆಹಲಿಯಲ್ಲಿ ಜರುಗಲಿರುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾಳೆ. ಜೆ.ಡಿ.ಸ್ವಾತಿ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ನೂರಂವಾಡ ಮಠದ ದೇವರಾಜು ಹಾಗೂ ನಯನ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ

Read More

ನಾಪೋಕ್ಲು ಜ.5 NEWS DESK : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಲಾಯಿತು. ಪರೀಕ್ಷೆಯಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಿಂದ ಒಟ್ಟು 40 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಡಿಂಪನ ಬಿ.ಜೆ ಹಾಗೂ 7ನೇ ತರಗತಿ ವಿದ್ಯಾರ್ಥಿ ದುಶ್ಯಂತ್ ಎಂ.ಎಸ್ ರಾಜ್ಯಮಟ್ಟದಲ್ಲಿ ಐದನೇ ಸ್ಥಾನ ಹಾಗೂ 6ನೇ ತರಗತಿ ವಿದ್ಯಾರ್ಥಿ ವರ್ಧನ್ ತಾಲ್ಲೂಕು ಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಶಾಲೆಯ ಗಣಿತ ಶಿಕ್ಷಕರಾಗಿರುವ ಅನಿಲ್ ಯು.ಎಂ, ಬೃಂದಾಕವನ್ ಕುದುಪಜೆ ಹಾಗೂ ಡಿ.ಎಂ.ರಾಜೇಶ್ವರಿ ಮುಖ್ಯ ಶಿಕ್ಷಕರಾದ ಕವನ್ ಕುದುಪಜೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸ್ವರೂಪ್ ಕೆ.ಬಿ.ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಜ.5 NEWS DESK : ಪಿಎಸ್‌ಎ ಪ್ರಾಯೋಜಕತ್ವದಲ್ಲಿ ಆರ್ಜಿ ಆಶೀರ್ವಾದ್ ಟರ್ಫ್ ಮೈದಾನದಲ್ಲಿ ನಡೆದ ಪ್ರಥಮ ವರ್ಷದ ನ್ಯಾನೋ ಕ್ರಿಕೆಟ್ ಲೀಗ್ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆಯಿತು. ಲೀಗ್‌ನ ರೋಚಕ ಅಂತಿಮ ಪಂದ್ಯದಲ್ಲಿ ಮೊಹಮ್ಮದ್ ಮುಸ್ತಫ ಅವರ ಮಾಲೀಕತ್ವದ ಬ್ರದರ್ಸ್ ಕ್ರಿಕೆಟ್ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತು. ತೀವ್ರ ಪೈಪೋಟಿಯಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಸಿಯಾಬ್ ಅವರ ಮಾಲೀಕತ್ವದ ಸ್ಟ್ರೈಕರ್ಸ್ ಅಂಬಟ್ಟಿ ತಂಡ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡು ಪ್ರಶಂಸೆಗೆ ಪಾತ್ರವಾಯಿತು. ಪಂದ್ಯಾವಳಿಯ ವೈಯಕ್ತಿಕ ಪ್ರಶಸ್ತಿಗಳಲ್ಲಿ ಸಜೀರ್ ಎ.ಎಸ್. ಅವರು ಟೂರ್ನಮೆಂಟ್ ಅವಧಿಯಲ್ಲಿನ ಶ್ರೇಷ್ಠ ಸರ್ವಾಂಗೀಣ ಪ್ರದರ್ಶನಕ್ಕಾಗಿ ‘ಸರಣಿಯ ಶ್ರೇಷ್ಠ ಆಟಗಾರ (Man of the Series)’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಜೊತೆಗೆ ಅತ್ಯುತ್ತಮ ಬ್ಯಾಟ್ಸ್‌ಮನ್, ಅತ್ಯುತ್ತಮ ಬೌಲರ್ ಹಾಗೂ ಅತ್ಯಧಿಕ ಫೋರ್‌ಗಳನ್ನು ಬಾರಿಸಿದ ಆಟಗಾರ ಎಂಬ ಮೂರು ಪ್ರಮುಖ ಪ್ರಶಸ್ತಿಗಳನ್ನೂ ಪಡೆದುಕೊಂಡರು. ಅತ್ಯುತ್ತಮ ಕ್ಯಾಚ್ ಪ್ರಶಸ್ತಿಯನ್ನು ಆಶಿಕ್  ಪಡೆದರೆ, ಉತ್ತಮ ಫೀಲ್ಡರ್ ಪ್ರಶಸ್ತಿಯನ್ನು ನಿಹಾಲ್ ಎಂ.ಎಸ್. ಅವರು ತಮ್ಮ ಪಾಲಾಗಿಸಿಕೊಂಡರು.…

Read More

ನಾಪೋಕ್ಲು ಜ.5 NEWS DESK : ಕೊಡಗಿನ ಕಿಗ್ಗಾಲು ಗ್ರಾಮದ ಎಂ.ಎಸ್.ನಿಧಿ ತ.ರಾ.ಸು. ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ.ಎಸ್.ನಿಧಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರಿನ ಜನ್ಮಭೂಮಿ ಸಾಂಸ್ಕೃತಿಕ ನಾಗರೀಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ಕೊಡಗಿನ ಎಂ.ಎಸ್.ನಿಧಿ ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ಅವರನ್ನು ಆಯ್ಕೆಗೊಳಿಸಲಾಗಿತ್ತು. ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ನಿಧಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಕಿಗ್ಗಾಲು ಗ್ರಾಮದ ನಿವಾಸಿ ಮೊಟ್ಟೆಮನೆ ಶ್ರೀಧರ್ ಮತ್ತು ರೈನಾ ದಂಪತಿಯ ಪುತ್ರಿ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಜ.5 NEWS DESK : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯನ್ನು ಆಯೋಜಿಸಲಾಯಿತು. ಪರೀಕ್ಷೆಯಲ್ಲಿ  ಶ್ರೀ ರಾಜರಾಜೇಶ್ವರಿ ಶಾಲೆಯ ಪ್ರೌಢಶಾಲಾ ವಿಭಾಗದಿಂದ ಒಟ್ಟು 50 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿತ್ತಾರೆ.  ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಜಿಶ್ಮಿತಾ ಬಿ.ಜಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ,  8ನೇ ತರಗತಿ ವಿದ್ಯಾರ್ಥಿನಿ ಹಾಸಿನಿ ಸಿ.ವಿ ರಾಷ್ಟ್ರ ಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ 9ನೇ ತರಗತಿ ವಿದ್ಯಾರ್ಥಿ ತ್ರಿಶೂಲ್ ತಿಮ್ಮಯ್ಯ ಬಿ.ಹೆಚ್ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ದಕ್ಷ ಎಂ.ಆರ್ ಜಿಲ್ಲಾಮಟ್ಟದಲ್ಲಿ ನಾಲ್ಕನೇ ಸ್ಥಾನ, 10ನೇ ತರಗತಿ ವಿದ್ಯಾರ್ಥಿನಿ ನೀಮ ಎಂ.ಪಿ ಜಿಲ್ಲಾ ಮಟ್ಟದಲ್ಲಿ 5ನೇ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ಖುಷಿ ಡಿ.ಸಿ  ತಾಲೂಕುಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ ಪ್ರೇಕ್ಷ ಪೊನ್ನಮ್ಮ ಕೆ.ಆರ್ ತಾಲೂಕು ಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿರುತ್ತಾರೆ. ಶಾಲೆಯ ಗಣಿತ ಶಿಕ್ಷಕರಾಗಿರುವ …

Read More

ನಾಪೋಕ್ಲು ಜ.5 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಕೊಡಗು ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತನ್ನು ಸರ್ಕಾರಿ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಗಣಿಸಿ, ಶಾಶ್ವತ ಅನುದಾನ ಮೀಸಲಿಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿರುವ, ವಿರಾಜಪೇಟೆ ಶಾಸಕರನ್ನು ಅವರ ಗೃಹಕಚೇರಿಯಲ್ಲಿ ಘಟಕದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಕ್ಕಳ ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದನ್ನು ಸರ್ಕಾರ ಗಮನಿಸಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ವಿಶೇಷ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕರಾತ್ಮಕ ಸ್ಪಂದಿಸಿ, ಸೂಕ್ತ ಸಹಕಾರ ನೀಡಲಿದ್ದಾರೆ ಎಂದರಲ್ಲದೆ, ಸಧ್ಯದಲ್ಲೇ ಪರಿಷತ್ತಿನ ನಿಯೋಗವನ್ನು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿಸುವ ಭರವಸೆ ನೀಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯ…

Read More

ಮಡಿಕೇರಿ ಜ.5 NEWS DESK : ಜಿಲ್ಲೆಯ ವಿ.ಬಾಡಗ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕ್ರೀಡಾ ತರಬೇತಿ ಕೇಂದ್ರದ ಜಾಗಕ್ಕೆ ಪತ್ರಕರ್ತರೊಂದಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಮುಂದಿನ ಕಾರ್ಯಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಕ್ರೀಡಾ ತರಬೇತಿ ಕೇಂದ್ರದ ಕುರಿತು ತಿಳಿದುಕೊಳ್ಳುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿ.ಬಾಡಗಕ್ಕೆ ತೆರಳಿದ ಹಿನ್ನೆಲೆ ಸ್ಥಳಕ್ಕೆ ಶಾಸಕರು ಆಗಮಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ವಿ.ಬಾಡಗ ಗ್ರಾಮದಲ್ಲಿ 11.5 ಎಕರೆಯಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಅಥ್ಲೆಟಿಕ್‍ಟ್ರ್ಯಾಕ್, ಹಾಕಿ ಟರ್ಫ್, ವಾಲಿಬಾಲ್, ಟೆನ್ನಿಸ್, ಒಲಂಪಿಕ್ ಅಳತೆಯ ಸ್ವಿಮ್ಮಿಂಗ್ ಪೂಲ್, ಶೂಟಿಂಗ್‍ರೇಂಜ್ ಹೀಗೆ ನಾನಾ ಬಗೆಯ ಕ್ರೀಡೆಗಳಿಗೆ ಪೂರಕ ವಾತಾವರಣ ಸೃಷ್ಟಿಸಲಾಗುವುದು. ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ಭೂಮಿಪೂಜೆ ನೆರವೇರಿಸುವಚಿಂತನೆ ಇದೆ. 11.5 ಎಕರೆಜಾಗ ಜಿಲ್ಲಾಡಳಿತದಿಂದ ಕ್ರೀಡಾ ಇಲಾಖೆಗೆ ಹಸ್ತಾಂತರಿಸುವ ಕೆಲಸವಾಗಿದೆ ಎಂದರು. ರಾಜ್ಯಸಭಾ ಸದಸ್ಯ ಅಜಯ್ ಮಕಾನ್ ಅವರು ಈ ಯೋಜನೆ ಕಾರ್ಯತಗಗೊಳಿಸುವಲ್ಲಿ ಪ್ರಮುಖ ಪಾತ್ರ…

Read More