ಮಡಿಕೇರಿ ಡಿ.6 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರ ಕವಿಗೋಷ್ಠಿಯನ್ನು ಡಿ.9 ರಂದು ಮಧ್ಯಾಹ್ನ 2.30ಕ್ಕೆ ಮಡಿಕೇರಿಯ ಕೊಡಗು ಪತ್ರಿಕೆ ಭವನದಲ್ಲಿ ಏರ್ಪಡಿಸಲಾಗಿದೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಬಿ.ಎ ಶಂಷುುದ್ದೀನ್ ರವರು ವಹಿಸಲಿದ್ದು ಕವಿಗೋಷ್ಠಿಯನ್ನು ಕವಿ ಸಾಹಿತಿ, ಕಾಜೂರು ಸತೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಸಾಹಿತಿ ಶ್ರೀಮತಿ ಕೃಪಾ ದೇವರಾಜ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ. ಹಿರಿಯ ಕವಿಗಳಾದ ಕಿಗ್ಗಾಲು ಎಸ್ ಗಿರೀಶ್, ಶ್ರೀಮತಿ ಜಲ ಕಾಳಪ್ಪ , ಮೂಟೆರ ಕೆ ಗೋಪಾಲಕೃಷ್ಣ ಶ್ರೀಮತಿ ಕೆ ಶೋಭಾ ರಕ್ಷಿತ್, ಶ್ರೀಮತಿ ಕಟ್ರತನ ಲಲಿತಾ ಅಯ್ಯಣ್ಣ, ಶ್ರಿಮತಿ ಶ.ಗ. ನಯನತಾರ, ಶ್ರೀಮತಿ ಅಂಬೆಕಲ್ಲು ಸುಶೀಲ ಕುಶಾಲಪ್ಪ, ಬಿ.ಜಿ ಅನಂತಶಯನ, ವಿದ್ವಾನ್ ಶಂಕರಯ್ಯ ಮಾಸ್ಟರ್, ಶ್ರೀಮತಿ ಭಾಗೀರಥಿ…
ಲೇಖಕ: admin
ನಾಪೋಕ್ಲು ಡಿ.6 NEWS DESK : ಕೊಡಗಿನ ಸುಗ್ಗಿಯ ಹಬ್ಬವಾದ ಧಾನ್ಯ ಲಕ್ಷ್ಮೀಯನ್ನು ಬರಮಾಡಿಕೊಳ್ಳುವ ಪುತ್ತರಿ (ಹುತ್ತರಿ) ಹಬ್ಬ ವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ಹುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ಸುತ್ತಮುತ್ತಲಿನ ಪೊ0ಗೇರ, ಕೋಳೆಯಂಡ, ಬೊಳ್ಳನಮ್ಮಂಡ, ಹಳ್ಳಿ ಮಾಡ ಸೇರಿದಂತೆ ಅಮ್ಮಂಗೇರಿಯ ಸುತ್ತÀಮುತ್ತಲಿನ ಕುಟುಂಬದವರು ಊರಿನ, ಪರವೂರಿನ ಭಕ್ತರು ಪಾಲ್ಗೊಂಡಿದ್ದರು. ದೇವಾಲಯದ ಸುತ್ತಮುತ್ತಲಿನ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿ ಬೊಳಕ್ನೊಂದಿಗೆ ದೇವಾಲಯಕ್ಕೆ ಆಗಮಿಸಿದರು. ಬಳಿಕ ಕುಡಿಯರ ಕಾವೇರಪ್ಪ ಮತ್ತು ಸಂಗಡಿಗರಿಂದ ದುಡಿಕೊಟ್ ಪಾಟ್ ನುಡಿಸಲಾಯಿತು. ಬಳಿಕ ಹಿರಿಯರಾದ ಪೊ0ಗೇರ ಉಲ್ಲಾಸ್ ದೇವರ ನಡೆಯಲ್ಲಿ ನಾಡಿನ ಸುಭಿಕ್ಷೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತರ ಜಾಗಟೆ, ಡೋಲು ಸಹಿತ ಬೆಳ್ಳಿಯ ಬಿಂದಿಗೆಯೊ0ದಿಗೆ ಮುಕ್ಕಾಟಿ ಸುಬ್ರಮಣಿ ಹಾಗೂ ವಿವಿಧ ಕುಟುಂಬಗಳ ಮಹಿಳೆಯರು ತಳಿಯಕ್ಕಿ…
ಸುಂಟಿಕೊಪ್ಪ ಡಿ.5 NEWS DESK : ವ್ಯಕ್ತಿತ್ವ ನಿರ್ಮಾಣದಲ್ಲಿ ಶಾಲೆ ಮತ್ತು ಶಿಕ್ಷಕರ ಜವಾಬ್ದಾರಿ ಬಹುದೊಡ್ಡದಿದ್ದು, ಪೋಷಕರು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ವಾತವರಣವನ್ನು ತಮ್ಮ ಕುಟುಂಬಗಳಲ್ಲಿ ಒದಗಿಸಿದಲ್ಲಿ ಮಾತ್ರ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯವೆಂದು ವಂ.ಗುರುಗಳಾದ ವಿಜಯಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಶಾಲಾವರಣದಲ್ಲಿ ಮಕ್ಕಳ ಕವಾಯತ್ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಶಿವಚನ ನೀಡಿ ಮಾತನಾಡಿದ ಅವರು, ಪೋಷಕರು ಮಕ್ಕಳನ್ನು ಒಮ್ಮೆ ಶಾಲೆಗೆ ಸೇರಿಸಿ ಬಿಟ್ಟರೆ ತಮ್ಮ ಜವಾಬ್ದಾರಿ ಮುಗಿಯಿತು ಎಂಬ ಭಾವನೆಯನ್ನು ಹೊಂದಿರ ಬಾರದು. ಬದಲಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವದೆಂದು ವಂ.ಗುರುಗಳಾದ ವಿಜಯಕುಮಾರ್ ಹೇಳಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್ಕುಮಾರ್ ಮಾತನಾಡಿ ತಾವು ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಶಾಲೆಯಲ್ಲಿ ನೀಡಿದ ಶಿಕ್ಷಣವು ತನ್ನನ್ನು ಸುಂಟಿಕೊಪ್ಪದ ಪ್ರಥಮ ಪ್ರಜೆಯನ್ನಾಗಿ ರೂಪಿಸಿದೆ ಎಂದು ಭಾವುಕರಾಗಿ ನುಡಿದರು. ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಕೃಷ್ಣಪ್ಪ ಅವರು…
ಮಂಡ್ಯ ಡಿ.5 NEWS DESK : ಮಂಡ್ಯದ ವಿ.ಸಿ.ಫಾರಂನಲ್ಲಿ ನಿರ್ಮಿಸಿರುವ ಗ್ರಾಮೀಣ ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಬಲವರ್ಧನೆಯ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ ಬಳಿಕ, “ಕೃಷಿ ಮೇಳ 2025” ನ್ನು ಉದ್ಘಾಟಿಸಿದರು. ಕೃಷಿ ಸಚಿವರಾದ ಚಲುವರಾಯಸ್ವಾಮಿ ಮತ್ತು ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಮಳವಳ್ಳಿ ನರೇಂದ್ರಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.
ನವದೆಹಲಿ ಡಿ.5 NEWS DESK : ಭಾರತ ಮತ್ತು ರಷ್ಯಾ ‘ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಟ್ಟಾಗಿ ನಡೆಯುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ದ್ವಿಪಕ್ಷೀಯ ಸಭೆ ನಂತರ ಇಂದು ಮಧ್ಯಾಹ್ನ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಭಯೋತ್ಪಾದನೆಯನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಮಾಸ್ಕೋ ಬಲವಾದ ಬೆಂಬಲ ನೀಡುತ್ತಿದೆ ಮತ್ತು ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ನ ನಂಟಿದೆ ಎಂಬ ಆರೋಪದ ನಂತರ ಅದು ಬಲವಾಗಿ ಪ್ರತಿಕ್ರಿಯಿಸಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಮಾಸ್ಕೋ, “ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಭಾರತದೊಂದಿಗೆ ಕೈಜೋಡಿಸುವುದಾಗಿ” ಹೇಳಿದರು.
ಸೋಮವಾರಪೇಟೆ ಡಿ.5 NEWS DESK : ಕೊಡಗು ಜಿಲ್ಲಾ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಮಹಿಳಾ ಸಮಾಜ ಭವನದಲ್ಲಿ “ಶತಕಂಠ ಗೀತ ಗಾಯನ” ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. 150 ವರ್ಷ ಪೂರೈಸಿದ ಬಕಿಮ್ಚಂದ್ರ ಚಟರ್ಜಿ ರಚಿಸಿರುವ “ವಂದೇ ಮಾತರಂ”, ರಾಷ್ಟ್ರಕವಿ ಕುವೆಂಪು ರಚಿಸಿದ “ಜಯ ಭಾರತ ಜನನಿಯ ತನುಜಾತೆ”, ಹುಯಿಲಗೊಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಗೀತೆಗಳಿಗೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶತಕಂಠ ಗಾಯನದ ಮೂಲಕ ಗೌರವ ಸಲ್ಲಿಸಲಾಯಿತು. ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು, 150 ವರ್ಷ ಪೂರೈಸಿದ “ವಂದೇ ಮಾತರಂ” ಗೀತೆಗಳನ್ನು ಎಲ್ಲಾ ಗಾಯಕ ಗಾಯಕಿಯರು ಹಾಡಿದರು. ಕಾರ್ಯಕ್ರಮವನ್ನು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಉದ್ಘಾಟಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸ್ನೇಹ ಬಳಗದ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ವಹಿಸಿದ್ದರು. ವೇದಿಕೆಯಲ್ಲಿ ಬಳಗದ ತಾಲ್ಲೂಕು ಅಧ್ಯಕ್ಷ ಹೆಚ್.ಜೆ.ಜವರ, ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಲಕ್ಷ್ಮಿ…
ವಿರಾಜಪೇಟೆ ಡಿ.5 NEWS DESK : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪುತ್ತರಿ (ಹುತ್ತರಿ) ಹಬ್ಬವನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರು ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ ದೇವರು ಹಾಗೂ ಶ್ರೀ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾ ಮಂಗಳಾರತಿ ಸೇವೆಯನ್ನು ನೆರವೇರಿಸಿದರು. ನಂತರ ನೆರೆಕಟ್ಟಿ, ಸಮೀಪದ ಮಕ್ಕಿಯ ಬಿ.ಆರ್.ಶ್ರೀನಿವಾಸ್ ಅವರ ಗದ್ದೆಗೆ ತೆರಳಿ ಧಾನ್ಯಲಕ್ಷ್ಮಿಗೆ ಪೂಜೆಯನ್ನು ಸಲ್ಲಿಸಿ, ಹಾಲಿನ ಅಭಿಷೇಕವನ್ನು ಮಾಡಿ ಆರತಿಯನ್ನು ಬೆಳಗಿ ಶ್ರೀ ಇಗ್ಗುತ್ತಪ್ಪ, ಕಾವೇರಮ್ಮೆಯನ್ನು ಪ್ರಾರ್ಥಿಸುವ ಮೂಲಕ ಕದಿರನ್ನು ತೆಗೆದರು. ನೆರೆದಿದ್ದ ಭಕ್ತಾದಿಗಳು ಪೊಲಿ ಪೊಲಿಯೇ ದೇವಾ ಎಂದು ಕೂಗುತ್ತ ಧಾನ್ಯಲಕ್ಷ್ಮಿ ಗೆ ನಮಿಸಿದರು. ದೇವಸ್ಥಾನಕ್ಕೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪೂಜೆಯನ್ನು ಸಲ್ಲಿಸಿ ಧಾನ್ಯಲಕ್ಷ್ಮಿಗೆ ಪೂಜೆ ಸಲ್ಲಿಸಲಾಯಿತು. ನೆರೆದಿದ್ದ ಭಕ್ತಾದಿಗಳಿಗೆ ಅರ್ಚಕರು ಕದಿರನ್ನು ಹಾಗೂ ಪ್ರಸಾದವನ್ನು ವಿತರಿಸಿದರು. ಸಿಡಿ ಮದ್ದನ್ನು ಸಿಡಿಸಿ ಸಂಭ್ರಮಿಸಿದರು. ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಅರ್ಚಕರಾದ…
ಮಡಿಕೇರಿ ಡಿ.5 NEWS DESK : ಧಾನ್ಯಲಕ್ಷ್ಮಿಯನ್ನು ಸ್ವಾಗತಿಸುವ ಕೊಡಗಿನ ಸುಗ್ಗಿಯ ಹಬ್ಬ ‘ಪುತ್ತರಿ’ ಆಚರಣೆಯ ಮರುದಿನವಾದ ಇಂದು ‘ಪುತ್ತರಿ ಅರಮನೆ ಕೋಲ್’, ಜಾನಪದ ನೃತ್ಯ ಪ್ರಕಾರಗಳ ಪ್ರದರ್ಶನ ನಗರದ ಕೋಟೆಯಾವರಣದಲ್ಲಿ ನಡೆಯಿತು. ಕೊಡಗನ್ನಾಳಿದ ಹಾಲೇರಿ ವಂಶಸ್ಥರ ಆಡಳಿತಾವಧಿಯಲ್ಲಿ ಪುತ್ತರಿ ಹಬ್ಬಾಚರಣೆಯ ಸಂಭ್ರಮದೊಂದಿಗೆ ಈ ನೆಲದ ಸಂಸ್ಕøತಿಗೆ ಒತ್ತು ನೀಡಿ ನಡೆಯುತ್ತಿದ್ದ ‘ಪುತ್ತರಿ ಅರಮನೆ ಕೋಲ್’ ಕೋಲಾಟವನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಧಾನ್ಯಲಕ್ಷ್ಮಿಯನ್ನು ಮನೆದುಂಬಿಸಿಕೊಳ್ಳುವ ಹುತ್ತರಿಯ ಸಂಭ್ರಮದ ಹಿನ್ನೆಲೆಯಲ್ಲೆ ಹಾಲೇರಿ ರಾಜವಂಶಸ್ಥ ಲಿಂಗರಾಜೇಂದ್ರನ ಆಡಳಿತದ ಅವಧಿಯಲ್ಲಿ ಕೋಟೆ ಆವರಣದಲ್ಲಿ ಹುತ್ತರಿಯ ಮರುದಿನ ನಾಡಿನ ಜನತೆಯ ಸಮ್ಮುಖದಲ್ಲಿ ಹುತ್ತರಿ ಕೋಲಾಟ್ ನಡೆಯುತ್ತಿತ್ತು. ರಾಜನ ಆಳ್ವಿಕೆಯ ಬಳಿಕ ಕಾಲ ಕ್ರಮೇಣ ಈ ಪದ್ಧತಿ ಸ್ಥಗಿತಗೊಂಡಿತ್ತು. ನಂತರದ ವರ್ಷಗಳಲ್ಲಿ, ರಾಜರ ಕಾಲದಲ್ಲಿ ಕೋಲಾಟ ನಡೆಸಿಕೊಡುತ್ತಿದ್ದ ‘ಪಾಂಡೀರ’ ಕುಟುಂಬಸ್ಥರ ಸಹಕಾರದೊಂದಿಗೆ ಕೋಟೆಯ ಆವರಣದಲ್ಲಿ ಪುತ್ತರಿ ಕೋಲಾಟವನ್ನು ನಡೆಸಲಾಗುತ್ತಿದೆ. ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಮಡಿಕೇರಿ ಕೊಡವ ಸಮಾಜ ಹಾಗೂ ಪಾಂಡೀರ ಕುಟುಂಬಸ್ಥರ ಸಂಯುಕ್ತಾಶ್ರಯದಲ್ಲಿ ನಡೆದ ಪುತ್ತರಿ…
ಕುಶಾಲನಗರ ಡಿ.5 NEWS DESK : ಪೂಜೆ ಪುನಸ್ಕಾರಗಳನ್ನು ಮಾಡುವ ಮೂಲಕ ದೈವಶಕ್ತಿ ಪಡೆಯಲು ಸಾಧ್ಯ ಎಂದು ತೊರೆನೂರು ವಿರಕ್ತ ಮಠಾಧೀಶರಾದ ಶ್ರೀ ಮಲ್ಲೇಶ ಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡಿಗೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಹೆಬ್ಬಾಲೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವ್ಯವಸ್ಥಾಪನ ಸಮಿತಿ ಸಂಯುಕ್ತ ಆಶ್ರಯದಲ್ಲಿ ಹೆಬ್ಬಾಲೆ ಶ್ರೀ ಬನಶಂಕರಿ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿ ಅವರು ಮಾತನಾಡಿದರು. ದೇವರು, ಪ್ರಕೃತಿ ಆರಾಧನೆ ಮೂಲಕ ಎಲ್ಲವೂ ಗಳಿಕೆ ಸಾಧ್ಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಮಾಜಕ್ಕೆ ಒಳಿತಾಗುವ ಕೆಲಸ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕೊಡಗು ಜಿಲ್ಲಾ ಸ್ಥಾಪಕ ಅಧ್ಯಕ್ಷರಾದ ಎಂ ಬಿ ಅಭಿಮನ್ಯು…
ಕುಶಾಲನಗರ ಡಿ.5 NEWS DESK : ಕಾವೇರಿ ನದಿ ಸೇರಿದಂತೆ ಜಲ ಮೂಲಗಳ ಆರಾಧನೆಯ ಮೂಲಕ ಜನರಲ್ಲಿ ಸ್ವಚ್ಛತೆಯ ಅರಿವು ಜಾಗೃತಿ ಮೂಡಿಸಲು ಸಾಧ್ಯ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಸಂಘಟನಾ ಪ್ರಮುಖರು ಹಾಗೂ ಉದ್ಯಮಿ ಎಂ.ಎಂ.ದಾವುದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಮಾಮಿ ಕಾವೇರಿ ಸಹಯೋಗದೊಂದಿಗೆ ನಡೆದ 180ನೇ ಮಹಾಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನದಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆಧ್ಯ ಕರ್ತವ್ಯವಾಗಬೇಕಾಗಿದೆ ಎಂದ ಅವರು ನದಿ ಸಂರಕ್ಷಣೆ ಸಂಬಂಧ ತಮ್ಮ ಸಂಘಟನೆ ಕೈಜೋಡಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.ಉದ್ಯಮಿ ಯಾದವ್ ಅವರು ಮಾತನಾಡಿ ನದಿ ಪ್ರಕೃತಿಯನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರ ಮಾಡುವ ಕೆಲಸ ಆಗಬೇಕಿದೆ. ಜಲಮೂಲ ನದಿಗಳನ್ನು ನೇರವಾಗಿ ಕಲುಷಿತ ಗೊಳಿಸುವ ಜನರಿಗೆ ದಂಡ ಶಿಕ್ಷೆ ವಿಧಿಸುವ ಕಾನೂನು ಅನುಷ್ಠಾನಗೊಳ್ಳಬೇಕು ಎಂದರು. ಮುಖ್ಯ ಅರ್ಚಕರಾದ ಕೃಷ್ಣಮೂರ್ತಿ ಭಟ್ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ಮಾತನಾಡಿ, ನದಿಗೆ…






