ಲೇಖಕ: admin

ಮಡಿಕೇರಿ ಜ.15 : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಸಮಿತಿಯ ಪದಾಧಿಕಾರಿಗಳ ಸಭೆ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಳು ಸಮ್ಮೇಳನ ನಡೆಸುವ ಕುರಿತು ಒಮ್ಮತ್ತದ ನಿರ್ಧಾರ ಕೈಗೊಳ್ಳಲಾಯಿತು. ಕೊಡಗು ಜಿಲ್ಲೆಯಲ್ಲಿ ತುಳುಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಒಂದೇ ವೇದಿಕೆಯಡಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ತುಳು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಮುಖಂಡರುಗಳು ಹಾಗೂ ತುಳು ಭಾಷಿಕ ಜನಾಂಗ ಬಾಂಧವರು ಸಮ್ಮೇಳನದಲ್ಲಿ ತೊಡಗಿಸಿಕೊಳ್ಳುವಂತೆ ಬಿ.ಬಿ.ಐತ್ತಪ್ಪ ರೈ ಮನವಿ ಮಾಡಿದರು. ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ವಿಚಾರಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ತುಳು ನಾಡಿನ ಸಂಸ್ಕೃತಿ ಬಿಂಬಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆಯನ್ನು ಆಕರ್ಷಣೀಯಗೊಳಿಸಬೇಕು. ತುಳುನಾಡಿನ ಪ್ರಸಿದ್ಧ ಕಲಾವಿದರುಗಳನ್ನು ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ವರ್ಣರಂಜಿತಗೊಳಿಸಬೇಕು. ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಪ್ರಮುಖರ ಮತ್ತು…

Read More

ಮಡಿಕೇರಿ ಜ.15 : ಅಯೋಧ್ಯೆಯ ಶ್ರೀರಾಮಚಂದ್ರನ ಜನ್ಮಸ್ಥಳದಲ್ಲಿರುವ ಭವ್ಯವಾದ ರಾಮ ದೇವಾಲಯವು ಭರತ ವರ್ಷದ ಪ್ರಾಚೀನ ಆಧ್ಯಾತ್ಮಿಕ ನಾಗರಿಕತೆಯ ನಿಜವಾದ ಪುನರುತ್ಥಾನವಾಗಿದೆ. ಇದೇ ಮಾದರಿಯಲ್ಲಿ ಅಪರಿಮಿತ ದೇಶಭಕ್ತಿಯ ಯೋಧ ಜನಾಂಗವಾದ ಕೊಡವರಿಗಾಗಿ ಕೊಡವ ಲ್ಯಾಂಡ್‍ನಲ್ಲಿ ರಾಮರಾಜ್ಯದ ಪುನರ್ ಜೀವವಾಗಬೇಕಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸ್ವತಃ ರಾಮ ಭಕ್ತರಾದ ಡಾ.ಸುಬ್ರಣಿಯನ್ ಸ್ವಾಮಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು ಕೊಡವ ಲ್ಯಾಂಡ್ ನಲ್ಲಿ ರಾಮರಾಜ್ಯದ ಪುನರುಜ್ಜೀವನದ ಪರಿಕಲ್ಪನೆ, ಎರಡಕ್ಕೂ ಪ್ರಮುಖ ವಕೀಲರಾಗಿದ್ದಾರೆ. ಆದ್ದರಿಂದ ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಅಯೋಧ್ಯೆಯ ಭವ್ಯವಾದ ರಾಮ ಮಂದಿರದಂತೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪುನರುಜ್ಜೀವನದ ಸಮಯ ಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪುನರುಜ್ಜೀವನದ ಸಮಯ ಪಕ್ವವಾಗಿದೆ. ಕೊಡವ ನೆಲ ಅರ್ಥಾತ್ ಯಾನೆ ಕ್ರೋಢ ದೇಶವು ಕೋಸಲ ರಾಜ್ಯದ ರಾಜಾಧಿಪತಿ ಭರತ ವರ್ಷದ ಚಕ್ರವರ್ತಿಯಾಗಿದ್ದ ದಶರಥನ ಆಳ್ವಿಕೆಯ ಅಡಿಯಲ್ಲಿತ್ತು. 1956 ರವರೆಗೆ ಈ…

Read More

ಹಾವೇರಿ ಜ.15 :  ಹಾವೇರಿಯ ನರಸಾಪುರದಲ್ಲಿ ನಡೆದ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವವನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉದ್ಘಾಟಿಸಿದರು. ನರಸಾಪುರ ಗುರು ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಮತ್ತು ಚರಮೂರ್ತಿ ಚರಂತೇಶ್ವರ ಮಠದ ಶರಣಬಸವ ದೇವರು ದಿವ್ಯ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಗುರುಮಹಾಂತ ಮಹಾಸ್ವಾಮಿಗಳು, ಜ್ಞಾನಪ್ರಕಾಶ ಮಹಾಸ್ವಾಮಿಗಳು, ಶಾಂತವೀರ ಮಹಾಸ್ವಾಮಿಗಳು, ಅನ್ನದಾನಿ ಬಸವಪ್ರಿಯ ಅಪ್ಪಣ್ಣ ಮಹಾಸ್ವಾಮಿಗಳು, ಬಸವಮಾಚಿದೇವ ಮಹಾಸ್ವಾಮಿಗಳು, ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ನಿಜಗುಣದೇವರು, ಯೋಗಾನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಸಚಿವರಾದ ಮಂಕಾಳ‌ ವೈದ್ಯ, ಶಿವಾನಂದ ಪಾಟೀಲ್  ಪಾಲ್ಗೊಂಡಿದ್ದರು.

Read More

ಬೆಂಗಳೂರು ಜ.15 :  ಫೆಬ್ರವರಿ 2ರಿಂದ ಮೂರು ದಿನಗಳ ನಡೆಯಲಿರುವ ಹಂಪಿ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಅನಾವರಣಗೊಳಿಸಿದರು. ಈ ಸಂದರ್ಭ  ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ದಿವಾಕರ್ ಹಾಗೂ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಹಾಜರಿದ್ದರು.

Read More

ನಾಪೋಕ್ಲು ಜ.13 : ಅಪಾಯದ ಹಂತದಲ್ಲಿದದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ಮೋರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಕ್ಕಬ್ಬೆ ಪಟ್ಟಣದಿಂದ ದೇವಾಲಯಕ್ಕೆ ತೆರಳುವ ರಸ್ತೆಯ ಮುಖದ್ವಾರದ ಸಮೀಪ ಸುಮಾರು 200 ಮೀ ರಸ್ತೆ ತೀವ್ರ ಹದಗೆಟ್ಟಿದ್ದು ಮಾತ್ರವಲ್ಲದೆ ರಸ್ತೆಯಲ್ಲಿರುವ ಹಳೆಯ ಮೋರಿಯ ಮಧ್ಯದಲ್ಲಿ ಕುಸಿದಿರುವುದರಿಂದ ಕಕ್ಕಬ್ಬೆ ಪಾಡಿ ಶ್ರೀ ಇತ್ತಪ್ಪ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ ಶಾಸಕರ ಗಮನಕ್ಕೆ ತಂದಿದ್ದರು. ಇವರ ಮನವಿಯನ್ನು ಪರಿಗಣಿಸಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಹಾಗೂ ಮೋರಿಯನ್ನು ವೀಕ್ಷಿಸಿದ ಶಾಸಕರು, ರಸ್ತೆ ಹಾಗೂ ಮೋರಿಯನ್ನು ದುರಸ್ತಿ ಪಡಿಸಿ ಕೊಡುವ ಭರವಸೆಯನ್ನು ನೀಡಿದರು. ಅಲ್ಲದೇ ಸ್ಥಳದಲ್ಲೇ ಲೋಕೋಪಯೋಗಿ ಇಲಾಖೆಯ ಅಭಿಯಂತರಿಗೆ ಕರೆ ಮಾಡಿ ತಕ್ಷಣವೇ ರಸ್ತೆ ಹಾಗೂ ಮೋರಿ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ವ್ಯವಸ್ಥಾಪನ…

Read More

ಮಡಿಕೇರಿ ಜ.15 : ಕಾಡಾನೆ ದಾಳಿ ಮಾಡಿದ ಪರಿಣಾಮ  ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಹ್ಯ ಪಳ್ಳಕೆರೆ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಮಿರನಾ (35) ಎಂಬುವವರೇ ಗಾಯಗೊಂಡಿರುವ ಮಹಿಳೆಯಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು.

Read More

ಮಡಿಕೇರಿ ಜ.15 : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 32ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆಯು ಜ.23 ರಂದು ನಡೆಯಲಿದೆ. ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 9 ಗಂಟೆಗೆ ತಾಳತ್ತಮನೆಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಾಥಾನ್ ಸ್ಪರ್ಧೆಗಳು ನಡೆಯಲಿದೆ. ಭಾಗವಹಿಸುವ ಕ್ರೀಡಾಪಟುಗಳು ಜ.22ರ ಒಳಗೆ 9480251938, 8431168783, 8762066118, 6361059178 ಸಂಪರ್ಕಿಬಹುದಾಗಿದೆ ಎಂದು ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.15 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಷಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ಗಗನಶ್ರೀ ಹಾಗೂ ಆರ್.ವಿನಿಷ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಫೆ.5 ಮತ್ತು 6 ರಂದು ಸ್ಪರ್ಧೆ ನಡೆಯಲಿದೆ. ಗಗನಶ್ರೀ ವಿರಾಜಪೇಟೆಯ ವಿಜಯನಗರದ ನಿವಾಸಿ ಶಶಿಕುಮಾರ್ ಮತ್ತು ದಿವ್ಯ ದಂಪತಿಗಳ ಪುತ್ರಿ. ಆರ್.ವಿನಿಷ ವಿರಾಜಪೇಟೆ ಸುಭಾಷ್ ನಗರದ ನಿವಾಸಿ ಕೆ.ರಜನಿಕಾಂತ್ ಮತ್ತು ಆರ್.ಅರ್ಪಿತಾ ದಂಪತಿಗಳ ಪುತ್ರಿ. ಈ ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.

Read More

ನಾಪೋಕ್ಲು ಜ.15 : ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡುವುದಿಲ್ಲ , ಅಭಿವೃದ್ಧಿ ಕೆಲಸಗಳು ಜನರಿಗೆ ಗೋಸ್ಕರ ಹೊರತು ಯಾವುದೇ ಪಕ್ಷಗಳಿಗೆ ಅಥವಾ ಯಾವುದೇ ಪಕ್ಷದ ನಾಯಕರಿಗಾಗಿ ಅಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಬಲ್ಲಮಾವಟಿ ಗ್ರಾ.ಪಂ ಒಳಪಟ್ಟ ಕಕ್ಕಬ್ಬೆ-ನೆಲಜಿ ರಸ್ತೆಯ ಒಂದುವರೆ ಕಿಲೋಮೀಟರ್ ದೂರದ ರಸ್ತೆ 35 ಲಕ್ಷ ರೂ.ಗಳ ಅನುದಾನದಲ್ಲಿ ಮರು ಡಾಂಬರೀಕರಣ ಆದ ರಸ್ತೆಯನ್ನು ನಾಪೋಕ್ಲು-ಭಾಗಮಂಡಲ -ಕಕ್ಕಬ್ಬೆ ಜಂಕ್ಷನ್ ನ ನೆಲಜಿ ಯಲ್ಲಿ ಉದ್ಘಾಟಿಸಿ ಮಾತನಾಡಿದರು. ನಿಗಧಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಪೂರ್ಣಗೊಂಡಿದೆ. ಇದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು. ಎರಡು ಮೂರು ತಿಂಗಳಲ್ಲಿ ಆರಂಭಿಸಿದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. ಈ ಸಂದರ್ಭ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು, ನಾಪೋಕ್ಲು-ಭಾಗಮಂಡಲ ರಸ್ತೆಯ ಹಳೆ ತಾಲೂಕಿನಿಂದ ಪುಲಿಕೋಟುವರೆಗಿನ ರಸ್ತೆ ದುರಸ್ತಿ ಕಾರ್ಯ ಒಂದು ತಿಂಗಳ ಒಳಗೆ ರಸ್ತೆಗಳ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ…

Read More

ಮಡಿಕೇರಿ ಜ.14 :NEWS DESK ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ರಾಜ್ಯ ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಮಕ್ಕಂದೂರು ಗ್ರಾಮದ ನಾಪಂಡ ರವಿ ಕಾಳಪ್ಪ ಅವರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರವಿ ಕಾಳಪ್ಪ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

Read More