ವಿರಾಜಪೇಟೆ ಜ.13 : ಕರ್ನಾಟಕ ಸ್ಪೋಟ್ರ್ಸ್ ಡ್ಯಾನ್ಸ್ ಅಸೋಷಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ ವಿದ್ಯಾರ್ಥಿ ಎಂ.ಶ್ರೀದೇವಿ ಹಾಗೂ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ದೇಚಮ್ಮ ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಶ್ರೀದೇವಿ ವಿರಾಜಪೇಟೆ ತಾಲೂಕಿನ ಕೆ. ಬೋಯಿಕೇರಿ ಗ್ರಾಮದ ಮುರುಗೇಶ್ ಮತ್ತು ತುಳಸಿ ದಂಪತಿಯ ಪುತ್ರಿ. ದೇಚಮ್ಮ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟದ ನಿವಾಸಿ ದೀಪಕ್ ಮತ್ತು ಅನುರಾಧ ಅವರ ಪುತ್ರಿ. ಈ ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆ ಜಮ್ಮು ಕಾಶ್ಮೀರದಲ್ಲಿ ಫೆ.5 ಮತ್ತು 6 ರಂದು ನಡೆಯಲಿದೆ.
ಲೇಖಕ: admin
ಮಡಿಕೇರಿ ಜ.13 : ವಿಶೇಷ ಚೇತನರಿಗೆ ರಾಜ್ಯಾದ್ಯಂತ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾ ಪಂಚಾಯತ್ ಭವನದ ಮುಂಭಾಗ ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ವಿಶೇಷ ಚೇತನರ ಸಂಘದ ಅಧ್ಯಕ್ಷ ಜೆ.ಎ.ಮಹದೇಶ್ವರ, ಸರ್ಕಾರ ವಿಶೇಷ ಚೇತನರನ್ನು ಮರೆಯುತ್ತಿದ್ದು, ವಿಶೇಷ ಚೇತನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ತಕ್ಷಣವೇ ವಿಆರ್ಡಬ್ಲ್ಯೂಗಳಿಗೆ ಖಾಯಮಾತಿ ಹಾಗೂ ಸೇವಾ ಭದ್ರತೆ ಒದಗಿಸಬೇಕು, ಸಮಯಕ್ಕೆ ಸರಿಯಾಗಿ ಗೌರವಧನ ನೀಡಬೇಕು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಔಷಧಿ ದೊರೆಯುವಂತೆ ಮಾಡಬೇಕು, 5 ಸಾವಿರ ಮಾಸಿಕ ಭತ್ಯೆ, ವಸತಿ ವ್ಯವಸ್ಥೆ, ವಿಶೇಷ ಚೇತನರಿಗೆ ಪ್ರತ್ಯೇಕ ಬಿಪಿಎಲ್ ಕಾರ್ಡ್ ನೀಡಬೇಕೆಂದು ಒತ್ತಾಯಿಸಿದರು. ಸಂಘದ ಕಾರ್ಯದರ್ಶಿ ತಿರುಮಲೇಶ್ವರ್, ನಿರ್ದೇಶಕರಾದ ಕೆ.ಎಂ.ಹಸ್ಸನ್, ವೀಣಾ, ಹರೀಶ್, ಜಯ ಕುಮಾರ್, ಮಿಲನ್…
ಮಡಿಕೇರಿ ಜ.13 : ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ಸಭೆಯು ಜ.28 ರಂದು ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಭೆಗೆ ಸರ್ವ ಸದಸ್ಯರು ಶುಲ್ಕ ರೂ.501, ಭಾವಚಿತ್ರ-3, ಆಧಾರ್ ಕಾರ್ಡ್ ಪ್ರತಿ ಹಾಗೂ ಯುಡಿಐಡಿ ಕಾರ್ಡಿನೊಂದಿಗೆ ಸಭೆಗೆ ಹಾಜರಾಗುವಂತೆ ಕೊಡಗು ಜಿಲ್ಲಾ ಕಿವುಡರ ಸಂಘ ಕೋರಿದೆ. ಹೆಚ್ಚಿನ ಮಾಹಿತಿಗೆ 934240252 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜ.13 : “ಬೇರ್” (ದಿ ರೂಟ್) ಕೊಡವ ಸಿನಿಮಾ ಬಾಂಗ್ಲಾ ದೇಶದ ಢಾಕಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ನಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳ್ಳುತ್ತಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ. ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್” ಕೊಡವ ಸಿನಿಮಾ ಮೂಡಿ ಬಂದಿದೆ. ಬಾಂಗ್ಲಾದೇಶದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವರ್ಲ್ಡ್ ಪ್ರೀಮಿಯರ್ ಪ್ರದರ್ಶನಕ್ಕೆ “ಬೇರ್” ಆಯ್ಕೆಯಾಗುವ ಮೂಲಕ ಕೊಡವ ಸಿನಿಮಾವೊಂದು ಮೊದಲ ಬಾರಿಗೆ ಅವಕಾಶ ಗಿಟ್ಟಿಸಿಕೊಂಡ ಹೆಮ್ಮೆಗೆ ಪಾತ್ರವಾಗಿದೆ. ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ತಯಾರಾದ ಈ ಚಿತ್ರ ಪ್ರಪ್ರಥಮ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದೆ. ಕೆಲವೇ ಪಾತ್ರದಾರಿಗಳ ನಟನೆ ಇದ್ದು, ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ…
ಮಡಿಕೇರಿ ಜ.13 : ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ವಿರಾಜಪೇಟೆ ನಗರದಲ್ಲಿ “ಮಾದಕ ವಸ್ತು-ದ್ರವ್ಯಗಳ ನಿರ್ಮೂಲನೆ’ ಕುರಿತು ಜನಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿ, ಯುವ ಜನತೆ ದುಶ್ಚಟಗಳಿಂದ ದೂರ ಇದ್ದು, ಸಮಾಜಕ್ಕೆ ಉತ್ತಮ ಪ್ರಜೆಯಾಗಬೇಕು ಎಂದರು. ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಯವರು, ವಿರಾಜಪೇಟೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೋಟರಿ ಕ್ಲಬ್, ಡೆಂಟಲ್ ಕಾಲೇಜು, ಆಟೋ ಚಾಲಕರು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಪ್ರಮುಖರು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿದರು.
ಮಡಿಕೇರಿ ಜ.13 : ಶುಕ್ರವಾರ 12-01-2024 ರಂದು ಅಸ್ತಮಿಸಿದ ಶನಿವಾರ ರಾತ್ರಿ ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುತ್ತದೆ ಎಂದು ಜಿಲ್ಲಾ ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ತೀರ್ಮಾನಿಸಿದ್ದಾರೆ ಇದೇ ಬರುವ ದಿನಾಂಕ 07-02-2024 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಜಬ್ – 27 ಇಸ್ರಾಹ್ – ಮಿಹ್ರಾಜ್ ರಾತ್ರಿಯಾಗಿರುತ್ತದೆ.
ಮಡಿಕೇರಿ ಜ.13 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಮುಖ್ಯಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಜ.25 ಗುರುವಾರದಂದು ಸಿಎಂ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕುಶಾಲನಗರ, ಜ.13 : ವಚನಕಾರರ ಪರಂಪರೆಯ ಮರೆತು ಹೋದ ಮೌಲ್ಯಗಳನ್ನು ಪುನಃ ಸ್ಮರಣೆ ಮಾಡುವ ಕೆಲಸ ವಚನಗಳ ಪಠನ ಹಾಗೂ ಮನನದಿಂದ ಆಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ” ವಚನ ಗಾಯನ ಸ್ಪರ್ಧಾ ಕಾರ್ಯಕ್ರಮ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯ ವಿಶ್ವದ ಮೇರು ಸಾಹಿತ್ಯವಾಗಿದೆ. ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿದ್ದ ಕಂದಾಚಾರ ಹಾಗೂ ಮೂಢನಂಬಿಕೆಗಳ ವಿರುದ್ದ ಸಮರವನ್ನು ಸಾರಿ ಕ್ರಾಂತಿ ಉಂಟು ಮಾಡಿದ ಶರಣರ ವಚನಗಳು ಆಧ್ಯಾತ್ಮದ ನೆಲೆಯೊಳಗೆ ಬದುಕಿನ ಸಾರ ತತ್ಬವನ್ನು ಸಾರಿ ಜಟಿಲವಾಗಿದ್ದ ಮನುಷ್ಯನ ಬದುಕನ್ನು ಸರಳಗೊಳಿಸಿದ ದೀವಿಗೆಗಳು ಎಂದು ಕುಲಪತಿಗಳು ಆಶಿಸಿದರು. ಹನ್ನೆರಡನೇ ಶತಮಾನದ ಆಯ್ದಕ್ಕಿ ಲಕ್ಕಮ್ಮ ಹಾಗೂ ಆಯ್ದಕ್ಕಿ ಮಾರಯ್ಯನ ಆದರ್ಶಗಳು ಇಂದಿನ ಲಂಚಕೋರರು ಹಾಗೂ ಭ್ರಷ್ಟರಿಗೆ…
ಮಡಿಕೇರಿ ಜ.13 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ.15 ರಂದು 34ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಮುತ್ತಪ್ಪ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್, ಉತ್ಸವದ ಪ್ರಯುಕ್ತ ಜ.14 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ ಎಂದು ತಿಳಿಸಿದರು. ಮಕರ ಸಂಕ್ರಾಂತಿ ಮಹೋತ್ಸವದ ದಿನವಾದ ಜ.15 ರಂದು ಬೆ.6.30 ಕ್ಕೆ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, 7 ಕ್ಕೆ ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, 7.30 ರಿಂದ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆ, 8.30ಕ್ಕೆ ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, 9 ಕ್ಕೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಬೆ.10 ಕ್ಕೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಕ್ಕೆ ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ,…
ವಿರಾಜಪೇಟೆ ಜ.13 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ವತಿಯಿಂದ ಮಂಡ್ಯದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಸ್ಪೋಟ್ರ್ಸ್ ಡಾನ್ಸ್ ಚಾಂಪಿನ ಶಿಪ್ ಸ್ಪರ್ಧೆಯಲ್ಲಿ ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಯು.ಕೆ.ಜಿ ವಿದ್ಯಾರ್ಥಿ ವಿಹಾ ಮುತ್ತಮ್ಮ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಫ್ರೀ ಸ್ಟೈಲ್ ನೃತ್ಯದಲ್ಲಿ ಕಂಚಿನ ಪದಕ ಮತ್ತು ಸಾಮೂಹಿಕ ನೃತ್ಯದಲ್ಲಿ ಚಿನ್ನದ ಪದಕವನ್ನು ಗೆದ್ದು, ಜಮ್ಮುವಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ನಿವಾಸಿ ಐತಿಚಂಡ ರಕ್ಷಿತ ಅವರ ಪುತ್ರಿಯಾಗಿರುವ ವಿಹಾ ಮುತ್ತಮ್ಮ, ವಿರಾಜಪೇಟೆಯ ವಿಷ್ಣು ಅವರ ಟೀಮ್ ಇಂಟೊಪೀಸ್ ನೃತ್ಯ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.






