ಲೇಖಕ: admin

ವಿರಾಜಪೇಟೆ ಜ.13 : ಸ್ವಾಮಿ ವಿವೇಕಾನಂದರು ಯುವ ಜನರಿಗೆ ಮಾದರಿಗಳಾಗಿದ್ದು, ಯುವ ಜನಾಂಗದ ಕನಸನ್ನು ಕಂಡ ಮಹಾನ್ ಚೇತನರಾಗಿದ್ದಾರೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು. ಸೆಂಟ್ ಆನ್ಸ್ ಪದವಿ ಕಾಲೇಜಿನ ಸ್ನಾತಕೋತ್ತರ ಎಂ.ಕಾಂ. ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ವಿಶೇಷವಾಗಿ ಆದ್ಯಾತ್ಮಿಕ ಕ್ಷೇತ್ರಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿದ್ದಾರೆ. ಶಿಸ್ತು, ಏಕಾಗ್ರತೆ, ಧ್ಯಾನ, ತಾಳ್ಮೆಗಳೆಂಬ ಅಂಶಗಳನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಅರ್ಜುನ್ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತೀಯ ಸಮಾಜಕ್ಕೆ ತನ್ನದೆಯಾದ ಕೊಡುಗೆಯನ್ನು ನೀಡಿದ್ದು, ನವ ಸಮಾಜದ ನಿರ್ಮಾತೃರಾಗಿದ್ದಾರೆ. ಅವರು ಸಾಮಾಜಿಕ ಮತ್ತು ಆಧ್ಯಾತ್ಮಿಕ ಚಿಂತಕರಾಗಿದ್ದು, ಯುವಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮಾಡಿದ್ದಾರೆ ಎಂದು ನುಡಿದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಸ್ವಾಮಿ ವಿವೇಕಾನಂದರ ಜನ್ಮದಿನದ ಪ್ರಯುಕ್ತ ಎಂ.ಕಾಂ. ವಿದ್ಯಾರ್ಥಿಗಳು…

Read More

ಮಡಿಕೇರಿ ಜ.13 : “ದ್ವೇಷ ಬಿಟ್ಟು ದೇಶ ಕಟ್ಟು” ಪರಿಕಲ್ಪನೆಯೊಂದಿಗೆ ಮಡಿಕೇರಿ ಮುಸ್ಲಿಂ ಒಕ್ಕೂಟ ರಚನೆಗೊಂಡಿದೆ. ಒಕ್ಕೂಟದ ಸಂಚಾಲಕರಾಗಿ ಲಿಯಾಖತ್ ಆಲಿ ಆಯ್ಕೆಯಾಗಿದ್ದಾರೆ. ಒಕ್ಕೂಟ ರಚನೆಯಾದ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಲಿಯಾಖತ್ ಆಲಿ, ಭಾವೈಕ್ಯತೆಯ ಬೀಡು ಕೊಡಗು ಜಿಲ್ಲೆಯಲ್ಲಿ ಎಲ್ಲರೂ ಸೌಹಾರ್ಧತೆಯಿಂದ ಜೀವನ ಸಾಗಿಸಬೇಕು ಎನ್ನುವುದು ಒಕ್ಕೂಟದ ಉದ್ದೇಶ ಎಂದರು. ಅಲ್ಪಸಂಖ್ಯಾತ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ, ಆದ್ದರಿಂದ ಒಕ್ಕೂಟ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಿದೆ. ರಾಜಕೀಯ ರಹಿತವಾದ ಈ ಸಂಘಟನೆ ವಿಚಾರವಂತಿಕೆಯಿಂದ ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆ ನಮಗೆ ನೋವುಂಟು ಮಾಡಿದೆ. ಆದರೆ ಶಾಂತಿಯುತ ಬದುಕಿಗೆ ಪೂರಕವಾಗಿ ನಡೆದುಕೊಳ್ಳುವುದೇ ಒಕ್ಕೂಟದ ಗುರಿಯಾಗಿದ್ದು, ಈ ರೀತಿಯ ಹೇಳಿಕೆಗಳಿಗೆ ಪ್ರತಿ ಹೇಳಿಕೆ ನೀಡುವುದು ನಮ್ಮ ಉದ್ದೇಶವಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ರಹಿತವಾದ ಈ ಸಂಘಟನೆ ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಅಸಹಾಯಕರಿಗೂ ಸಹಾಯ ಮಾಡಲಿದೆ. ಶಿಕ್ಷಣ ಮತ್ತು ಸರ್ಕಾರದ ಸೌಲಭ್ಯಗಳ…

Read More

ನಾಪೋಕ್ಲು ಜ.13 : ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಜ.22 ರಂದು ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀಪೋತ್ಸವ ನಡೆಯಲಿದೆ. ದೇವಾಲಯದಲ್ಲಿ ಮಧ್ಯಾಹ್ನ 1 ಗಂಟೆಗೆ ವಿಶೇಷ ಪೂಜೆ, ಸಂಜೆ 7.30ಕ್ಕೆ ಪೂಜೆ ಹಾಗೂ ದೀಪೋತ್ಸವ ಜರುಗಲಿದೆ ಮಧ್ಯಾಹ್ನ ವಿಶೇಷ ಪೂಜೆ ಹಾಗೂ ಸಾಯಂಕಾಲ ದೀಪೋತ್ಸವ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಜ.13 : ಬಲಮುರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಹಿಂದೂ ಪರ ಸಂಘಟನೆಗಳ ಪ್ರಮುಖರು ಅಯೋಧ್ಯೆತ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿದರು. ಬಲಮುರಿ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ, ಬಲಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಮನೆಗಳಿಗೆ ತಲುಪಿಸಲಾಯಿತು. ಈ ಸಂದರ್ಭ ಬಲಮುರಿ ಗ್ರಾ.ಪಂ ಸದಸ್ಯ ಬೊಳ್ಳಚೆಟ್ಟಿರ ಪ್ರಕಾಶ್ ಕಾಳಪ್ಪ, ಜಿ.ಪಂ ಮಾಜಿ ಸದಸ್ಯ ಬಿದ್ದಂಡ ಉಷಾ ದೇವಮ್ಮ, ದೇವನೂರು ಗೌಡ ಸಂಘದ ಅಧ್ಯಕ್ಷ ಪೊನ್ನಚ್ಚನ ಜಯ, ಶ್ರೀರಾಮ ಭಕ್ತ ಸ್ವಯಂಸೇವಕರಾದ ಗುಡ್ಡೆರ ಲಕ್ಷು, ಆಂಗೀರ ಸಂತೋಷ್ ಮಾದಪ್ಪ , ಬಿದ್ದಂಡ ಸಂದೀಪ್ ನಂಜಪ್ಪ ,ಕುಂದನ ದಯಾನಂದ, ರಾಜ ಮೇಡತನ ರಶ್ಮಿ, ಕವಿನ್ ಸೇರಿದಂತೆ ಮುಖ್ಯ ಪಟ್ಟವರು ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ  

Read More

ನಾಪೋಕ್ಲು ಜ.13 : ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಪೋಕ್ಲು, ಹಳೆ ವಿದ್ಯಾರ್ಥಿಗಳ ಸಂಘ, ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ ಪ್ರಾಂಶುಪಾಲರು ಪ್ರೋ.ಕಾಂಡಂಡ ಉಷಾ ಜೋಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಬಾಲ್ಯ ಚಿಕಾಗೋ ಭಾಷಣದ ಬಗ್ಗೆ ವಿವರಣೆಯನ್ನು ನೀಡಿ, ವಿವೇಕಾನಂದ ಹಾಗೂ ಪುಣ್ಯ ಪುರುಷರ ಆದರ್ಶ ಅವರನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಎನ್.ಬಿ.ದಿಲೀಶ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸೇವೆ ವಿಷಯದ ಕುರಿತಾಗಿ ಮಾತನಾಡಿದರು. ಸ್ವಾಮಿ ವಿವೇಕಾನಂದರ ಸೇವಾ ಜೀವನದ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ, ಗುರುವಿನ…

Read More

ವಿರಾಜಪೇಟೆ, ಜ.13 : ವಿದ್ಯಾರ್ಥಿಗಳು  ಗುಣಮಟ್ಟದ ಶಿಕ್ಷಣ ಪಡೆದು, ಜನರ ಸೇವೆಯೇ ಮುಖ್ಯ  ಗುರಿಯಾಗಿಸಿಕೊಳ್ಳಬೇಕೆಂದು ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದರು. ವಿರಾಜಪೇಟೆ ಬಳಿಯ ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೂರ್ಗ್ ಇನ್‍ಸ್ಟಿಟ್ಯೊಟ್ ಆಫ್ ಡೆಂಟಲ್ ಸೈನ್ಸ್ ಆಯೋಜಿಸಲಾಗಿದ್ದ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ದಂತ ವೈದ್ಯಕೀಯ ಕಾಲೇಜು ತನ್ನ ಅತ್ಯುತ್ತಮ ಸೌಲಭ್ಯಗಳ ಮೂಲಕ ಸಮಾಜಕ್ಕೆ ಉತ್ತಮ ದಂತ ಸೇವೆಯನ್ನು ನೀಡುತ್ತಿರುವುದು ಶ್ಲಾಘನಿಯ.  ವಿದ್ಯಾರ್ಥಿಗಳ ಜೀವನ ಮಹತ್ವವಾದದ್ದು, ಮಾದಕ ವಸ್ತುಗಳನ್ನು ದೂರಮಾಡಿ ಮುಂದಿನ ಭವಿಷ್ಯದ ಕಡೆಗೆ ಗಮನಹರಿಸುವ ಮೂಲಕ ಶ್ರದ್ಧೆಯಿಂದ ಗುರಿ ಮುಟ್ಟುವಂತಾಗಬೇಕು ಎಂದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಕಲೆ ಪಾಠ್ಯೆತರ ಚಟುವಟಿಕೆಗಳಲ್ಲಿಯು ಭಾಗವಹಿಸಬೇಕು ಕರೆ ನೀಡಿದರು. ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಸುನೀಲ್ ಮುದ್ದಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಭೆಯನ್ನುದ್ದೇಶಿಸಿ ಕೊಡಗು ದಂತ ಕಾಲೇಜಿನ ವಿದ್ಯಾರ್ಥಿಗಳ ಸಂಘ ಉತ್ತಮ ನಾಯಕತ್ವ…

Read More

ಮೂರ್ನಾಡು ಜ.13 : ಜಪಾನ್ ಶೋಟೋಕನ್ ಕರಾಟೆ ಅಸೋಶಿಯೇಷನ್ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ ಮೂರ್ನಾಡಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿ ಬ್ಲ್ಯಾಕ್ ಬೆಲ್ಟ್‍ಗಳನ್ನು ಪಡೆದುಕೊಂಡಿದ್ದಾರೆ. ಮೂರ್ನಾಡಿನ ಸಮುದಾಯ ಭವನದಲ್ಲಿ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ ಕೆ.ಡಿ.ತಿಮ್ಮಯ್ಯ, ಕೆ.ಆರ್.ಆದಿತ್ಯನಾಯಕ್, ಡಿ.ಎಸ್.ಮೌಲ್ಯ ಮತ್ತು ಸಿ. ಲಹರಿ ತಿಮ್ಮಯ್ಯ ಜಪಾನ್ ಶೋಟೋಕನ್ ಕರಾಟೆ ಅಸೋಶಿಯೇಷನ್ ಮುಖ್ಯ ತರಬೇತುದಾರ ಕೇರಳದ ಪಾಲೆಕ್ಕಾಡುವಿನ ಗೋಪಾಲ ಕೃಷ್ಣ ಅವರ ನೇತೃತ್ವದಲ್ಲಿ ಬ್ಲ್ಯಾಕ್ ಬೆಲ್ಟ್‍ಗಳನ್ನು ಪಡೆದುಕೊಂಡರು. ಮೂರ್ನಾಡು ಕರಾಟೆ ಶಾಲೆಯ ತರಬೇತುದಾರ ಟಿ.ಬಿ.ಶ್ಯಾಮ್ ಹಾಜರಿದ್ದರು. ಮುಖ್ಯಅತಿಥಿಗಳಾಗಿ ಆಗಮಿಸಿದ್ದ ಮೂರ್ನಾಡು ಉಪಠಾಣಾಧಿಕಾರಿ ಪಿ.ಟಿ. ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರಗಳನ್ನು ವಿತರಿಸಿದರು. ವರದಿ : ಟಿ.ಸಿ. ನಾಗರಾಜ್, ಮೂರ್ನಾಡು 

Read More

ಸೋಮವಾರಪೇಟೆ ಜ.13 : ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ಕಲ್ಪಿಸುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಿಸಿದರು. ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಒಕ್ಕಲಿಗರ ಸಮುದಾಯಭವನದಲ್ಲಿ ನಡೆದ ಕುವೆಂಪು ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಒಕ್ಕಲಿಗರ ಸಂಘದ ಕೊಡುಗೆ ಅಪಾರ. ಒಂದು ವಿದ್ಯಾಸಂಸ್ಥೆ ಬೆಳೆಯಬೇಕಾದರೆ ಪೋಷಕರ ಪ್ರೋತ್ಸಾಹ ಮುಖ್ಯ. ದಾನಗಳಲ್ಲಿ ವಿದ್ಯಾದಾನ ಅತೀ ಶ್ರೇಷ್ಟವಾದುದು. ವಿದ್ಯಾವಂತರು ಈ ದೇಶದ ಆಸ್ತಿಯಾಗಿದ್ದಾರೆ. ಪೋಷಕರು ಮಕ್ಕಳಿಗೆ ಉನ್ನತಶಿಕ್ಷಣ ನೀಡಬೇಕು ಎಂದರು. ಸಂಘದ ಕೆಲ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಕೇಂದ್ರಿಕರಿಸಬೇಕು. ಶಿಕ್ಷಕರ ಸಲಹೆಗಳನ್ನು ಪಡೆದು ಹೆಚ್ಚಿನ ಅಂಕ ಗಳಿಸಬೇಕು. ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಶೇ.98 ರಷ್ಟು ಗ್ರಾಮೀಣ ಮಕ್ಕಳು ಕುವೆಂಪು ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿದ್ದಾರೆ ಎಂಬುದು ನಮ್ಮ ಹೆಮ್ಮೆಯಾಗಿದೆ. ಕಳೆದ ಆರು ವರ್ಷಗಳಿಂದಲೂ…

Read More

ಸೋಮವಾರಪೇಟೆ ಜ.13 : ಹಚ್ಚಹಸಿರಿನ ಮಲೆನಾಡು ಪ್ರದೇಶವಾದ ಪುಷ್ಪಗಿರಿ ತಪ್ಪಿನ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ, ಚೋಳರ ಕಾಲದ ಐತಿಹ್ಯ ಹೊಂದಿರುವ ಇತಿಹಾಸ ಪ್ರಸಿದ್ಧ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 65ನೇ ವಾರ್ಷಿಕ ಮಹಾರಥೋತ್ಸವಕ್ಕೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಇಂದಿನಿಂದ ಜಾತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಸುಮಾರು 900ಕ್ಕೂ ಅಧಿಕ ವರ್ಷಗಳ ಹಿಂದಿನ ಇತಿಹಾಸ ಹೊಂದಿರುವ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ಮಹಾ ರಥೋತ್ಸವಕ್ಕೆ ಕೊಡಗು ಮಾತ್ರವಲ್ಲದೆ ಸುತ್ತಮುತ್ತಲ ಜಿಲ್ಲೆಗಳಿಂದಲೂ ಸಹಸ್ರಾರು ಮಂದಿ ಭಕ್ತರು ಆಗಮಿಸಿ, ತಮ್ಮ ಇಷ್ಟಾರ್ಥಗಳಿಗೆ ಪ್ರಾರ್ಥನೆ ಸಲ್ಲಿಸುವುದು, ಹರಕೆ ಒಪ್ಪಿಸುವುದು ವಾಡಿಕೆ. ಜಾತಿ, ಮತ, ಪಂಥ, ಧರ್ಮಾತೀತವಾಗಿಯೂ ಇಲ್ಲಿ ಪ್ರಾರ್ಥನೆ ಸಲ್ಲಿಸುವುದು, ಇಷ್ಟಾರ್ಥ ನೆರವೇರಿದ ಮೇಲೆ ಹರಕೆ ಒಪ್ಪಿಸುವುದು ವಿಶೇಷ. ಜ.13 (ಇಂದು) ಬೆಳ್ಳಿ ಬಂಗಾರ ದಿನ ಆಚರಣೆಯೊಂದಿಗೆ ಸಂಜೆ 6.30 ರಿಂದ ಪ್ರಸಕ್ತ ವರ್ಷದ ಜಾತ್ರೆ ಪ್ರಾರಂಭೋತ್ಸವ ಪೂಜೆ ನಡೆಯಲಿದೆ. ಜ.14 ರಂದು ‘ಮಕರ ಸಂಕ್ರಮಣ ಕರುವಿನ ಹಬ್ಬ’ ಹಾಗೂ 7 ಗಂಟೆಗೆ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ…

Read More

ಮಡಿಕೇರಿ ಜ.13 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ  ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ  ನಡೆಯಿತು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿದರು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ಬಾಳಾಡಿ ದಿಲೀಪ್ ಕುಮಾರ್, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಪಿ.ಪಿ.ಸುಕುಮಾರ ಇತರರು ಪಾಲ್ಗೊಂಡಿದ್ದರು.

Read More