ಲೇಖಕ: admin

ಮಡಿಕೇರಿ ಜ.9 : ಮಡಿಕೇರಿಯ ಕೊಡಗು ವಿದ್ಯಾಲಯದ 8ನೇ ತರಗತಿ ವಿದ್ಯಾಥಿ೯ಗಳು ರಾಜ್ಯಮಟ್ಟದ ರಾಷ್ಟ್ರೀಯ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದು, ಏಡಿಗಳ ಸಂರಕ್ಷಣೆ ಸಂಬಂಧಿತ ಪ್ರಬಂಧ ಮಂಡಿಸುತ್ತಿದ್ದಾರೆ. ಕೊಡಗು ವಿದ್ಯಾಲಯದ ವಿಜ್ಞಾನ ಶಿಕ್ಷಕಿ ಟಿ.ಜಯಶ್ರೀ ಅವರ ಮಾಗ೯ದಶ೯ನದಲ್ಲಿ ವಿದ್ಯಾಥಿ೯ಗಳಾದ ಎಂ.ಪಿ.ಯಶಿಕಾ ಶೆಟ್ಟಿ ಮತ್ತು ಯಶ್ ಕಾರ್ಯಪ್ಪ ಪಿ. ಎಸ್. ಸಂಶೋಧನಾತ್ಮಕ ಪ್ರಬಂಧವನ್ನು ಏಡಿಗಳ ಕುರಿತಂತೆ ಮಂಡಿಸಲಿದ್ದಾರೆ. ಪರಿಸರ ವ್ಯವಸ್ಥೆಯೊಳಗೆ ಏಡಿಗಳು ನಿಣಾ೯ಯಕ ಪಾತ್ರ ವಹಿಸಿದೆ. ಏಡಿಗಳು ಬಹು ಉಪಕಾರಿ ಜೀವಿಯಾಗಿದ್ದು, ಏಡಿಗಳು ಅಕಶೇರುಕಗಳಲ್ಲಿ ಸಂಧಿಪದಿ ವರ್ಗದ, ಕ್ರಸ್ಟೇಶಿಯ ಎಂಬ ಉಪವಗ೯ಕ್ಕೆ ಸೇರಿದ ಜೀವಿಗಳಾಗಿವೆ. ಏಡಿಗಳು ರೈತನ ಮಿತ್ರರೇ ಹೊರತು ಶತ್ರುವಲ್ಲ. ಏಡಿಗಳು ಮಣ್ಣನ್ನುಸಮೃದ್ಧಗೊಳಿಸಿ, ರಂಧ್ರಗಳನ್ನು ತಮ್ಮ ಅಡಗು ತಾಣವಾಗಿ ಪರಿವತಿ೯ಸುವುದರ ಮೂಲಕ ನೀರಿನ ಒಳಹರಿವಿಗೆ ಹಾಗೂ ಇಂಗುವಿಕೆಗೆ ಸಹಾಯ ಮಾಡುತ್ತವೆ. ಕಳೆಗಳನ್ನು ತಿಂದು, ಮಣ್ಣನ್ನು ಗಾಳಿಯಾಡುವಂತೆ ಏಡಿಗಳು ಮಾಡುತ್ತವೆ. ಇವು ಜಲಮಾಲಿನ್ಯದ ತೀವ್ರತೆಯನ್ನು ನಿಯಂತ್ರಿಸುವಲ್ಲಿ ಬಹು ಮುಖ್ಯ ಪಾತ್ರವನ್ನುವಹಿಸುತ್ತವೆ. ಅತ್ಯಂತ ರುಚಿಕರ ಹಾಗೂ ಆರೋಗ್ಯಕರ ಆಹಾರದ ಮೂಲವಾಗಿ ಕಾಯ೯ನಿವ೯ಹಿಸುತ್ತದೆ. ಹೀಗಾಗಿಯೇ ಏಡಿಗಳು ಕೖಷಿಕರಿಗೆ…

Read More

ಮಡಿಕೇರಿ ಜ.9 : ಬಸ್ ತಂಗುದಾಣವೆಂದರೆ ಬಿರುಕು ಬಿಟ್ಟ ಗೋಡೆಗಳು, ಮುರಿದ ಛಾವಣಿ, ಕಸದ ರಾಶಿ, ದುರ್ನಾತ ಬೀರುವ ಶೌಚಾಲಯ ಕಣ್ಣ ಮುಂದೆ ಹಾದು ಹೋಗುತ್ತದೆ. ಪರಿಣಾಮವಾಗಿ ತಂಗುದಾಣವಿದ್ದರೂ ಪ್ರಯಾಣಿಕರು ಹೊರಗೆ ಮರದ ನೆರಳಲ್ಲೋ, ರಸ್ತೆ ಬದಿಯ ಅಂಗಡಿಗಳಲ್ಲೋ ಆಶ್ರಯ ಪಡೆಯುವುದು ಸಾಮಾನ್ಯವಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಬಣ್ಣ ಬಣ್ಣದ ಚಿತ್ರಗಳೊಂದಿಗೆ ಹಲವು ಸಂದೇಶಗಳನ್ನು ಸಾರುವ ಬಸ್ ತಂಗುದಾಣವೊಂದು ಕೊಡಗಿನ ತೀರ್ಥಕ್ಷೇತ್ರವಾದ ಭಾಗಮಂಡಲ ಸಮೀಪದ ಕೋರಂಗಾಲ ಗ್ರಾಮದಲ್ಲಿ ನಿರ್ಮಾಣವಾಗಿದ್ದು, ಇದೀಗ ಈ ಬಸ್ ತಂಗುದಾಣ ಜನಾಕರ್ಷಣೆಯ ಕೇಂದ್ರವಾಗಿದೆ. ಭಾಗಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷ ಕಾಳನ ರವಿ ಅವರ ಕಲ್ಪನೆಯ ಕೂಸಾಗಿರುವ ಈ ತಂಗುದಾಣದಲ್ಲಿ ನೇಗಿಲ ಯೋಗಿ, ಬೆಳೆಯ ಸಿರಿ ಮೊಳಕೆಯಲ್ಲಿ, ಎಪಿಜೆ ಅಬ್ದುಲ್ ಕಲಾಂ, ಚಂದ್ರಯಾನದ ವಿಕ್ರಂ ಲ್ಯಾಂಡರ್ ಸೇರಿದಂತೆ ಆಕರ್ಷಕ ಚಿತ್ರಗಳು ರಾರಾಜಿಸುತ್ತಿವೆ. ಸುಮಾರು 32 ಅಡಿ ಉದ್ದ, 10 ಅಡಿ ಅಗಲದ ಅಂದಾಜು 10 ಜನ ಕೂರಲು ಸ್ಥಳಾವಕಾಶವಿರುವ ಈ ತಂಗುದಾಣದಲ್ಲಿ ಶೌಚಾಲಯದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಗ್ರಾಮೀಣ…

Read More

ಮಡಿಕೇರಿ ಜ.9 : ಮಧ್ಯ ಪ್ರದೇಶದ ಭೂಪಾಲ್ ನಲ್ಲಿ ಡಿ.26 ರಿಂದ 31 ರ ವರೆಗೆ ನಡೆದ ಸಿ ಬಿ ಎಸ್ ಇ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದಿದೆ. ಈ ತಂಡದ ತರಬೇತುದಾರರಾಗಿ ಹೆಚ್.ಡಿ.ದೀನ ಹಾಗೂ ತಂಡದ ವ್ಯವಸ್ಥಾಪಕರಾಗಿ ಕೆಚ್ಚೆಟ್ಟಿರ ಪಾರ್ವತಿ ಕಾರ್ಯ ನಿರ್ವಹಿಸಿದ್ದರು.  ತಂಡದ ಆಟಗಾರರು, ತರಬೇತುದಾರರನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

Read More

ನಾಪೋಕ್ಲು ಜ.4 : ಮನೆ ಮನೆಗೆ ಪವಿತ್ರ ಮಂತ್ರಾಕ್ಷತೆ ವಿತರಣಾ ಅಭಿಯಾನದ ಅಂಗವಾಗಿ ಅಯೋಧ್ಯ ಶ್ರೀರಾಮ ಮಂದಿರದ ಪವಿತ್ರ ಮಂತ್ರಾಕ್ಷತೆಯನ್ನು ಬೆಟ್ಟಗೇರಿಯಲ್ಲಿ ವಿತರಿಸಲಾಯಿತು. ಪವಿತ್ರ ಮಂತ್ರಾಕ್ಷತೆ ಗೆ ಶ್ರೀ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಬೆಟ್ಟಗೇರಿ ಗ್ರಾಮದ ಹಿಂದೂ ಸಂಘಟನೆಗಳ ಪ್ರಮುಖರಿಗೆ ಹಸ್ತಾಂತರಿಸಲಾಯಿತು . ಹಿಂದೂ ಸಂಘಟನೆಗಳ ಪ್ರಮುಖರು ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಮನೆ ಮನೆಗಳಿಗೆ ತೆರಳಿ ಕುಟುಂಬದ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ಶ್ರದ್ಧಾ ಭಕ್ತಿಯಿಂದ ವಿತರಿಸಿದರು. ಅಲ್ಲದೆ ಜ.22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಉದ್ದೇಶ ಹಾಗೂ ಆಚರಣೆಯ ಬಗ್ಗೆ ಮಾಹಿತಿಯನ್ನು ನೀಡಿ ಮನವಿ ಮಾಡಿದರು. ಈ ಸಂದರ್ಭ ಶ್ರೀ ರಾಮ ಭಕ್ತ ಸ್ವಯಂ ಸೇವಕರಾದ ಬೊಳ್ಳಿಯಂಡ ಮಂಜುನಾಥ್, ನೆಯ್ಯಣಿರ ಉಮೇಶ್, ಕಡ್ಲೇರ ತುಳಸಿ ಮೋಹನ್, ವಿ.ಟಿ.ಗಿರೀಶ್ ಸೇರಿದಂತೆ ಪ್ರಮುಖರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ 

Read More

ಸುಂಟಿಕೊಪ್ಪ ಜ.9 : ಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ ಅದುವೆ ಕನ್ನಡದ ಹಿರಿಮೆ ಗರಿಮೆ ಎಂದು ಕೊಡಗು ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಬಣ್ಣಿಸಿದ್ದಾರೆ. ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗು ಜಿಲ್ಲಾ ಕ.ಸಾ.ಪ ಮತ್ತು ಕುಶಾಲನಗರ ತಾಲೂಕು ಕ.ಸಾ.ಪ. ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆದ ಸುವರ್ಣ ಕರ್ನಾಟಕ-50 ರ ಅಂಗವಾಗಿ  “ಕನ್ನಡ ಕೊಡವ ಭಾಷೆ ಬೆಳವಣಿಗೆ” ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಭಾರತದ ಇತಿಹಾಸದಲ್ಲಿ ಕರ್ನಾಟಕದ ಭಾಷೆ ಸಂಸ್ಕೃತಿ ಪದ್ಧತಿ ಪರಂಪರೆ ಹಬ್ಬ ಹರಿದಿನಗಳಿಗೆ ವಿಶೇಷವಾದ ಮಹತ್ವವಿದೆ. ಇವೆಲ್ಲಾವೂ ಕನ್ನಡ ಭಾಷೆಯ ಮೂಲಕ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಹೊರಹೊಮ್ಮಿದ್ದು, ಈ ಹಿನ್ನೆಯಲ್ಲಿ ಕನ್ನಡಭಾಷೆ 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದು ದೇಶಿಯ ಭಾಷೆಗಳಲ್ಲಿ ಪ್ರಮುಖ ಸ್ಥಾನ ಹೊಂದಿದೆ ಎಂದು ಅವರು ಬಣ್ಣಿಸಿದರು. ಕನ್ನಡ ಭಾಷೆ ಕೊಡವ, ತುಳು, ಬ್ಯಾರಿ, ಅರೆಭಾಷೆ ಮತ್ತು ಕೊಂಕಣಿ ಭಾಷೆಗಳಿಗೆ ಲಿಪಿಯಾಗಿದ್ದು,…

Read More

ಚೆಟ್ಟಳ್ಳಿ ಜ.9 :  ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಎರಡನೇ ವರ್ಷದ ನೂರೊಕ್ಕ ನಾಡ್ ಒತ್ತೊರ್ಮೆ‌ ಕೂಟವು ಸಾಂಪ್ರದಾಯಿಕ ಆಚರಣೆಯೊಂದಿಗೆ ಸಂಭ್ರಮದಿಂದ ನಡೆಯಿತು. ಚೆಟ್ಟಳ್ಳಿ ಮಂಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ದೇವರ ನೆಲೆಯಲ್ಲಿ ದೀಪ ಬೆಳಗಿದರು. ಸಾಂಪ್ರದಾಯಿಕ ಉಡುಪು ತೊಟ್ಟಪುರುಷರು ದುಡಿಕೊಟ್ಟು ಹಾಡಿನೊಂದಿಗೆ ದೇವರ ನೆಲೆಗೆ ಬಂದು ಅಕ್ಕಿ ಹಾಕಿ ಸರ್ವರಿಗೂ ಒಳಿತಗಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭ  ನಿವೃತ್ತ ವಾಯುಸೇನಾಧಿಕಾರಿ ಪುತ್ತರಿರ ಗಣೇಶ್ ಭೀಮಯ್ಯ ಮಾತನಾಡಿ,  ನೂರೊಕ್ಕ ನಾಡಿಗೆ ಒಳಪಡುವ ಚೆಟ್ಟಳ್ಳಿ ಕೊಡವ ಸಮಾಜ ಜನಾಂಗದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಏಳಿಗೆಯನ್ನು ಪಡೆಯಲೆಂದು ಬೇಡಿಕೊಂಡರು. ಹಿರಿಯ ಸದಸ್ಯೆ ಐಚೆಟ್ಟೀರ ಚೋಂದಮ್ಮ ಚೆಟ್ಟಳ್ಳಿ ಕೊಡವ ಸಮಾಜಕ್ಕೆ ಎರಡು ಕುತ್ತುದೀಪವನ್ನು ಉದಾರವಾಗಿ ನೀಡಿದರು. ಮಹಿಳೆಯರ ಉಮ್ಮತಾಟ್, ಪುರುಷರ ಬೊಳಕಾಟ್, ತಾಲಿಪಾಟ್ ಹಾಗೂ ಕೊಡವ ಹಾಡುಗಾರಿಗೆ ನೆರವೇರಿತು. ನಂತರ  ದಂಪತಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಕ್ರೀಡಾಕೂಟಗಳು ನಡೆದವು. ಕಾರ್ಯಕ್ರಮದ ಅಂಗವಾಗಿ ದೇವರ ನೆಲೆಯಲ್ಲಿ ಮೀದಿ‌ನೀರಿಟ್ಟು ತಂಬುಟ್ಟ್ ಹಾಗೂ ವಿಶೇಷ ಬೋಜನವನ್ನು ಸವಿದರು. ನಂತರ…

Read More

ಮಡಿಕೇರಿ ಜ.9 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಗೌರಮ್ಮ ದತ್ತಿ ಸಣ್ಣ ಕಥೆ ಬರೆಯುವ ಸ್ಪರ್ಧೆಗೆ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಥೆ ಬರೆಯುವ ಸ್ಪರ್ಧೆಯನ್ನು ಜ.22ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಬ್ಲಾಸಂ ಶಾಲೆಯಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹಮ್ಮದ್ ತಿಳಿಸಿದ್ದಾರೆ. ಪ್ರತೀ ಪ್ರೌಢಶಾಲೆಯಿಂದ 5 ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಶಾಲೆಗಳ ಮೂಲಕ ಈ ಕೆಳಗಿನ ವಿಳಾಸಕ್ಕೆ 15.01.2024ರ ಒಳಗೆ ತಲುಪಿಸಬೇಕು. ಎಂ.ಪಿ.ಕೇಶವಕಾಮತ್, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಎಸ್‍ಜೆಎಸ್‍ಆರ್‍ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಸುದರ್ಶನದ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ ಎಸ್.ಐ.ಮುನೀರ್ ಅಹಮ್ಮದ್, ಗೌರವ ಕಾರ್ಯದರ್ಶಿ ಮೊ. : 9886181613 ಮತ್ತು ಗೌರವ ಕಾರ್ಯದರ್ಶಿ ರೇವತಿ ರಮೇಶ್ ಮೊ. : 9663256829 ಸಂಪರ್ಕಿಸಬಹುದಾಗಿದೆ.

Read More

ಚೆಯ್ಯಂಡಾಣೆ  ಜ.9 :  ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಮಂಡ್ಯದ ಡಾ-ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸಿ ವಿರಾಜಪೇಟೆಯ ಎ.ಯೆದ್ವಿಕ್  3 ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿರಾಜಪೇಟೆ ಸಮೀಪದ ಅರಮೇರಿ ಎಸ್.ಎಂ.ಎಸ್.ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಯಾಗಿರುವ ಯ ಯೆದ್ವಿಕ್, ವಿರಾಜಪೇಟೆಯ ಅಜಿತ್ ಹಾಗೂ ಶೋಭಿಕ ದಂಪತ್ರಿಯ ಪುತ್ರ. ಕಳೆದ 3ವರ್ಷದಿಂದ ವಿರಾಜಪೇಟೆಯ ನಾಟ್ಯಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ಗುರುಗಳಾದ ವಿದುಷಿ ಹೇಮಾವತಿ ಕಾಂತ್ ರಾಜ್ ಹಾಗೂ ಕಾವ್ಯಶ್ರೀ ಯವರಲ್ಲಿ ತರಬೇತಿ ಪಡೆದುಕೊಂಡಿದ್ದಾನೆ. ವರದಿ :  ಅಶ್ರಫ್   

Read More

ಮಡಿಕೇರಿ ಜ.8 : ರಾಜ್ಯದ ಇತರೆ ಜಿಲ್ಲೆಗಳಿಗಿಂತ ಭಿನ್ನವಾಗಿರುವ, ಘಟ್ಟ ಪ್ರದೇಶವಾಗಿರುವ ಕೊಡಗಿನಲ್ಲಿ ವಾಹನ ದಟ್ಟಣೆೆ, ನಿಲುಗಡೆಯ ಸಮಸ್ಯೆಗಳನ್ನು ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಹಕಾರದೊಂದಿಗೆ ಬಗೆ ಹರಿಸಲು ಪ್ರಧಾನ ಆದ್ಯತೆ ನೀಡಲಾಗುತ್ತದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಸಂವಾದ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಸ್ತುತ ಜಿಲ್ಲೆಯ ಜನಸಂಖ್ಯೆ ಮತ್ತು ವಾಹನಗಳ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಹೊಂದಿಕೊಳ್ಳುತ್ತದೆಯಾದರೂ, ಪ್ರವಾಸಿ ಋತುಗಳು ಮತ್ತು ಉತ್ಸವಗಳ ಸಂದರ್ಭ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ವಾಹನ ದಟ್ಟಣೆ ಸಮಸ್ಯೆ ಹೆಚ್ಚಾಗಿ ಕಾಡುತ್ತದೆಂದು ಅಭಿಪ್ರಾಯಿಸಿದರು. ವಾಹನ ದಟ್ಟಣೆÉ, ನಿಲುಗಡೆ ಸಮಸ್ಯೆಗಳನ್ನು ಜಿಲ್ಲೆಯ ಪಟ್ಟಣ ಪ್ರದೇಶಗಳಲ್ಲಿ ಬಗೆಹರಿಸಲು ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲು ಪೊಲೀಸ್ ಇಲಾಖೆ ಸದಾ ಮುಕ್ತವಾಗಿದೆಯೆಂದು ತಿಳಿಸಿ, ಪ್ರವಾಸಿ ತಾಣ ರಾಜಾಸೀಟ್‌ನಲ್ಲಿ ವಾಹನ ನಿಲುಗಡೆಗೆ ಅಗತ್ಯ…

Read More

ಮಡಿಕೇರಿ ಜ.8 : ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ರೂ. 10.00 ಕೋಟಿ ಅನುದಾನ ಮಂಜೂರಾಗಿದ್ದು, ಈ ಪೈಕಿ ರೂ.6.00 ಕೋಟಿ ಅನುದಾನ ಕೊಡವ ಸಾಂಸ್ಕೃತಿಕ ಭವನ / ಮ್ಯೂಸಿಯಂ ಇತ್ಯಾದಿ ಅಭಿವೃದ್ಧಿಗಾಗಿ ಹಾಗೂ ರೂ.4.00 ಕೋಟಿಗಳಲ್ಲಿ 31 ಕೊಡವ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಮಂಜೂರಾತಿ ನೀಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸದರಿ ಕಾಮಗಾರಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಪ್ರಸ್ತುತ, ಈ ಕೂಡ ಲಗತ್ತಿಸಿರುವ 31 ಸ್ಥಳಗಳಲ್ಲಿ ಕೊಡವ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಒಟ್ಟು ರೂ.4.00 ಕೋಟಿ (ನಾಲ್ಕು ನೂರು ಲಕ್ಷ ರೂಪಾಯಿಗಳು ಮಾತ್ರ)ಗಳ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದ್ದು, ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Read More