ಲೇಖಕ: admin

ಮಡಿಕೇರಿ ಜ.8 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2023-24ನೇ ಸಾಲಿನ ಹಿರಿಯ ಸಾಹಿತಿ ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜ.29ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ಕಥೆ ಬರೆಯುವ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ತಿಳಿಸಿದ್ದಾರೆ. ಪ್ರತಿ ಕಾಲೇಜ್ ನಿಂದ 5 ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪದವಿ ಪೂರ್ವ ಶಿಕ್ಷಣದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಾಲೇಜ್ ನ ಮೂಲಕ ಈ ಕೆಳಕಂಡ ವಿಳಾಸಕ್ಕೆ ದಿನಾಂಕ 15.01.2024ರ ಒಳಗೆ ಕಳುಹಿಸಿಕೊಡಬೇಕು. ಎಂ.ಪಿ.ಕೇಶವಕಾಮತ್, ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಸ್‍ಜೆಎಸ್‍ಆರ್‍ವೈ ಕಟ್ಟಡ, ಅಂಬೇಡ್ಕರ್ ಭವನದ ಬಳಿ, ಕಾರ್ಯಪ್ಪ ವೃತ್ತ, ಮಡಿಕೇರಿ-571201. ಹೆಚ್ಚಿನ ವಿವರಗಳಿಗೆ ಎಸ್.ಐ.ಮುನೀರ್ ಅಹಮದ್, ಗೌರವ ಕಾರ್ಯದರ್ಶಿ ಮೊ. : 9886181613…

Read More

ಮಡಿಕೇರಿ ಜ.8 : ದಕ್ಷಿಣ ಕೊಡಗಿನ ಪೊನ್ನಂಪೇಟೆಯ ಆಸ್ಟ್ರೋ ಟರ್ಫ್ ಮೈದಾನದಲ್ಲಿ ಆಯೋಜಿತ 67ನೇ ರಾಷ್ಟ್ರೀಯ ಮಟ್ಟದ 17 ವರ್ಷದೊಳಗಿನ ಬಾಲಕಿಯರ ಹಾಕಿ ಪಂದ್ಯಾವಳಿ ಪ್ರಶಸ್ತಿಯನ್ನು ಜಾರ್ಖಂಡ್ ತಂಡ ತನ್ನ ಮುಡಿಗೇರಿಸಿಕೊಂಡಿದೆ. ಸೋಮವಾರ ಸಂಜೆ ನಡೆದ ಅಂತಿಮ ಪಮದ್ಯದಲ್ಲಿ ಜಾರ್ಖಂಡ್ ತಂಡ 7-1 ಗೋಲಗಳ ಭಾರೀ ಅಂತರದಿಂದ ಚಂಡೀಗಡ ತಂಡವನ್ನು ಪರಾಭವಗೊಳಿಸಿ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿತು. ಚಂಡೀಗಡ ತಂಡ ರನ್ನರ್ಸ್ ಅಪ್ ಪ್ರಶಸ್ತಿಗೆ ಭಾಜನವಾಯಿತು. ಅಂತಿಮ ಪಂದ್ಯಕ್ಕೂ ಮುನ್ನ 3ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಮಧ್ಯಪ್ರದೇಶ ತಂಡ 1-0 ಅಂತರದಿಂದ ಮಣಿಪುರ ತಂಡವನ್ನು ಮಣಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರು. ಉದ್ಘಾಟನೆ-ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ. ವಿರಾಜಪೇಟೆ ತಾಲೂಕಿನ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜ್ ಅವರು ಹಾಕಿ ಸ್ಟಿಕ್‍ನಿಮದ ಚೆಂಡನ್ನು ತಳ್ಳುವ ಮೂಲಕ ಅಂತಿಮ ಪಂದ್ಯಕ್ಕೆ ಚಾಲನೆ ನೀಡಿ, ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು. 

Read More

ಮಡಿಕೇರಿ ಜ.8 : ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ ಎಂದು ಸಚಿವರು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.…

Read More

ಮಡಿಕೇರಿ ಜ.8 : ಹೆಸರುವಾಸಿ ಪ್ರವಾಸಿತಾಣ ಮಾಂದಲಪಟ್ಟಿಗೆ ಪ್ರವಾಸಿಗರನ್ನು ಕರೆದೊಯ್ಯುವ ಜೀಪುಗಳಿಗೆ ಒಡ್ಡಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಮಾಂದಲ್ ಪಟ್ಟಿ ಕ್ಯಾಂಪರ್ ಜೀಪ್ ಮಾಲೀಕರು ಹಾಗೂ ಚಾಲಕರು ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಲಹೆಗಾರ ಯಾಲದಾಳು ಡಾ.ಮನೋಜ್ ಬೋಪಯ್ಯ ಹಾಗೂ ಜೀಪ್ ಮಾಲೀಕರು, ಚಾಲಕರು ಪ್ರಾದೇಶಿಕ ಸಾರಿಗೆ ಇಲಾಖೆ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು. ಕಳೆದ ಅನೇಕ ವರ್ಷಗಳಿಂದ ಪ್ರವಾಸಿಗರನ್ನು ಜೀಪ್ ನಲ್ಲಿ ಕರೆದೊಯ್ಯುವ ಮೂಲಕ ಸ್ಥಳೀಯ ಯುವಕರು ಉದ್ಯೋಗವನ್ನು ಕಂಡುಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಾಡಿಗೆ ಮಾಡುವ ಸಂದರ್ಭ ಯಾರೂ ಕಾನೂನು ಉಲ್ಲಂಘಿಸಿಲ್ಲ. ಆದರೆ ಅಧಿಕಾರಿಗಳು ಬದಲಾದಂತೆ ಯಾರದ್ದೋ ಒತ್ತಡಕ್ಕೆ ಮಣಿದು ಒಂದೊಂದು ನಿಯಮ ಜಾರಿ ಮಾಡಲಾಗುತ್ತಿದ್ದು, ಇದರಿಂದ ಚಾಲಕರ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ. ಸಾಲ ಮಾಡಿ ಜೀಪ್ ಖರೀದಿಸಲಾಗಿದೆ, ಇದೀಗ ದಿಢೀರ್ ಆಗಿ ನಿರ್ಬಂಧ ಹೇರಿರುವುದರಿಂದ ಸಾಲ ತೀರಿಸಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇತ್ತೀಚಿನ ಹತ್ತು ವರ್ಷಗಳಲ್ಲಿ ಕೊಡಗಿನಲ್ಲಿ…

Read More

ಬೆಂಗಳೂರು ಜ.8 :  ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು. ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿ ಹಾಜರಿದ್ದರು. ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಹಾಗೂ ಕ್ರೈಸ್ತ ಧರ್ಮ ಗುರುಗಳು ನಿಯೋಗದ ಜತೆಗಿದ್ದರು. ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ…

Read More

ಮಡಿಕೇರಿ ಜ.8 : ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ ಸಮಾರಂಭ ಸಂಭ್ರಮದಿಂದ ಜರುಗಿತು. ‘ಪಾಲೂರ್ ಕೊಡವಾಮೆ ಕೂಟ’ ವತಿಯಿಂದ ನಡೆದ 18ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಮಂದನೆರವಂಡ, ನೆರವಂಡ, ಚೆರುವಾಳಂಡ, ಮೇಪಾಡಂಡ, ಪೊದುವಾಡ, ಪೈಕೇರ, ಬೊಳ್ಳಿಯಂಡ, ಬಲ್ಲಂಡ ಕುಟುಂಬಗಳ ಸದಸ್ಯರು ಪಾಲ್ಗೊಂಡಿದ್ದರು. ಮೇಪಾಡಂಡ ವೇಣು ಉತ್ತಪ್ಪ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ “ಕೊಡವರ ಆಚಾರ, ವಿಚಾರ ಹಾಗೂ ಕಲೆ ಬಹಳ ವಿಶಿಷ್ಟವಾದದ್ದು. ಯುವಜನತೆ ನಮ್ಮ ಸಂಸ್ಕೃತಿಯನ್ನ ಕಾಪಾಡಲು ಒಗ್ಗಟ್ಟಿನಿಂದ ಆಸಕ್ತಿ ತೋರಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ್ರಾಮದ ಹಿರಿಯ ಕಾಫಿ ಬೆಳೆಗಾರರಾದ ನೆರವಂಡ ಎಂ.ಹರೀಶ್ ಅವರನ್ನ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡವಾಮೆ ಕೂಟದ ವತಿಯಿಂದ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಗ್ರಾಮಸ್ಥರಿಗೆ ಹಲವು ಮನೋರಂಜನಾ…

Read More

ನಾಪೋಕ್ಲು ಜ.8 : ಕಾಡಾನೆ ಲದ್ದಿಯಲ್ಲಿ ಕಾಫಿ ಬೀಜಗಲು ಯಥೇಚ್ಛವಾಗಿ ಕಂಡುಬರುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಾಪೋಕ್ಲು ಸಮೀಪದ ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ರೈತರು ಆತಂಕಕ್ಕೆ ಈಡಾಗಿದ್ದಾರೆ. ಈ ಹಿಂದೆ ಕಾಡಾನೆಗಳು ಕಾಫಿ, ಅಡಿಕೆ, ತೆಂಗು ಫಲಬರಿತ ಗಿಡಗಳನ್ನು ಹಾಗೂ ಭತ್ತದ ಪೈರುಗಳನ್ನು ತುಳಿದು ನಾಶಪಡಿಸಿದ್ದರೆ ಇದೀಗ ಕಾಫಿಯ ಹಣ್ಣುಗಳನ್ನು ತಿಂದ ನಷ್ಟಪಡಿಸುತ್ತಿವೆ.  ಮರಂದೋಡ ಗ್ರಾಮ ವ್ಯಾಪ್ತಿಯಲ್ಲಿ ನಾಲ್ಕಾರು ಆನೆಗಳು ಅಡ್ಡಾಡುತ್ತಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅರಣ್ಯ ಅಧಿಕಾರಿಗಳಿಗೆ ಕಾಡಾನೆಗಳನ್ನು ಕಾಡಿಗಟ್ಟುವಂತೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಭತ್ತದ ಕಟಾವು ಮುಗಿದಿದ್ದು ಇದೀಗ ಕಾಡಾನೆಗಳು ತೋಟ ನುಸುಳಿವೆ. ಕಾಫಿಯ ರೆಂಬೆಗಳನ್ನು ಮುರಿದು ಹಣ್ಣಾಗಿರುವ ಕಾಫಿಯನ್ನು ತಿಂದು ನಷ್ಟಪಡಿಸುತ್ತಿವೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಲ್ಲದೆ ಸರಕಾರ ಸೂಕ್ತ ನಷ್ಟ ಪರಿಹಾರವನ್ನು ನೀಡಬೇಕೆಂದು ಗ್ರಾ.ಪಂ ಸದಸ್ಯ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಜ.8 : ಭಾರತೀಯ ಅಂಚೆ ಇಲಾಖೆಯ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂಚೆ ಚೀಟಿಗಳ ಹಬ್ಬ ಕಾರ್ಯಕ್ರಮದಲ್ಲಿ ಕರ್ನಾಟಕದ ಮೊದಲ ಮಹಿಳಾ ಉದ್ಯಮಿ ಕಾಫಿಪುಡಿ ಸಾಕಮ್ಮ ಅವರ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲಾಯಿತು. ಸಾಕಮ್ಮನವರ ಕುಟುಂಬಸ್ಥರಾದ ತಾರ ಮಂಜು ಗೌಡ, ಅರಕಲಗೂಡು ಶಾಸಕ ಎ.ಮಂಜು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಪತ್ನಿ ದಿವ್ಯ ಮಂತರ್, ಉಪಾಸಿ ಮಾಜಿ ಅಧ್ಯಕ್ಷ ವಿನೋದ್ ಶಿವಪ್ಪ, ಬೆಳೆಗಾರ ಹಾಗೂ ಉದ್ಯಮಿ ಆನಂದ ಬಸಪ್ಪ ಅವರುಗಳು ಪೋಸ್ಟಲ್ ಕವರ್ ಅನ್ನು ಅನಾವರಣಗೊಳಿಸಿದರು. ಸುಮಂಗಲಿ ಸೇವಾ ಆಶ್ರಮದ ಸ್ವಯಂ ಸೇವಕಿ ಡಾ.ಸುಶೀಲಮ್ಮ, ಖ್ಯಾತ ಕಲಾವಿದೆ ರಾಧಾ ಮಲ್ಲಪ್ಪ, ಭಾರತೀಯ ಅಂಚೆ ಇಲಾಖೆ ನಿರ್ದೇಶಕಿ ಪ್ರೀತಿ ಅಗ್ರವಾಲ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರ ಉಪಸ್ಥಿತಿಯಲ್ಲಿ ಸಂಜೆ ಸಮಾರೋಪ ಸಮಾರಂಭ ನಡೆಯಿತು. ಮಹಿಳಾ ಸಬಲೀಕರಣ’ ಎಂಬ ವಿಷಯದಡಿಯಲ್ಲಿ ರಾಜ್ಯ ಅಂಚೆಚೀಟಿಗಳ ಸಂಗ್ರಹಣೆ ಮತ್ತು ಪ್ರದರ್ಶನದ ಹಬ್ಬದಲ್ಲಿ ವಿಶ್ವ…

Read More

ಸೋಮವಾರಪೇಟೆ ಜ.8 : ರಕ್ತದಾನದಿಂದ ಜೀವದಾನಮಾಡಿದಂತೆ ಎಂದು ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ತಿಳಿಸಿದರು. ಸೋಮವಾರಪೇಟೆಯ ತಥಾಸ್ತು ಸಂಸ್ಥೆ ಹಾಗೂ ಜಿಲ್ಲಾ ರಕ್ತನಿಧಿ ಘಟಕದ ವತಿಯಿಂದ ಶ್ರೀ ಶಿವಕುಮಾರ ಸ್ವಾಮೀಜಿ ಸ್ಮರಣಾರ್ಥ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ರಕ್ತ ದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತ ದಾನ ಮಾಡುವುದರಿಂದ ಒಂದು ಜೀವ ಉಳಿಸಿದಂತಾಗುತ್ತದೆ. ಅಪಘಾತ ಮುಂತಾದ ತುರ್ತು ಸಂದರ್ಭಗಳಲ್ಲಿ ರಕ್ತ ನೀಡಲು ಮುಂದಾಗಬೇಕೆಂದರು. ನೂರಾಹನ್ನೊಂದು ವರ್ಷಗಳ ಕಾಲ ಬಾಳಿ ಜಾತಿ, ಮತ, ಭೇದ ನೀಡದೆ ಸರ್ವಜನಾಂಗದ ಮಕ್ಕಳಿಗೂ ಶಿಕ್ಷಣ, ದಾಸೋಹ ಹಾಗೂ ಆಶ್ರಯ ನೀಡಿದ ಕಾಯಕಯೋಗಿ ಶಿವಕುಮಾರ ಸ್ವಾಮಿಗಳ ದಾಸೋಹ ದಿನದ ನೆನಪಿನಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ಜಿಲ್ಲಾ ರಕ್ತ ನಿಧಿ ಮುಖ್ಯಸ್ಥ ಡಾ.ಕರುಂಬಯ್ಯ ಮಾತನಾಡಿ, ರಕ್ತದಾನ ಶ್ರೇಷ್ಠವಾದದ್ದು ಆದ್ದರಿಂದ ಆರೋಗ್ಯವಂತ ವ್ಯಕ್ತಿಗಳು ವರ್ಷಕ್ಕೆ ಮೂರು ನಾಲ್ಕು ಬಾರಿ ರಕ್ತ ದಾನಮಾಡಬಹುದೆಂದು ಸಲಹೆ ನೀಡಿದರು. ಹಲವು ಸಂದರ್ಭಗಳಲ್ಲಿ ರಕ್ತ ಅನಿವಾರ್ಯವಾಗಿದೆ ಆದ್ದರಿಂದ ದಾನಿಗಳು ಮುಂದೇಬರಬೇಕು ಎಂದ ಅವರು…

Read More

ಸುಂಟಿಕೊಪ್ಪ ಜ.8 : ಕರ್ನಾಟಕದಲ್ಲಿ ಹುಟ್ಟಿರುವ ನಾವುಗಳು ಮೊದಲು ಕನ್ನಡವನ್ನು ಕಲಿತು ಇತರರಿಗೆ ಕನ್ನಡವನ್ನು ಕಲಿಸಿ ಬೆಳೆಸಲು ಮುಂದಾಗಬೇಕೆಂದು ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವ್ಯವಸ್ಥಾಪಕ ವಂ.ರೇ.ಫಾ.ಅರುಳ್ ಸೇಲ್ವಕುಮಾರ್ ಹೇಳಿದರು. ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ 50ರ ಅಂಗವಾಗಿ ಹೋಬಳಿ ಮಟ್ಟದ ಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡವನ್ನು ಕಲಿತು ಬೆಳೆಸಲು ನಿರ್ಧರಿಸಿದ್ದು, ಅದರಂತೆ ಮಕ್ಕಳು ಕನ್ನಡವನ್ನು ಕಲಿತು ಬೆಳೆಸುವುದು ನಮ್ಮೆಲ್ಲಾರಿಗೂ ಸ್ಫೂರ್ತಿದಾಯಕಗಿದೆ ಅದ್ದರಿಂದ ಎಲ್ಲಾರೂ ಕನ್ನಡವನ್ನು ಬೆಳೆಸುವ, ಕರ್ನಾಟಕ ಉಳಿಸುವ ಕಾರ್ಯ ಮಾಡಬೇಕೆಂದು ಕರೆ ನೀಡಿದರು.ಸುಂಟಿಕೊಪ್ಪ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್.ಸೆಬಾಸ್ಟೀನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ ಪ್ಲಾಂಟೇಶನ್ ವ್ಯವಸ್ಥಾಪಕ ಶಶಾಂಕ್, ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾದ್ಯಾಯ ಸೇಲ್ವರಾಜ್, ಸುಂಟಿಕೊಪ್ಪ ಕನ್ನಡ…

Read More