ಲೇಖಕ: admin

ನಾಪೋಕ್ಲು ಜ.8 : ಕೊಳಕೇರಿಯ ಕೂವಲೆ ಕಾಡು ಜಾಗದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಾಪೋಕ್ಲು ಗ್ರಾಮದ ನಿವಾಸಿ ಸಲೀಂ ಹಾಜಿ ಅವರು, ಕೊಳಕೇರಿಯ ಕೂವಲೆ ಕಾಡಿನಲ್ಲಿ ಸ್ಥಳ ದಾನ ನೀಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಒದಗಿಸಲಾದ ಹದಿನೈದು ಲಕ್ಷ ರೂಪಾಯಿ ಹಾಗೂ ನರೇಗ ಉದ್ಯೋಗ ಖಾತ್ರಿ ಯೋಜನೆ ಅಡಿ ನೀಡಲಾದ 5 ಲಕ್ಷ ಸೇರಿದಂತೆ ಒಟ್ಟು 20 ಲಕ್ಷ ರೂಪಾಯಿ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು ಎಂದು ವನಜಾಕ್ಷಿ ಹೇಳಿದರು. ಈ ಸಂದರ್ಭ ಪಂಚಾಯಿತಿ ಉಪಧ್ಯಕ್ಷ ಹೇಮ ಅರುಣ್, ಗ್ರಾ.ಪಂ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಜ.8 : ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಆಯೋಜಿಸಿದ ಜಿಲ್ಲಾ ಕಹ್ಫುಲ್ ವರಾ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ನಾಪೋಕ್ಲುವಿನ ಮಾರುಕಟ್ಟೆ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಕೊಡಗು ಉಪ ಖಾಝಿಗಳಾದ ಅಬ್ದುಲ್ಲಾ ಉಸ್ತಾದ್, ಆಧ್ಯಾತ್ಮಿಕ ಉಲಮಾ ಒಕ್ಕೂಟದ ಯುವಜನ ಘಟಕವಾದ ಸುನ್ನಿ ಯುವಜನ ಸಂಘ (ಎಸ್‌ವೈಎಸ್ ) ಕಳೆದ 70 ವರ್ಷಗಳಿಂದ ಧಾರ್ಮಿಕ ಮತ್ತು ಶೈಕ್ಷಣಿಕ ಹಾಗೂ ಜನಪರ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಸಂಘಟನೆಯಾಗಿದೆ ಎಂದ ಅವರು ಶಾಂತಿ ಹಾಗೂ ಸಮಾಧಾನ ಮತ್ತು ಸಹಬಾಳ್ವೆಯನ್ನು ಸಾರುವ ಸಂಘಟನೆಯಾಗಿದೆ ಎಂದು ತನ್ನ ಅನುಭವ ಹಾಗೂ ಅಭಿಪ್ರಾಯವನ್ನು ವ್ಯಕ್ತಪಡಿಸಿರು. ಮಜ್ಲಿಸುನ್ನೂರ್ ನೇತೃತ್ವ ವಹಿಸಿ ಮಾತನಾಡಿದ ಪಾಣಕ್ಕಾಡ್ ಮುಈನ್ ಅಲಿ ಶಿಹಾಬ್ ತಂಙಳ್ ಆಧ್ಯಾತ್ಮಿಕವಾಗಿ ಜನ ಮನಸ್ಸುಗಳನ್ನು ಶುಚೀಕರಿಸುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದ ಅವರು ಕೆಲವು ಘಟನೆಗಳನ್ನು ಆಧರಿಸಿ ಧಾರ್ಮಿಕ ಉಪನ್ಯಾಸವನ್ನು ನೀಡಿದರು. ಚೆರಿಯಪರಂಬು ದರ್ಗಾ ಝಿಯಾರತ್ ಹಿರಿಯ ವಿದ್ವಾಂಸರಾದ ಹುಸೈನ್ ಮುಸ್ಲಿಯಾರ್ ಕುಂಜಿಲ…

Read More

ಮಡಿಕೇರಿ ಜ.8 : ಕೊಡಗು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಜ.24 ಮತ್ತು 25 ರಂದು ಕೊಡಗು ಜಿಲ್ಲಾ ಮಟ್ಟದ ಮೇಲಾಟ ಕ್ರೀಡಾ ಸ್ಪರ್ಧೆ ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಎಂ.ವಿ.ಲೋಕೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, 14 ಮತ್ತು 16 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರಿಗೆ ಕೂಡಿಗೆ ಕ್ರೀಡಾಶಾಲೆಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಆಯ್ಕೆಯಾದ ಅರ್ಹ ಕ್ರೀಡಾಪಟುಗಳು ಫೆ.16 ರಿಂದ 18ರ ವರೆಗೆ ಅಹಮದಾಬಾದ್-ಗುಜರಾತ್ ಯುನಿವರ್ಸಿಟಿ ನವರಂಗಪುರದ ಸರ್ದಾರ್ ಪಾಟೀಲ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯಲಿರುವ 19ನೇ ರಾಷ್ಟ್ರೀಯ ಅಂತರ್ ಜಿಲ್ಲಾ ಅಥ್ಲೆಟಿಕ್ಸ್ ಮೀಟ್ ನಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದ್ದಾರೆ. :: ವಯೋಮಿತಿ :: 14 ವರ್ಷದೊಳಗಿನ ಬಾಲಕ, ಬಾಲಕಿಯರು 19.02.2010 ರಿಂದ 18.02.2012 ರೊಳಗೆ ಹಾಗೂ 16 ವರ್ಷದೊಳಗಿನ ಬಾಲಕ, ಬಾಲಕಿಯರು 19.02.2008 ರಿಂದ 18.02.2010 ರೊಳಗೆ ಜನಿಸಿದವರಾಗಿರಬೇಕು. :: ಸ್ಪರ್ಧೆಗಳು :: (ಟ್ರಯಥ್ಲಾನ್ ಎ) 14 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಉದ್ದ ಜಿಗಿತ ಮತ್ತು ಎತ್ತರ…

Read More

ಮಡಿಕೇರಿ ಜ.8 :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ” ಸಂಘಟನಾ ಸಮಿತಿ ಸಭೆ ನಡೆಸಿ, ಸಮಾವೇಶದ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಸಚಿವರಾದ ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್‌ ಪಿ. ಮಣಿವಣ್ಣನ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.        

Read More

ನಾಪೋಕ್ಲು ಜ.8 : ಬಲ್ಲಮಾವಟಿ ಗ್ರಾ.ಪಂ ಯ 2022-23 ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮ ಸಭೆ ಹಾಗೂ ಜಮಾ ಮಂದಿ ಸಭೆಯನ್ನು ಜ.9 ರಂದು ಗ್ರಾ.ಪಂ ಅಧ್ಯಕ್ಷರಾದ ಎಂ.ಪಿ .ಶಾಂತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಿಗ್ಗೆ 10.30 ಗಂಟೆಗೆ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮದ ಪಿಂಚಣಿದಾರರ ಸಂಘದ ಕಟ್ಟಡದಲ್ಲಿ ಸಭೆಯನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಜ.8 :   ಸೋಮವಾರಪೇಟೆಯ ಆಂಜನೇಯ ದೇವಾಲಯದ ಆಡಳಿತ ಸಮಿತಿ ಸದಸ್ಯರ  ನಿಯೋಗವು ಕರ್ನಾಟಕ ಸರ್ಕಾರದ ಮುಜರಾಯಿ ಮತ್ತು ಸಾರಿಗೆ ಸಚಿವ  ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಬೆಂಗಳೂರಿನ ಸಚಿವರ ಕಚೇರಿಗೆ ಭೇಟಿ ನೀಡಿದ ಆಡಳಿತ ಮಂಡಳಿ ಪ್ರಮುಖರು ಹಾಗೂ ಸದಸ್ಯರು  ಸೋಮವಾರಪೇಟೆ ಕಕ್ಕೆಹೊಳೆ ಸಮೀಪದ ಶ್ರೀ ಆಂಜನೇಯ ದೇವಾಲಯದ ಪುನಶ್ಚೇತನ ಕಾರ್ಯಕ್ರಮಕ್ಕೆ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು, ಶೀಘ್ರವೇ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದರು. ನಿಯೋಗದಲ್ಲಿ  ದೇವಾಲಯ ಸಮಿತಿ ಸದಸ್ಯರಾದ ಗೋಪಾಲ್, ನಂದ, ಸುರೇಶ್, ಸೀತಾರಾಮ್, ಉದ್ಯಮಿ ಅರುಣ್, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್  ಹಾಜರಿದ್ದರು.

Read More

ಮಡಿಕೇರಿ ಜ.8 :  ಕೊಡಗು ಜಿಲ್ಲಾ ಪೊಲೀಸ್, ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಮಿಸ್ಟರಿ ಹಿಲ್ಸ್ ಹಾಗೂ ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ಮಡಿಕೇರಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ತಟೆಗಟ್ಟುವ  ಕುರಿತು  ಜಾಗೃತಿ ಜಾಥಾ ನಡೆಯಿತು. ಮಡಿಕೇರಿಯ ಗದ್ದುಗೆಯಿಂದ ಆರಂಭವಾದ ಜಾಥಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಚಾಲನೆ ನೀಡಿದರು. ಮಡಿಕೇರಿಯ ಗದ್ದುಗೆಯಿಂದ ಆರಂಭವಾದ ಮೇರವಣಿಗೆ ಐಜಿ ಸರ್ಕಲ್, ಕಾಲೇಜು ರಸ್ತೆ, ಕೆ.ಎಸ್.ಆರ್.ಟಿ ಬಸ್ ನಿಲ್ದಾಣದ, ಮುತ್ತಣ್ಣ ಸರ್ಕಲ್ ಮುಕಾಂತರ ಸಾಗಿ ರಾಜಾಸೀಟಿನಲ್ಲಿ ಕೊನೆಗೊಂಡಿತು‌. ಮೆರವಣಿಗೆಯ ಉದ್ದಕ್ಕೂ ಮಾದಕ ವಸ್ತುಗಳನ್ನ ತೆಜಿಸುವಂತೆ ಘೋಷಣೆಗಳು ಮೊಳಗಿತು. ಜಾಥಕ್ಕೆ  ಆಟೋ, ಟ್ಯಾಕ್ಸಿ ಲಾರಿ ಮಾಲೀಕರು ಹಾಗೂ ಚಾಲಕರು ಸಹಕಾರ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಇತ್ತಿಚೀನ ದಿನಗಳಲ್ಲಿ ಹೆಚ್ಚಿನ ಯುವಕರು ಮಾದಕ ವಸ್ತುಗಳ ಚಟಕ್ಕೆ ಒಳಗಾಗಿ ತಮ್ಮ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಸಾಕಷ್ಟು ಅಭಿಯಾನಗಳನ್ನ ನಡೆಸಿಕೊಂಡು ಬರಲಾಗುತ್ತಿದ್ದರೂ ಕೂಡ  ಯುವ ಪಿಳೀಗೆ…

Read More

ಮಡಿಕೇರಿ ಜ.8 :  ಕೂಡಿಗೆಯ ಪವಿತ್ರ ತಿರು ಕುಟುಂಬ ಚರ್ಚ್ ನ  ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದ ಧರ್ಮಗುರುಗಳಾದ ವಂದನೀಯ ಸ್ವಾಮಿ ಚಾರ್ಲ್ಸ್ ನೋರೋನಾ ಅವರ ಸಮ್ಮುಖದಲ್ಲಿ ಕುಶಾಲನಗರದ ಸಂತ ಸಬಾಸ್ಟಿಯನ್ ದೇವಾಲಯದ ಧರ್ಮಗುರು ವಂದನೀಯ ಎಂ.ಮಾರ್ಟಿನ್   ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಕೊಡಗು ವಲಯದ ಹಲವು ಧರ್ಮಕೇಂದ್ರದ ಗುರಗಳು ಹಾಗೂ ಕನ್ಯಾ ಸ್ತ್ರೀಯರು  ಹಾಜರಿದ್ದರು.  ಬಲಿಪೂಜೆಯ ನಂತರ ಭವ್ಯ ತೇರಿನೊಂದಿಗೆ ಮೆರವಣಿಗೆ ನಡೆಯಿತು.

Read More

ಚೆಯ್ಯಂಡಾಣೆ ಜ.7 : ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು. ಜ.15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನವಿದ್ದು, ಇದರ ಅಂಗವಾಗಿ ಚೇಲಾವರದ ಪೋನ್ನೊಲ ಸಾರ್ಥವು ಬೈತೂರ್ ಕಾರ್ಯಾರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಚೇಲಾವರದ ಮನೆ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ಯನ್ನು ವಿತರಿಸಲಾಯಿತು. ಈ ಸಂದರ್ಭ  ನಾಡು ತಕ್ಕರಾದ ಪಟ್ಟಚೆರುವಂಡ ಜಿಮ್ಮ ಚಿಟ್ಟಿಯಪ್ಪ, ಪ್ರಮುಖರಾದ ಪಟ್ಟಚೆರುವಂಡ ಹರಿ ಮುತ್ತಪ್ಪ, ಚರ್ಮಣ, ಮುಂಡಿಯೋಳಂಡ ಪ್ರವೀಣ್ ಈರಪ್ಪ, ಬಾಚಮಂಡ ಲೋಕೇಶ್, ಪವನ್ ಮಂಜು, ಕುಟ್ಟನ ಸೀತಾರಾಂ ಮತಿತ್ತರರು ಹಾಜರಿದ್ದರು. ವರದಿ :  ಅಶ್ರಫ್  

Read More

ಮಂಗಳೂರು, ಜ.7;ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ  ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆ ಯೊಂದಿಗೆ ನಡೆದ ಪಂದ್ಯಾವಳಿ ಯಲ್ಲಿ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ ಸಂಘ ಪ್ರಥಮ ಹಾಗೂ ಹಾಸನ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೃತೀಯ ಪ್ರಶಸ್ತಿ ಗಳಿಸಿದೆ. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜು, ಬಿ.ರಮಾನಾಥ ರೈ,ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ಶುಭ ಹಾರೈಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ, ದ.ಕ ಜಿಲ್ಲಾ ಧಿಕಾರಿ ಮುಲ್ಲೈ ಮುಗಿಲನ್ ,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು,…

Read More