ಲೇಖಕ: admin

ಮಡಿಕೇರಿ ಜ.7 : ಸೋಮವಾರಪೇಟೆ ತಾಲ್ಲೂಕಿನ ಹೋಬಳಿ ಕೇಂದ್ರವಾದ ಮಾದಾಪುರ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹುದ್ದೆ ಖಾಲಿಯಾಗಿರುವುದರಿಂದ ಜನಸಾಮಾನ್ಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು 1 ವರ್ಷದಲ್ಲಿ 3 ಮಂದಿ ವರ್ವಾವಣೆಗೊಂಡಿದ್ದಾರೆ. ಕಳೆದ 3 ತಿಂಗಳಿನಿಂದ ಪಿಡಿಒ ಇಲ್ಲದೆ ಗ್ರಾಮ ಪಂಚಾಯಿತಿಯ 2 ಸಾಮಾನ್ಯ ಸಭೆಯೂ ನಡೆದಿಲ್ಲ. ಪಿಡಿಒ ಆಗಿದ್ದ ಸುಮೇಶ್ ಬೇರೆಡೆಗೆ ವರ್ಗವಾದ ನಂತರ ಸುರೇಶ್ ಎಂಬುವವರನ್ನು ನಿಯೋಜಿಸಲಾಗಿತ್ತು. ಕೆಲವು ದಿನಗಳು ಕರ್ತವ್ಯ ನಿರ್ವಹಿಸಿದ ನಂತರ ಅವರನ್ನು ಇಲ್ಲಿನ ಸೇವೆಯಿಂದ ಮುಕ್ತ್ತಗೊಳಿಸಿ ದಕ್ಷಿಣ ಕೊಡಗಿನ ಗ್ರಾ.ಪಂ ಗೆ ನೇಮಿಸಲಾಗಿದೆ. ನೂತನ ಪಿಡಿಓ ಬಂದ ನಂತರ ತಮ್ಮ್ ನೀಡಿ ಅವರ ಹೆಸರಿಗೆ ಪಂಚಾಯಿತಿ ದಾಖಲಾತಿ ಬರಲು 1 ತಿಂಗಳು ಕಾಲಾವಕಾಶ ಬೇಕಾಗಿದೆ. ಮಾದಾಪುರ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರುಗಳು ನಿಯೋಗ ತೆರಳಿ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಶಾಶ್ವತ ಪಿಡಿಒ ನೇಮಕಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರೂ ಇದುವರೆಗೆ ನೇಮಕವಾಗಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.…

Read More

ಮಡಿಕೇರಿ ಜ.7 : ಕೊಡವ ಜನಾಂಗದ ಶ್ರೀಮಂತ ಸಂಸ್ಕೃತಿಯ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸಬೇಕಾಗಿರುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ದೇಶತಕ್ಕರು ಹಾಗೂ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ.ಸುಬ್ರಮಣಿ ಅವರು ಕರೆ ನೀಡಿದ್ದಾರೆ. ಕುಶಾಲನಗರ ಕೊಡವ ಸಮಾಜದಲ್ಲಿ ನಡೆದ ಪುತ್ತರಿ ಊರೋರ್ಮೇರ ಸಂತೋಷ ಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮುಂದಿನ ಪೀಳಿಗೆಗೆ ಸಂಸ್ಕೃತಿ ಸಂಪ್ರದಾಯ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಸಣ್ಣಪುಟ್ಟ ವಿಷಯಗಳಿಗೆ ನೊಂದು ಜೀವ ತೆರುವುದು ಬಿಟ್ಟು ತಮ್ಮ ಗುರಿಯನ್ನು ಸಾಧಿಸುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಪತ್ರಕರ್ತ ಅಜ್ಜನಿಕಂಡ ಪಿ.ಮಹೇಶ್ ನಾಚಯ್ಯ ಕೊಡವರು ಯಾವುದೇ ಸಂದರ್ಭ ತಮ್ಮ ಆಸ್ತಿಪಾಸ್ತಿಗಳನ್ನು ಮಾರಾಟ ಮಾಡಬಾರದು. ಹಿರಿಯರು ಬಳುವಳಿ ನೀಡಿದ ಆಸ್ತಿಯಲ್ಲಿ ದುಡಿದು ನೆಮ್ಮದಿಯನ್ನು ಕಾಣಬೇಕು. ಪ್ರತಿಯೊಬ್ಬರು ಒಗ್ಗಟ್ಟಿನಿಂದ ಜನಾಂಗದ ಶ್ರೇಯೋಭಿವೃದ್ಧಿಗೆ ಕೈಜೋಡಿಸಬೇಕು ಎಂದರು. ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷರಾದ ಮಂಡೆಪಂಡ ಬೋಸ್ ಮೊಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ ಸಮಾಜಕ್ಕೆ…

Read More

ಸೋಮವಾರಪೇಟೆ ಜ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಇವರ ಆಶ್ರಯದಲ್ಲಿ ಪಟ್ಟಣದ ಸಿಂಥೆಟಿಕ್ ಹಾಕಿ ಟರ್ಫ್ ಮೈದಾನದಲ್ಲಿ ಭಾನುವಾರ ನಡೆದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸೆಮಿ ಫೈನಲ್‌ನಲ್ಲಿ ಜಯಗಳಿಸಿ ಜಾರ್ಖಂಡ್ ಮತ್ತು ಚಂಡೀಗಡ ತಂಡಗಳು ಫೈನಲ್ ತಲುಪಿವೆ. ಜಾರ್ಖಂಡ್ ತಂಡವು ಮಧ್ಯಪ್ರದೇಶ ವಿರುದ್ಧ 7-0 ಗೋಲುಗಳ ಅಂತರದಲ್ಲಿ ಜಯ ಗಳಿಸಿತು. ಜಾರ್ಖಂಡ್ ತಂಡದ ರೋಷನಿ ಮತ್ತು ಸುಶ್ಮಿತಾ ಲಾಕ್ರಾ ತಲಾ ಎರಡು ಗೋಲು ಗಳಿಸಿದರೆ, ಅನುಪ್ರಿಯ, ಜಮುನಾ, ಲಿಯೋನಿ ಹೆಮ್ರಾಮ್ ತಲಾ ಒಂದು ಗೋಲು ಗಳಿಸಿದರು. ಜಾರ್ಖಂಡ್ ತಂಡವು 6 ಫೀಲ್ಡ್ ಗೋಲುಗಳನ್ನು ಮತ್ತು ಪೆನಾಲ್ಟಿ ಕಾರ್ನರ್ ಮೂಲಕ ಒಂದು ಗೋಲು ದಾಖಲಿಸಿತು. ದಿನದ ಎರಡನೇ ಸೆಮಿಫೈನಲ್ ಪಂದ್ಯ ಚಂಡೀಗಡ ಮತ್ತು ಮಣಿಪುರ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಸಮಬಲದ ಹೋರಾಟ ಕಂಡುಬಂದರೂ ಚಂಡೀಗಡ ತಂಡ ಮಣಿಪುರ…

Read More

ಮಡಿಕೇರಿ ಜ.7 : ಕುಮಾರಪರ್ವತದ ತಪ್ಪಲಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪಾದುಕೆಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ಪೂಜೆ ಸಲ್ಲಿಸಲಾಯಿತು. ವರ್ಷಕ್ಕೆ ಒಂದು ಬಾರಿ ಮಾತ್ರ ಕುಕ್ಕೆ ದೇಗುಲದ ವತಿಯಿಂದ ಇಲ್ಲಿ ಪೂಜೆ ನೆರವೇರುತ್ತದೆ. :ಪೌರಾಣಿಕ ಹಿನ್ನೆಲೆ:  ಕುಮಾರಪರ್ವತದಲ್ಲಿ ಕುಮಾರಸ್ವಾಮಿಯು ತಾರಕಾದಿ ರಾಕ್ಷಸರನ್ನು ಕೊಂದು ಕತ್ತಿಯ ಅಲಗನ್ನು ಕುಮಾರಪರ್ವತದಲ್ಲಿ ಹುಟ್ಟುವ ಕುಮಾರಧಾರಾ ನದಿಯಲ್ಲಿ ತೊಳೆದನು. ಬಳಿಕ ಷಣ್ಮುಖನು ವಾಸುಕಿಯೊಂದಿಗೆ ಕುಕ್ಕೆ ಕ್ಷೇತ್ರದಲ್ಲಿ ನೆಲೆಯಾದನು ಎಂದು ಕ್ಷೇತ್ರ ಪುರಾಣ ಉಲ್ಲೇಖಿಸಿದೆ. ತಾರಕಾದಿ ರಾಕ್ಷಸರನ್ನು ಕುಮಾರಸ್ವಾಮಿ ಈ ಪರ್ವತ ಶ್ರೇಣಿಯಲ್ಲೇ ವಧೆ ಮಾಡಿದನು. ಈ ಪರ್ವತ ಶ್ರೇಣಿಯಲ್ಲೇ ತ್ರಿಮೂರ್ತಿಗಳ ಸಮ್ಮುಖದಲ್ಲಿ ಮಾರ್ಗಶಿರ ಶುದ್ಧ ಷಷ್ಠಿ(ಚಂಪಾಷಷ್ಠಿ)ಯ ದಿನ ದೇವೇಂದ್ರನ ಮಗಳಾದ ದೇವಸೇನೆಯನ್ನು ಷಣ್ಮುಖನಿಗೆ ವಿವಾಹ ಮಾಡಿಸಿ ಪಟ್ಟಾಭಿಷೇಕ ಮಾಡಿಸಲಾಯಿತು. ಈ ಅಭಿಷೇಕದ ನೀರು ಮುಂದೆ ಹರಿದು ಕುಮಾರಧಾರಾ ನದಿಯಾಯಿತು ಎಂದೂ ಪುರಾಣಗಳು ಉಲ್ಲೇಖಿಸಿವೆ. ಕುಮಾರಪರ್ವತದಲ್ಲಿ ಷಣ್ಮುಖನಿಗೆ ವಿವಾಹವಾದ ಪ್ರದೇಶದಲ್ಲಿ ಈಗಲೂ ಸುಬ್ರಹ್ಮಣ್ಯನ ಪಾದಗಳು ಇವೆ. ಇದನ್ನು ಕುಮಾರಪಾದ ಎನ್ನುತ್ತಾರೆ. ಇದರ ಪಕ್ಕದಲ್ಲಿ ವಾಸುಕಿಯೂ ಗೋಚರಿತವಾಗಿದೆ. ಇದಕ್ಕೆ…

Read More

ಕುಶಾಲನಗರ ಜ.7 : ಕುಶಾಲನಗರದ ಅಲ್ ಇಹ್ಸಾನ್ ಕಮಿಟಿ ವತಿಯಿಂದ ೧೪ ನೇ ವರ್ಷದ ಬಡ ಹೆಣ್ಣು ಮಕ್ಕಳ ವಿವಾಹ ಕಾರ್ಯಕ್ರಮವನ್ನು ಕುಶಾಲನಗರದ ಶಾಧಿ‌ ಮಹಿಲ್ ನಲ್ಲಿ ನಡೆಸಲಾಯಿತು. ಅಲ್ ಇಹ್ಸಾನ್ ಕಮಿಟಿ ಅಧ್ಯಕ್ಷರಾದ ಎಮ್.ಇ.ಮುಸ್ತಫಾರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಬಡ ಹೆಣ್ಣುಮಕ್ಕಳ ವಿವಾಹ ಕಾರ್ಯಕ್ರಮ ನೆರವೇರಿಸಲಾಯಿತು. ವಧುವಿಗೆ ೪೦ ಗ್ರಾಂ ಚಿನ್ನ, ವಸ್ತ್ರ ಹಾಗೂ ವರನಿಗೆ ವಸ್ತ್ರವನ್ನು ವಿತರಿಸಲಾಯಿತು. ಈ ಕುರಿತು ಮಾತನಾಡಿದ ಅಲ್ ಇಹ್ಸಾನ್ ಕಮಿಟಿ ಅಧ್ಯಕ್ಷ‌ ಎಮ್.ಇ.ಮುಸ್ತಫಾ, ಪ್ರತೀ ವರ್ಷದಂತೆ ಈ ಬಾರಿಯೂ ಬಡ ಹೆಣ್ಣುಮಕ್ಕಳ ವಿವಾಹವನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಆರ್ಥಿಕವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಹಾಗೆಯೇ ಅಲ್ ಇಹ್ಸಾನ್ ನ‌ ಪದಾಧಿಕಾರಿಗಳಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು. ಈ ಸಂದರ್ಭ ಕುಶಾಲನಗರದ ಧರ್ಮುಗುರುಗಳಾದ ನಾಸೊರ್ ಫೈಜಿ಼, ದಾರುಲ್ ಉಲೂಂ ಮದ್ರಸದ ಪ್ರಾಂಶುಪಾಲರಾದ ತಮ್ಲೀಕ್ ದಾರಿಮಿ, ದಾರುಲ್ ಉಲೂಂ ಕಮಿಟಿ ಪದಾಧಿಕಾರಿಗಳು, ಅಲ್‌ ಇಹ್ಸಾನ್ ಕಮಿಟಿ ಪದಾಧಿಕಾರಿಗಳು ಹಾಗೂ ಇನ್ನಿತರರು ಇದ್ದರು.

Read More

ಮಡಿಕೇರಿ ಜ.7 : ರಾಜ್ಯ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಜ.8 ರಂದು ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜ.7 : ರೋಟರಿ ರಸ್ತೆ ಸುರಕ್ಷತಾ ಅಭಿಯಾನದಡಿಯಲ್ಲಿ ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಎರಡು ಸೂಚನಾ ಫಲಕಗಳನ್ನು ಅಳವಡಿಸಲಾಯಿತು. ಮೈಸೂರು ಕಡೆಯಿಂದ ಮಡಿಕೇರಿ ನಗರ ಪ್ರವೇಶಿಸುವ ಮತ್ತು ಮಡಿಕೇರಿ ನಗರದಿಂದ ಸಿದ್ದಾಪುರ ಕಡೆಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ ಫಲಕಗಳನ್ನು ಹಾಕಲಾಗಿದೆ. ಮಡಿಕೇರಿ ನಗರದ ಸಂಚಾರಿ ಪೊಲೀಸ್ ಠಾಣಾ ಎಎಸ್‌ಐ ನಂದ ಹಾಗೂ ರೋಟರಿ ವುಡ್ಸ್ ನ ಅಧ್ಯಕ್ಷ ವಸಂತ್ ಕುಮಾರ್ ಜಂಟಿಯಾಗಿ ಫಲಕಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಎಎಸ್‌ಐ ನಂದ ರಸ್ತೆ ಸುರಕ್ಷತಾ ಅಭಿಯಾನ ಒಂದು ನಿಲ್ಲದ ಪ್ರಕ್ರಿಯೆಯಾಗಿದೆ. ಇದು ಸದಾ ನಡಿಯುತ್ತಿರಬೇಕು, ಆ ಮೂಲಕ ಜನ ಜಾಗೃತಿಯನ್ನು ಮೂಡಿಸುತ್ತಿರಬೇಕು ಎಂದರು. ರೋಟರಿ ಸಂಸ್ಥೆ ನಡೆಸುತ್ತಿರುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು ರಸ್ತೆ ಸುರಕ್ಷತೆ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವೆಂದರು. ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಮಾತನಾಡಿ ರೋಟರಿ ಸಂಸ್ಥೆ ಹಲವಾರು ಜನೋಪಯೋಗಿ…

Read More

ಮಡಿಕೇರಿ ಜ.6 : ಬೆಂಗಳೂರಿನಲ್ಲಿ ನಡೆಯುತ್ತಿರುವ ಅಸೋಸಿಯೇಷನ್ ಆಫ್ ಓಟೋಲರಿಂಗೋಲಜಿಸ್ಟ್ ಆಫ್ ಇಂಡಿಯಾದ (AOICON) 75ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೊಡಗಿನ ಸಂಸ್ಕೃತಿ ಸಿರಿಯ ಆಕರ್ಷಿಸಿತು. ಬೆಂಗಳೂರಿನ ಸ್ವಿಸ್ ಟೌನ್ ನ ಕ್ಲಾಕ್ಸ್ ಎಕ್ಸೋಟಿಕಾ ಸೆಂಟರ್ ನಲ್ಲಿ ಜ.5ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಡಗಿನ ಸಂಸ್ಕೃತಿ ಬಿಂಬಿಸುವ ಮದುಮಗ, ಮದುಮಗಳು, ಬೇಟೆಗಾರ, ಬಿಳಿ ಮತ್ತು ಕಪ್ಪು ಕುಪ್ಯಾಧಾರಿಗಳು ಗಮನ ಸೆಳೆದರು. ಕೊಡವ ಸಂಸ್ಕೃತಿಯ ಆಭರಣಗಳ ವಿವರಣೆ ಸಹಿತ ಫ್ಯಾಶನ್ ಶೋ, ಕೊಡವ ಹಾಡಿನ ನೃತ್ಯ, ವಾಲಗ ನೃತ್ಯ ಕೊಡಗಿನ ನಟಿ, ನಿರ್ಮಾಪಕಿ, ಸಹ ನಿರ್ದೇಶಕಿ, ಕವಿಯತ್ರಿ ಈರಮಂಡ ಹರಿಣಿ ವಿಜಯ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಿರಿ ಬಳಗ ಮೂರ್ನಾಡುವಿನ ಸದಸ್ಯರಾದ ತೋರೆರ ನಳಿನಿ ಅಯ್ಯಪ್ಪ, ಕೋಲೆಯಂಡ ನಿಶಾ ಮೋಹನ್, ಹೈ ಕೋರ್ಟ್ ನ್ಯಾಯವಾದಿ ಆನೇಡ ಹರೀಶ್ ಗಣಪತಿ, ತೋತಿಯಂಡ ಕಿರಣ್ ಸೋಮಣ್ಣ, ಅಮ್ಮಾಟಂಡ ದೇವಯ್ಯ, ವಿಂದ್ಯಾ ದೇವಯ್ಯ ಸೇರಿದಂತೆ 25 ಮಂದಿಯ ತಂಡ ಕೊಡವ ಸಂಸ್ಕೃತಿಯನ್ನು ಪ್ರತಿಬಿಂಬಿಸಿ ನೆರೆದಿದ್ದ ಗಣ್ಯರು…

Read More

ಮಡಿಕೇರಿ ಜ.6 : ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಮೃತ ನಗರೋತ್ಥಾನ ಯೋಜನಾ ಕಾಮಗಾರಿಯನ್ನು  ಪರಿಶೀಲಿಸಿದರು. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ಹಾಗೂ ಪಿಎಂಸಿ ಅವರ ಜೊತೆ ಸ್ಥಳ ಪರಿಶೀಲಿಸಿದರು. ನಗರಸಭೆ ವ್ಯಾಪ್ತಿಯಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ರಾಜಕಾಲುವೆಗೆ ನಿರ್ಮಿಸಲಾದ ಮಳೆ ನೀರು ಚರಂಡಿ, ವಾರ್ಡ್ ನಂ 1 ರ ಆನಂದ್ ಮನೆಯಿಂದ ಸುಮತ್ ಮನೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ವಾರ್ಡ್ ನಂ.5 ರಲ್ಲಿ ಆಟೋ ಯಲ್ಲಪ್ಪ ಮನೆಯಿಂದ ಕಸ್ತೂರಿ ಮನೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು ಹಾಗೂ ಸ್ಥಳದಲ್ಲಿಯೇ ಕೋರ್ ಕಟ್ಟಿಂಗ್ ಮಾಡಿಸಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಗುಣಮಟ್ಟದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರಿಕೆವಹಿಸಿ ಕಾಮಗಾರಿ ನಿರ್ವಹಿಸುವಂತೆ ಕಾಮಗಾರಿಗಳ ಉಸ್ತುವಾರಿ ಹೊತ್ತಿರುವ ಕಾರ್ಯಪಾಲಕ ಅಭಿಯಂತರರು ಮತ್ತು ಪಿ.ಎಂ.ಸಿರವರಿಗೆ ನಿರ್ದೇಶನ…

Read More

ಮಡಿಕೇರಿ ಜ.6 : ಅಯೋಧ್ಯೆಯ ಶ್ರೀ ರಾಮಮಂದಿರದ ಪ್ರತಿಷ್ಠಾಪನೆಯಂದು ಅಭಿಷೇಕ ಮಾಡಲು ದೇಶಾದ್ಯಂತ ಪವಿತ್ರ ಸಪ್ತನದಿಗಳ ತೀರ್ಥವನ್ನು ಸಂಗ್ರಹಿಸುತ್ತಿದ್ದು, ದಕ್ಷಿಣ ಭಾರತದ ಪುಣ್ಯನದಿ ಕಾವೇರಿ ಮಾತೆಯ ಪವಿತ್ರ ತೀರ್ಥವನ್ನು ಅಖಿಲ ಭಾರತೀಯ ಸಂತ ಸಮಿತಿಯ ಕರ್ನಾಟಕ ಘಟಕ, ತಮಿಳುನಾಡು ಘಟಕ ಹಾಗೂ ಕೊಡಗು ಜಿಲ್ಲಾ ಘಟಕ, ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್‌ ಘಟಕದ ಪದಾಧಿಕಾರಿಗಳು ತಲಕಾವೇರಿಯಲ್ಲಿ ಸ್ವೀಕರಿಸಿದರು. ಶನಿವಾರದಂದು ತಲಕಾವೇರಿಯಲ್ಲಿ ತಮಿಳುನಾಡು ರಾಜ್ಯದ ಮಾಯಿಲದುತ್ತುರೆ ಜಿಲ್ಲೆಯ ಧರ್ಮಾಪುರಂ ಅಧೀನಂನ ಪೀಠಾಧಿಪತಿ ಮಸಿಲಮಣಿ ದೇಸಿಗ ಜ್ಞಾನ ಸಂಬಂಧ ಸ್ವಾಮೀಜಿ ಅವರು ಹೋಮ ಹವನದೊಂದಿಗೆ ಕಾವೇರಿ ಮಾತೆಯ ನಾಮಜಪ ಮಾಡಿ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಪವಿತ್ರ ತೀರ್ಥವನ್ನು ಬ್ರಹ್ಮಕುಂಡಿಕೆಯಿಂದ ತಲಕಾವೇರಿ ದೇವಾಲಯದ ಪ್ರಧಾನ ಅರ್ಚಕರಾದರಿಂದ ಸ್ವೀಕರಿಸಿದರು. ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಅಧ್ಯಕ್ಷ ಮಂಗಳೂರಿನ ಓಂ ಶ್ರೀ ಮಠದ ಗುರುಗಳಾದ ಮಹಾಮಂಡಲೇಶ್ವರ ಶ್ರೀ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಸಹ ಅಧ್ಯಕ್ಷೆ ಮಾತಾಶ್ರೀ ಶಿವಜ್ಞಾನಮಹಿ ಸರಸ್ವತಿ , ತಮಿಳುನಾಡು ರಾಜ್ಯದ ಸಂತ…

Read More