ಮಡಿಕೇರಿ ಜ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಜ.8 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವರಾದ ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷರಾದ ಎಚ್.ವಿ.ಗಿರಿಜಾ ಇತರರು ಪಾಲ್ಗೊಳ್ಳಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ…
ಲೇಖಕ: admin
ಮಡಿಕೇರಿ ಜ.6 : ಪ್ರಸಕ್ತ(2023-24) ಸಾಲಿಗೆ ವಕ್ಫ್ ನೋಂದಾಯಿತ/ ಸಂಘ ಕಾಯ್ದೆಯಡಿ ನೋಂದಾಯಿತ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ 13 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜೊತೆ 2 ವರ್ಷಗಳ ಕಾಲ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು (ಆನ್ಲೈನ್-ಆಪ್ಲೈನ್ ಕೋಚಿಂಗ್) ನೀಡಲು ಹಾಗೂ ಎಸ್ಎಸ್ಎಲ್ಸಿ, ಪಿಯುಸಿ, ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ/ ಎನ್ಐಒಎಸ್, ದೂರ ಶಿಕ್ಷಣ ಮೂಲಕ ನೀಡುವುದಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಮದರಸಾ ಸಂಸ್ಥೆಗಳಿಂದ ಅರ್ಜಿ ಸಲ್ಲಿಸಲು https://dom.karnataka.gov.in ಮೂಲಕ ಅರ್ಹ ನೋಂದಾಯಿತ ಮದರಸಾಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಮದರಸಾ ಸಂಸ್ಥೆಗಳು ರಾಜ್ಯದಲ್ಲಿ ವಕ್ಫ್ ನೋಂದಾಯಿತ/ ಇತರೆ ಸಂಘ ಸಂಸ್ಥೆ ಕಾಯ್ದೆಯಡಿ ನೋಂದಾಯಿತ ಮದರಸಾ ಸಂಸ್ಥೆಯಾಗಿರಬೇಕು. ಮದರಸಾದಲ್ಲಿ 40 ಅರ್ಹ ವಿದ್ಯಾರ್ಥಿಗಳಿರಬೇಕು. ಮದರಸಾಗಳು ತರಗತಿ ಕೊಠಡಿಗಳೊಂದಿಗೆ ವಸತಿ ಸೌಲಭ್ಯ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜನವರಿ, 20 ಕೊನೆಯ ದಿನವಾಗಿದೆ. ಹೆಚ್ಚಿನ…
ಮಡಿಕೇರಿ ಜ.6 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 5 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (https://sevasindhu.karnataka.gov.in/Sevasindhu/DepartmentServicesKannada) ಪೋರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಜನವರಿ, 30 ಕೊನೆಯ ದಿನವಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್- 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್– 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್…
ಮಡಿಕೇರಿ ಜ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಜ.12 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ. ಮಂತರ್ ಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ತು ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ ಪ್ರಕಾಶ್, ನೆಹರು ಯುವ…
ಮಡಿಕೇರಿ ಜ.6 : ಕುಶಾಲನಗರ ಪುರಸಭೆಯ ನಗರ ಬಡಜನರ ಕಲ್ಯಾಣಕ್ಕಾಗಿ ಶೇ.7.25 ರ ಅನುದಾನದಡಿ ಕುಶಾಲನಗರ ಪುರಸಭೆ ವ್ಯಾಪ್ತಿಯ ನಗರ ಬಡಜನರ ಕಲ್ಯಾಣಕ್ಕಾಗಿ ಎಸ್ಎಸ್ಎಲ್ಸಿ, ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 1 ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ. ಈ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜನವರಿ, 9 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿ ಪುರಸಭೆ, ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆಯಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜ.6 : ಧರ್ಮದ ವಿಚಾರದಲ್ಲಿ ಪರಸ್ಪರ ಕಿತ್ತಾಡುತ್ತಾ ಹಗೆ ಸಾಧಿಸುತ್ತಾ ಕೋಮು ಸೌಹಾರ್ದತೆ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಮಸೀದಿ ಆಡಳಿತ ಮಂಡಳಿಯೊಂದು ಅಯ್ಯಪ್ಪ ವ್ರತಧಾರಿಗಳಿಗೆ ಆಸರೆ ನೀಡುವ ಮೂಲಕ ಸಾಮರಸ್ಯ ಮೆರೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 5 ಮಂದಿ ಅಯ್ಯಪ್ಪ ವ್ರತಧಾರಿಗಳು ಮೋಟಾರ್ ಬೈಕ್ನಲ್ಲಿ ಶಬರಿಮಲೆಗೆ ಯಾತ್ರೆ ಕೈಗೊಂಡಿದ್ದರು. ರಾತ್ರಿ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಎಡತ್ತರ ಗ್ರಾಮ ತಲುಪಿದ ಇವರುಗಳಿಗೆ ಮಳೆಯ ನಡುವೆ ಕಾಡುಗಳಿಂದ ಕೂಡಿದ, ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಮುಂದಕ್ಕೆ ಸಾಗಿದಾಗ ಅಲ್ಲಿ ಲಿವಾಉಲ್ ಹುದಾ ಜುಮಾ ಮಸೀದಿ ಹಾಗೂ ಮದರಸ ಕಾಣಸಿಕ್ಕಿದೆ. ಅಲ್ಲಿಗೆ ತೆರಳಿದ ಇವರುಗಳು ತಂಗಲು ಅವಕಾಶ ಕೇಳಿದ್ದಾರೆ. ಈ ಸಂದರ್ಭ ಮಸೀದಿಯ ಅಧ್ಯಕ್ಷ ಉಸ್ಮಾನ್, ಖತೀಬ್ ಖಮರುದ್ದೀನ್ ಅನ್ವಾರಿ ಹಾಗೂ ಮಸೀದಿಯ ಪದಾಧಿಕಾರಿಗಳು ವ್ರತಧಾರಿಗಳ ಕೋರಿಕೆಗೆ ಸ್ಪಂದಿಸಿ ಎಲ್ಲಾ ಸೌಕರ್ಯವನ್ನು ಒದಗಿಸಿ ಮಸೀದಿ ಬಳಿಯಲ್ಲೇ ಪೂಜೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ. ಅಲ್ಲದೆ ರಾತ್ರಿ ತಂಗಲು ಮದರಸದಲ್ಲಿ ಅವಕಾಶ…
ಮಡಿಕೇರಿ ಜ.6 : ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸುವ ಉದ್ದೇಶದಿಂದ “ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ” ಎಂಬ ಗ್ರಾಮ ಸಂಪರ್ಕ ಕಾರ್ಯಕ್ರಮವನ್ನು ಆಮ್ ಆದ್ಮಿ ಪಾರ್ಟಿ ಆರಂಭಿಸಿದೆ. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿದ ಪ್ರಮುಖರು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ, ಪೂಕಳ, ತೆರಾಲು, ಬೀರುಗ, ಕುಟ್ಟ, ಕೆ.ಬಾಡಗ, ನಾಲ್ಕೇರಿ, ಕಾನೂರು, ಬಾಳೆಲೆ ಮತ್ತು ನಿಟ್ಟೂರು ಗ್ರಾಮಗಳಿಗೆ ಭೇಟಿ ನೀಡಲಾಯಿತು. ಸರ್ಕಾರಿ ಶಾಲೆ ಮತ್ತು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳು, ಶಿಕ್ಷಕರು, ಆಸ್ಪತ್ರೆ ಸಿಬ್ಬಂದಿಗಳ ಸ್ಥಿತಿಗತಿ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಬಹಳಷ್ಟು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ ಇದೆ, ಶಿಕ್ಷಕರ ಕೊರತೆ ಕಾಡುತ್ತಿದೆ. ಪೂಕಳ, ಬಾಡಗರಕೇರಿ, ಕಲ್ಕೂರು, ತೆರಾಲು…
ಮಡಿಕೇರಿ ಜ.6 : ಚೆoಬು ಗ್ರಾಮದ ಊರುಬೈಲ್ ನಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಲಾಯಿತು. ಈ ಸಂದರ್ಭ ಊರುಬೈಲ್ ನ ಉಪ ವಸತಿಯ ಮಹಿಳೆಯರು ಮಂತ್ರಾಕ್ಷತೆ ವಿತರಿಸಲು ಆಗಮಿಸಿದ ರಾಮ ಭಕ್ತರನ್ನ ಆರತಿ ಬೆಳಗಿ ಬರಮಾಡಿಕೊಂಡರು. ಪಂಚಾಯತ್ ಸದಸ್ಯ ಊರುಬೈಲು ವಸಂತ, ನಿದಿಂಜಿ ರವಿಕುಮಾರ್, ವಿಜಯ ನಿದಿಂಜಿ ಮತ್ತಿತರರು ಹಾಜರಿದ್ದರು.
ಮಡಿಕೇರಿ ಜ.6 : ರಾಮನಗರ ಪಿರಮಿಡ್ ಧ್ಯಾನ ಮಂದಿರ ಹಾಗೂ ವಿವಿಧ ಜಿಲ್ಲೆಗಳ ಪಿರಮಿಡ್ ಕೇಂದ್ರಗಳ ಪಿರಮಿಡ್ ಮಾಸ್ಟರ್ಸ್ಗಳಿಂದ ಜ.7 ರಂದು ಮಡಿಕೇರಿಯಲ್ಲಿ “ಅನಾಪಾನಸತಿ ಧ್ಯಾನ” ಉಚಿತ ಧ್ಯಾನ ಶಿಬಿರ ನಡೆಯಲಿದೆ. ನಗರದ ಓಂಕಾರ ಸದನದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 6ರ ತನಕ ನಡೆಯಲಿರುವ ಶಿಬಿರದ ಅಧ್ಯಕ್ಷತೆಯನ್ನು ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ರಾಜೇಂದ್ರ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಪಿ.ಕೃಷ್ಣರಾಜು ಪಾಲ್ಗೊಳ್ಳಲಿದ್ದಾರೆ ಎಂದು ಶಿಬಿರದ ಸಂಯೋಜಕ ಹೆಚ್.ಎಂ.ಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜ.6 : ಹಿರಿಯ ಪತ್ರಕರ್ತ ಕೋವರ್ ಕೊಲ್ಲಿ ಇಂದ್ರೇಶ್, ಸಹೋದರಿ ಕೆ.ಸಿ.ಸವಿತ , ಸಹೋದರರಾದ ಕೆ.ಸಿ ಸುಂದ್ರೇಶ್ ಮತ್ತು ಕೆ.ಸಿ ಚಂದ್ರೇಶ್ ತಮ್ಮ ತಾಯಿ ಶ್ರೀಮತಿ ಬಿ.ಸಿ.ಪುಷ್ಪಲತಾ ಚಂದ್ರಶೇಖರ್ ಅವರ ಹೆಸರಿನಲ್ಲಿ ಕೊಡಗು ಪ್ರೆಸ್ ಕ್ಲಬ್ ನಲ್ಲಿ ನೂತನ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದು, ದತ್ತಿ ಹಣ ರೂ.1 ಲಕ್ಷ ದ ಚೆಕ್ ಅನ್ನು ಪ್ರೆಸ್ ಕ್ಲಬ್ ಗೆ ಹಸ್ತಾಂತರಿಸಿದರು. ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಖಜಾಂಚಿ ಬೊಳ್ಳಜಿರ ಬಿ. ಅಯ್ಯಪ್ಪ ಅವರು ಚೆಕ್ ಸ್ವೀಕರಿಸಿದರು. ಕ್ಲಬ್ ಸದಸ್ಯರಿಗೆ ಪ್ರತಿ ವರ್ಷವೂ ದತ್ತಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿದ್ದು, ಮಾನವೀಯ ವರದಿ ವಿಭಾಗದ ಅತ್ಯುತ್ತಮ ವರದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈಗಾಗಲೇ ಪ್ರೆಸ್ ಕ್ಲಬ್ ನಲ್ಲಿ ಎರಡು ದತ್ತಿ ಪ್ರಶಸ್ತಿ ಇದೆ ಎಂದು ತೇಜಸ್ ಮಾಹಿತಿ ನೀಡಿದರು. ಕೋವರ್ ಕೊಲ್ಲಿ ಇಂದ್ರೇಶ್ ಮಾತನಾಡಿ, 1998 ರಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ತಮ್ಮ ತಂದೆ…






