ಲೇಖಕ: admin

ಬೆಂಗಳೂರು ಡಿ.5 NEWS DESK : ಬೆಂಗಳೂರಿನ ಗಾಂಧಿನಗರದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉದ್ಘಾಟಿಸಿ, ಶುಭ ಕೋರಿದರು. ಸಚಿವರಾದ ಎಂ.ಬಿ.ಪಾಟೀಲ್, ಚಲುವರಾಯಸ್ವಾಮಿ, ಶಾಸಕರಾದ ಆರ್.ವಿ.ದೇಶಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.5 NEWS DESK : ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಾಂತ ನಡೆಸುತ್ತಿರುವ ನೆರೆಹೊರೆಯವರ ಹಕ್ಕುಗಳು ಎಂಬ ರಾಷ್ಟ್ರವ್ಯಾಪಿ ಅಭಿಯಾನದ ಅಂಗವಾಗಿ ಮಡಿಕೇರಿಯ ಸಿ.ಪಿ.ಸಿ ಲೇಔಟ್ ನಲ್ಲಿರುವ ಕಾರುಣ್ಯ ಸದನದ ಸಭಾಂಗಣದಲ್ಲಿ ಸೌಹಾರ್ದ ಚಹಕೂಟ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯ ಸ0ಚಾಲಕ ಯು.ಅಬ್ದುಲ್ ಸಲಾಮ್ , ಇಂದು ಕುಟುಂಬ ಸಂಭಂದಗಳು ಶಿಥಿಲಗೊಳ್ಳುತ್ತಿದೆ. ತಂದೆ ತಾಯಿಯಂದಿರನ್ನು ಕಡಗಣಿಸಲಾಗುತ್ತಿದೆ, ವೃದ್ಧಾಶ್ರಮಗಳು, ನಿರಾಶ್ರಿತ ಕೇಂದ್ರಗಳು ಅಲ್ಲಲ್ಲಿ ಅಣಬೆಗಳಂತೆ ತಲೆ ಎತ್ತುತ್ತಿದೆ. ಅನಾಥಾಶ್ರಮಗಳಲ್ಲಿ ಬರೀ ನಿರ್ಗತಿಕರು ಮಾತ್ರವಲ್ಲ , ಸ್ವಂತ ಕುಟುಂಬ, ಮಕ್ಕಳು ಇರುವ ಮನೆಗಳಿಂದ ಹೊರಹಾಕಲ್ಪಟ್ಟ ತಂದೆ-ತಾಯಿ, ತಾತ-ಅಜ್ಜಿಯಂದಿರು ತಮ್ಮ ಕೊನೆಯಗಳಿಗೆಯನ್ನು ಆಶ್ರಮಗಳಲ್ಲಿ ಕಳೆಯುತ್ತಿರವುದು ಸಮಾಜದ ಬಹು ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಯಾರು ನೆರೆಹೊರೆಯವರು ತನ್ನ ಉಪಟಳದಿಂದ ಸುರಕ್ಷಿತರಲ್ಲವೋ ಆತ ಎಂದಿಗೂ ಓರ್ವ ನೈಜ ವಿಶ್ವಾಸಿಯಾಗಲು ಖಂಡಿತಾ ಸಾಧ್ಯವಿಲ್ಲ ಎಂದು ಪ್ರವಾದಿ ಮೊಹಮ್ಮದ್ ಸ ಅವರ ವಚನವೊಂದನ್ನು ಉಚ್ಚರಿಸಿದ ಅವರು, ಪ್ರತಿಯೊಬ್ಬರು…

Read More

ಮಡಿಕೇರಿ ಡಿ.5 NEWS DESK : ವಿನಾಶಕಾರಿ ಡ್ರಗ್ಸ್ ನಿಂದ ನಮ್ಮ ಯುವ ಜನರನ್ನು ರಕ್ಷಿಸುವ ಸಲುವಾಗಿ ಡ್ರಗ್ಸ್ ಮುಕ್ತ ಕರ್ನಾಟಕ ಸಂಕಲ್ಪ ಸಾರುವ ಸಂದೇಶ ಹೊತ್ತ ಸ್ತಬ್ಧಚಿತ್ರವು ಡಿ.9 ರಂದು ಮೈಸೂರಿನಿಂದ ಹೊರಟು 45 ದಿನಗಳ ಕಾಲ ರಾಜ್ಯಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿದೆ.  ಡಿ.17 ರಂದು ಬೆಳಿಗ್ಗೆ 9 ಗಂಟೆಗೆ ಕೊಡಗಿಗೆ ಆಗಮಿಸಲಿದೆ. ಡಿ.18 ರಂದು ಬೆಳಿಗ್ಗೆ 10 ಗಂಟೆಗೆ ಕುಶಾಲನಗರ ಹಾಗೂ ಮಧ್ಯಾಹ್ನ 2 ಗಂಟೆಗೆ ಸೋಮವಾರಪೇಟೆಯಲ್ಲಿ ಬೃಹತ್ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ. ಡಿ.19 ರಂದು  ಬೆಳಿಗ್ಗೆ 10 ಗಂಟೆಗೆ ಮಡಿಕೇರಿ ಹಾಗೂ ಮಧ್ಯಾಹ್ನ 2 ಗಂಟೆಗೆ ಸಂಪಾಜೆಯಲ್ಲಿ ಬೃಹತ್ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿದೆ. ಆದ್ದರಿಂದ ಜನಜಾಗೃತಿ ಸ್ತಬ್ದಚಿತ್ರ ಹೊತ್ತ ರಥಯಾತ್ರೆ ಜಿಲ್ಲೆಯ ತಾಲ್ಲೂಕುಗಳಿಗೆ ಆಗಮಿಸುವ ಸಂದರ್ಭ ಸ್ಥಳೀಯ ಎಲ್ಲಾ ಸರಕಾರಿ, ಸರಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಒಟ್ಟು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ  7022095863 (ಶರತ್ ಗೋಣಿಕೊಪ್ಪ), 9449762686…

Read More

ಮಡಿಕೇರಿ ಡಿ.5 NEWS DESK : ಕರ್ನಾಟಕ ಸರ್ಕಾರ, ಕೊಡಗು ಜಿಲ್ಲಾ ಗೃಹರಕ್ಷಕದಳ ವತಿಯಿಂದ ಗೃಹರಕ್ಷಕದಳ ದಿನಾಚಣೆಯು ಡಿಸೆಂಬರ್, 06 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣದಲ್ಲಿ ನಡೆಯಲಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಜಿಲ್ಲಾ ಗುಪ್ತದಳ ವಿಭಾಗದ ಪೊಲೀಸ್ ನಿರೀಕ್ಷಕರಾದ ಐ.ಪಿ.ಮೇದಪ್ಪ, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಡಿ.5 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಏಕಲವ್ಯ ಪ್ರಶಸ್ತಿ-2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-2024,  ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2024, ಗುರಿ: ಒಲಿಂಪಿಕ್ ಪದಕ, 2023 ಮತ್ತು 2024 ರ ಕ್ರೀಡಾ ಸಾಧನೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, ಕ್ರೀಡಾ ವಿದ್ಯಾರ್ಥಿ ವೇತನ ಈ ಸೇವೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಸಹಕಾರಿಯಾಗುವಂತೆ ಈ ಸೇವೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್, 10ರವರೆಗೆ ಅವಧಿ ವಿಸ್ತ್ತರಿಸಲಾಗಿದೆ. ಅರ್ಹ ಕ್ರೀಡಾಪಟುಗಳು https://sevasindhuservices.karnataka.gov.in ಸಲ್ಲಿಸಲು ಪ್ರಕಟಣೆ ಕೋರಿದೆ.

Read More

ಮಡಿಕೇರಿ ಡಿ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಿ.6 ರಂದು ಬೆಳಗ್ಗೆ 9 ಗಂಟೆಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.5 NEWS DESK : ಕೊಡಗಿನ ಸುಗ್ಗಿ ಹಬ್ಬವಾದ ಪುತ್ತರಿಯನ್ನು ಕೊಡಗಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಕ್ಕಬ್ಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಹಬ್ಬದ ಮೊದಲ ಪೂಜೆ ನಡೆಯಿತು. ಬಳಿಕ ಜಿಲ್ಲೆಯಾದ್ಯಂತ ವಿವಿಧ ದೇವಾಲಯಗಳಲ್ಲಿ ಭತ್ತದ ಕದಿರಿಗೆ ಸಾಂಪ್ರದಾಯಿಕ ಪೂಜೆ ನೆರವೇರಿತು. ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಪುತ್ತರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಗದಿತ ಸಮಯದಲ್ಲಿ ಕದಿರು ಕೊಯ್ದು ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪೊಲಿಪೊಲಿ ದೇವಾ ಉದ್ಘೋಷಣೆಯೊಂದಿಗೆ ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಂಡರು. ನಂತರ ನೆರೆದಿದ್ದವರಿಗೆ ಕದಿರು ವಿತರಿಸಲಾಯಿತು.

Read More

ಮಡಿಕೇರಿ ಡಿ.5 NEWS DESK : ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಡಿ.7 ರಂದು  ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆಯಲಿದೆ ಎಂದು ತಕ್ಕ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೊಟ್ಟಿಯತ್ ಮೂರು ನಾಡಿನ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ, ಕೈಮುಡಿಕೆ ಪುತ್ತರಿ ಕೋಲ್ ಮಂದ್’ಗೆ ಶತ ಶತಮಾನಗಳ ಇತಿಹಾಸವಿದ್ದು, ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡಿಗೆ ಸೇರಿದ ಎಲ್ಲಾ ಗ್ರಾಮಗಳು ಒಂದೆಡೆ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪೊನ್ನಂಪೇಟೆ-ಅರ್ವತೋಕ್ಲುವಿನಿಂದ ಹಿಡಿದು ಹಾತೂರುವಿನವರೆಗೂ, ಹಾತೂರು-ಬಿಟ್ಟಂಗಾಲದಿಂದ ಹಿಡಿದು ವಿ ಬಾಡಿಗ, ಬಿ.ಶೆಟ್ಟಿಗೇರಿಯವರೆಗಿನ ಎಲ್ಲಾ ಗ್ರಾಮಗಳು ಕೈಮುಡಿಕೆ ವ್ಯಾಪ್ತಿಗೆ ಒಳಪಡುತ್ತದೆ. ಪ್ರತಿವರ್ಷ ಪುತ್ತರಿ ಕಳೆದು ಎರಡು ದಿವಸದಲ್ಲಿ ಇಲ್ಲಿ ಕೋಲ್ ಮಂದ್ ನಡೆಯುತ್ತಿದ್ದು, ಈ ಬಾರಿ ಡಿ.7 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದ್ದಾರೆ.…

Read More

ಚೆಟ್ಟಳ್ಳಿ ಡಿ.5 NEWS DESK : ಕೊಡಗಿನಾದ್ಯಂತ ಪುತ್ತರಿ ನಮ್ಮೆಯ ಆಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಪುತ್ತರಿರ ಕುಟುಂಬದ ಐನ್ ಮನೆಯಲ್ಲಿ ರಾತ್ರಿ ನೆರೆಕಟ್ಡಿ ಫಲಹಾರ ಮುಗಿಸಿ, ಗದ್ದೆಗಳಿಗೆ ತೆರಳಿ 9.40ಕ್ಕೆ ಕದುರು ತೆಗೆದು ಮನೆಗೆ ತರಲಾಯಿತು. ಕುಟುಂಬದ ಹಿರಿಯರಾದ ಗಣೇಶ್ ಭೀಮಯ್ಯ ಪುತ್ತರಿ ನಮ್ಮೆಯ ಆಚರಣೆಯೊಂದಿಗೆ ಎಲ್ಲರಿಗೂ ಒಳಿತನ್ನು ಮಾಡಲೆಂದು ಬೇಡಿಕೊಂಡರು. ದೇವನೆಲೆಯಲ್ಲಿ ಮೀದಿ ನೀರಿಟ್ಟು ಊಟೋಪಚಾರ ಮಾಡಲಾಯಿತು.

Read More

ಮಡಿಕೇರಿ ಡಿ.5 NEWS DESK : ನಗರದ ಸುದರ್ಶನ ವೃತ್ತದ ಸರಕಾರಿ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಮಾತನಾಡಿದ ಶಾಸಕರು ಮಡಿಕೇರಿ ನಗರ ಸಭೆಯ ಅಧ್ಯಕ್ಷರು ಮತ್ತು ಸದಸ್ಯರ ಒಮ್ಮತದ ಸಹಕಾರದಿಂದ ನಗರದಲ್ಲಿ ಹಲವಾರು ವರ್ಷಗಳ ಬೇಡಿಕೆ ಇದ್ದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಕಾಲ ಈಗ ಕೂಡಿ ಬಂದಿದೆ. ಸುಮಾರು 40 ಲಕ್ಷ ಅನುದಾನ, ಬಳಸಿಕೊಂಡು ಉತ್ತಮ ಗುಣಮಟ್ಟದ ಕಾಮಗಾರಿಯ ಅಂಬೇಡ್ಕರ್ ನೆನಪಿನ ಕಂಚಿನ ಪ್ರತಿಮೆ ಸ್ಥಾಪನೆಯಾಗಲಿದೆ. ಈ ಕಾಮಗಾರಿಯನ್ನು 4-5 ತಿಂಗಳಲ್ಲಿ ಸಮಿತಿ ಸದಸ್ಯರು ಗಮನಹರಿಸಿ ಮುಗಿಸಬೇಕು, ಶಾಸಕರ ನಿಧಿಯಿಂದ ಇನ್ನು ಹೆಚ್ಚಿನ ಅನುದಾನ ಕೊಡಲು ನಾನು ಪ್ರಯತ್ನಿಸುವುದಾಗಿ ತಿಳಿಸಿದರು. ಕಾಮಗಾರಿ ಮುಗಿದ ನಂತರ ಜಿಲ್ಲೆಯ ಎಲ್ಲಾ ಸಂಘಟನೆಗಳನ್ನು ಸೇರಿಸಿಕೊಂಡು ದೊಡ್ಡಮಟ್ಟದಲ್ಲಿ ಉದ್ಘಾಟನೆ ಕಾರ್ಯಕ್ರಮ ಇಟ್ಟುಕೊಳ್ಳುವ ಬಗ್ಗೆ ಕ್ರಮ ವಹಿಸುತ್ತೇನೆ. ಎಲ್ಲರು ಸಹಕಾರ ನೀಡುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ…

Read More