ಮಡಿಕೇರಿ ಜ.4 : ಕೋರ್ಬಿವ್ಯಾಕ್ಸ್ ಲಸಿಕೆಯು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 100(ಡೋಸ್), ತಾಲ್ಲೂಕು ಆಸ್ಪತ್ರೆ, ಸೋಮವಾರಪೇಟೆ 60(ಡೋಸ್) ಮತ್ತು ಸಾರ್ವಜನಿಕ ಆಸ್ಪತ್ರೆ, ವಿರಾಜಪೇಟೆ 60(ಡೋಸ್) ಲಭ್ಯವಿದ್ದು, ಲಸಿಕೆಯನ್ನು ಉಚಿತವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣವನ್ನು ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಆದರೆ ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿದ್ದು, ಇನ್ನೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೆ ಉಳಿದಿರುವವರಿಗಾಗಿ ಕೊಡಗು ಜಿಲ್ಲೆಗೆ 220 ಡೋಸ್ ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆ ಸರಬರಾಜಾಗಿದೆ. ಮುನ್ನೆಚ್ಚರಿಕೆ ಡೋಸ್ ಆಗಿ ಬಳಸಲು ಈಗಾಗಲೇ ಆರೋಗ್ಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತೆಯರು, ಮುಂಚೂಣಿ ಕಾರ್ಯಕರ್ತೆಯರು ಕೋವಿಡ್-19 ಸೋಂಕಿಗೆ ತುತ್ತಾಗುವ ಸಾಧ್ಯತೆಗಳಿದೆ. ಆದ್ದರಿಂದ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕೋರ್ಬಿವ್ಯಾಕ್ಸ್ ಲಸಿಕೆಯನ್ನು ಪಡೆಯಬಹುದು.…
ಲೇಖಕ: admin
ಕಡಂಗ ಜ.4 : ಅರಪಟ್ಟು ಗ್ರಾಮದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು. ಜ.15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನ ನಡೆಯಲಿದ್ದು, ಇದರ ಅಂಗವಾಗಿ ಅರಪಟ್ಟು ಭಗವತಿ ದೇವಾಲಯದಲ್ಲಿ ಮಂತ್ರಾಕ್ಷತೆ ಯನ್ನು ದೇವರ ಮುಂದೆ ಇಟ್ಟು ಪೂಜೆ ಸಲ್ಲಿಸಲಾಯಿತು. ಈ ಪವಿತ್ರ ಮಂತ್ರಾಕ್ಷತೆ ಯನ್ನು ಊರಿನ ಪ್ರತಿ ಮನೆಗಳಿಗೆ ವಿತರಿಸಲಾಯಿತು. ಈ ಸಂದರ್ಭ ನೆರಪಂಡ ಹರ್ಷ ಮಂದಣ್ಣ, ನೆರಪಂಡ ದೀನಾ, ಕೋಡಿರ ಪ್ರಸನ್ನ, ಪಾಂಡಂಡ ಕಿಶನ್, ಅಂನಂಬಿರ ಸತೀಶ್ ಉಪಸ್ಥಿತರಿದ್ದರು. ವರದಿ : ನೌಫಲ್ ಕಡಂಗ
ವಿರಾಜಪೇಟೆ ಜ.4 : ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಜ.11 ರಿಂದ 13ರ ವರೆಗೆ ಕಾಳೇಘಾಟ್ ಕಳಿಯಾಟ್ ಮಹೋತ್ಸವವು ಜರುಗಲಿದೆ ಎಂದು ಆಡಳಿತ ಮಂಡಳಿಯು ತಿಳಿಸಿದೆ. ಜ.11 ರಂದು ಬೆಳಿಗ್ಗೆ ಗಣಹೋಮ , ಉಷಾಪೂಜೆ , ಉಚ್ಚಪೂಜೆ , ದೀಪಾರಾಧನೆ , ಅತ್ತಾಳಪೂಜೆ ಹಾಗೂ ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.12 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.13 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ. ಈ ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಡಿಕೇರಿ ಜ.4 : ಎಸ್ವೈಎಸ್ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ಜ.5 ರಂದು ನಾಪೋಕ್ಲುವಿನಲ್ಲಿ ಜಿಲ್ಲಾ ಕಹ್ಫುಲ್ ವರಾ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮ ನಡೆಯಲಿದೆ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸಿ.ಎಂ.ಹಮೀದ್ ಮುಸ್ಲಿಯಾರ್ ಸುಂಟಿಕೊಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 5 ಗಂಟೆಯಿಂದ ನಾಪೋಕ್ಲು ಮಾರ್ಕೆಟ್ ಮುಂಭಾಗದಲ್ಲಿ ಜಿಲ್ಲಾ ಕಹ್ಫುಲ್ ವರಾ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮ ನಡೆಯಲಿದೆ ಎಂದರು. ಸಮಸ್ತ ಎಂಬ ಆಧ್ಯಾತ್ಮಿಕ ಉಲಮಾ ಒಕ್ಕೂಟದ ಯುವಜನ ಘಟಕವಾದ ಸುನ್ನಿ ಯುವಜನ ಸಂಘ (ಎಸ್ವೈಎಸ್) ಕಳೆದ 70 ವರ್ಷಗಳಿಂದ ಧಾರ್ಮಿಕ ಮತ್ತು ಶೈಕ್ಷಣಿಕ ಹಾಗೂ ಜನಪರ ಸಮಾಜಮುಖಿ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಸಂಘಟನೆಯಾಗಿದ್ದು, ಶಾಂತಿ ಹಾಗೂ ಸಮಾಧಾನ ಮತ್ತು ಸಹಬಾಳ್ವೆಯನ್ನು ಸಾರುವ ಧರ್ಮದ ವಿಶ್ವಾಸ ವಿಚಾರಗಳನ್ನು ಸಮಾಜಕ್ಕೆ ಅರ್ಥೈಸಿ ಕೊಡುವುದರೊಂದಿಗೆ ಆಧ್ಯಾತ್ಮಿಕವಾಗಿ ಜನರ ಮನಸ್ಸುಗಳನ್ನು ಶುಚೀಕರಿಸುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಎಂಬ ವಿಶ್ವಾಸದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಜ.5 ರಂದು ಅಸರ್…
ಮಡಿಕೇರಿ ಜ.3 : ಸೋಮವಾರಪೇಟೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಸಿಂಥೆಟಿಕ್ ಹಾಕಿ ಟರ್ಫ್’ ಮೈದಾನದ ಉದ್ಘಾಟನೆ ಸಂದರ್ಭ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಿಂದಿನ ಬಿಜೆಪಿ ಸರಕಾರದಲ್ಲಿ ಕ್ರೀಡಾ ಸಚಿವರಾಗಿದ್ದ ಎಂ.ಪಿ.ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಸೋಮವಾರಪೇಟೆಯಲ್ಲಿ ನೂತನವಾಗಿ ಟರ್ಫ್ ಮೈದಾನ ನಿರ್ಮಾಣವಾಗಿದೆ. ಆದರೆ ಮೈದಾನದ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿಲ್ಲ. ಸಂಸದ ಪ್ರತಾಪ್ ಸಿಂಹ, ಎಂಎಲ್ಸಿ ಸುಜಾ ಕುಶಾಲಪ್ಪ ಹಾಗೂ ಚೌಡ್ಲು ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮೈದಾನ ಉದ್ಘಾಟನೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರ ಕಾರನ್ನು ತಡೆಯಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಗಂಗಾಧರಪ್ಪ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್, ನಗರ ಅಧ್ಯಕ್ಷ ಸೋಮೇಶ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ದೀಪಕ್, ತಾಲೂಕು ಪಂಚಾಯ್ತಿ ಮಾಜಿ ಸದಸ್ಯ…
ವಿರಾಜಪೇಟೆ ಜ.3 : ವಿರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ ‘ಏಕ ಭಾರತ ಶ್ರೇಷ್ಠ ಭಾರತ’ ಎಂಬ ದ್ಯೇಯವಾಕ್ಯದಡಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಶಾಲಾ-ಕಾಲೇಜುಗಳ ವಿದ್ಯಾರ್ಥಿ ಯುವ ಪ್ರತಿಭೆಗಳು ಭಾಗವಹಿಸಿ ತಮ್ಮಲ್ಲಿ ಅಡಗಿದ್ದ ಪ್ರತಿಭೆಯನ್ನು ವೇದಿಕೆಯಲ್ಲಿ ಸಾದರಪಡಿಸಿದರು. ನಾನಾ ಕಲಾ ತಂಡಗಳು ಪ್ರದರ್ಶನ ನೀಡಿದ ಜಾನಪದ ನೃತ್ಯಗಳಾದ ಸಿ.ಬಿ.ಎಸ್.ಇ.ಯ ವಿವಿಧ ವಲಯಗಳಿಗೆ ಒಳಪಟ್ಟ ಡೋಗ್ರಿ, ಭಾಂಗ್ಡ, ಹರಿಯಾಣ, ಲೆಪ್ಚ, ನಾಗ, ಚೆರಾವು, ಥೌಗೋಲ್ ಜಗೋಯಿ, ದುನೋಚಿ, ಉತ್ತರಖಂಡ್ ಪಹಾಡಿ, ಗರ್ಭಾ, ಕರ್ನಾಟಕ ತಮಿಳುನಾಡು ಕೇರಳ ಜನಪದ ನೃತ್ಯಗಳು, ಕೋಲಾಟ, ಕಂಸಾಳೆ, ಪೂಜಾ ಕುಣಿತ, ಡೊಳ್ಳು ಕುಣಿತ, ವೀರಗಾಸೆ, ವೀರಭದ್ರ ಕುಣಿತ, ನಂದಿ ಧ್ವಜಾದ ಕುಣಿತ ಆವರಣದಲ್ಲಿ ಹೊಸದೊಂದು ಜಾನಪದ ಲೋಕವನ್ನೇ ಸೃಷ್ಟಿಸಿತು. ನಿರ್ದಿಷ್ಟ ಕಥಾ ವಸ್ತುಗಳನ್ನಾಧರಿಸಿದ ನೃತ್ಯ ಪ್ರಕಾರಗಳು ವೇದಿಕೆ ಮೇಲೆ ಅಚ್ಚಕಟ್ಟಾಗಿ ಮೂಡಿ ಬಂದವು. ಎಸ್.ಎಂ.ಎಸ್ ಅಕಾಡೆಮಿಯ ಪುಟ್ಟಮಕ್ಕಳಾದಿಯಾಗಿ 900 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ…
ಮಡಿಕೇರಿ ಜ.3 : ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ದಿನಾಂಕ 31-12-2023ರ ಒಳಗೆ ತಮ್ಮ ಅಡುಗೆ ಅನಿಲ ಗ್ರಾಹಕರ ಸಂಖ್ಯೆಗೆ ಇ-ಕೆವೈಸಿಯನ್ನು ಮತ್ತು ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ಯಾಸ್ ಏಜೆನ್ಸಿಯಲ್ಲಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಅಂತಹ ಗ್ರಾಹಕರಿಗೆ ಸಹಾಯಧನ ನಿಲ್ಲಿಸಲಾಗುತ್ತದೆ. ಗೃಹ ಬಳಕೆ ಅಡುಗೆ ಅನಿಲ ವಾಣಿಜ್ಯ ಬಳಕೆಯಾಗಿ ಪರಿವರ್ತನೆಯಾಗುತ್ತದೆ ಮತ್ತು ಅನಿಲ ಸಂಪರ್ಕ ಕಡಿತವಾಗುತ್ತದೆ ಹಾಗೂ ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕರ ವಲಯದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿರುತ್ತದೆ. ಅಡುಗೆ ಅನಿಲ ಗ್ರಾಹಕರಿಗೆ ತಿಳಿಯಪಡಿಸುವುದೇನೆಂದರೆ ಈ ವಿಷಯಗಳು ಕೇವಲ ವದಂತಿಯಾಗಿದ್ದು, ಗ್ರಾಹಕರು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರವು/ ಅನಿಲ ಕಂಪನಿಗಳು ಯಾವುದೇ ಕೊನೆಯ ದಿನಾಂಕವನ್ನು ನಿಗಧಿಪಡಿಸಿರುವುದಿಲ್ಲ ಹಾಗೂ ಇ-ಕೆವೈಸಿ ಮಾಡಿಸುವುದಕ್ಕೆ ಯಾವುದೇ ಶುಲ್ಕ ನಿಗಧಿಯಾಗಿರುವುದಿಲ್ಲ. ಇಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ಇ-ಕೆವೈಸಿ ಮಾಡಿಸುವುದು ನಿರಂತರ ಪ್ರಕ್ರಿಯೆಯಾಗಿದ್ದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವವರು ಮತ್ತು ಸಹಾಯಧನ ಪಡೆಯುವ ಗ್ರಾಹಕರು ಮಾತ್ರ ಇ-ಕೆವೈಸಿಯನ್ನು ಆದ್ಯತೆ ಮೇಲೆ…
ಮಡಿಕೇರಿ ಜ.3 : ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ 12 ರವರೆಗೆ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ಜನವರಿ, 05 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಪಂಚಾಯತ್…
ಮಡಿಕೇರಿ ಜ.3 : ಕೊಡಗು ಜಿಲ್ಲಾ ಛಾಯಾಗ್ರಾಹಕರ ಸಂಘದ 2024ರ ಹೊಸ ಕ್ಯಾಲೆಂಡರ್ ಬಿಡುಗಡೆಗೊಂಡಿತು. ನಗರದ ಖಾಸಗಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಬೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಕೊಡಗಿನ ಜಿಲ್ಲಾಧಿಕಾರಿ ವೆಂಕಟರಾಜು, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಎಸಿ ವಿಕಾಸ್ ಬಿಡುಗಡೆಗೊಳಿಸಿ, ಶುಭಹಾರೈಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಸ್.ಆರ್. ವಸಂತ್, ರಾಜ್ಯ ಸಂಘದ ನಿರ್ದೇಶಕರಾದ ದೀಪಕ್ ಕುಮಾರ್, ಗೌರವಾಧ್ಯಕ್ಷ ಸುರೇಶ್ ಮಾವಟ್ಕರ್, ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸೋಲೋಮನ್ ಡೇವಿಡ್, ಸಹ ಕಾರ್ಯದರ್ಶಿ ರಂಜಿತ್, ಸಂಘಟನಾ ಕಾರ್ಯದರ್ಶಿ ಆವರ್ತಿ ಮಹದೇವಪ್ಪ, ಶ್ರೀ ಕಾವೇರಿ ಛಾಯಾಗ್ರಹಕರ ಸಂಘದ ಅಧ್ಯಕ್ಷ ವಿಜಯಕುಮಾರ್, ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ವಿನಯ್, ಜಿಲ್ಲಾ ನಿರ್ದೇಶಕರಾದ ಲವ, ಛಾಯಾಗ್ರಹಕರುಗಳಾದ ವಿನೋದ್, ಜಯರಾಮ್ ಮತ್ತು ಹೇಮಂತ್ ಹಾಜರಿದ್ದರು.
ಮಡಿಕೇರಿ ಜ.3 : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿದ್ದಾಪುರ ಸಮೀಪ ಘಟ್ಟದಳ್ಳದಲ್ಲಿ ನಡೆದಿದೆ. ಪಿ.ಜೆ.ಪಲ್ಲವಿ ಎಂಬುವವರೇ ಗಾಯಗೊಂಡಿರುವ ಮಹಿಳೆಯಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು. ::: ಶಾಸಕರ ಭೇಟಿ ::: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಸ್ಪತ್ರೆಗೆ ತೆರಳಿ ಕಾಡಾನೆ ದಾಳಿ ಕುರಿತು ಮಾಹಿತಿ ಪಡೆದರು. ಗಾಯಾಳು ಪಲ್ಲವಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮಹಿಳೆಯ ಆರೋಗ್ಯ ಸ್ಥಿತಿ ಸಹಜವಾಗಿದೆ. ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತಜ್ಞರ ಸಲಹೆ…






