ಲೇಖಕ: admin

ಮಡಿಕೇರಿ ಜ.3 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಹಾಕಿ ಪಂದ್ಯಾವಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು   ಕೂಡಿಗೆಯ ಕ್ರೀಡಾ ಶಾಲೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಜ.8 ರವರೆಗೆ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯು ಕೊಡಗು ಜಿಲ್ಲೆಯ ಕೂಡಿಗೆ, ಸೋಮವಾರಪೇಟೆ, ಮಡಿಕೇರಿ ಮತ್ತು ಪೊನ್ನಂಪೇಟೆಯ ಹಾಕಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ  ಎ.ಎಸ್.ಪೊನ್ನಣ್ಣ, ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷರಾದ ಭಾಸ್ಕರ ನಾಯ್ಕ ಕೂಡಿಗೆ ಗ್ರಾ.ಪಂ. ಅಧ್ಯಕ್ಷರಾದ ಗಿರೀಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯ ನಿರ್ದೇಶಕರಾದ ಬಿ.ಎಸ್.ರಘುವೀರ್, ಜಂಟಿ ನಿರ್ದೇಶಕರಾದ(ದೈಹಿಕ ಶಿಕ್ಷಣ)…

Read More

ಮಡಿಕೇರಿ ಜ.3 : ಮೂರು ದಶಕಗಳ ಹಿಂದಿನ ಶ್ರೀರಾಮ ಜನ್ಮಭೂಮಿ ಹೋರಾಟದ ಘಟನೆಯನ್ನು ಆಧರಿಸಿ ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದ ಸ್ಕ್ವಾಡ್ರರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು ಒಂದು ಸಮುದಾಯವನ್ನು ಓಲೈಸಿಕೊಳ್ಳುವುದಕ್ಕಾಗಿ ಸರ್ಕಾರ ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಸುಮಾರು ಐದು ನೂರು ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರದ ಕನಸು ನನಸಾಗಿದೆ ಎಂದರು. ರಾಮಮಂದಿರದ ಉದ್ಘಾಟನೆ ಜ.22 ರಂದು ನಡೆಯಲಿದೆ. “ನಾವೂ ರಾಮ ಭಕ್ತರೆ” ಎಂದು ಬಾಯಿಯಲ್ಲಿ ಮಾತ್ರ ಹೇಳಿಕೊಂಡ ಕಾಂಗ್ರೆಸ್ಸಿಗರು  ಸುಮಾರು 32 ವರ್ಷಗಳ ಹಳೆಯ ಪ್ರಕರಣದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ರಾಮ ಭಕ್ತ ಕರಸೇವಕರ ಬಂಧನಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೂರು ದಶಕಗಳಷ್ಟು ಹಳೆಯ ಪ್ರಕರಣದ ಆರೋಪ…

Read More

ಮಡಿಕೇರಿ ಜ.3 : ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಕುರಿತು ಜನ ಸಾಮಾನ್ಯರಿಗೆ ಅರಿವು ಮೂಡಿಸುವ ‘ನಮ್ಮ ಸಂಕಲ್ಪ ವಿಕಸಿತ ಭಾರತ’ ಕಾರ್ಯಕ್ರಮ  ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು, ಸಮಾಜದ ಎಲ್ಲಾ ವರ್ಗಗಳ ಅಭ್ಯುದಯಕ್ಕೆ ಪೂರಕವಾದ ಹತ್ತು ಹಲವಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ್ದಾರೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೇಂದ್ರ ಸರ್ಕಾರ ರೈತರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಪಿಎಂ ಕಿಸಾನ್ ಯೋಜನೆ ಮೂಲಕ ವಾರ್ಷಿಕ 6 ಸಾವಿರ ರೂ.ಗಳನ್ನು ನೇರವಾಗಿ ರೈತರ ಖಾತೆಗೆ ವರ್ಗಾಯಿಸುವ ಮಹತ್ವದ ಕಾರ್ಯ ಮಾಡಿದ್ದಾರೆ. ಆಹಾರ ಭದ್ರತೆಯನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ರಾಜ್ಯದ ಜನತೆಗೆ ಉಚಿತ ಆಹಾರ ಧಾನ್ಯವನ್ನು ವಿತರಿಸಲಾಗಿದೆ ಎಂದರು. ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ…

Read More

ಮಡಿಕೇರಿ ಜ.3 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ಸಮಗ್ರ ವರದಿ ಸಂಗ್ರಹಿಸುವ ಉದ್ದೇಶದಿಂದ “ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ” ಎಂಬ ಗ್ರಾಮ ಸಂಪರ್ಕ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಆಯ್ದ ಗ್ರಾಮಗಳಿಗೆ ಪಕ್ಷದ ಪ್ರಮುಖರು ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮುಕ್ತ ಸಮಾಲೋಚನೆ ನಡೆಸಲಿದ್ದಾರೆ. ಅಂತಿಮವಾಗಿ ಸಂಗ್ರಹಿಸಿದ ಸಮಸ್ಯೆಗಳ ವಿವರವನ್ನು ಅವಲೋಕಿಸಿ ಮುಂಬರುವ ಲೋಕಸಭೆ, ಜಿ.ಪಂ ಮತ್ತು ತಾ.ಪಂ ಚುನಾವಣೆಗೆ ತಯಾರಿ ನಡೆಸಲಾಗುವುದು ಎಂದು ಹೇಳಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಗ್ರಾಮ ಸಂಪರ್ಕ ಕಾರ್ಯಕ್ರಮದ ಮೂಲಕ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಾಗುವುದು. ಕೊಡಗಿನ ಜನಸಾಮಾನ್ಯರ ಧ್ವನಿಯಾಗಿ ಆಮ್ ಆದ್ಮಿ ಪಾರ್ಟಿ ಕಾರ್ಯ ನಿರ್ವಹಿಸಲಿದ್ದು, ಗ್ರಾಮ ಭೇಟಿ ಸಂದರ್ಭ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ ಎಂದು ಭೋಜಣ್ಣ ಸೋಮಯ್ಯ ಮನವಿ…

Read More

ಮಡಿಕೇರಿ ಜ.2 :  ಸೋಮವಾರಪೇಟೆಯಲ್ಲಿ ಕ್ರೀಡಾ ವಸತಿ ನಿಲಯ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು  ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸೋಮವಾರಪೇಟೆ ಚೌಡ್ಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ‘ಹಾಕಿ ಕ್ರೀಡಾಂಗಣ’ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದೆ. ಇದನ್ನು ಮುಂದುವರೆಸಿಕೊಂಡು ಹೋಗಬೇಕು. ಇಲ್ಲಿನ‌ ಕ್ರೀಡಾಂಗಣ ಬಳಿ ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ ಇನ್ನಷ್ಟು ಅನುದಾನ ಬಿಡುಗಡೆಗೆ ಕ್ರೀಡಾ ಸಚಿವರ ಜೊತೆಗೆ ಚರ್ಚಿಸಲಾಗುವುದು ಎಂದರು. ಜಿಲ್ಲೆಯ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಸರ್ಕಾರ ಶಿಕ್ಷಣ, ಆರೋಗ್ಯ, ಕ್ರೀಡೆ ಸೇರಿದಂತೆ ಹೀಗೆ ವಿವಿಧ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು. ಸೋಮವಾರಪೇಟೆಯಲ್ಲಿ ಹಾಕಿ ಕ್ರೀಡಾಂಗಣ ನಿರ್ಮಾಣಕ್ಕೆ ಹಿಂದಿನ ಕ್ರೀಡಾ ಸಚಿವರಾಗಿದ್ದ ಎಂ.ಪಿ.ಅಪ್ಪಚ್ಚುರಂಜನ್ ಅವರ ಕೊಡುಗೆ ಹೆಚ್ಚಿನದ್ದಾಗಿದೆ. ಜೊತೆಗೆ ಹೆಚ್ಚುವರಿ 40 ಲಕ್ಷ ರೂ. ಅನುದಾನ ಬಿಡುಗಡೆಗೆ ಶಾಸಕರಾದ…

Read More

ಮಡಿಕೇರಿ ಜ.3 : ವಕೀಲ ಮತ್ತು ನೋಟರಿ ಬಾಳೆಯಡ ಕಿಶನ್ ಪೂವಯ್ಯ ಹಾಗೂ ಸವಿತ ಪೂವಯ್ಯ ದಂಪತಿ ಪುತ್ರಿ ವಿಭ ರಾಜೇಶ್ವರಿ ಅವರ ವಿವಾಹ ಸಮಾರಂಭ ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಇಂದು (ಜ.3) ಮತ್ತು ನಾಳೆ (ಜ.4) ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಕಿಶನ್ ಪೂವಯ್ಯ ಮನೆಗೆ ಭೇಟಿ ನೀಡಿ ವಿಭ ರಾಜೇಶ್ವರಿಗೆ ಶುಭ ಹಾರೈಸಿದರು.

Read More

ನಾಪೋಕ್ಲು ಜ.3 : ಅಯೋದ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಬಲಮುರಿಯ ಗ್ರಾಮದ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಪೂಜಾ ವಿಧಿ ವಿಧಾನಗಳೊಂದಿಗೆ ಗ್ರಾಮದ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಪಾರಣೆ ಗ್ರಾ.ಪಂ ಅಧ್ಯಕ್ಷ ಪಾಡೆಯಂಡ ಕಟ್ಟಿ ಕುಶಾಲಪ್ಪ, ಶಕ್ತಿಕೇಂದ್ರದ ಅಧ್ಯಕ್ಷ ಅಪ್ಪನೆರವಂಡ ರಾಜ, ಬಲಮುರಿ ಗ್ರಾ.ಪಂ ಸದಸ್ಯರಾದ ಬೊಳ್ಳಚೆಟ್ಟಿರ ಪ್ರಕಾಶ್ ಕಾಳಪ್ಪ, ಕಾರ್ಯಕರ್ತರಾದ ಆಂಗಿರ ಸಂತೋಷ್ ಮಾದಪ್ಪ, ಗುಡ್ಡೇರ ಲಕ್ಷು, ಬಿದ್ದಂಡ ಉಷಾದೇವಮ್ಮ, ಮಣಿಕಂಠ, ಬಿದ್ದಂಡ ಪ್ರಥ, ಕುಂದನ ದಯಾನಂದ ಸೇರಿದಂತೆ ಮುಖ್ಯ ಪಟ್ಟವರು  ಹಾಜರಿದ್ದರು. ಬಳಿಕ ಗ್ರಾಮದ ಮನೆ ಮನೆಗಳಿಗೆ ತೆರಳಿ ಕುಟುಂಬ ಸದಸ್ಯರಿಗೆ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಿ ಜ.22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮೂರ್ತಿಯ ಪ್ರತಿಷ್ಠಾಪನ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಜ.3 : ಇಂದಿನ ಮಕ್ಕಳೇ ದೇಶದ ಭವಿಷ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಕೊಠಡಿಯನ್ನು ಮತ್ತು ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳೇ ನಮ್ಮ ದೇಶದ ಭವಿಷ್ಯ, ಆದರೆ ಮಕ್ಕಳ ಭವಿಷ್ಯವನ್ನು ರೂಪಿಸುವಂತಹ ಜವಾಬ್ದಾರಿ ನಾಗರಿಕರದ್ದಾಗಿದೆ. ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯಲು ಅವಕಾಶವನ್ನು ಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿ ಆಗಿದೆ ಎಂದು ಹೇಳಿದರು. ಮಕ್ಕಳು ಹೆಚ್ಚು ಓದಲು ಸ್ಪೂರ್ತಿಯನ್ನು ನೀಡಬೇಕು. ಯಾವುದೇ ರೀತಿಯ ಶಿಕ್ಷಣ ಪಡೆದರೆ ಯಾವ ರೀತಿ ಉಪಯೋಗವಾಗುತ್ತದೆ ಎಂಬ ಬಗ್ಗೆ ಪೂರಕವಾದ ಮಾಹಿತಿಯನ್ನು ನೀಡಬೇಕು ಎಂದು ಕಿವಿಮಾತು ಹೇಳಿದ ಪೊನ್ನಣ್ಣ ಅವರು, ವಿದ್ಯಾರ್ಥಿಗಳಿಗೆ ಸ್ನೇಹಿತರು ಮತ್ತು ಆಟದಷ್ಟೇ ಪಾಠ ಕೂಡ ಅತ್ಯವಶ್ಯಕ. ಒಳ್ಳೆಯ ಶಿಕ್ಷಣ ಪಡೆದು ಸಾರ್ಥಕವಾದ ಜೀವನ ನಡೆಸಿ ಎಂದು ಕರೆ ನೀಡಿದರು. ಪೋಷಕರು ಮಕ್ಕಳಿಗೆ ಸ್ವತಂತ್ರವಾಗಿ ಚಿಂತನೆ ಮಾಡುವ ಶಕ್ತಿಯನ್ನು ತುಂಬಬೇಕು. ಸ್ವತಂತ್ರವಾಗಿ ಜೀವಿಸುವ…

Read More

ಮಡಿಕೇರಿ ಜ.3 : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಆಯೋಗ ರಚಿಸುವಂತೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಜ.5 ರಂದು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೊಸ ವರ್ಷದಲ್ಲಿ ಮತ್ತೆ ಕೊಡವ ಲ್ಯಾಂಡ್ ಹೋರಾಟವನ್ನು ತೀವ್ರಗೊಳಿಸಲಿದ್ದು, ಶುಕ್ರವಾರ ಬೆಳಗ್ಗೆ 10.30 ಗಂಟೆಯಿಂದ 11.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ಸಲ್ಲಿಸುವುದಾಗಿ ಹೇಳಿದ್ದಾರೆ. ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಯ್ಲೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್‍ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2 ನೇ ರಾಜ್ಯಗಳ ಮರು-ಸಂಘಟನೆ ಆಯೋಗವನ್ನು ರಚಿಸಬೇಕು. ಈ ಕುರಿತು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಿಎನ್‍ಸಿ ಪರ ಕಾನೂನು ಹೋರಾಟ ಮಾಡುತ್ತಿದ್ದಾರೆ. ಸರ್ಕಾರಗಳು ಈ…

Read More

ಮಡಿಕೇರಿ ಜ.3 : ಕಾಡಾನೆ ದಾಳಿಯಿಂದ ಗಾಂಭೀರವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕ ಮಹಿಳೆಯ ಆರೋಗ್ಯವನ್ನು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿಚಾರಿಸಿದರು. ನಗರದ ಜಿಲ್ಲಾಸ್ಪತ್ರೆಗೆ ಆಗಮಿಸಿದ ಪೊನ್ನಣ್ಣ ಅವರು, ವೈದ್ಯರಿಂದ ಮಹಿಳೆಯ ಆರೋಗ್ಯ ಸ್ಥಿತಿಯ ಕುರಿತು ಹಾಗೂ ಗಾಯಾಳು ಪಲ್ಲವಿ ಪತಿಯಿಂದ ಘಟನೆಯ ಕುರಿತು ಮಾಹಿತಿ‌ ಪಡೆದುಕೊಂಡು ಕುಟುಂಬಕ್ಕೆ ಸ್ಥೈರ್ಯ ತುಂಬಿದರು. ಉನ್ನತ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು. ಈ ಸಂದರ್ಭ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಹಾಜರಿದ್ದರು.

Read More