ಮಡಿಕೇರಿ ಜ.2 : ಕಾನೂನಿನ ಅರಿವಿಲ್ಲದವರು ಕಾನೂನು ಪ್ರಕ್ರಿಯೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ. ಹಳೆಯ ಪ್ರಕರಣಗಳ ಇತ್ಯರ್ಥಕ್ಕಾಗಿ ಸಾಮಾನ್ಯ ಸುತ್ತೋಲೆಯನ್ನು ಅಧಿಕಾರಿಗಳ ಮಟ್ಟದಲ್ಲಿ ಕಳುಹಿಸಲಾಗಿದೆ. ರಾಮಮಂದಿರ ಉದ್ಘಾಟನೆಗೆ ನಮ್ಮ ವಿರೋಧವಿಲ್ಲದಿರುವಾಗ ದ್ವೇಷ ರಾಜಕಾರಣ ಮಾಡುವ ಅಗತ್ಯವೇನಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಮಂದಿರ ಉದ್ಘಾಟನೆಗೆ ನಮ್ಮ ವಿರೋಧವಿಲ್ಲವೆಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ನಾನು ಕೂಡ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭ ಕೋರುತ್ತೇನೆ ಎಂದರು. ನಾಲ್ಕು ವರ್ಷ ಇವರದ್ದೇ ಸರ್ಕಾರವಿದ್ದರೂ ಹಳೆಯ ಪ್ರಕರಣ ಇತ್ಯರ್ಥ ಪಡಿಸದೆ ಮಲಗಿದ್ದರೇ ಎಂದು ಪ್ರಶ್ನಿಸಿದ ಪೊನ್ನಣ್ಣ, ಕಾನೂನು ವ್ಯಾಪ್ತಿಯ ಸುತ್ತೋಲೆಗೂ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಮಮಂದಿರಕ್ಕೆ ನಮ್ಮ ವಿರೋಧವಿದಿದ್ದರೆ ನಾವು ದ್ವೇಷ ರಾಜಕಾರಣ ಮಾಡುತ್ತಿದ್ದೇವೆ ಎಂದು ಹೇಳಬಹುದಿತ್ತು. ಆದರೆ ಈಡಿ, ಸಿಬಿಐಯನ್ನು ಕಪಿ ಮುಷ್ಠಿಯಲ್ಲಿಟ್ಟುಕೊಂಡು ರಾಜಕೀಯ ದ್ವೇಷ ಮಾಡುತ್ತಿರುವವರು ಇವರು ಎಂದು ಆರೋಪಿಸಿದರು. ನನ್ನನ್ನು ರಾಜಕೀಯವಾಗಿ ಮುಗಿಸಲು…
ಲೇಖಕ: admin
ಮಡಿಕೇರಿ ಜ.2 : ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು. ಕೊಡವ ಮಕ್ಕಡ ಕೂಟದ ವತಿಯಿಂದ ಕೊಡವ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪುಸ್ತಕ ಪ್ರಕಟಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸಲುವಾಗಿ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ “ವಿಶ್ವ ಕೊಡವ ಸಮ್ಮೇಳನ” ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಗ್ರೀನ್ ಸಿಟಿ ಫೋರಂ ನಿರ್ದೇಶಕ ಕುಕ್ಕೇರ ಜಯ ಚಿಣ್ಣಪ್ಪ, ತಲಕಾವೇರಿ ಮತ್ತು ಭಾಗಮಂಡಲ ದೇವಾಲಯದ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಟಂಡ ಎಸ್.ತಮ್ಮಯ್ಯ ಹಾಜರಿದ್ದರು.
ಮಡಿಕೇರಿ ಜ.2 : ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಎದುರು ನಿಂತು ಕರ್ನಾಟಕ ರಾಜ್ಯಕ್ಕೆ ಏನು ಬೇಕು ಎಂದು ಕೇಳಲಾಗದ ಬಿಜೆಪಿ ಮಂದಿ, ಜನರ ಹಾದಿ ತಪ್ಪಿಸುವುದಕ್ಕಾಗಿ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುತ್ತಿರುವುದಕ್ಕೂ, ಗಲಭೆ ಸಂಬಂಧ ಹಳೆಯ ಪ್ರಕರಣಗಳ ಕುರಿತು ರಾಜ್ಯದಲ್ಲಿ ವಿಚಾರಣೆ ನಡೆಯುತ್ತಿರುವುದಕ್ಕೂ ಯಾವುದೇ ಸಂಬಂಧವಿಲ್ಲ, ಈ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ, ಕಾನೂನು ರೀತಿಯ ಕ್ರಮಗಳು ನಡೆಯುತ್ತಿದೆ ಅಷ್ಟೇ ಎಂದರು. ದೇಶದ ಇತಿಹಾಸದಲ್ಲೇ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡಿಲ್ಲ, ವಿರೋಧ ಪಕ್ಷದಲ್ಲಿದ್ದ ವಾಜಪೇಯಿ, ಅಡ್ವಾಣಿ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದೆ. ಆದರೆ ಈಗಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ಅಮಿತ್ ಶಾ ಅವರುಗಳು ಸಿಬಿಐ, ಈಡಿ, ಚುನಾವಣಾಧಿಕಾರಿಗಳನ್ನು ಬಳಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.…
ವಿರಾಜಪೇಟೆ ಜ.2 : ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಮತ್ತು ಬೆಂಗಳೂರಿನ ಸಮಾಜಮುಖಿ ಪ್ರಕಾಶನ ವತಿಯಿಂದ ಕುಪ್ಪಳ್ಳಿಯಲ್ಲಿ ಆಯೋಜಿಸಲಾಗಿರುವ “ವಿಚಾರ ಕ್ರಾಂತಿಯ ಹಗಲಿರುಳು ಚಿಂತನ” ಶಿಬಿರಕ್ಕೆ ವಿರಾಜಪೇಟೆ ತಾಲೂಕಿನ ಪತ್ರಕರ್ತೆ ಹಾಗೂ ಸಾಹಿತಿ ರಜಿತ ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಜ.6 ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಖ್ಯಾತ ಸಾಹಿತಿಗಳು, ಲೇಖಕರು ಶಿಬಿರದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಡಿಕೇರಿ ಜ.2 : ಕವಯತ್ರಿ ಕೃಪಾ ದೇವರಾಜ್ ಅವರ ಹೊಸ ಕೃತಿ “ಕಾರ್ಪಣ್ಯದ ಹೂವು” ಕವನ ಸಂಕಲನ ಬಿಡುಗಡೆಗೊಂಡಿತು. ಕಣಿವೆಯ ಸುಂದರ ಪರಿಸರದಲ್ಲಿ ನಡೆದ ಅನೌಪಚಾರಿಕ ಸಭೆಯೊಂದರಲ್ಲಿ ಸಾಹಿತಿ ಭಾರದ್ವಾಜ್ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು ಹೊರ ಹೊಮ್ಮುತ್ತವೆ ಎಂದರು. ಬೆಂಗಳೂರಿನ ಲೇಖಕ ಇರ್ಫಾನ್ ಮಾತನಾಡಿ, ಕೊಡಗಿನ ಸುಂದರ ಪರಿಸರ ಲೇಖರಿಗೆ ಸುಂದರ ವಿಷಯ ಒದಗಿಸುತ್ತದೆ ಎಂದು ತಿಳಿಸಿದರು. ಲೇಖಕಿ ಕೃಪಾದೇವರಾಜ್ ಮಾತನಾಡಿ, ಸರಳತೆ ಬಯಸುವ ತಾನು, ಕಥಾ ಸಂಕನವನ್ನೂ ಅದ್ಧೂರಿಯಾಗಿ ಬಿಡುಗಡೆ ಮಾಡಲು ಬಯಸಲಿಲ್ಲ ಎಂದು ಹೇಳಿದರು. ಬರಹಗಾರ ನೌಶದ್ ಜನ್ನತ್, ಪರ್ತಕರ್ತ ಬಿ.ಜಿ. ಅನಂತಶಯನ, ಚುಟುಕ ಕವಿ ಹಾ.ತಿ. ಜಯಪ್ರಕಾಶ್ ಮಾತನಾಡಿದರು. ಕವನ ಸಂಕಲನದಲ್ಲಿ ಕನ್ನಡದಲ್ಲಿ ಮಂತ್ರ ಪಠಿಸುವ ಏಕೈಕ ಅರ್ಚಕ ವಾಗ್ಮಿ ಹಿರೇಮಗಳೂರು ಕಣ್ಣನ್ ಅವರ ಮುನ್ನುಡಿ, ಖ್ಯಾತ ಬರಹಗಾರ್ತಿ ಮಂಗಳನಾಡಿಗ್ ಅವರ ನುಡಿ ಅಡಕವಾಗಿರುವುದು ವಿಶೇಷ.
ವಿಜಯಪುರ ಜ.2 : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ…
ಪುತ್ತೂರು ಜ.2 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ವರ್ಣೋತ್ಸವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ಮಾರ್ಗದರ್ಶನದಲ್ಲಿ ಒಟ್ಟು 35 ವಿದ್ಯಾರ್ಥಿಗಳ ತಂಡವು ಇದರಲ್ಲಿ ಪಾಲ್ಗೊಂಡಿತ್ತು. ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಬಾಗವಹಿಸಿದ ವಿದ್ಯಾರ್ಥಿಗಳು 5 ವಿಭಾಗಗಳಲ್ಲಿ ಪ್ರಥಮ ಹಾಗೂ 2 ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡು ಒಟ್ಟು ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನ್ನು ಪಡೆದುಕೊಂಡಿದ್ದಾರೆ. ಇವರಿಗೆ ಭೂಮಿಕಾ ಕಲಾ ಸಂಘದ ಸಂಯೋಜಕರಾದ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಡಾ.ಶ್ವೇತಾಂಬಿಕಾ.ಪಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಜ.2 : ಬಿಎಸ್ಎನ್ಎಲ್ ಮೈಸೂರು ವಿಭಾಗೀಯ ಸಲಹಾ ಸಮಿತಿ ಸದಸ್ಯರಾಗಿ ಮಡಿಕೇರಿಯ ಕನ್ನಂಡಬಾಣೆಯ ನಾಳನ ಕನ್ನಿಕೆ ದಿನೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೇಂದ್ರ ಸರಕಾರದ ಸಾರ್ವಜನಿಕ ಸಂಪರ್ಕ ಸಚಿವಾಲಯ ಈ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಮಡಿಕೇರಿ ಜ.2 : ಸೋಮವಾರಪೇಟೆಯ ನೂತನ ಟರ್ಫ್ ಮೈದಾನ ಉದ್ಘಾಟನಾ ಸಮಾರಂಭವು ಜ.3 ರಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೂತನ ಮೈದಾನವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಕೆ.ಎ.ಅಬ್ದುಲ್ ರಜಾಕ್ ತಿಳಿಸಿದ್ದಾರೆ.
ನಾಪೋಕ್ಲು ಜ.2 : ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಕ್ರೀಡಾ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಮೈಸೂರು ಗೌಡ ಸಮಾಜದ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪೊನ್ನಚನ ಅಪ್ಪಯ್ಯ, ಸಂಘದ ಸದಸ್ಯರುಗಳ ಸಂಖ್ಯೆ ಗಣನೀಯ ಏರಿಕೆಯು ಸಂಘದ ಅಭಿವೃದ್ಧಿ ಹಾಗೂ ಬೆಳವಣಿಗೆಯನ್ನು ಸೂಚಿಸುತ್ತದೆ. ಸಂಘದ ಮೂಲ ಹಾಗೂ ಮುಖ್ಯ ಉದ್ದೇಶವನ್ನು ಗುರಿಯಾಗಿಟ್ಟುಕೊಂಡು ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು. ಸಂಘವು ತನ್ನದೇ ಆದ ನಿವೇಶನ ಹೊಂದುವ ಮೂಲಕ ತಮ್ಮದೇ ಆದ ಸ್ವಂತ ಕಟ್ಟಡವನ್ನು ಹೊಂದಬೇಕೆಎನ್ನುವ ಇಂಗಿತವನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಸರ್ವರ ಸಹಕಾರವನ್ನು ಕೋರಿ ಸರ್ವರ ಸಹಮತವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ವಿದ್ಯಾ ವಿಕಾಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕವಿಶ್ ಗೌಡ ಮಾತನಾಡಿ, ಕೊಡಗಿನ ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿ ನೆಲೆಸಿದ್ದು, ಎಲ್ಲರೂ ಒಂದಾಗಿ ಸೇರಿ ನಡೆಸುತ್ತಿರುವ ಕಾರ್ಯ ಚಟುವಟಿಕೆಗಳು ಇತರರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಪ್ರತಿಭಾವಂತರನ್ನು ಗುರುತಿಸಿ ಪುರಸ್ಕರಿಸುವುದು ವಿಶೇಷ…






