ಲೇಖಕ: admin

ಮಡಿಕೇರಿ ಜ.29 : 2023-24ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ವಿರಾಜಪೇಟೆಯ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಕ್ಷಮಾ ಕಾವೇರಮ್ಮ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಅಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ರಸಪ್ರಶ್ನೆ ಸ್ಪರ್ಧಾ ವಿಭಾಗದಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್. ದೇವಯ್ಯ ಹಾಗೂ ಎಂ.ನಿಶಾನ್ ತಾಲೂಕು ಮಟ್ಟದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಬೋಧಕ ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಸಂಯೋಜಕರಾದ ಚೈತ್ರ ಹಾಗೂ ಸಹ ಶಿಕ್ಷಕಿ ಬಿ.ಪಿ.ಉಷಾ ಉಪಸ್ಥಿತರಿದ್ದರು.

Read More

ಮಡಿಕೇರಿ ಜ.29 : ಧಾರ್ಮಿಕವಾಗಿ ಪೂಜನೀಯ ಸ್ಥಾನ ಪಡೆದುಕೊಂಡಿರುವ ‘ಅಶ್ವತ್ಥ ವೃಕ್ಷ’ವೊಂದಕ್ಕೆ ಕಂಕಣಭಾಗ್ಯ ಕೂಡಿ ಬಂದಿದೆ. ಮಡಿಕೇರಿ ತಾಲ್ಲೂಕಿನ ಕಡಗದಾಳು ಗ್ರಾಮದಲ್ಲಿ ಬೆಳೆದು ನಿಂತಿರುವ ಅಶ್ವತ್ಥ ವೃಕ್ಷಕ್ಕೆ ವಿವಾಹವೆಂದರೆ, ವಧು ಯಾರೆನ್ನುವ ಪ್ರಶ್ನೆ ಸಾಮಾನ್ಯ. ಇಲ್ಲಿ ಅಶ್ವತ್ಥ ಮರದೊಂದಿಗೆ ವಿವಾಹವಾಗಲಿರುವ ವಧು ‘ನೆಲ್ಲಿ’!. ವಿವಾಹ ‘ಶೋಭ ಕೃತ್ ನಾಮ ಸಂವತ್ಸರದ ಮಕರ ಮಾಸ 21 ಕ್ಕೆ ಸಲ್ಲುವ ಫೆ.4 ರ ಪೂರ್ವಾಹ್ನ 9.50ರ ಮೀನ ಲಗ್ನ’ದ ಶುಭ ಮುಹೂರ್ತದಲ್ಲಿ ನೆರವೇರಲಿದೆ. ಗ್ರಾಮದ ಶ್ರೀ ಬೊಟ್ಲಪ್ಪ ಯುವ ಸಂಘ ವಿವಾಹದ ಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದು, ವಿವಾಹ ಸಮಾರಂಭವನ್ನು ಅತ್ಯಂತ ಶ್ರದ್ಧೆಯಿಂದ ಅದ್ಧೂರಿಯಾಗಿ ಮಾಡಲು ರೂಪುರೇಷೆಗಳನ್ನು ಮಾಡಿಕೊಂಡಿದೆ. ಕಾರ್ಯಕ್ರಮದ ವಿಶೇಷ ಕರಪತ್ರವನ್ನು ಮುದ್ರಿಸಿದೆ. ಸೂಚಿತ ದಿನದಂದು ಹಿಂದು ಧಾರ್ಮಿಕ ವಿಧಿ ವಿಧಾನದಂತೆ ಸಾಂಗೋಪಸಾಂಗವಾಗಿ ವಿವಾಹ ನಡೆಯಲಿದ್ದು, ಇದರೊಂದಿಗೆ ಗಣಪತಿ ಹೋಮ, ನವಗ್ರಹ ಹೋಮ, ಅರ್ಚನೆ, ಪ್ರದಕ್ಷಿಣೆ ನಮಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಿದೆ. ವಿಶೇಷ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಶ್ರೀ ಬೊಟ್ಲಪ್ಪ ಯುವ ಸಂಘದ ಖಜಾಂಚಿ…

Read More

ಮಡಿಕೇರಿ ಜ.29  NEWS DESK :  ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ಸಭೆಯು ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಕಾರ್ಯ ಚಟುವಟಿಕೆಗಳನ್ನು ನಡೆಸುವ ಮೂಲಕ ಎಲ್ಲರಿಗೂ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪುನರ್ವಸತಿ ಕಾರ್ಯಕರ್ತೆ ಮತ್ತು ಸೌಭಾಗ್ಯ ವಿಕಲಚೇತನ ಸೇವಾ ಟ್ರಸ್ಟ್‍ನ ವಿಆರ್‍ಡಬ್ಲ್ಯು ಆಯಿಷಾ, ಕರ್ನಾಟಕ ರಾಜ್ಯ ಕಿವುಡರ ಕಲ್ಯಾಣ ಸಂಘದ ಉಪಾಧ್ಯಕ್ಷ ಎ.ಗಣೇಶ್ ರಾವ್, ಮೈಸೂರು ಕಿವುಡರ ಕಲ್ಯಾಣ ಸಂಘದ ಅಧ್ಯಕ್ಷ ಮೂರ್ತಿ, ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ಜೆ.ವಿ.ಮಹೇಶ್ ವರ್ಮ, ಕೆಡಿಡಿಎ ಚೆರ್‍ಮೆನ್ ಜೋಸೆಫ್ ಸ್ಯಾಮ್, ಉಪಾಧ್ಯಕ್ಷ ಶಂಕರ ನಾರಾಯಣ, ಪ್ರಧಾನ ಕಾರ್ಯದರ್ಶಿ ರಂಜಿತ್, ಸಹ ಕಾರ್ಯದರ್ಶಿ ನಾಗೇಶ್, ಖಜಾಂಚಿ ಕೆ.ಎ.ಸುರೇಶ್, ಕ್ರೀಡಾ ಕಾರ್ಯದರ್ಶಿ ಎಂ.ಎ.ರಂಶದ್, ಸದಸ್ಯರಾದ ಬಿ.ಎ.ಚಾಯಾದೇವಿ, ಹೆಚ್.ಪಿ.ಪ್ರಭಾಕರ್, ಟಿ.ಎಸ್.ಸುನೀಲ್, ಹೆಚ್.ವಿ.ವೆಂಕಟೇಶ್, ಅಮಿನ್ ಪಾಷ, ಅಸ್ಲಂ, ತೇಜವರ್ಮ ಸೇರಿದಂತೆ ಇತರರು ಹಾಜರಿದ್ದರು. ಸಭೆಯಲ್ಲಿ ಸಂಘದ ಅಧ್ಯಕ್ಷೆ ಗೌರಮ್ಮ ಸೋಮಣ್ಣ…

Read More

ಮಡಿಕೇರಿ ಜ.29 : ಕೊಡಗು ಗೌಡ ಯುವ ವೇದಿಕೆ ವತಿಯಿಂದ ದ್ವಿತೀಯ ಆವೃತ್ತಿಯ ಗೌಡ ಕ್ರಿಕೆಟ್ ಟಿ-10 ಪ್ರೀಮಿಯರ್ ಲೀಗ್ ಪಂದ್ಯಾವಳಿ ಮತ್ತು ಗೌಡ ಜನಾಂಗದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ‘ಗ್ರಾಮ ಪೈಪೋಟಿ’ ಸ್ಪರ್ಧಾ ಕಾರ್ಯಕ್ರಮವನ್ನು ಏಪ್ರಿಲ್ ತಿಂಗಳಿನಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಏ.15 ರಿಂದ ಏ.28ರ ವರೆಗೆ ನಡೆಯಲಿದೆ. ಗ್ರಾಮ ಪೈಪೋಟಿ ಕಾರ್ಯಕ್ರಮ ಏ.26 ರಿಂದ 28 ರವರೆಗೆ ಸಂಜೆಯ ವೇಳೆ ನಡೆಯಲಿದೆ ಎಂದರು. ಅರೆಭಾಷಾ ಗೌಡ ಜನಾಂಗದ ಸಂಸ್ಕೃತಿಯನ್ನು ಪ್ರತ್ರಿಬಿಂಬಿಸುವ ಚಿಂತನೆಯಡಿ 10 ನಿಮಿಷಗಳ ‘ನೃತ್ಯ ರೂಪಕ’ದ ಗ್ರಾಮ ಪೈಪೋಟಿಯನ್ನು ರೂಪಿಸಲಾಗಿದೆ. ಈ ನೃತ್ಯ ರೂಪಕದಲ್ಲಿ ಅರೆಭಾಷೆಯ ಹಾಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಗ್ರಾಮ ಪೈಪೋಟಿಯಲ್ಲಿ ಜಿಲ್ಲಾ ವ್ಯಾಪ್ತಿಯ ಗ್ರಾಮವಾರು ತಂಡಗಳು ಪಾಲ್ಗೊಳ್ಳಬಹುದಾಗಿದ್ದು, ಒಂದೇ ಗ್ರಾಮದ ಒಂದಕ್ಕಿಂತ ಹೆಚ್ಚಿನ…

Read More

ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ತುಳು ಭಾಷಿಕ ಆದಿ ದ್ರಾವಿಡ ಜಾತಿ ಬಾಂಧವರಿಗೆ 8 ವಿವಿಧ ರೀತಿಯ ‘ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದ್ದು, ಇದರಿಂದ ತೊಂದರೆ ಎದುರಾಗಿದೆ. ಆದ್ದರಿಂದ “ಆದಿ ದ್ರಾವಿಡ” ಎಂದು ಜಾತಿ ಪ್ರಮಾಣಪತ್ರ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಹೆಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸೇರಿದಂತೆ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿರುವ ‘ಆದಿ ದ್ರಾವಿಡ’ ಸಮೂಹ ಜಾತಿ ಪ್ರಮಾಣ ಪತ್ರದ ವಿಚಾರದಲ್ಲಿ ಗೊಂದಲಕ್ಕೆ ಸಿಲುಕಿದೆ. ಏಕರೂಪದ ‘ಆದಿ ದ್ರಾವಿಡ’ ಜಾತಿ ಪ್ರಮಾಣ ಪತ್ರವನ್ನು ನೀಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಆದಿ ದ್ರಾವಿಡ ಜಾತಿ ಬಾಂಧವರು ಸುಮಾರು 25 ಸಾವಿರ ಮಂದಿ ಇದ್ದಾರೆ. ಇವರಿಗೆ 8 ವಿವಿಧ ರೀತಿಯ ‘ಪರಿಶಿಷ್ಟ ಜಾತಿ’ ಪ್ರಮಾಣ ಪತ್ರವನ್ನು ನೀಡಲಾಗುತ್ತಿದೆ. ತಪ್ಪಾಗಿ…

Read More

ವಿರಾಜಪೇಟೆ ಜ.29 NEWS DESK :  ಗಣರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ಬೆಂಗಳೂರಿನಲ್ಲಿ ಸಿಐಡಿ ವಿಭಾಗದಲ್ಲಿ ಡಿವೈಎಸ್ಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ಕೊಡಗಿನವರಾದ ಬಿ.ಎಸ್.ಶ್ರೀನಿವಾಸ್ ರಾಜ್ ಭಜನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆಯಂದು ರಾಜ್ಯಪಾಲ ಥಾವರ್ ಚಂದ್ ಗೆಹಾಲೊಟ್ ಪದಕ ಪ್ರದಾನ ಮಾಡಿದರು. ಬಿ.ಎಸ್.ಶ್ರೀನಿವಾಸ್ ರಾಜ್ ಅನೇಕ ಪುರಸ್ಕಾರಗಳಿಗೆ ಭಾಜನರಾಗಿದ್ದು, ಇದೀಗ ರಾಷ್ಟ್ರಪತಿ ಪದಕ ಪಡೆಯುವುದರ ಮೂಲಕ ಹುಟ್ಟೂರು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ವಿರಾಜಪೇಟೆಯ ಬೇಟೋಳಿ ರಾಮನಗರದ ನಿವಾಸಿ ಹೆಚ್.ಕೆ.ಸಣ್ಣಯ್ಯ ಹಾಗೂ ದಿವಂಗತ ಲಕ್ಷ್ಮಮ್ಮ ದಂಪತಿಗಳ ಪುತ್ರರಾಗಿದ್ದಾರೆ.

Read More

ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆ ನಗರದಲ್ಲಿ ನಡೆಯಿತು. ದೈವ ಆರಾಧಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಸಲು ಸಭೆ ನಿರ್ಧರಿಸಿತು. ಸಂಘದ ಅಧ್ಯಕ್ಷ ಸದಾಶಿವ ರೈ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದೈವಾರಾಧನೆಯ ಕಟ್ಟುಪಾಡುಗಳ ಕುರಿತು ಚರ್ಚಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಕಳೆದ ಅನೇಕ ವರ್ಷಗಳಿಂದ ದೈವಾರಾಧನೆಯನ್ನು ಮಾಡಿಕೊಂಡು ಬರುತ್ತಿರುವ 90 ಕ್ಕೂ ಹೆಚ್ಚು ದೈವಸ್ಥಾನಗಳಿವೆ. ದೈವಾರಾಧಕರು ಹಾಗೂ ದೈವನರ್ತಕರನ್ನು ಒಂದೇ ವೇದಿಕೆಯಡಿ ಸಂಘಟಿಸಿ ದೈವಾರಾಧನೆಯ ಪದ್ಧತಿಯನ್ನು ಕ್ರಮಬದ್ಧವಾಗಿ ನಡೆಸಲು ತುಳುನಾಡಿನ ಜನಪದ ವಿದ್ವಾಂಸರಿಂದ ಮಾಹಿತಿ ನೀಡುವ ಪ್ರಯತ್ನ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯ ಎಲ್ಲಾ ದೈವ ಆರಾಧಕರ ಹಾಗೂ ದೈವನರ್ತಕರ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಮಡಿಕೇರಿ ನಗರದಲ್ಲಿ ಆಯೋಜಿಸಲಾಗುವುದು ಎಂದು ಪ್ರಮುಖರು ತಿಳಿಸಿದರು. ಜಿಲ್ಲೆಯ ಎಲ್ಲಾ ದೈವ ಆರಾಧಕರು, ದೈವನರ್ತಕರು ಹಾಗೂ ಅವರ ಕುಟುಂಬದ ಎಲ್ಲಾ ಸದಸ್ಯರುಗಳನ್ನು ಆಹ್ವಾನಿಸುವುದು, ದೈವ ಆರಾಧನಾ ಕ್ಷೇತ್ರದ ವಿದ್ವಾಂಸರಿಂದ ಮಾಹಿತಿ…

Read More

ಮಡಿಕೇರಿ ಜ.29 NEWS DESK :  ಮಡಿಕೇರಿ ತಾಲೂಕು ಜಾನಪದ ಪರಿಷತ್ ವತಿಯಿಂದ ಜ.30 ರಂದು ಮಹಾತ್ಮ ಗಾಂಧೀಜಿ ಸ್ಮರಣೆಯ ಗೀತನಮನ ಆಯೋಜಿಸಲಾಗಿದೆ ಎಂದು ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಸಂಜೆ 6 ಗಂಟೆಗೆ ನಗರದ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ವೃತ್ತದ (ಸುದಶ೯ನ್ ಸಕ೯ಲ್ ) ಬಳಿಯಿರುವ ಗಾಂಧಿ ಭವನದಲ್ಲಿ ಕೊಡಗು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಜಿಲ್ಲಾ ಜಾನಪದ ಪರಿಷತ್ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಮಡಿಕೇರಿಯ ವಿವಿಧ ಗಾಯಕ, ಗಾಯಕಿಯರು ಗೀತೆಗಳ ಮೂಲಕ ಮಹಾತ್ಮನಿಗೆ ನಮನ ಸಲ್ಲಿಸಲಿದ್ದಾರೆ. ಸಭಾ ಕಾಯ೯ಕ್ರಮದಿಂದ ಹೊರತಾಗಿ ಹಾಡುಗಳಿಗೇ ಆದ್ಯತೆ ನೀಡುವ ಒಂದೂವರೆ ಗಂಟೆಯ ಕಾಯ೯ಕ್ರಮ ಇದಾಗಿದೆ ಎಂದೂ ಪ್ರಕಟಣೆಯಲ್ಲಿ ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

Read More

ಮಡಿಕೇರಿ ಜ.29  NEWS DESK :  ದಕ್ಷಿಣ ಕೊಡಗಿನ ಟೇಬಲ್ ಟೆನ್ನಿಸ್ ಆಟಗಾರರಿಗಾಗಿ ವಿರಾಜಪೇಟೆ ಅಕಾಡೆಮಿ ಆಫ್ ಟೇಬಲ್ ಟೆನ್ನಿಸ್ ಸಂಸ್ಥೆ ವತಿಯಿಂದ ನಡೆದ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಡೇರಿಕ್ ಡಿಸೋಜಾ ಪ್ರಥಮ ಮತ್ತು ಪೆÇನ್ನಂಪೇಟೆಯ ಈಶ್ವರ್ ದ್ವಿತೀಯ ಸ್ಥಾನ ಗಳಿಸಿದರು. ವಿರಾಜಪೇಟೆಯ ನಿಖಿಲ್ ರಾಮಮೂರ್ತಿ ಅವರು ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 19 ಆಟಗಾರರು ಪಾಲ್ಗೊಂಡಿದ್ದರು. ಹಿರಿಯ ವಕೀಲ ಎಸ್.ಆರ್.ಜಗದೀಶ್ ಪಂದ್ಯ ಉದ್ಘಾಟಿಸಿದರು. ನಿಖಿಲ್ ರಾಮಮೂರ್ತಿ ಮಾತನಾಡಿ ದಕ್ಷಿಣ ಕೊಡಗಿನಲ್ಲಿ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಪ್ರೋತ್ಸಾಹ ನೀಡಲು ಮತ್ತು ಆಟಗಾರರಿಗೆ ಸೂಕ್ತ ಅವಕಾಶ ಕಲ್ಪಿಸಲು ಈ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಅನೇಕ ಯುವ ಆಟಗಾರರು ಮುಂದಿನ ದಿನಗಳಲ್ಲಿ ಇದರಿಂದ ಸ್ಪೂರ್ತಿ ಪಡೆಯುವಂತಾಗಲಿ ಎಂದರು. ವಿಜೇತರಿಗೆ ವಿರಾಜಪೇಟೆಯ ವಕೀಲರಾದ ಸಿಂಧೂರ ಎನ್.ಸ್ವಾಮಿ ಬಹುಮಾನ ವಿತರಿಸಿದರು.

Read More