ಮಡಿಕೇರಿ ಜ.29 : ಕಕ್ಕಬ್ಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಕೆ.ಎ.ಕಾರ್ಯಪ್ಪ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆಯಿತು. ಪ್ರತಿವರ್ಷದಂತೆ ಈ ಬಾರಿಯು ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು. ಅಕ್ಷರ ದಾಸೋಹದ ಮುಖ್ಯ ಅಡುಗೆಯವರಾಗಿ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ಚೋಂದಮ್ಮ ಅವರನ್ನು ಎಸ್ಡಿಎಂಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದತ್ತಿನಿಧಿ ಹಾಗೂ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕುಂಜಿಲ-ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷರಾದ ಪಿ.ಶಿಲ್ಪ, ಗ್ರಾ.ಪಂ ಸದಸ್ಯರಾದ ಕಲಿಯಂಡ ಸಂಪನ್ ಅಯ್ಯಪ್ಪ, ಹೆಚ್.ಡಿ.ಇಂದಿರಾ, ಎಸ್ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ಎಂ.ಹೆಚ್.ರಜೀನಾ ನಿರೂಪಿಸಿದರು, ಅತಿಥಿ ಶಿಕ್ಷಕಿ ಜಲಜಾಕ್ಷಿ ವಂದಿಸಿದರು.
ಲೇಖಕ: admin
ಮಡಿಕೇರಿ ಜ.29 NEWS DESK : ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಸೋಮವಾರಪೇಟೆ ಲಯನ್ಸ್ ಸಂಸ್ಥೆಯ ಖಜಾಂಚಿ ಕೆ.ಡಿ.ವೀರಪ್ಪ ಹಾಗೂ ಲಯನ್ಸ್ ವಲಯ ಅಧ್ಯಕ್ಷ ಚೆಟ್ಟಿಮಾಡ ರೋಹಿತ್ ಅವರು ಶಾಲೆಗೆ ನಿರ್ಮಿಸಿಕೊಟ್ಟಿದ್ದ ಗೇಟ್ಅನ್ನು ಅತಿಥಿಗಳು ಉದ್ಘಾಟಿಸಿದರು.ಗೇಟ್ಅನ್ನು ಅತಿಥಿಗಳು ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯನಿ ಪವಿತ್ರ, ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಮತ್ತು ಲೈನ್ಸ್ ಸೋಮವಾರಪೇಟೆಯ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ಸಿ.ಕೆ.ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ಹಾಜರಿದ್ದರು.
ಮಡಿಕೇರಿ ಜ.29 NEWS DESK : ಮರಗೋಡುವಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಮೊದಲನೇ ವರ್ಷದ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜದ ಏಳು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತ ಯೋಧ ಹಾಗೂ ಫುಟ್ಬಾಲ್ ಆಟಗಾರ ಶ್ರೀನಿವಾಸ್(ಸತ್ಯ), ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ,ವಿ.ಎಮ್ ವಿಜಯನ್, ಮರಗೋಡು ಭಾರತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಉಪನ್ಯಾಸಕರಾಗಿದ್ದ ಶಾಜಿ ಪಿ.ಟಿ, ಉರಗ ತಜ್ಞ ಹಾಗೂ ಉರಗ ರಕ್ಷಕ ಗೋಣಿಕೊಪ್ಪಲಿನ ಎ.ಒನ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕ ಶರತ್ ಕಾಂತ್ ಪಿ.ಎಸ್,ಟಿಂಬರ್ ಮರ್ಚೆಂಟ್ ಹಾಗೂ ಅಮ್ಮತ್ತಿ ಮಿಲನ್ಸ್ ಫುಟ್ಬಾಲ್ ಕ್ಲಬ್ ಅಧ್ಯಕ್ಷ ಎಂ.ಎಂ.ಲಿಜೇಶ್, ರಾಷ್ಟ್ರದ ಮಟ್ಟದ ಫುಟ್ಬಾಲ್ ಆಟಗಾರ ಅಮ್ಮತ್ತಿಯ ವಿಜೇಶ್ ಎಂ.ಎಂ(ವಿಜು) ಹಾಗೂ ರಾಷ್ಟ್ರೀಯ ಮಟ್ಟದ ಅಥ್ಲೀಟ್ ಮರಗೋಡುವಿನ ಎಂ.ಸಿ.ಮಿಲನ್ ಅವರನ್ನು ಅತಿಥಿಗಳು ಸನ್ಮಾನಿಸಿ ಗೌರವಿಸಿದರು.…
ಮಡಿಕೇರಿ ಜ.29 NEWS DESK : ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಂಗ್ರೆಸ್ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜ.29 NEWS DESK : ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಹಾಗೂ ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜ.29 NEWS DESK : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಫೆ.2 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಫೆ.2 ರಂದು ನಗರದಲ್ಲಿ ವಿಚಾರಣೆ ನಡೆಸಲಿದೆ. ವಿಚಾರಣೆ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿ, ವಿಲೇ ಮಾಡಲು ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಈ ಸೌಲಭ್ಯದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದೆ. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ದೂರುಗಳು/ ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಆಯಾಯ ಜಿಲ್ಲೆಗಳಲ್ಲಿ ಫೆ.2 ಆಯೋಗದ ಮಾನ್ಯ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜ.29 NEWS DESK : ಮರಗೋಡುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಫುಟ್ಬಾಲ್ ಕಪ್ ನಲ್ಲಿ ಹಿಂದೂ ಮಲಯಾಳಿ ಸಮಾಜ ಮರಗೋಡು ತಂಡ ಚಾಂಪಿಯನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರನ್ನರ್ಸ್ ಪ್ರಶಸ್ತಿಯನ್ನು ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡದ ಪಡೆದುಕೊಂಡಿತ್ತು. ಎರಡು ಬಲಿಷ್ಠ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಹಿಂದೂ ಮಲಯಾಳಿ ಸಮಾಜ ಮರಗೋಡು ತಂಡದ ನಾಯಕ ಅಜಿತ್ ಚೆಟ್ಟಳ್ಳಿ ಅವರ ಏಕೈಕ ಗೋಲಿನಿಂದ ಹಿಂದೂ ಮಲಯಾಳಿ ಸಮಾಜ ಮರಗೋಡು ತಂಡ ಮಲಯಾಳಿ ಫುಟ್ಬಾಲ್ ಕಪ್ ಪ್ರಶಸ್ತಿ ಜಯಿಸಿತು. ಇದಕ್ಕೂ ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯವು ಶ್ರೀನಿಥಿ ಎಫ್.ಸಿ ಒಂಟಿಯಂಗಡಿ ಹಾಗೂ ಚಾಲೆಂಜರ್ಸ್ ಎಫ್.ಸಿ ಚೆನ್ನಯ್ಯನಕೋಟೆ ತಂಡಗಳ ನಡುವೆ ನಡೆಯಿತು.ಅತ್ಯಂತ ಕುತೂಹಲಕಾರಿ ಪಂದ್ಯದಲ್ಲಿ ಎರಡು ತಂಡವು 1-1 ಗೋಲುಗಳನ್ನು ಬಾರಿಸಿ ಸಮಬಲ ಸಾಧಿಸಿತ್ತು.ಶ್ರೀನಿಥಿ ಎಫ್.ಸಿ ತಂಡದ ಪರವಾಗಿ ಸತ್ಯ ಹಾಗೂ ಚಾಲೆಂಜರ್ಸ್ ಎಫ್.ಸಿ ತಂಡದ ಪರವಾಗಿ ವಿಷ್ಣು…
ಮಡಿಕೇರಿ ಜ.29 NEWS DESK : ಇಂದಿನ ಯುವಪೀಳಿಗೆಗೆ ಚಿತ್ರತಾರೆಯರು, ಕ್ರಿಕೆಟಿಗರು, ಭ್ರಷ್ಟ ರಾಜಕಾರಣಿಗಳೇ ಆದಶ೯ಪ್ರಾಯರಾಗುತ್ತಿದ್ದಾರೆಯೇ ವಿನಾ: ದೇಶಕ್ಕಾಗಿ ಹೋರಾಡುವ ಸೈನಿಕರನ್ನು ಯುವಜನಾಂಗ ಮರೆಯುತ್ತಿದೆ ಎಂದು ನಿವೃತ್ತ ಏರ್ ಮಾಷ೯ಲ್ ಕೆ.ಸಿ. ನಂದಕಾಯ೯ಪ್ಪ ವಿಷಾಧಿಸಿದ್ದಾರೆ. ಮಡಿಕೇರಿಯಲ್ಲಿನ ಫೀಲ್ಡ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಅವರ ನಿವಾಸ ರೋಶನಾರದಲ್ಲಿರುವ ಕಾಯ೯ಪ್ಪ ಸಮಾಧಿ ಸ್ಥಳದಲ್ಲಿ ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಅವರ 125 ನೇ ಜನ್ಮದಿನಾಚರಣೆ ಪ್ರಯುಕ್ತ ಮಗ ನಂದ ಕಾಯ೯ಪ್ಪ ಮಾತನಾಡಿದರು. ಯುವಪೀಳಿಗೆಗೆ ಸೈನಿಕರ ದೇಶಸೇವೆಯನ್ನು ಪರಿಣಾಮಕಾರಿಯಾಗಿ ತಿಳಿಹೇಳುವ ಅನಿವಾಯ೯ತೆ ಹಿಂದೆಂದಿಗಿಂತ ಹೆಚ್ಚಾಗಿದೆ ಎಂದೂ ಅವರು ಸಲಹೆ ನೀಡಿದರು. ದೇಶಕ್ಕಾಗಿ ಹಗಲಿರುಳು ಹೋರಾಡುವ ಸೈನಿಕರು ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು. ಆದಶ೯ವಾಗಬೇಕು. ಸ್ಪೂತಿ೯ಯಾಗಬೇಕೆಂದು ಅವರು ಕರೆ ನೀಡಿದರು. ತನ್ನ ತಂದೆಯ ಪುಣ್ಯ ಸ್ಮರಣೆಯನ್ನು ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯು ಮಕ್ಕಳ ಸಮ್ಮುಖದಲ್ಲಿ ವಷ೯ಂಪ್ರತಿ ಆಚರಿಸುತ್ತಾ ಬರುತ್ತಿರುವುದು ಶ್ಲಾಘನೀಯ ಎಂದೂ ಕಾಯ೯ಪ್ಪ ಹೇಳಿದರು ಮಾದಾಪುರದ ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿವೖತ್ತ ಕನ೯ಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ದೇಶಕ್ಕಾಗಿ…
ಸುಂಟಿಕೊಪ್ಪ ಜ.29 : ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಅಭಿವೃದ್ಧಿಗಾಗಿ ದೇಣಿಗೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯಮಟ್ಟದ ‘ಬಾಲವಿಜ್ಞಾನ’ ಸಮಾವೇಶದಲ್ಲಿ ಭಾಗವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಪ್ರತಿನಿಧಿಸಲು ಆಯ್ಕೆಗೊಂಡಿರುವ ಬಾಲ ವಿಜ್ಞಾನಿ ಎ.ಎಸ್.ಶ್ರೀಶಾ ಮತ್ತು ಸಾಕ್ಷರತಾ ಇಲಾಖೆ ನಡೆಸಿದ ‘ಪ್ರಾಚ್ಯಪ್ರಜ್ಞೆ’ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಟಿ.ಎಸ್.ಫಾತಿಮತ್ ಸಹಲ ಅವರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭ ಸುಂಟಿಕೊಪ್ಪ ನಾಡು ಪ್ರೌಢಶಾಲೆಗೆ ನೂತನ ಕಟ್ಟಡ ನಿರ್ಮಿಸಲು ರೂ.1,50,000 ದೇಣಿಗೆಯಾಗಿ 1980-81ನೇ ಸಾಲಿನ ವಿದ್ಯಾರ್ಥಿಗಳು ಡಾ. ಅಕ್ಕಪಂಡ ತಮ್ಮಯ್ಯ ಅವರ ನೇತೃತ್ವದಲ್ಲಿ ಕೆ.ಡಿ.ಪ್ರಕಾಶ್, ಪಿ.ಪಿ.ಸುಬ್ರಮಣಿ, ಎಫ್.ಬಿ.ಅಶೋಕ, ಕೆ.ಆರ್.ವಾಸು, ರಾಮಕೃಷ್ಣ, ಐ.ಎಸ್.ಗಣೇಶ, ವೀಣಾ ಅವರುಗಳು ಆಗಮಿಸಿ ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ನೂತನ ಕಟ್ಟಡ ನಿರ್ಮಾಣಕ್ಕಾಗಿ…
ಸುಂಟಿಕೊಪ್ಪ,ಜ.29 NEWS DESK : ಗಣರಾಜ್ಯೋತ್ಸವದ ಪ್ರಯುಕ್ತ ಸುಂಟಿಕೊಪ್ಪ ಜೆಸಿಐ ವತಿಯಿಂದ ಶಾಲಾ ಮಕ್ಕಳಿಗೆ ದೇಶ ಭಕ್ತಿಗೀತೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಯಿತು. ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದೇಶ ಭಕ್ತಿಗೀತೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭ ಜೆಸಿಐ ಸಂಸ್ಥೆ ಅಧ್ಯಕ್ಷ ಸಂಪತ್ ಕುಮಾರ್, ಸದಸ್ಯರಾದ ಡೆನ್ನೀಸ್ ಡಿಸೋಜ, ಪಲ್ಸಿ ಡೆನ್ನೀಸ್, ಶಾಲಾ ಮುಖ್ಯೋಪದ್ಯಾರಾದ ಬಾಲಕೃಷ್ಣ, ಅದ್ಯಾಪಕರುಗಳು ಹಾಜರಿದ್ದರು.






