ಮಡಿಕೇರಿ ಡಿ.3 NEWS DESK : ಹುಣ್ಣಿಮೆ ಅಂಗವಾಗಿ ನಮಾಮಿ ಕಾವೇರಿ ಬಳಗದ ವತಿಯಿಂದ ಜೀವನದಿ ಕಾವೇರಿಗೆ ಜಿಲ್ಲೆಯ ವಿವಿಧ ನದಿ ಪಾತ್ರದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಿತು. ಮಾದಾಪಟ್ಟಣ, ಕೂಡು ಮಂಗಳೂರು, ಕೂಡ್ಲೂರು ಗ್ರಾಮದ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ನದಿ ಸಂರಕ್ಷಣೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಯಿತು.
ಲೇಖಕ: admin
ಮಡಿಕೇರಿ NEWS DESK ಜ.3 : ತುಳುನಾಡ ಜನರ ನಂಬುಗೆಯ ದೈವಗಳಲ್ಲೊಂದಾದ “ಕೊರಗಜ್ಜ” ದೈವದ ಕುರಿತಾದ ಸಿನಿಮಾ ನಿರ್ದೇಶಕ ಸುಧೀರ್ ಅತ್ತಾವರ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಲೈಫ್ ಬ್ಯಾನರ್ ನಡಿ ಚಿತ್ರ ನಿರ್ಮಾಣಗೊಂಡಿದೆ. ಚಿತ್ರದ ಪ್ರಚಾರಕ್ಕಾಗಿ ‘ಕೊರಗಜ್ಜ’ ಚಿತ್ರದಲ್ಲಿರುವ ಆರು ಹಾಡುಗಳನ್ನು ಪ್ರೇಕ್ಷಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಸಿನಿಮಾದ ಪ್ರಚಾರಕ್ಕಾಗಿ ಕೊರಗಜ್ಜ ರೀಲ್ಸ್ ಎಂಬ ಸ್ಪರ್ಧೆಯನ್ನು ಚಿತ್ರತಂಡ ಆಯೋಜಿಸಿದೆ. ಇದನ್ನು ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘ ತೀವ್ರವಾಗಿ ವಿರೋಧಿಸಿದೆ. ಈ ನಿರ್ಧಾರದಿಂದ ಚಿತ್ರತಂಡ ಹಿಂದೆ ಸರಿಯಬೇಕು, ತಪ್ಪಿದಲ್ಲಿ ಕಾನೂನು ಹೋರಾಟಕ್ಕೂ ಸಿದ್ಧ ಇರುವುದಾಗಿ ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಎಚ್ಚರಿಕೆ ನೀಡಿದ್ದಾರೆ. ತುಳುನಾಡು ಮತ್ತು ಕೆಲವೇ ಪ್ರದೇಶಕ್ಕೆ ಸೀಮಿತವಾಗಿರುವ ದೈವ ಆರಾಧನೆಯನ್ನು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಮೂಲಕ ಅಪಹಾಸ್ಯ ಮಾಡುವುದು ಸರಿಯಲ್ಲ. ದೈವ ಆರಾಧನೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ದೈವ ನರ್ತನ ಮಾಡುವವರು ಹಾಗೂ ದೈವ ಆರಾಧನೆ…
ನಾಪೋಕ್ಲು ಜ.3 NEWS DESK : ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವಾರ್ಷಿಕೋತ್ಸವವು ಉತ್ತಮ ವೇದಿಕೆಯಾಗಿದೆ ಎಂದು ಕಕ್ಕಬ್ಬೆ ಕೇಂದ್ರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ.ಕುಟ್ಟಪ್ಪ ಹೇಳಿದರು. ಕಕ್ಕಬ್ಬೆ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪೈಯಡಿ ಹಂಸ, ಬಾತ್ಮೀದಾರ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಬೊಳಿಯಾಡಿರ ಸಂತು ಸುಬ್ರಮಣಿ, ಅಂಜಪರವಂಡ ಎ.ಕುಶಾಲಪ್ಪ, ಮುಕ್ಕಾಟಿರ ರಮೇಶ್, ಕೋಟೆರ ನೈಲ್ ಚಂಗಪ್ಪ, ಪರದಂಡ ಪ್ರಮೀಳಾ ಪೆಮ್ಮಯ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ.ಲೀಲಾವತಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಧ್ವಜಾರೋಹಣವನ್ನು ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಲೋಕೇಶ್ ನೆರವೇರಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನಿರ್ದೇಶಕ ಬೊಳಿಯಾಡಿರ ಸಂತುಸುಬ್ರಮಣಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅನಿಲ್ ರಾಜ್ ವರದಿ ವಾಚಿಸಿದರು. ಶಿಕ್ಷಕಿ ಪಿ.ಸಿ.ಬಬಿತ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶರತ್ ವಂದಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಜ.3 NEWS DESK : ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಆತ್ಮೀಯವಾಗಿ ಗೌರವಿಸಿ ಬೀಳ್ಕೊಡಲಾಯಿತು. ನಾಪೋಕ್ಲು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಾಭಿವೃದ್ಧಿ ಅಧಿಕಾರಿಗಳಾಗಿ ಚೋಂದಕ್ಕಿ ಅವರು ಏಳು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನಿವೃತ್ತಿ ಹೊಂದಿದ ಕಾರಣ ಎಮ್ಮೆಮಾಡು ಹಾಗೂ ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ನಾಪೋಕ್ಲು ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್, ನಾಪೋಕ್ಲು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಕಂಗಂಡ ಶಶಿ ಮಂದಣ್ಣ ಹಾಗೂ ಸದಸ್ಯರ, ಸಿಬ್ಬಂದಿ, ಎಮ್ಮೆಮಾಡು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂಬರಂಡ ಐಸಮ್ಮ, ಸದಸ್ಯರ ಹಾಗೂ ಸಿಬ್ಬಂದಿ ಉಪಸಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.3 NEWS DESK : ಮಡಿಕೇರಿ ನಗರ ಠಾಣೆ ಮತ್ತು ಮಡಿಕೇರಿ ಸಂಚಾರ ಠಾಣೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಭೇಟಿ ನೀಡಿ ಠಾಣೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಮತ್ತು ಪತ್ತೆ, ಸಂಚಾರ ಸುವ್ಯವಸ್ಥೆ ಮುಂತಾದ ವಿಚಾರಗಳ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಮಡಿಕೇರಿ NEWS DESK ಜ.2 : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಜಿ.ಪಂ ಸಿಇಒ ಆನಂದ್ ಪ್ರಕಾಶ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಎಫ್ಒ ಅಭಿಷೇಕ್ , ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿಖಿಲ್ ಚಕ್ಕಿ, ತಹಶಿಲ್ದಾರರಾದ ಪ್ರವೀಣ್ ಕುಮಾರ್, ಕಿರಣ್ ಗೌರಯ್ಯ, ಶ್ರೀಧರ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅಭಿನಂದಿಸಿದರು. ನೂತನ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಈ ಹಿಂದೆ ಪಂಚಾಯತ್ ರಾಜ್ ಇಲಾಖೆಯಲ್ಲಿ ಆಯುಕ್ತರಾಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಮಡಿಕೇರಿ NEWS DESK ಜ.2 : ಮೈಸೂರು ಕಾಫಿ ಸಂಸ್ಕರಣ ಸಂಘದ ನಿಯೋಗ ಸಂಘದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘಕ್ಕೆ 3 ಎಕರೆ 34 ಗುಂಟೆ ಜಮೀನು ಹಾಗೂ ರೂ.3 ಕೋಟಿ ಅನುದಾನ ನೀಡಬೇಕೆಂದು ಪ್ರಮುಖರು ಕೋರಿಕೊಂಡರು. ಸಂಘದ ಉಪಾಧ್ಯಕ್ಷ ಪ್ರಭು ಕುಮಾರ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಮಡಿಕೇರಿ ಜ.2 NEWS DESK : ಕೊಡವ ಭಾಷೆಯನ್ನು ಭಾರತ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರ್ಪಡೆ ಮಾಡಬೇಕಿರುವ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಾಹಿತಿ/ ವರದಿ ಒದಗಿಸಬೇಕಿದೆ. ಆದ್ದರಿಂದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ, ಜ.5 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆಯ ಕೊಡವ ಸಮಾಜದಲ್ಲಿ ಪೂರ್ವಭಾವಿ ಮಹತ್ವದ ಸಭೆಯು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. ಸಭೆಗೆ ಕೊಡವ ಭಾಷಿಕ ವಿವಿಧ ಸಮಾಜದ ಪ್ರಮುಖರು, ಕೊಡವ ಭಾಷಾಭಿಮಾನಿಗಳು, ವಿವಿಧ ಕೊಡವ ಸಮಾಜಗಳ ಅಧ್ಯಕ್ಷರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ಭಾಷಾ ತಜ್ಞರು, ಸಾಹಿತಿಗಳು, ಬರಹಗಾರರು,…
ಮಡಿಕೇರಿ ಜ.2 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2025ನೇ ಸಾಲಿನ ಅರೆಭಾಷೆ ಕಥೆ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರ ವಿವರ ಇಂತಿದೆ. ಅರೆಭಾಷೆ ಕಥಾ ಸ್ಪರ್ಧೆಯಲ್ಲಿ ಬೈತಡ್ಕ ಜಾನಕಿ ಬೆಳ್ಯಪ್ಪ ಅವರ ‘ಜೀವನ ಬೆಳ್ಕ್ ಕಂಡತ್’ ಪ್ರಥಮ ಬಹುಮಾನ, ಕಾಳೇರಮ್ಮನ ಅಶೋಕ್ ಅವರ ‘ಕುಂಙಣ್ಣನು ಸೋಂಪಣ್ಣನು ಹೂಡಿಕೆ ಎತ್ತ್ಗಳ ತಂದ ಕಥೆ’ ದ್ವಿತೀಯ ಬಹುಮಾನ ಹಾಗೂ ಓಂ ಶ್ರೀ ದಯಾನಂದ ಅವರ ‘ನೆಲ್ಲಿಗುಡ್ಡೆ ಇದ್ ನನ್ನ ಜಾಗೆ’ ತೃತೀಯ ಬಹುಮಾನ ಮತ್ತು ಎಡಿಕೇರಿ ವಿಶ್ವನಾಥ ಅವರ ‘ಮಂಜಿ ಮುಸುಕಿದ ದಾರಿನ ನೆನ್ಪುಗ’ ತೃತೀಯ ಬಹುಮಾನ ಪಡೆದುಕೊಂಡಿರುತ್ತಾರೆ. ಅರೆಭಾಷೆ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಸಂಗೀತ ರವಿರಾಜ್ ರವರ ‘ಭಾಸಣ ಪುರಾಣ’ ಪ್ರಥಮ ಬಹುಮಾನ, ಲೋಹಿತಾಶ್ವ ಕ್ಯೊಂಗಾಜೆ ಅವರ ‘ಜಾಣಿಗಳ ಜಾಲ್’ ದ್ವಿತೀಯ ಬಹುಮಾನ, ಕುಂಭಗೌಡನ ರಂಜಿತ್ ಅವರ ‘ಮಿಂಚು’ ತೃತೀಯ ಬಹುಮಾನ ಹಾಗೂ ಕುಕ್ಕನೂರು ರೇಷ್ಮ ಮನೋಜ್ ಅವರ ‘ಕಾಲಕ್ಕೆ…
ಮಡಿಕೇರಿ ಜ.2 NEWS DESK : 33/11 ಕೆ.ವಿ. ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಪಾರಾಣೆ ಫೀಡರ್ಗಳಲ್ಲಿ ಜನವರಿ, 03 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಮಾರ್ಗದ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಕರಡ, ಚೇಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.






