ಮಡಿಕೇರಿ ಡಿ.28 : ಕನ್ನಡ ನಾಡಿನ ಕೋಟ್ಯಾಂತರ ಜನರಿಗೆ ನೀರು ಒದಗಿಸುವ ಕಾವೇರಿ ನದಿಯ ತವರು ಜಿಲ್ಲೆ ಕೊಡಗು ಅಕಾಲಿಕ ಮಳೆ, ಬರಗಾಲ, ವನ್ಯಜೀವಿ ದಾಳಿ, ಜೀವಹಾನಿ, ಬೆಳೆ ನಷ್ಟ, ಆರ್ಥಿಕ ಮುಗ್ಗಟ್ಟು, ಬಗೆಹರಿಯದ ಸಮಸ್ಯೆಗಳ ನಡುವೆಯೇ ರಾಜಕೀಯ ಇತಿಹಾಸ ಸೃಷ್ಟಿಯ ವರ್ಷ 2023 ನ್ನು ಪೂರ್ಣಗೊಳಿಸಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಕೈಕೊಟ್ಟ ಪರಿಣಾಮ ಕಾವೇರಿ ತುಂಬಿ ಹರಿಯದೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಯಿತು. 2022 ರಲ್ಲಿ 140 ಇಂಚು ಮಳೆ ಕಂಡಿದ್ದ ಕೊಡಗು, 2023 ರಲ್ಲಿ ಕೇವಲ 80 ಇಂಚು ಮಳೆಗಷ್ಟೇ ತೃಪ್ತಿಪಟ್ಟುಕೊಂಡಿದೆ. ಇದರ ಪರಿಣಾಮ ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಯಿತು. ಅಲ್ಲದೆ ರಾಜ್ಯ ಕೂಡ ಬರದ ಛಾಯೆಯನ್ನು ಅನುಭವಿಸಿತು. ಜಿಲ್ಲೆಯ ಕೃಷಿಕ ವರ್ಗವನ್ನು ಮಳೆಯ ಕೊರತೆ ಮಾತ್ರವಲ್ಲದೆ ಅಕಾಲಿಕ ಮಳೆಯೂ ಕಾಡಿತು. ಅನಿರೀಕ್ಷಿತ ಮಳೆಯಿಂದ ಕಾಫಿ ಮತ್ತು ಭತ್ತದ ಬೆಳೆಗಾರರು ನಷ್ಟ ಅನುಭವಿಸಿದರು. ಮಳೆ ಕೊರತೆಯಿಂದ 9791…
ಲೇಖಕ: admin
ಮಡಿಕೇರಿ ಜ.1 : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಲುಗುಂದ ಗ್ರಾಮಸ್ಥರು, ಹಳೆಯ ವಿದ್ಯಾರ್ಥಿ ಸಂಘ, ಭಗವತಿ ಯೂತ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ ಜಿಲ್ಲಾ ಮಟ್ಟದ ಮುಕ್ತ 7+2 ಜನರ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ತಂಡ ಪಡೆದುಕೊಂಡಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಅಂತಿಮ ಹಣಾಹಣಿಯಲ್ಲಿ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ಹಾಗೂ ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ತಂಡವು ನಿಗದಿತ ಸಮಯದಲ್ಲಿ 2-2 ಗೋಲುಗಳಿಸಿ ಸಮಬಲ ಸಾಧಿಸಿತು. ಪೆನಾಲ್ಟಿ ಶೂಟೌಟ್ ನಲ್ಲಿ ಕ್ಯಾಪ್ಟನ್ಸ್ 11 ತಂಡದ ಗೋಲ್ ಕೀಪರ್ ಮಣಿ ಅವರು ಎರಡು ಪೆನಾಲ್ಟಿ ಹೊಡೆತವನ್ನು ತಡೆಯುವುದರ ಮೂಲಕ ಕ್ಯಾಪ್ಟನ್ಸ್ 11 ಪಾಲಿಬೆಟ್ಟ ತಂಡವು 5-3 ಗೋಲುಗಳ ಅಂತರದಿಂದ ಪೆನಾಲ್ಟಿ ಶೂಟೌಟ್ ನಲ್ಲಿ ಗೆಲುವು ಸಾಧಿಸಿ ಭಗವತಿ ಕಪ್ ಚಾಂಪಿಯನ್…
ಮೂರ್ನಾಡು ಜ.1 : :ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಶೈಕ್ಷಣಿಕ ಮತ್ತು ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನದಲ್ಲಿ ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ಮೂರ್ನಾಡು ಪ್ರೌಢಶಾಲೆಯ ವೃತ್ತಿ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು
*ಕೊಡಗಿನ ಪ್ರಗತಿಗಾಗಿ ಒಗ್ಗಟ್ಟಾಗಿ ಶ್ರಮಿಸೋಣ*
*ಹೊಸ ವರ್ಷದ ಶುಭಾಶಯಗಳು*
*2024 ಸರ್ವರಿಗೂ ಯಶಸ್ಸು ಸಿಗಲಿ*
*2024 ಅಭಿವೃದ್ಧಿ, ಪ್ರಗತಿ, ಸಮೃದ್ಧಿ ನಿಮ್ಮದಾಗಲಿ*
*2024 ಸುಖ ಶಾಂತಿ ಸಮೃದ್ಧಿ ಸಿಗಲಿ*
*2024 ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಮೂಲ ಶಿಕ್ಷಕನ ಆಯ್ಕೆಯಿಂದ*






