ಲೇಖಕ: admin

ಮಡಿಕೇರಿ ಜ.26  NEWS DESK :  ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಹಿತರಕ್ಷಣಾ ವೇದಿಕೆ ವತಿಯಿಂದ  ನಗರದ ಕುವೆಂಪು ಉದ್ಯಾನವನದಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.  ಕೊಡಗು ವಿಷ್ಣು ಸೇನೆ ಜಿಲ್ಲಾಧ್ಯಕ್ಷ  ರಫೀಕ್ ದಾದಾ  ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭವೇದಿಕೆ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಮಹಿಳಾ ತಾಲೂಕು ಉಪಾಧ್ಯಕ್ಷರಾದ ಕವಿತಾ ಪ್ರಸಾದ್, ಮಡಿಕೇರಿ ನಗರ ಕಾರ್ಯದರ್ಶಿ ಲಿಲ್ಲಿ ಗೌಡ, ನಗರ ಉಪಾಧ್ಯಕ್ಷ ಪುನೀತ್, ವೇದಿಕೆಯ ವಿದ್ಯಾರ್ಥಿ ಘಟಕದ ಸದಸ್ಯ ಹರ್ಷಿತ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ  ಮುನೀರ್ ಮಾಚರ್, ವಿಷ್ಣುಸೇನಾ ಸಮಿತಿಯ ಸದಸ್ಯರುಗಳಾದ ಆನ್ಸರ್, ನಾಗರಾಜ್, ಮಹಾದೇವ್, ಪ್ರವೀಣ್, ಲೋಬೋ ಹಾಗೂ ಹಲವು ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.26  NEWS DESK : ವಿರಾಜಪೇಟೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಲ್ಲೂಕು ಮೈದಾನದಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಧ್ವಜಾರೋಹಣ ನೆರವೇರಿಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಮಹತ್ಮ ಗಾಂಧಿಜಿ  ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

Read More

ಮಡಿಕೇರಿ ಜ.26 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ‘ಫಲಪುಷ್ಪ ಪ್ರದರ್ಶನ’ ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ ‘ಫಲಪುಷ್ಪ ಪ್ರದರ್ಶನ’ಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ತೋಟಗಾರಿಕೆ ಉಪನಿರ್ದೇಶಕರಾದ ಯೋಗೇಶ್ ಎಚ್.ಆರ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಎಸ್.ಮುತ್ತಪ್ಪ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಫಲಪುಷ್ಪ ಪ್ರದರ್ಶನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಫಿರಂಗಿ, ರಾಷ್ಟ್ರ ಧ್ವಜ ಹಾಗೂ ಸೈನಿಕನ ಕಲಾಕೃತಿ ವಿಶೇಷವಾಗಿ ಮೂಡಿಬರಲಿದ್ದು, ಇದರೊಂದಿಗೆ ಹೃದಯದ ಆಕಾರದಲ್ಲಿ ತ್ರಿವರ್ಣ ಧ್ವಜದ ಫೋಟೊ ಪಾಯಿಂಟ್, ಚಿಟ್ಟೆ, ಬಲೂನ್ ಹಾರುವ, ನೀರು ಹರಿಯುವ ರೀತಿ, ಬಾರ್ಬಿ ಡಾಲ್, ಸ್ಪೆಡರ್…

Read More

ಬೆಂಗಳೂರು ಜ.26 NEWS DESK : ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಸಂವಿಧಾನವನ್ನು ಅರಿಯುವ ಮೂಲಕ ಸಂವಿಧಾನವನ್ನು ಬಲಪಡಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಜನತೆಗೆ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಜಾಲತಾಣದಲ್ಲಿ  ಪೋಸ್ಟ್ ಮಾಡಿರುವ ಅವರು, ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿದೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ, ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ. ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್…

Read More

ಮಡಿಕೇರಿ ಜ.26 NEWS DESK : ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕೊಡಗಿನ ಸಂಪ್ರದಾಯದಂತೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ನಿರ್ಮಾಣವಾಗಿದೆ. ಕಚೇರಿ ಎಷ್ಟು ದೊಡ್ಡದು ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು, ಗೃಹ ಸಚಿವರಾದ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಸಾಮಾಜಿಕ ಸಂವಹನ ವಿಭಾಗದ ಅಧ್ಯಕ್ಷರಾದ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Read More

ಮಡಿಕೇರಿ ಜ.26 NEWS DESK :  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. ಶಂಕುಸ್ಥಾಪನೆ: ಕೃಷಿ ಇಲಾಖೆಯ 100 ಲಕ್ಷ ರೂ. ವೆಚ್ಚದ ಕಾಮಗಾರಿ, ಹಿಂದುಳಿದ ವರ್ಗಗಳ ಇಲಾಖೆಯ 500 ಲಕ್ಷ ರೂ. ಕಾಮಗಾರಿ, ನಗರ ನೀರು ಮತ್ತು ಒಳಚರಂಡಿ ಮಂಡಳಿ ನಗರಾಭಿವೃದ್ಧಿ ಇಲಾಖೆಯ 16108 ಲಕ್ಷ ರೂ.ನ 5 ಕಾಮಗಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 60 ಲಕ್ಷ ರೂ. ವೆಚ್ಚದ 3 ಕಾಮಗಾರಿ, ಸಮಾಜ ಕಲ್ಯಾಣ ಇಲಾಖೆಯ 375 ಲಕ್ಷ ರೂ. ವೆಚ್ಚದ ಕಾಮಗಾರಿ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ-ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 1226 ಲಕ್ಷ ರೂ. ಕಾಮಗಾರಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕುಶಾಲನಗರ ತಾ. ಬಸವನಹಳ್ಳಿಯಲ್ಲಿ ಬಸ್ ಡಿಪೋ ಕಾಮಗಾರಿ) ಸಾರಿಗೆ ಇಲಾಖೆಯ 670.58 ಲಕ್ಷ ರೂ. ವೆಚ್ಚದ ಕಾಮಗಾರಿ, ಜಿಲ್ಲಾ ನಗರಾಭಿವೃದ್ಧಿ ಇಲಾಖೆಯ 1589.50 ಲಕ್ಷ ರೂ. ವೆಚ್ಚದ…

Read More

ಮಡಿಕೇರಿ ಜ.26 NEWS DESK :  ಜಿಲ್ಲಾಡಳಿತ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿ, ಪಥಸಂಚಲನವನ್ನು ವೀಕ್ಷಿಸಿ ಗೌರವ ವಂದನೆಯನ್ನು ಸ್ವೀಕರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಈ ಸಂದರ್ಭ ಜಿಲ್ಲಾ ಪೊಲೀಸ್ ಇಲಾಖೆ, ಎನ್‍ಸಿಸಿ, ಗೃಹ ರಕ್ಷಕ ದಳದಿಂದ ನಡೆದ ಪಥಸಂಚಲನ ಗಮನ ಸೆಳೆಯಿತು. ಜಿಲ್ಲಾ ಶಸಸ್ತ್ರ ಮಿಸಲು ಪಡೆ, ಅರಣ್ಯ ಇಲಾಖೆ, ಎನ್‌ಸಿಸಿ ವಿದ್ಯಾರ್ಥಿಗಳು, ಸ್ಕೌಟ್ ಆಂಡ್ ಗೈಡ್ಸ್ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.25  NEWS DESK :  ಕಾಂಗ್ರೆಸ್ ಸರ್ಕಾರ ಪ್ರಸ್ತುತ ಬಿಜೆಪಿಯ ಯಾವುದೇ ಟೀಕೆಗಳಿಗೆ ಅವಕಾಶವಿಲ್ಲದಂತೆ ಪ್ರಣಾಳಿಕೆಯಲ್ಲಿ ಸೂಚಿಸಿದ ಭರವಸೆಗಳನ್ನು ಈಡೇರಿಸುವ ಮೂಲಕ, ಸಮಾಜದ ಎಲ್ಲ ವರ್ಗಗಳಿಗೆ ನೆರವಾಗುವ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು ರಾಜ್ಯದಲ್ಲಿ ‘ಶಾಂತಿಯ ತೋಟ’ವನ್ನು ನಿರ್ಮಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವಿರಾಜಪೇಟೆಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಯ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೊಳಿಸಿರುವ ಐದು ಗ್ಯಾರಂಟಿಗಳಿಂದ, ವಿಪಕ್ಷ ಬಿಜೆಪಿಯ ಟೀಕೆಗಳಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲವೆಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಂದರ್ಭ, ಇಂತಹ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಿಲ್ಲ, ಜಾರಿ ಮಾಡಿದಲ್ಲಿ ಸರ್ಕಾರ ದಿವಾಳಿಯಾಗುತ್ತದೆ, ರಾಜ್ಯ ಸಾಲದ ಹೊರೆಗೆ ಸಿಲುಕುತ್ತದೆಂದು ಬಿಜೆಪಿ ಟೀಕೆ ಟಿಪ್ಪಣಿ ಮಾಡಿತ್ತು. ಪ್ರಸ್ತುತ 14 ಬಾರಿ ಬಡ್ಜೆಟ್ ಮಂಡಿಸಿರುವ ಅನುಭವ ಹೊಂದಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿಗಳ ಜಾರಿಯೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇಂದು ಜಿಲ್ಲೆಯಲ್ಲಿ 350 ಕೋಟಿ ಅಭಿವೃದ್ಶಿ…

Read More

ಸೋಮವಾರಪೇಟೆ ಜ.25 : ಶಾಲೆಗೆ ಕಾಲ್ನಡಿಗೆಯಲ್ಲಿ ಬರಲು ಕಾಡಾನೆಗಳ ಭಯವಿದೆ. ಇನ್ನಾದರೂ ಸರ್ಕಾರಿ ಬಸ್ ಕಲ್ಪಿಸಿಕೊಡಬೇಕೆಂದು ಯಡವಾರೆ ಶಾಲೆಯ ವಿದ್ಯಾರ್ಥಿಗಳು ಬೇಡಿಕೆಯಿಟ್ಟರು. ಐಗೂರು ಗ್ರಾಮ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ನಾವು ಪ್ರತಿಷ್ಠಾನ ವತಿಯಿಂದ ಕಾಜೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಯಡವಾರೆ, ಸಜ್ಜಳ್ಳಿ ಭಾಗದಿಂದ 9 ಕಿ.ಮೀ. ಕಾಲ್ನಡಿಗೆಯಲ್ಲಿ ಬರಬೇಕು. ರಸ್ತೆ ಹೊಂದಿಕೊಂಡಂತೆ ಕಾಜೂರು ಮೀಸಲು ಅರಣ್ಯವಿದೆ. ನಾವು ಪ್ರತಿದಿನ ಕಾಡಾನೆಗಳಿಗೆ ಹೆದರಿಕೊಂಡು ಶಾಲೆಗೆ ಬರಬೇಕು. ಶಾಲೆ ಸಮಯಕ್ಕೆ ಗ್ರಾಮೀಣಸಾರಿಗೆ ಬಸ್ ಕೊಡಿಸಬೇಕು ಎಂದು ವಿದ್ಯಾರ್ಥಿ ರೂಪ, ಸಹನಜ್ಯೋತಿ, ಸಹನ ಮನವಿ ಮಾಡಿಕೊಂಡರು. ಮಳೆಗಾಲದಲ್ಲಿ ನಡೆದುಕೊಂಡು ಶಾಲೆಗೆ ತಲುಪಿದಾಗ ಬಟ್ಟೆ ಒದ್ದೆಯಾಗಿರುತ್ತದೆ. ದಿನವಿಡಿ ಚಳಿಯಿಂದ ನಡುಗುತ್ತ ಪಾಠ ಕೇಳಬೇಕು. ಸರ್ಕಾರ ಬಸ್ ಸೌಲಭ್ಯ ಒದಗಿಸಿಕೊಡಬೇಕು ಎಂದರು. ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಅರಿವಿದೆ. ಶಾಸಕ ಡಾ.ಮಂತರ್‍ಗೌಡ ಅವರಿಗೆ ಮನವಿ ಮಾಡುವುದಾಗಿ ಪಂಚಾಯ್ತಿ ಅಧ್ಯಕ್ಷ ವಿನೋದ್ ಭರವಸೆ ನೀಡಿದರು.…

Read More

ಮಡಿಕೇರಿ ಜ.25 NEWS DESK :  ಮರ್ಕಝುಲ್ ಹಿದಾಯ ಸಂಸ್ಥೆಯಿಂದ ಕೊಟ್ಟಮುಡಿಯಲ್ಲಿ ನಿರ್ಮಿಸಲಾಗಿರುವ 6 ಕೋಟಿ ರೂ. ವೆಚ್ಚದ ‘ಮರ್ಕಝ್ ಹಿದಾಯ ಹಲೀಮ ಅಲ್‍ಕಿಂದಿ’ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಹೆಣ್ಣು ಮಕ್ಕಳ ವಸತಿಗೃಹವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸಚಿವರಾದ ಭೋಸರಾಜು, ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಕೆ.ವೆಂಕಟೇಶ್, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೂಜ್ ಖಾನ್, ಆಧ್ಯಾತ್ಮಿಕ ನಾಯಕರು, ಗ್ರಾಂಡ್ ಮುಫ್ತಿಗಳೂ ಆದ ಶೇಕ್ ಅಬೂಬಕರ್ ಅಹಮದ್, ಸಂಸ್ಥೆಯ ಉಪಾಧ್ಯಕ್ಷ ಮೊಹಿದ್ದೀನ್ ಕುಟ್ಟಿ ಹಾಜಿ ಕೊಳಕೇರಿ, ಖಜಾಂಚಿ ಕೆ.ಎ. ಅಬ್ದುಲ್ಲ ಕೊಟ್ಟಮುಡಿ, ಕಾರ್ಯದರ್ಶಿ ಪಿ.ಎ.ಯೂಸುಫ್ ಹಾಜಿ ಕೊಂಡಂಗೇರಿ, ಆಡಳಿತ ಅಧಿಕಾರಿ ಎಂ.ಬಿ. ಹಮೀದ್ ಕಬಡಗೇರಿ ಮೊದಲಾದವರಿದ್ದರು.

Read More