ಲೇಖಕ: admin

ಮಡಿಕೇರಿ ಡಿ.30 : ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಬರಪೊಳೆ(ಕೊಂಕಣ ಹೊಳೆ) ನದಿಯಲ್ಲಿ ನಡೆದಿದೆ. ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ಇಂಜಿನಿಯರಿಂಗ್ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದ ಶ್ರೀಮಂಗಲ ನೆಮ್ಮಲೆ ಗ್ರಾಮದ ನಿವಾಸಿ ಕುಂಞಗಡ ರಶಿಕ್ ಕುಶಾಲಪ್ಪ(20), ಜೋಡುಬೀಟಿ ಗ್ರಾಮದ ಮಂಗೇಟಿರ ಪಿ.ಆಕಾಶ್ ಬಿದ್ದಪ್ಪ(20) ಹಾಗೂ ಶ್ರೀಮಂಗಲ ಗ್ರಾಮದ ಉಳುವಂಗಡ ಸುದೇಶ್ ಅಯ್ಯಪ್ಪ(20) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಪೊನ್ನಂಪೇಟೆ ಸಿಐಟಿ ಕಾಲೇಜ್ ನ ನಾಲ್ವರು ವಿದ್ಯಾರ್ಥಿಗಳು ಕಾಲೇಜ್ ನಿಂದ 5 ಕಿ.ಮೀ ದೂರದಲ್ಲಿರುವ ಬರಪೊಳೆಗೆ ತೆರಳಿದ್ದು, ಈ ಪೈಕಿ ಮೂವರು ನೀರಿಗೆ ಇಳಿದಿದ್ದರು ಎಂದು ಹೇಳಲಾಗಿದೆ. ಈ ವೇಳೆ ನೀರಿನ ಆಳಕ್ಕೆ ಸಿಲುಕಿ ಮೂವರು ಕೂಡ ಮೃತಪಟ್ಟಿದ್ದಾರೆ. ಓರ್ವ ವಿದ್ಯಾರ್ಥಿ ಕಾಲು ನೋವಿನ ಕಾರಣದಿಂದ ನೀರಿಗೆ ಇಳಿಯದೆ ದಡದಲ್ಲಿ ಉಳಿದಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತೀತಿಮಾಡ ಪವಿ, ಕಡೇಮಾಡ ಅನಿಲ್ ಕಾಳಪ್ಪ, ತೀತಿಮಾಡ ಸದನ್…

Read More

ಮಡಿಕೇರಿ ಡಿ.30 : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಸುವುದು, ಜಾನುವಾರುಗಳಿಗೆ ಮೇವು ಸರಬರಾಜು ಮಾಡುವುದು, ಸಂಬಂಧಪಟ್ಟ ಇಲಾಖೆಗಳು ಕಂದಾಯ, ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಬರ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೂಚಿಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಬರ ನಿರ್ವಹಣೆ ಸಂಬಂಧ ನಡೆದ ಟಾಸ್ಕ್ ಫೋರ್ಸ್ ತಾಲ್ಲೂಕು ಮಟ್ಟದ 2 ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಬರುವ ದಿನಗಳಲ್ಲಿ ಮುಂಜಾಗ್ರತ ಕ್ರಮವಹಿಸಲು ತಮ್ಮ ತಮ್ಮ ಇಲಾಖೆಗಳಲ್ಲಿ ಅಗತ್ಯ ಕ್ರಮಕೈಗೊಳ್ಳುವ ಸಲುವಾಗಿ ಕ್ರಿಯಾಯೋಜನೆಯ ಅಂದಾಜು ಪಟ್ಟಿ ತಯಾರಿಸುವಂತೆ ಸೂಚಿಸಿದರು. ಮುಂದುವರೆದು ಸೆಸ್ಕ್ ವತಿಯಿಂದ ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕ ಕಡಿತಗೊಳಿಸದಿರುವಂತೆ ತಿಳಿಸಿದರು. ವಿವಿಧ ಇಲಾಖೆಗಳು ಯಾವುದೇ ಸಂದರ್ಭ ಬಂದರೂ ಕೂಡ ಅದನ್ನ ಸಮರ್ಥವಾಗಿ ಎದುರಿಸಲು ಬೇಕಾದ ಅಗತ್ಯ ಕ್ರಮವನ್ನು ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ…

Read More

ಮಡಿಕೇರಿ ಡಿ.30 : ಪ್ರಸಕ್ತ (2023) ಸಾಲಿನಲ್ಲಿ ವಿತರಿಸಲಾಗಿದ್ದ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ಫೆ.28 ರವರೆಗೆ ಮಾನ್ಯ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ಪಾಸುದಾರರ ನವೀಕರಣ/ ಹೊಸ ಪಾಸು ಪಡೆಯುವ ಫಲನುಭವಿಗಳೆಲ್ಲರೂ ಅರ್ಜಿಯನ್ನು ಸೇವಾ ಸಿಂಧುಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕಿದೆ. ಸೇವಾಸಿಂಧು ಪೋರ್ಟಲ್ https://sevasinduservices.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸುವಾಗ ವಿಕಲಚೇತನರು ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಪ್ರತಿ, ಪಾಸಪೋರ್ಟ್ ಸೈಜಿನ ಫೋಟೋ ಹಾಗೂ ಯು.ಡಿ.ಐ.ಡಿ/ ಗುರುತಿನ ಚೀಟಿಯನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವುದು. ಆಯಾಯ ತಾಲ್ಲೂಕಿನ ಘಟಕದಲ್ಲಿ ಪಾಸುಗಳನ್ನು ಪಡೆಯುವುದು. ಹೊಸದಾಗಿ ಪಾಸ್ ಪಡೆಯುವವರು ವಿಭಾಗೀಯ ಕಚೇರಿ ಪುತ್ತೂರಿನಲ್ಲಿ ಪಡೆಯುವುದು. ಪಾಸು ಪಡೆಯುವ ಸಮಯದಲ್ಲಿ ಸಲ್ಲಿಸಿದ ಅರ್ಜಿಯ ಪ್ರತಿ ವಾಸ್ತವ್ಯದ ದೃಢೀಕರಣ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಯು.ಡಿ.ಐ.ಡಿ ಚೀಟಿಯ ಜೆರಾಕ್ಸ್ ಪ್ರತಿ ಮತ್ತು ಮೂಲ ಪ್ರತಿ, ಪಾಸ್ ಪೋರ್ಟ್ ಸೈಜಿನ 2 ಫೊಟೋ, ಅಂಚೆ ಚೀಟಿ ಗಾತ್ರದ 1 ಫೊಟೋ ಹಾಗೂ ಯು.ಡಿ.ಐ.ಡಿ ಚೀಟಿಯ ಮಾನ್ಯತಾ ಅವಧಿಯನ್ನು ಪರಿಶೀಲನೆ ಮಾಡುವ…

Read More

ಮಡಿಕೇರಿ ಡಿ.30 : ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲಿಕ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಈ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಈ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಸೌಲಭ್ಯಗಳು: ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. 2 ಲಕ್ಷ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳವರೆಗೆ (ಶೇಕಡಾವಾರು ದುರ್ಬಲತೆ ಆಧಾರದ ಮೇಲೆ). ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ. 1 ಲಕ್ಷಗಳವರೆಗೆ ದೊರೆಯುತ್ತದೆ. ಈ ಯೋಜನೆಯ ಸೌಲಭ್ಯ ಪಡೆಯಲು 16 ರಿಂದ 59 ವಯೋಮಾನದವರಾಗಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಆದಾಯ ತೆರಿಗೆ ಪಾವತಿದಾರರಾಗಿರಬಾರದು ಹಾಗೂ ಭವಿಷ್ಯನಿಧಿ ಮತ್ತು ಇ.ಎಸ್.ಐ ಫಲಾನುಭವಿಯಾಗಿರಬಾರದು. ಅಲ್ಲದೇ, ಕೇಂದ್ರ…

Read More

ಮಡಿಕೇರಿ ಡಿ.30 : ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ನಗರ ವಸತಿ ರಹಿತರಿಗೆ ಆಶ್ರಯ ಉಪ ಘಟಕದಡಿ ಆಶ್ರಯ ಕಲ್ಪಿಸಲು 3ನೇ ವ್ಯಕ್ತಿಯ (ಎನ್‍ಜಿಒ) ಮುಖಾಂತರ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತರ (ನಗರದಲ್ಲಿ ರಾತ್ರಿ ವೇಳೆ ನಿರ್ಗತಿಕರು, ರಸ್ತೆ ಬದಿ ಅಂಗಡಿಗಳ ಜಗುಲಿ/ ರೈಲ್ವೆ ನಿಲ್ದಾಣ/ ಬಸ್ ನಿಲ್ದಾಣ/ ಸಾರ್ವಜನಿಕ ಸ್ಥಳಗಳಲ್ಲಿ ಮಲಗುವ ಮಾನಸಿಕ ಅಸ್ವಸ್ಥರು, ವೃದ್ದರು, ಮಕ್ಕಳು, ಅಂಗವಿಕಲರು ಮತ್ತು ಇನ್ನಿತರ ವಸತಿ ರಹಿತರು, ಅನಾಥರುಗಳು) ಸಮೀಕ್ಷೆಯನ್ನು ಜ.3 ರವರೆಗೆ ಒಂದು ವಾರಗಳ ಕಾಲ ನಗರಸಭೆ ಹಾಗೂ ಸ್ನೇಹಾಶ್ರಯ ಯೂತ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿ ಇದ್ದಲ್ಲಿ ಕಚೇರಿಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.30 : 2024 ರ ಜೂ.21 ಕ್ಕೆ ಅವಧಿ ಪೂರ್ಣಗೊಳ್ಳಲಿರುವ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸಲು ಸಿದ್ಧತೆ ನಡೆದಿದ್ದು, ಆ ನಿಟ್ಟಿನಲ್ಲಿ ಇದುವರೆಗೆ ಹೆಸರು ನೋಂದಾಯಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ  ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ನವೆಂಬರ್, 23 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಮೂನೆ-18 ಮತ್ತು 19 ರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಈ ಅವಧಿಯಲ್ಲಿ (ನವೆಂಬರ್, 23 ರಿಂದ ಡಿಸೆಂಬರ್, 09 ರವರೆಗೆ) ಕೊಡಗು ಜಿಲ್ಲೆಯಲ್ಲಿ ಒಟ್ಟು 245…

Read More

ಮಡಿಕೇರಿ ಡಿ.30 : ವಿಶ್ವದಾದ್ಯಂತ ನೆಲೆಸಿರುವ ಕೊಡವ ಸಮುದಾಯ ಬಾಂಧವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮಡಿಕೇರಿಯಲ್ಲಿ ನಡೆದ ವಿಶ್ವ ಕೊಡವ ಸಮ್ಮೇಳನದ ದ್ವಿತೀಯ ದಿನದ ಕಾರ್ಯಕ್ರಮದಲ್ಲಿ ವಿವಿಧ ಪೈಪೋಟಿಗಳು ಕೊಡವ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿತು. ಕೊಡವರ ವಿಶಿಷ್ಟ ಸಂಸ್ಕೃತಿ ಸಂಪ್ರದಾಯ, ಆಚಾರ ವಿಚಾರಗಳನ್ನು ಆಧುನೀಕತೆಯ ಭರಾಟೆಯ ನಡುವೆಯೂ ಉಳಿಸಿ ಬೆಳೆಸುವ ಪಣ ತೊಡಲಾಯಿತು. ಕುಪ್ಯಚಾಲೆ ತೊಟ್ಟು, ಪೀಚೆ ಕತ್ತಿ ವಡಿಕತ್ತಿಯೊಂದಿಗೆ ಕಂಡು ಬಂದ ಕೊಡವ ಪುರುಷರು, ಆಕರ್ಷಕ ಕೊಡವ ಸಾಂಪ್ರದಾಯಿಕ ಧಿರಿಸಿನಲ್ಲಿ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಮಹಿಳೆಯರಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಆವರಣಕ್ಕೆ ವಿಶೇಷ ಮೆರುಗು ಮೂಡಿತು. ಕನೆಕ್ಟಿಂಗ್ ಕೊಡವ ಸಂಸ್ಥೆಯಿಂದ ಆಯೋಜಿತ ವಿಶ್ವ ಕೊಡವ ಮೇಳದ ದ್ವಿತೀಯ ದಿನವಾದ ಶನಿವಾರ ಫೀ.ಮಾ.ಕಾರ್ಯಪ್ಪ ಕಾಲೇಜಿನ ಆವರಣದಲ್ಲಿ ಉಮ್ಮತ್ತಾಟ್, ಕೋಲಾಟ್, ಬೊಳಕಾಟ್ ಪೈಪೋಟಿ ಅತ್ಯಂತ ಉತ್ಸಾಹದಿಂದ ನೂರಾರು ಪ್ರೇಕ್ಷಕರ ಸಮ್ಮುಖದಲ್ಲಿ ಪ್ರದರ್ಶಿಸಲ್ಪಟ್ಟು ಗಮನ ಸೆಳೆಯಿತು. ದುಡಿಯ ನಾದಕ್ಕೆ ತಕ್ಕಂತೆ ಕೈಯಲ್ಲಿ ಬೆತ್ತವನ್ನು ಹಿಡಿದು, ಲಾಲಿತ್ಯ ಪೂರ್ಣವಾಗಿ ಮರದ ಸುತ್ತ ಹೆಜ್ಜೆ ಹಾಕುತ್ತಾ…

Read More

ಮಡಿಕೇರಿ ಡಿ.30 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಟಿಕೆಟ್ ಸಿಗುವುದಿಲ್ಲ ಎನ್ನುವ ಕಾರಣಕ್ಕಾಗಿ ಹತಾಶಗೊಂಡಿರುವ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಎಂದು ಹೇಳುವ ಮೂಲಕ ಪ್ರತಾಪ್ ಸಿಂಹ ಅಗೌರವದಿಂದ ನಡೆದುಕೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಧಾನಿ ನರೇಂದ್ರಮೋದಿ ಅವರು ಸ್ಪರ್ಧಿಸಿದರೂ ಕಾಂಗ್ರೆಸ್ ಗೆಲುವು ಖಚಿತವೆಂದರು. ಪ್ರತಾಪ್ ಸಿಂಹ ಅವರು ಮೊದಲು ಸುಳ್ಳು ಹೇಳುವುದನ್ನು ಬಿಡಬೇಕು. ಮೈಸೂರು- ಬೆಂಗಳೂರು ಹೆದ್ದಾರಿ ಅನುಮೋದನೆ ಸಂದರ್ಭ ಅವರು ಸಂಸದರೇ ಆಗಿರಲಿಲ್ಲ. ರಸ್ತೆಗೆಂದು ಕೇಂದ್ರ ಸರ್ಕಾರ ಹಣ ನೀಡಿದರೆ ರಾಜ್ಯ ಸರ್ಕಾರ ಜಾಗ ನೀಡಿದೆ. ಕೇಂದ್ರ ಪುಕ್ಕಟೆ ಹಣ ನೀಡಿಲ್ಲ, ಹೆದ್ದಾರಿಯಲ್ಲಿ 900 ರೂ. ಟೋಲ್ ಸಂಗ್ರಹಿಸಲಾಗುತ್ತಿದೆ. ಸಂಸದರಾಗಿ ಕೊಡಗು ಜಿಲ್ಲೆಗೆ ಪ್ರತಾಪ್ ಸಿಂಹ ಏನು…

Read More

ಮಡಿಕೇರಿ ಡಿ.30 : ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು, ಆದರೆ ಸರಕಾರಿ ಶಾಲೆಗೂ ಹೊಸ ಕಳೆಯನ್ನು ನೀಡಬಹುದೆಂದು ತೋರಿಸಿಕೊಡುವ ಮೂಲಕ ಸ್ಫೂರ್ತಿ ಯುವಕ ಸಂಘ ಮಾದರಿಯಾಗಿದೆ. ಮಾಸಿದ ಬಣ್ಣ, ಸುತ್ತಲು ಗಿಡಗಂಟಿಗಳು, ಕಳೆ ಗುಂದಿದ ತರಗತಿಗಳು, ನೋಡಲು ಬೇಸರ ಮೂಡಿಸುತ್ತಿದ್ದ ವಾತಾವರಣದಲ್ಲಿದ್ದ ಕರ್ಣಂಗೇರಿ ಗ್ರಾಮದ ಮೊಣಕಾಲ್ಮುರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸ್ಥಿತಿಗತಿಯನ್ನು ಕಂಡು ಬೇಸರಗೊಂಡ ಸ್ಫೂರ್ತಿ ಯುವಕ ಸಂಘದ ಪದಾಧಿಕಾರಿಗಳು ಶ್ರಮದಾನ ಮಾಡಿದರು. ಗಿಡಗಂಟಿಗಳನ್ನು ತೆಗೆದು ಶಾಲೆಯ ಸುತ್ತಲು ಶುಚಿತ್ವದ ವಾತಾವರಣವನ್ನು ಮೂಡಿಸಿದರು. ಸ್ವಂತ ಹಣದಿಂದ ಸುಮಾರು 25 ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಸುಣ್ಣಬಣ್ಣ ಬಳಿದು ಶಾಲೆಗೆ ಹೊಸ ಕಳೆ ತಂದುಕೊಟ್ಟರು. ವಿದ್ಯಾ ದೇಗುಲ ಎಂದೆಂದೂ ಸುಂದರವಾಗಿರಬೇಕು, ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ಸಿಗಬೇಕು ಎಂದು ಸಂಘದ ಪ್ರಮುಖರು ಅಭಿಪ್ರಾಯಪಟ್ಟರು. ::: ಧನ್ಯವಾದ ಅರ್ಪಣೆ :::: ಶ್ರಮದಾನದ ಮೂಲಕ ಶಾಲೆಗೆ ಹೊಸ ಕಳೆ ತಂದುಕೊಟ್ಟು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದ ಸ್ಫೂರ್ತಿ ಯುವಕ ಸಂಘದ ಯುವಕರಿಗೆ ಮೊಣಕಾಲ್ಮುರಿ…

Read More

ಮಡಿಕೇರಿ ಡಿ.30 : ಕೊಡವ ಕುಟುಂಬಗಳ ನಡುವೆ 2024ರಲ್ಲಿ ನಡೆಯಲಿರುವ ಹಾಕಿ ನಮ್ಮೆಯ ಲಾಂಛನ ಬಿಡುಗಡೆ ಸಮಾರಂಭವು ಡಿ.31 ರಂದು ನಡೆಯಲಿದೆ ಎಂದು ನಮ್ಮೆಯ ಸಂಚಾಲಕ ದಿನೇಶ್ ಕಾರ್ಯಪ್ಪ ತಿಳಿಸಿದ್ದಾರೆ. ನಾಪೋಕ್ಲುವಿನ ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ಬೆಳಿಗ್ಗೆ 9.30 ಗಂಟೆಗೆ ಕುಂಡ್ಯೋಳಂಡ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ನಾಣಿ ನಾಣಯ್ಯ ಹಾಗೂ ಹಾಕಿ ನಮ್ಮೆಯ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಹಾಗೂ ಒಲಂಪಿಯನ್ ಡಾ.ಅಂಜಪರವಂಡ ಬಿ.ಸುಬ್ಬಯ್ಯ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಕೇಟೋಳಿರ ಎಸ್.ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ದಿನೇಶ್ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.

Read More