ಗೋಣಿಕೊಪ್ಪ ಡಿ.29 : ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಅವರನ್ನು ಒತ್ತಾಯಿಸಲಾಯಿತು. ಪೊನ್ನಂಪೇಟೆ ಆಡಳಿತ ಕಚೇರಿಯಲ್ಲಿ ತಹಶೀಲ್ದಾರ್ ಪ್ರಶಾಂತ್ ಅವರಿಗೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ಎಸ್. ಕಟ್ಟಿ ಮಂದಯ್ಯ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಕಳೆದ 10 ವರ್ಷಗಳಿಂದ ನಿವೃತ್ತ ಸೈನಿಕ ಕಾಳಿಮಾಡ ಬಿ.ಕುಶಾಲಪ್ಪ ಅವರು ಬೀರುಗ ಗ್ರಾಮದಲ್ಲಿರುವ ಜಾಗದ ಕಾಫಿ ತೋಟವನ್ನು ಹೆಸರಿಗೆ ನೋಂದಾಯಿಸುವಂತೆ ಅರ್ಜಿ ಸಲ್ಲಿಸಿದರೂ, ಅರ್ಜಿ ವಿಲೇವಾರಿಗೊಂಡಿಲ್ಲ. ಇಲಾಖೆಯ ಸಿಬ್ಬಂದಿಗಳು ಈ ವಿಚಾರವಾಗಿ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದ ಸಮಿತಿ ಜಾಗವನ್ನು ತಕ್ಷಣ ಮಂಜೂರು ಮಾಡಿಸಿ ನಿವೃತ್ತ ಸೈನಿಕರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಕಚೇರಿಯಲ್ಲಿರುವ ಕಡತವನ್ನು ವಿಲೇವಾರಿ ಮಾಡಿಕೊಡಬೇಕೆಂದು ಮನವಿ ಸಲ್ಲಿಸಿತು. ಇದೇ ಸಂದರ್ಭ ತಾಲೂಕು ಆಡಳಿತ ಕಚೇರಿ ಸುತ್ತ ಬೆಳೆದು ನಿಂತಿರುವ ಗಿಡಘಂಟಿಗಳನ್ನು ತೆರವುಗೊಳಿಸಿ ಶುಚಿತ್ವದ ಕಡೆಗೂ ಗಮನ ಹರಿಸಬೇಕು ಎಂದು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸಲಹೆ ನೀಡಿದರು. ಕಾರ್ಯಾಧ್ಯಕ್ಷ ಬಿ.ಎಸ್. ಕಾರ್ಯಪ್ಪ, ಕಾರ್ಯದರ್ಶಿ…
ಲೇಖಕ: admin
ಮಡಿಕೇರಿ ಡಿ.29 : ಅತ್ಯಂತ ಸೂಕ್ಷ್ಮ ಮತ್ತು ವಿಶಿಷ್ಟ ಜನಾಂಗವಾಗಿರುವ ಕೊಡವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಈ ರೀತಿಯ ಕೊಡವ ಸಮ್ಮೇಳನಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಯಂ ಪ್ರೇರಿತವಾಗಿ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಸಣ್ಣ ಸಮುದಾಯದ ಬೆಳವಣಿಗೆಗೆ ನೈತಿಕ ಬೆಂಬಲ ಸೂಚಿಸಬೇಕು ಎಂದು ಹಿರಿಯ ರಾಜಕಾರಣಿ ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶ ವಿದೇಶಗಳಲ್ಲಿ ನೆಲೆಸಿರುವ ಕೊಡವರನ್ನು ಒಗ್ಗೂಡಿಸಿ ಪಾರಂಪರಿಕ, ಸಾಂಸ್ಕೃತಿಕ, ಸಾಂಪ್ರದಾಯಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮತ್ತು ಧಾರ್ಮಿಕ ವಿಚಾರಗಳ ಕುರಿತು ಸಮಾಲೋಚನೆ ನಡೆಸಿ ಜನಾಂಗದ ಅಭ್ಯುದಯದ ನಿಟ್ಟಿನಲ್ಲಿ ಚಿಂತನೆ ನಡೆಸಲು “ಕೊಡವ ಸಮ್ಮೇಳನ”ಗಳಂತಹ ವಿಶಿಷ್ಟ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಈ ರೀತಿಯ ಕಾರ್ಯಕ್ರಮಗಳಿಗೆ ಅನುದಾನ ನೀಡಲು ಸರ್ಕಾರಗಳೇ ಮುಂದೆ ಬರಬೇಕು ಎಂದು ತಿಳಿಸಿದ್ದಾರೆ. ಕೊಡಗು ಅತ್ಯಂತ ಪುಟ್ಟ ಜಿಲ್ಲೆಯಾಗಿದ್ದು, ಕೇವಲ ಐದೂವರೆ ಲಕ್ಷ ಜನಸಂಖ್ಯೆ ಹೊಂದಿದೆ. ಇಲ್ಲಿನ ಮೂಲ ನಿವಾಸಿ ಕೊಡವರ…
ಮಡಿಕೇರಿ ಡಿ.29 : ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಯುವ ಸಪ್ತಾಹದ ಅಂಗವಾಗಿ ಕೊಡಗು ಜಿಲ್ಲೆಯ ಯುವ ಜನರಿಗಾಗಿ “ಸ್ವಾಮಿ ವಿವೇಕಾನಂದರ ಆದರ್ಶಗಳಲ್ಲಿ ಇಂದಿನ ಯುವ ಜನಾಂಗ ಅಳವಡಿಸಿಕೊಳ್ಳಬೇಕಾದ ಅಂಶಗಳು” ಎಂಬ ವಿಷಯದ ಕುರಿತು ಜಿಲ್ಲಾ ಮಟ್ಟದ ಲೇಖನ ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು 30 ವರ್ಷದೊಳಗಿನವರಾಗಿರಬೇಕು, ಲೇಖನದೊಂದಿಗೆ ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿರಬೇಕು. ಟೈಪ್ ಮಾಡಿದ ಲೇಖನ “ಎ4” ಕಾಗದದ ಒಂದೇ ಭಾಗದಲ್ಲಿರಬೇಕು ಮತ್ತು ನಾಲ್ಕು ಪುಟಗಳನ್ನು ಮೀರಬಾರದು. ಲೇಖನಗಳನ್ನು ಜ.10 ರಂದು ಮಧ್ನಾಹ್ನ 3 ಗಂಟೆಯೊಳಗೆ ತಲುಪಿಸಬೇಕು. ವಿಜೇತರಿಗೆ ಆಕರ್ಷಕ ಟ್ರೋಫಿ, ನಗದು ಬಹುಮಾನ ಹಾಗೂ ದೃಢೀಕರಣ ಪತ್ರವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ…
ಮಡಿಕೇರಿ ಡಿ.29 : ಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ವತಿಯಿಂದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಕೊಡವ ಸಮ್ಮೇಳನದಲ್ಲಿ ಸಂಘಟನೆಯ ಪ್ರಮುಖರು ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ಡಿ.29 : ಕಾಂತೂರು-ಮೂರ್ನಾಡು ಗ್ರಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆ ಶಿಬಿರ ನಡೆಯಿತು. ಕಾಂತೂರು- ಮೂರ್ನಾಡು ಗ್ರಾ.ಪಂ ನಲ್ಲಿ ನಡೆದ ಶಿಬಿರದಲ್ಲಿ ಪ್ರತಿ ದಿನ 50 ರಿಂದ 60 ಮಂದಿ ಮಹಿಳೆಯರ ಗೃಹಲಕ್ಷ್ಮಿ ನೋಂದಣಿ, ಆಧಾರ್, ಇಕೆವೈಸಿ ಮತ್ತು ಬ್ಯಾಂಕಿನಲ್ಲಿ ಆಗಿರುವ ಸಮಸ್ಯೆಯನ್ನು ಸರಿಪಡಿಸಲಾಯಿತು. ಅಲ್ಲದೇ ಅಂಚೆ ಕಚೇರಿಯಲ್ಲಿ ಐಪಿಬಿಪಿ ಖಾತೆ ತೆರೆಯುವ ಮೂಲಕ ಗೃಹಲಕ್ಷ್ಮಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಗೃಹಲಕ್ಷ್ಮಿ ನೋಂದಣಿಗಾಗಿ ಹಾಗೂ ಅದನ್ನು ಸರಿ ಪಡಿಸಲು ವಿವಿಧಡೆ ಅಲೆದಾಡುವುದು ತಪ್ಪುತಪ್ಪಿಸಲು ಈ ಶಿಬಿರ ಸಹಕಾರಿಯಾಗಿದೆ ಎಂದು ಫಲಾನುಭವಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತ ಕೀರ್ತನ್ ಮಾರ್ಗದರ್ಶನದಲ್ಲಿ ನಡೆದ ಮೂರು ದಿನಗಳ ಶಿಬಿರದಲ್ಲಿ ಈ ಶಿಬಿರದಲ್ಲಿ ಪಂಚಾಯತ್ ಅಧ್ಯಕ್ಷ ಕುಶನ್, ಅಭಿವೃದ್ಧಿ ಅಧಿಕಾರಿ ಮಾನ್ ಚಂದ್ರಮೌಳಿ ಮತ್ತು ಅಂಗನವಾಡಿ ಕಾರ್ಯಕರ್ತೆಯರಾದ ಬಿ.ಬಿ.ಜಯಂತಿ, ಬಿ.ಆರ್.ಭವ್ಯ, ಪ್ರಮೀಳಾ, ಚೈತ್ರ, ಉಮಾವತಿ, ಸಮೀರಾ ಮತ್ತು ಗ್ರಾ.ಪಂ ಸಿಬ್ಬಂದಿಗಳಾದ ಶಶಿ ಮತ್ತು ಎಲ್ಲಾ…
ಮಡಿಕೇರಿ ಡಿ.29 : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಲುಗುಂದ ಗ್ರಾಮಸ್ಥರು, ಹಳೆಯ ವಿದ್ಯಾರ್ಥಿ ಸಂಘ, ಭಗವತಿ ಯೂತ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಭಗವತಿ ಫುಟ್ಬಾಲ್ ಕಪ್ ಪಂದ್ಯಾವಳಿಯಲ್ಲಿ ವೈಷ್ಣವಿ ಯುವಕ ಸಂಘ ಮರಗೋಡು, ಕ್ಯಾಪ್ಟನ್ಸ್ 11 ಪಾಲಿಬೆಟ್ಟ, ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ಹಾಗೂ ಅಯ್ಯಪ್ಪ ಫ್ರೆಂಡ್ಸ್ ಹಾಲುಗುಂದ ಸೇರಿ ನಾಲ್ಕು ತಂಡಗಳು ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಮೊದಲನೇ ಕ್ವಾರ್ಟರ್ ಫೈನಲ್ ಪಂದ್ಯವು ಚಾಮುಂಡಿ ಯುನೈಟೆಡ್ ಒಂಟಿಯಂಗಡಿ ಹಾಗೂ ಭಗವತಿ ಯೂತ್ ಕ್ಲಬ್ ಬಿ ಹಾಲುಗುಂದ ತಂಡಗಳ ನಡುವೆ ನಡೆಯಿತು. ಎರಡು ತಂಡಗಳು ನಿಗದಿತ ಸಮಯದಲ್ಲಿ ಯಾವುದೇ ಗೋಲುಗಳಿಸದೆ,ಪೆನಾಲ್ಟಿ ಶೂಟೌಟ್ ಮೊರೆ ಹೋಗಲಾಯಿತು. ಪೆನಾಲ್ಟಿ ಶೂಟೌಟ್ ಸಡನ್ ಡೆತ್ ನಲ್ಲಿ ಚಾಮುಂಡಿ ಯುನೈಟೆಡ್ ತಂಡವು 8-7 ಗೋಲುಗಳ ಅಂತರದಿಂದ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. ಎರಡನೇ ಕ್ವಾಟರ್ ಫೈನಲ್ ಪಂದ್ಯವು ವೈಷ್ಣವಿ ಯುವಕ ಸಂಘ…
ಸುಂಟಿಕೊಪ್ಪ,ಡಿ.29: ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ 2023ನೇ ಸಾಲಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಸಭೆಯಲ್ಲಿ ನೊಡೆಲ್ ಅಧಿಕಾರಿಯಾಗಿ ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ಪಾಲ್ಗೊಂಡಿದ್ದರು. ಕಳೆದ ಸಾಲಿನ ಗ್ರಮ ಸಭೆಯ ವರದಿ ಮಂಡನೆಯಾದ ನಂತರ ನೆರೆದಿದ್ದ ಗ್ರಾಮಸ್ಥರು ನಿರ್ಣಯವಾದ ಎಷ್ಟು ಕೆಲಸಗಳು ಅನುಷ್ಠಾನಗೊಂಡಿದೆ. ಚೆಸ್ಕಾಂ ಇಲಾಖೆಯ ವಿದ್ಯುತ್ ಬಿಲ್ ಪಾವತಿಸಲಾಗಿದೆಯೇ ಎಂದು ಇಸಾಕ್ಖಾನ್ ಪ್ರಶ್ನಿಸಿದರು. ಅರ್ಧಭಾಗದಷ್ಟು ಪಾವತಿಸಲಾಗಿದೆ ಮುಂದಿನ ದಿನಗಳಲ್ಲಿ ಪಾವತಿಸಲು ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದು ಅಧ್ಯಕ್ಷರು ತಿಳಿಸಿದರು. ಕೇಂದ್ರ ಸರಕಾರದ ಜಲಜೀವನ್ ಯೋಜನೆ ಅನುಷ್ಠಾನ ಯಾಕೆ ವಿಳಂಬಗೊಂಡಿದೆ ಇತರೆಡೆಗಳಲ್ಲಿ ಈ ಯೋಜನೆಯು ಅನುಷ್ಠಾನಗೊಂಡಿದೆ. ಸುಂಟಿಕೊಪ್ಪದಲ್ಲಿ ಯಾಕೆ ಅನುಷ್ಠಾನಗೊಂಡಿಲ್ಲವೆಂದು ಬಿ.ಕೆ.ಮೋಹನ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಿ.ಪಂ ಅಭಿಯಂತರರಾದ ಫಯಾಜ್, ಟೆಂಡರ್ ಪ್ರಕ್ರಿಯೆಯು ನಡೆದಿದು,್ದ ಮುಂದಿನ ದಿನಗಳಲ್ಲಿ ಕಾಮಗಾರಿ ನಿರ್ವಹಿಸಲಾಗುವುದು ಎಂದು ಉತ್ತರಿಸಿದರು. ಸುಂಟಿಕೊಪ್ಪ ಪಟ್ಟಣದಲ್ಲಿ ಕಸ ವಿಲೇವಾರಿಯು ಸರಿಯಾದ ರೀತಿಯಲ್ಲಿ ನಡೆಸುತ್ತಿಲ. ಕಸವನ್ನು ಸಂಗ್ರಹಿಸುವ ವಾಹನ ಬಾರದ ಹಿನ್ನಲೆ ವಾರಗಟ್ಟಲೇ ಕಸವನ್ನು…
ಮಡಿಕೇರಿ,ಡಿ.29 : ದಕ್ಷಿಣ ಕೊಡಗಿನ ಪೊನ್ನಂಪೇಟೆಯಲ್ಲಿ ಕೆಲವು ವಾಹನ ಸವಾರರು ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ವಾಹನಗಳನ್ನು ಚಾಲನೆ ಮಾಡುತ್ತಿರುವ ಮಾಹಿತಿ ಅರಿತು ಕಾರ್ಯಾಚರಣೆ ನಡೆಸಿದ ಪೊನ್ನಂಪೇಟೆ ಪೊಲೀಸರು ವಾಹನ ಸವಾರರಿಗೆ ದಂಡ ವಿಧಿಸುವುದರ ಮೂಲಕ ಬಿಸಿ ಮುಟ್ಟಿಸಿದರು. ಪೊನ್ನಂಪೇಟೆ ಠಾಣಾಧಿಕಾರಿ ನವೀನ್ ಮತ್ತು ಸಿಬ್ಬಂದಿಗಳು ಸೀಟ್ ಬೆಲ್ಟ್ ಧರಿಸದ, ಹೊಗೆ ನಿಯಂತ್ರಣ ದಾಖಲೆ, ಇನ್ಶೂರೆನ್ಸ್, ಹೆಲ್ಮೆಟ್ ರಹಿತ ವಾಹನ ಚಾಲನೆ ಮಾಡುತ್ತಿದ್ದವರ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. ಮಾತ್ರವಲ್ಲದೇ ಒಟ್ಟು 15 ರಿಂದ 20 ವಾಹನ ಚಾಲಕರಿಗೆ ದಂಡ ವಿಧಿಸಿದರು. ಕೆಲವರಿಗೆ ಠಾಣಾಧಿಕಾರಿ ನವೀನ್ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಿದರು.
ಮಡಿಕೇರಿ ಡಿ.28 : ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಎಂ ಎಲ್ ಸಿ ಜಗದೀಶ್ ಶೆಟ್ಟರ್ ಸ್ಪಷ್ಟ ಪಡಿಸಿದ್ದಾರೆ. ಕುಶಾಲನಗರದ ಬಳಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ ನನ್ನನ್ನು ಯಾರು ಕರೆದಿಲ್ಲ ಎಂದು ಕೂಡ ಹೇಳಿದರು. ಬಿಎಸ್ ವೈ ಸರ್ಕಾರದ ವಿರುದ್ಧ ಯತ್ನಾಳ್ 40,000 ಕೋಟಿ ಅಕ್ರಮ ಆರೋಪ ವಿಚಾರ ಬಗ್ಗೆ ಉತ್ತರಿಸಿದ ಶೆಟ್ಟರ್ ಭ್ರಷ್ಟಚಾರದ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇದೀಗ ಎಲ್ಲಾ ಹೊರಗೆ ಬರುತ್ತಿದೆ. ಈಗಾಗಲೇ ಸಿದ್ದರಾಮಯ್ಯರ ಸರ್ಕಾರ ತನಿಖೆ ಸಮಿತಿ ರಚಿಸಿದೆ. ತನಿಖೆ ನಡೆಯುತ್ತಿದೆ. ಯತ್ನಾಳ್ ಮಾಹಿತಿ ತೆಗೆದುಕೊಂಡು ತನಿಖೆ ಮಾಡಿದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದ ಶೆಟ್ಟರ್ ಯತ್ನಾಳ್ ಆರೋಪದ ಬಗ್ಗೆ ದಾಖಲೆ ಕೊಟ್ರೆ ತನಿಖೆಗೆ ಅನುಕೂಲ ಆಗಲಿದೆ ಎಂದರು.
ವಿರಾಜಪೇಟೆ ಡಿ.28 : ವಿರಾಜಪೇಟೆ ವಿವೇಕ ಜಾಗೃತ ಬಳಗ ಹಾಗೂ ಶ್ರೀಮಂಗಲ ವಿವೇಕ ಜಾಗೃತ ಬಳಗಗಳ ಸಂಯುಕ್ತಾಶ್ರಯದಲ್ಲಿ ಸಂತೋಷ ಕೂಟ ಹಾಗೂ ಸಂವರ್ಧನಾ ಕಾರ್ಯಕ್ರಮ ನಡೆಯಿತು. ವಿರಾಜಪೇಟೆಯ ಕಾವೇರಿ ಆಶ್ರಮದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಬೆಳವಣಿಗೆಗೆ ಪೂರಕವಾಗಿ ಹಲವಾರು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ವಿಸ್ತಾರವಾಗಿ ಡಿವೈನ್ ಪಾರ್ಕ್ನ ಹೆಚ್-2 ಹಾಗೂ ಸಿ-2 ಅಧಿಕಾರಿ ಯಶವಂತ ಹಾಗೂ ಎನ್-2 ಅಧಿಕಾರಿ ಶರತ್ ಕುಮಾರ್ ಅವರ ಸಮ್ಮುಖದಲ್ಲಿ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಳಗದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಲವು ಮನೋರಂಜನೆ ಸ್ಪರ್ಧೆಗಳಲ್ಲಿ ಭಾವಹಿಸಿದರು. ಇದೇ ಸಂದರ್ಭ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಈ ಸಂದರ್ಭ ಇತ್ತಿಚೆಗೆ ಕೊಡವ ಸಮಾಜದಲ್ಲಿ ದಿವ್ಯತ್ರಯರ ಹಾಗೂ ಪರಮಪೂಜ್ಯ ಡಾಕ್ಟರ್ ಜೀ ಅವರ ಕೃಪೆಯಿಂದ ಸಂಪನ್ನವಾಗಿದ್ದ ಯೋಗ ಪರ್ಯಟನ ಕಾರ್ಯಕ್ರಮಕ್ಕೆ ತಮ್ಮ ತನು ಮನ ಧನ ನೀಡಿ ಸಂಭ್ರಮಕ್ಕೆ ಕಾರಣರಾದ ಎಲ್ಲಾ ವಿವೇಕವೀರರನ್ನು ನೆನೆದು ಅವರ ಸಕಲ ಏಳಿಗೆಗೂ ಭಗವಂತನ ಕೃಪೆ ದೊರೆಯಲಿ ಎಂದು ಪ್ರಾರ್ಥಿಸಿದರರು. ಕಾರ್ಯಕ್ರಮದಲ್ಲಿ…






