ಲೇಖಕ: admin

ಮಡಿಕೇರಿ ಡಿ.27 :  ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿಯಾಗಿ ವಿನಾಯಕ್ ನರ್ವಾಡೆ ಅಧಿಕಾರ ಸ್ವೀಕರಿಸಿದ್ದಾರೆ. ಇವರು 2021ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಯತೀಶ್ ಉಲ್ಲಾಳ್  ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಸಚಿವರಾಗಿ (ಆಡಳಿತ) ವರ್ಗಾವಣೆಯಾಗಿದ್ದಾರೆ.

Read More

ಮಡಿಕೇರಿ ಡಿ.27 : ಹಿಂದೂ ಸಂಘಟನೆಯ ಪ್ರಮುಖ, ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪ್ರಭಾಕರ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ಎಂ.ಎ.ಕಲೀಲ್ ಬಾಷ, ಸಮಾಜದ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಂಡ್ಯದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಪ್ರಭಾಕರ ಭಟ್ ಅವರು, ಮುಸ್ಲಿಂ ಮಹಿಳೆಯರ ಬಗ್ಗೆ ಅತ್ಯಂತ ಕೀಳಾಗಿ ಮಾತನಾಡಿದ್ದಾರೆ. ಇದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಅತ್ಯಂತ ಶಾಂತಿ ಮತ್ತು ಸೌಹಾರ್ಧತೆಯ ದಿನಗಳನ್ನು ಕಾಣುತ್ತಿರುವ ಕರ್ನಾಟಕ ರಾಜ್ಯದಲ್ಲಿ ಮತ್ತೆ ಕೋಮುದ್ವೇಷ ಬಿತ್ತಲು ಈ ರೀತಿಯ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಗಳು ಸಮೀಪಿಸುವಾಗ ಯಾವುದೋ ಪಕ್ಷವನ್ನು ಮೆಚ್ಚಿಸಲು ಮತ್ತು ಪ್ರಚಾರ ಪಡೆಯಲು ಅಸಂಬದ್ಧ ಭಾಷಣಗಳನ್ನು ಮಾಡಲಾಗುತ್ತಿದೆ. ವಿನಾಕಾರಣ ಪ್ರತಿಬಾರಿ ಮುಸಲ್ಮಾನರನ್ನು ಗುರಿ ಮಾಡಿಕೊಂಡು ಅವಹೇಳನ ಮಾಡುವುದು ಖಂಡನೀಯ. ಮುಸ್ಲಿಂ ಮಹಿಳೆಯರಿಗೆ ನೋವುಂಟು ಮಾಡಿರುವ ಪ್ರಭಾಕರ ಭಟ್…

Read More

ವಿರಾಜಪೇಟೆ ಡಿ.27 : ವಿರಾಜಪೇಟೆಯ ಅರಮೇರಿಯಲ್ಲಿರುವ ಎಸ್.ಎಂ.ಎಸ್ ಅಕಾಡೆಮಿಯಲ್ಲಿ ಡಿ.30 ರಂದು ‘ಏಕ ಭಾರತ ಶ್ರೇಷ್ಠ ಭಾರತ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀಗಳಾದ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು, ಶ್ರೀ ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಬೆಂಗಳೂರು ಉತ್ತರ ಸಿಜಿಎಸ್ಟಿ ಆಯುಕ್ತರುಗಳಾದ ಡಾ. ಎಂ.ಕೊಟ್ರಸ್ವಾಮಿ, ನಿವೃತ್ತ ಆರ್.ಟಿ.ಐ ಆಯುಕ್ತ ಜಿ.ಎಸ್.ವಿರೂಪಾಕ್ಷಯ್ಯ ಭಾಗವಹಿಸಲಿದ್ದಾರೆ. ಈ ಸಂದರ್ಭ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸಿ.ಬಿ.ಎಸ್.ಇ ಯ ವಿವಿಧ ವಲಯಗಳಿಗೆ ಒಳಪಟ್ಟ ಡೋಗ್ರಿ, ಭಾಂಗ್ಡ, ಹರಿಯಾಣ, ಲೆಪ್ಚ, ನಾಗ, ಚೆರಾವು, ಥೌಗೋಲ್ ಜಗೋಯಿ, ದುನೋಚಿ, ಉತ್ತರಖಂಡ್ ಪಹಾಡಿ, ಗರ್ಭಾ, ಕರ್ನಾಟಕ ತಮಿಳುನಾಡು ಕೇರಳ ಜನಪದ ನೃತ್ಯಗಳು ಒಳಗೊಂಡಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಶಾಲೆಯ ಪ್ರಾಂಶುಪಲರಾದ ಕುಸುಮ್ ಟಿಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.27 :  ಲಾರಿ ಮಾಲೀಕರು ಮತ್ತು ಚಾಲಕರ ಸಂಘದ 30ನೇ ವಾರ್ಷಿಕ ಮಹಾಸಭೆಯು ನಗರದ  ಬಾಲ ಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸಂಘದ ಕಾನೂನು ಸಲಹೆಗಾರ  ಅಚ್ಚಾಂಡಿರ ಪವನ್ ಪೆಮ್ಮಯ್ಯ ಮತ್ತು ಮಡಿಕೇರಿ ನಗರ ಸಭೆಯ ಮಾಜಿ ಸದಸ್ಯ ಸತೀಶ್ ಪೈ  ಪಾಲ್ಗೊಂಡು ಮಾತನಾಡಿ ಸಲಹೆ, ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸಂಘದ ಅಧ್ಯಕ್ಷ  ಬಾರಿಕೆ ಜಿ ಮೋಹನ್, ಉಪಾಧ್ಯಕ್ಷ ಕೆ.ವಿ.ಮಣಿ, ಕಾರ್ಯದರ್ಶಿ ಮಹಮ್ಮದ್ ಆಲಿ , ಖಜಾಂಚಿ  ಪಿ.ಡಿ .ಚಂದ್ರ ಮತ್ತು ಗೌರವ ಅಧ್ಯಕ್ಷ  ತಿಮ್ಮಣ್ಣ ರೈ ಹಾಗೂ ಸದಸ್ಯರು ಹಾಜರಿದ್ದರು.  ಸದಸ್ಯರಾದ ಶ್ರೀನಿವಾಸ್ ಲೆಕ್ಕ ಪತ್ರ ಮಂಡಿಸಿದರು.    ಸಭೆಯಲ್ಲಿ ಸಂಘದ ನೂತನ ಉಪಾಧ್ಯಕ್ಷರಾಗಿ ವಿನೋದ್ ಅವರನ್ನು ಆಯ್ಕೆ ಮಾಡಲಾಯಿತು.

Read More

ಮಡಿಕೇರಿ ಡಿ.27 : ಹಿಂದೂ ಸಂಘಟನೆಯ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಕೊಡಗು ಜಿಲ್ಲಾ ವುಮೆನ್ ಇಂಡಿಯಾ ಮೂವ್ ಮೆಂಟ್ ಸಂಘಟನೆಯ ಅಧ್ಯಕ್ಷೆ ಸಲಿಕತ್ ಎಂ.ಇ ದೂರು ನೀಡಿದ್ದಾರೆ. ಮುಸ್ಲಿಂ ಮಹಿಳೆಯರು ಹಾಗೂ ಯುವತಿಯರನ್ನು ಅವಮಾನಿಸಿದ ಮತ್ತು ಅಶಾಂತಿಗೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲವ್ ಜಿಹಾದ್ ಕುರಿತು ಉಲ್ಲೇಖಿಸಿ ಮುಸ್ಲಿಂ ಯುವತಿಯರನ್ನು ಅವಮಾನಿಸಿದ್ದಾರೆ. ತ್ರಿವಳಿ ತಲಾಕ್ ರದ್ದುಪಡಿಸಿರುವ ಕ್ರಮವನ್ನು ಪ್ರಸ್ತಾಪಿಸಿ ಮಹಿಳೆಯರ ವೈವಾಹಿಕ ಜೀವನದ ಕುರಿತು ಅತ್ಯಂತ ಕೀಳಾಗಿ ಮಾತನಾಡಿದ್ದಾರೆ. ದೇಶದ್ರೋಹದ ಆರೋಪ ಹೊರಿಸುವ ಮೂಲಕ ಮುಸ್ಲಿಂ ಸಮುದಾಯದ ಸಾಂವಿಧಾನಿಕವಾದ ಬದುಕುವ ಹಕ್ಕಿನ ಮೇಲೆ ದಾಳಿಗೆ ಪ್ರಚೋದಿಸುವ ಕೃತ್ಯ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ಸಾವಿರ ಕೋಟಿ ರೂ.ಗಳನ್ನು ಮುಸ್ಲಿಮರಿಗೆ ಮೀಸಲಿಟ್ಟಿದ್ದಾರೆ ಎಂದು ಅಪಪ್ರಚಾರ ಮಾಡುವ ಮೂಲಕ ಮುಸಲ್ಮಾನರ ಮೇಲೆ ಇತರ…

Read More

ವಿರಾಜಪೇಟೆ ಡಿ.27 : ವಿಕಲಚೇತನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗದಂತೆ ಎಚ್ಚರ ವಹಿಸಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಮಂಜುನಾಥ್ ಹೇಳಿದರು. ಅಂತರಾಷ್ಟ್ರಿಯ ವಿಕಲಚೇತನರ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ” ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಸಾಧನೆಯೇ ಮುಖ್ಯ ಗುರಿಯಾಗಿರಬೇಕು. ಸಂವಿಧಾನ ಹಕ್ಕುಗಳನ್ನು ರಕ್ಷಣೆ ಮಾಡುತ್ತದೆ. ವಿಕಲಚೇತನರನ್ನು ಮುಂದೆ ತರಬೇಕೆನ್ನುವ ಉದ್ದೇಶದಿಂದ ಇಂತ ಕಾರ್ಯಕ್ರಮ ನಡೆಸಲಾಗುತ್ತದೆ. ಹಕ್ಕುಗಳು ಉಲ್ಲಂಘನೆಯಾಗದಂತೆ ಕಾನೂನಿನ ಅರಿವು ಪ್ರತಿಯೋಬ್ಬರು ತಿಳಿದುಕೊಳ್ಳಬೇಕು, ಎಲ್ಲಾ ಜನರಿಗೂ ಸಮಾನ ಹಕ್ಕು ದೊರಕುವಂತಾಗಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಅಧಿಕಾರಿ ರೀತಾ ಮಾತನಾಡಿ, ವಿಕಲಚೇತನರ ಮುಂದಿನ ಜೀವನವನ್ನು ರೂಪಿಸಿಕೊಳ್ಳಲು ಜ್ಞಾನವನ್ನು ರೂಡಿಸಿಕೊಂಡು ತಮ್ಮ ಹಕ್ಕು ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು.…

Read More

ಮಡಿಕೇರಿ ಡಿ.27 :  ಎಲ್ಲರೂ ಒಗ್ಗೂಡುವ ಮೂಲಕ ಕ್ರೀಡೆಯಿಂದ ಸೌಹಾರ್ದತೆ ಬೆಳೆಯಲಿ ಎಂದು ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಎಸ್.ಐ ಪಿ.ಜಿ.ರಾಘವೇಂದ್ರ  ಅಭಿಪ್ರಾಯಪಟ್ಟರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಲುಗುಂದ ಗ್ರಾಮಸ್ಥರು, ಹಳೆಯ ವಿದ್ಯಾರ್ಥಿ ಸಂಘ, ಭಗವತಿ ಯೂತ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್  ಸಂಯುಕ್ತಾಶ್ರಯದಲ್ಲಿ ಹಾಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಭಗವತಿ ಫುಟ್ಬಾಲ್ ‌ಕಪ್ ಉದ್ಘಾಟಿಸಿ ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಕ್ರೀಡೆಯಲ್ಲಿ ಯಾರೂ ಕೂಡ ದ್ವೇಷ ಬೆಳೆಸಬಾರದು. ಸೌಹಾರ್ದತೆಯಿಂದ  ಭಾಗವಹಿಸಬೇಕೆಂದು  ಸಲಹೆ ನೀಡಿದರು. ವೈಷ್ಣವಿ ಯುವಕ ಸಂಘ ಮರಗೋಡು ಎ ಹಾಗೂ ಚೌಡೇಶ್ವರಿ ಅಮ್ಮತ್ತಿ ತಂಡಗಳ ನಡುವೆ ನಡೆದ  ಉದ್ಘಾಟ ನಾ  ಪಂದ್ಯದಲ್ಲಿ 3-2 ಗೋಲುಗಳ ಅಂತರದಿಂದ ವೈಷ್ಣವಿ ತಂಡ ಗೆಲುವು ಸಾಧಿಸಿತು. ಎರಡನೇ ಪಂದ್ಯವು ಚಾಮುಂಡಿ ಎಫ್.ಸಿ ಒಂಟಿಯಂಗಡಿ ಹಾಗೂ ಸ್ಕಿಪ್ಪರ್ಸ್ ಎಫ್.ಸಿ ಪೊನ್ನಂಪೇಟೆ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಒಂಟಿಯಂಗಡಿ ತಂಡವು 5-1 ಗೋಲುಗಳ ಅಂತರದಿಂದ ಗೆಲುವು ಪಡೆಯಿತು.ಮೂರನೇ ಪಂದ್ಯವು ಕ್ಯಾಪ್ಟನ್ಸ್…

Read More

ಸುಂಟಿಕೊಪ್ಪ ಡಿ.27 : ನಾಕೂರು, ಶಿರಂಗಾಲ, ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ 2023-24ನೇ ಸಾಲಿನ ಅಧ್ಯಕ್ಷರಾಗಿ ಬಿ.ವಿ.ವಸಂತ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಂ.ಶಂಕರನಾರಾಯಣ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಟಿ.ಕೆ.ಚಂದ್ರು, ಸಹ ಕಾರ್ಯದರ್ಶಿಯಾಗಿ ಎಚ್.ಎಂ.ಹರೀಶ, ಖಜಾಂಚಿಯಾಗಿ ಕೆ.ಎಚ್.ವಿನೋದ್ ನೇಮಕಗೊಂಡಿದ್ದು, ಕ್ರೀಡಾ ಕಾರ್ಯದರ್ಶಿಗಳಾಗಿ ಅಶೋಕ(ದೇವೆಂದ್ರ), ಕೆ.ಟಿ.ವಿಜೇಶ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಿ.ಬಿ.ಪ್ರವೀಣ್ ಕುಮಾರ್, ಪಿ.ಕೆ.ದಿನೇಶ್, ಗೌರವಧ್ಯಕ್ಷರಾಗಿ ವಿ.ಟಿ.ಚಂದ್ರಶೇಖರ್(ಚಂದ್ರು), ನಿರ್ದೇಶಕರುಗಳಾಗಿ ಪಿ.ಟಿ.ಪೌಲಸ್, ಪಿ.ಎಸ್.ಅಜಿಕುಮಾರ್, ಕೆ.ಜಿ.ಜಗದೀಶ್, ಕೆ.ಎಸ್.ಮಹಮ್ಮದ್, ಎಂ.ಕೆ.ಕುಂಞಕೃಷ್ಣ, ಕಿಟ್ಟಣ್ಣ ರೈ ಆಯ್ಕೆಯಾಗಿದ್ದಾರೆ.

Read More

ನಾಪೋಕ್ಲು ಡಿ.27 : ಯವಕಪಾಡಿ ಗ್ರಾಮದ ನಿವಾಸಿ ಆದಿವಾಸಿ, ಹೋರಾಟಗಾರ ಕುಡಿಯರ ಮುತ್ತಪ್ಪ ಅವರು ರಾಜ್ಯಮಟ್ಟದ ಕೊರವಂಜಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಡ್ಯ ಜಿಲ್ಲಾ ಕುಳುವ ಸಮಾಜ ಹಾಗೂ ಡ್ರೀಮ್ ಫೌಂಡೇಶನ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಡಿ.28 ರಂದು ಮಂಡ್ಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕೊರವಂಜಿ ಸಂಸ್ಕೃತಿ ಉತ್ಸವದಲ್ಲಿ ಮುತ್ತಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ತಿಳಿಸಿದೆ. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಡಿ.27 : ಹೊದ್ದೂರು ಮತ್ತು ಹೊಸ್ಕೇರಿ ಗ್ರಾಮ ಪಂಚಾಯತಿ ಪಿಡಿಒ ಎ.ಎ.ಅಬ್ದುಲ್ಲ ಅವರಿಗೆ ಅತ್ಯುತ್ತಮ ಪಿಡಿಒ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಬೆಂಗಳೂರು ವತಿಯಿಂದ ಕರ್ನಾಟಕ ಪಂಚಾಯತ್ ರಾಜ್ ಹರಿಕಾರ ಅಬ್ದುಲ್ ನಜೀರ್ ಸಾಬ್ ಜನ್ಮ ದಿನದ ಅಂಗವಾಗಿ ನಜೀರ್ ಸಾಬರ ಹುಟ್ಟೂರು ಗುಂಡ್ಲುಪೇಟೆಯಲ್ಲಿ ನಡೆದ ಪಂಚಾಯತ್ ಸಬಲೀಕರಣ ದಿನಾಚರಣೆ ಸಮಾರಂಭದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ ನಾರಾಯಣಸ್ವಾಮಿ, ಮಾಜಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಡಿ.ಆರ್.ಪಾಟೀಲ್, ವೆಂಕಟರಾವ್ ವೈ ಘೋರ್ಪಡೆ, ಕಾಡ ಶೆಟ್ಟಹಳ್ಳಿ ಸತೀಶ್, ಗಣೇಶ್ ಪ್ರಸಾದ್, ಗುಂಡ್ಲುಪೇಟೆ ಶಾಸಕರು, ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪಿಡಿಓ ಗಳಿಗೆ ಕರ್ನಾಟಕ ಪಂಚಾಯತ್ ಪರಿಷತ್ ಡಾ. ಚಿಕ್ಕಕೋಮಾರಿ ಗೌಡ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಸ್ತುತ ಮಡಿಕೇರಿ ತಾಲ್ಲೂಕಿನ ಹೊದ್ದೂರು ಮತ್ತು ಹೊಸ್ಕೇರಿ ಗ್ರಾ.ಪಂ ಪಿಡಿಒ ಆಗಿರುವ ಎ.ಎ.ಅಬ್ದುಲ್ಲ ಅವರು ಈ ಹಿಂದೆ 2010-2019 ರವರಿಗೆ…

Read More