ಮಡಿಕೇರಿ ಜ.23 NEWS DESK : ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ವಿರಾಜಪೇಟೆ ಪಟ್ಟಣದಲ್ಲಿ ಅಳವಡಿಸಿದ್ದ ಕೇಸರಿ ತೋರಣ ಮತ್ತು ಫ್ಲೆಕ್ಸ್ಗಳನ್ನು ತೆರವು ಮಾಡುವಂತೆ ಪುರಸಭೆಯ ಮುಖ್ಯಾಧಿಕಾರಿಗಳು ನೋಟೀಸು ನೀಡಿದ್ದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಮಂಗಳವಾರ ಪುರಸಭೆ ಕಛೇರಿ ಎದುರು ಪ್ರತಿಭಟನೆ ನಡೆಸಿದವು. ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪುರಸಭೆ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೋಟೀಸ್ ವಾಪಾಸ್ಸು ಪಡೆಯುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ವಿರಾಜಪೇಟೆಯ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ತೋರಣ ತೆರವು ಮಾಡುವಂತೆ ನೋಟೀಸ್ ನೀಡಿರುವುದು ಖಂಡನೀಯ. ಕಾಂಗ್ರೆಸ್ ಪಕ್ಷದ ನಾಯಕರ ಬೃಹತ್ ಕಟ್ ಔಟ್ ಅಳವಡಿಸಿದಲ್ಲಿ ಯಾವುದೇ ತೊಂದರೆ ಇಲ್ಲ, ಶ್ರೀರಾಮಚಂದ್ರನ ಚಿತ್ರ ಮತ್ತು ಕೇಸರಿ ಕಂಡಲ್ಲಿ ತೆರುವು ಮಾಡುವಂತೆ ಹೇಳುವುದು ರಾಜಕೀಯ ಕುತಂತ್ರ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಟನೆಯಲ್ಲಿ ಜಿ.ಪಂ ಮಾಜಿ ಸದಸ್ಯರಾದ ಶಶಿ…
ಲೇಖಕ: admin
ಮಡಿಕೇರಿ ಜ.24 NEWS DESK : ಜಿಲ್ಲಾಡಳಿತ ವತಿಯಿಂದ ಜನವರಿ, 26 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜ.23 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜ.26 ರಿಂದ 28 ರವರೆಗೆ ನಗರದ ರಾಜಾಸೀಟ್ ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ `ಫಲಪುಷ್ಪ ಪ್ರದರ್ಶನ’ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜ.26 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ…
ಮಡಿಕೇರಿ ಜ.23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಜನವರಿ, 25 ರಂದು ಬೆಳಗ್ಗೆ 10 ಗಂಟೆಗೆ ವಿರಾಜಪೇಟೆ ತಾಲ್ಲೂಕಿನ ಕೂರ್ಗ್ ಗಾಲ್ಫ್ ಲಿಂಕ್ಸ್ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಬಳಿಕ ಬೆಳಗ್ಗೆ 10.20 ಗಂಟೆಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಾರ್ವಜನಿಕ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಕಾರ್ಯದರ್ಶಿ ಕೆ.ಚಿರಂಜೀವಿ ತಿಳಿಸಿದ್ದಾರೆ.
ಮಡಿಕೇರಿ ಜ.23 : ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ, ಬಿರುನಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಬಿರುನಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು , ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ, ಮೂಗು, ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವೈದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವೈದ್ಯರು ವೈದ್ಯಕೀಯ ಸೇವೆಯನ್ನು ನೀಡಿದರು. ಶಿಬಿರದಲ್ಲಿ ಸುಮಾರು 160 ಕ್ಕಿಂತ ಹೆಚ್ಚು ಹೊರ ರೋಗಿಗಳ ವೈದ್ಯರ ಭೇಟಿ, 5 ಯುಡಿಐಡಿ ಕಾರ್ಡ್ಗಳು, 50 ಕ್ಕಿಂತ ಹೆಚ್ಚಿನ ಜನರು ಆಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ವ್ಯೆದ್ಯಕೀಯ ಕಾಲೇಜಿಗೆ 25 ರೋಗಿಗಳನ್ನು ಬರಲು ತಿಳಿಸಲಾಗಿದೆ. ಬಿರುನಾಣಿ ಗ್ರಾ.ಪಂ. ಅಧ್ಯಕ್ಷರಾದ ರಾಜೇಶ್ ಕಾರ್ಯಕ್ರಮ…
ಮಡಿಕೇರಿ ಜ.23 NEWS DESK : ಮಡಿಕೇರಿ ಜ.23 : ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಸಂದರ್ಭ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ಬಿಜೆಪಿ ಕರ್ಯಕರ್ತರು ದಾಳಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾ ಕಾಂಗ್ರೆಸ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಮಂಗಳವಾರ ಬೆಳಗ್ಗೆ ಇಂದಿರಾಗಾಂಧಿ ವೃತ್ತದಲ್ಲಿ ಸಮಾವೇಶಗೊಂಡು, ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಇಡೀ ರಾಷ್ಟ್ರವನ್ನು ಸೌಹಾರ್ದತೆಯಿಂದ ಬೆಸೆಯುವ ಚಿಂತನೆಯಡಿ ರಾಹುಲ್ ಗಾಂಧಿಯವರು ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಸಂದರ್ಭ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರಿದ್ದ ವಾಹನವನ್ನು ತಡೆಗಟ್ಟಿ ದಾಳಿ ನಡೆಸುವ ಪ್ರಯತ್ನವನ್ನು ಬಿಜೆಪಿ ಕಾರ್ಯಕರ್ತರು ಮಾಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಉಪಾಧ್ಯಕ್ಷ…
ಮಡಿಕೇರಿ ಜ.23 NEWS DESK : ಮರ್ಕಝುಲ್ ಹಿದಾಯ ಸಂಸ್ಥೆಯಿಂದ ಕೊಟ್ಟಮುಡಿಯಲ್ಲಿ ನಿರ್ಮಿಸಲಾಗಿರುವ 6 ಕೋಟಿ ರೂ. ವೆಚ್ಚದ ‘ಮರ್ಕಝ್ ಹಿದಾಯ ಹಲೀಮ ಅಲ್ಕಿಂದಿ’ ಪ್ರಥಮ ದರ್ಜೆ ಕಾಲೇಜು ಕಟ್ಟಡ ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ಉದ್ಘಾಟನಾ ಸಮಾರಂಭ ಜ.25 ರಂದು ನಡೆಯಲಿದೆ ಎಂದು ಸಂಸ್ಥೆಯ ನಿರ್ದೇಶಕರಾದ ಎಂ.ಎ.ಮಹಮ್ಮದ್ ಹಾಜಿ ಕುಂಜಿಲ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 12 ಗಂಟೆಗೆ ಭಾರತದ ಮುಸಲ್ಮಾನ ಬಾಂಧವರ ಆಧ್ಯಾತ್ಮಿಕ ನಾಯಕರು, ಗ್ರಾಂಡ್ ಮುಫ್ತಿಗಳೂ ಆದ ಶೇಕ್ ಅಬೂಬಕರ್ ಅಹಮ್ಮದ್ (ಎ.ಪಿ.ಉಸ್ತಾದ್)ರವರ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಥಮ ದರ್ಜೆ ಕಾಲೇಜನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದರು. ಪ್ರಥಮ ದರ್ಜೆ ಕಾಲೇಜಿನ ಹೆಣ್ಣು ಮಕ್ಕಳ ವಸತಿ ಗೃಹ ‘ಪರ್ಲ್ ಪೆವಿಲಿಯನ್’ನ್ನು ವಿಧಾನ ಸಭೆಯ ಅಧ್ಯಕ್ಷರಾದ ಯು.ಟಿ. ಖಾದರ್ ಉದ್ಘಾಟನೆ ಮಾಡಲಿದ್ದಾರೆ.ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜ್, ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಯುವಜನ ಮತ್ತು ಕ್ರೀಡಾ ಹಾಗೂ ಪರಿಶಿಷ್ಟ ಬುಡಕಟ್ಟು ಪಂಗಡಗಳ…
ಮಡಿಕೇರಿ ಜ.23 NEWS DESK : ರಾಜ್ಯದ ಗಡಿ ಭಾಗಗಳಲ್ಲಿ ಕನ್ನಡ ಭಾಷಾ ಸಂಸ್ಕøತಿಗೆ ಹೆಚ್ಚಿನ ಒತ್ತು ನೀಡುವ ಚಿಂತನೆಯಡಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಮತ್ತು ಮಡಿಕೇರಿ ತಾಲ್ಲೂಕು ಕಸಾಪ, ಭಾಗಮಂಡಲ ಹೋಬಳಿ ಕಸಾಪ ಮತ್ತು ಗ್ರಾಮ ಪಂಚಾಯ್ತಿಗಳ ಸಹಯೋಗದೊಂದಿಗೆ ಕರಿಕೆಯಲ್ಲಿ ಜ.27 ರಂದು ‘ಗಡಿ ಉತ್ಸವ’ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಉತ್ಸವದ ವಿವರಗಳನ್ನು ನೀಡಿ, ಕರಿಕೆಯ ಎಳ್ಳುಕೊಚ್ಚಿಯ ಬೇಕಲ್ ಉಗ್ಗಪ್ಪ ನಗರದಲ್ಲಿ ಅಂದು ಬೆಳಗ್ಗೆ 8.30 ಕ್ಕೆ ಕರಿಕೆ ಗ್ರಾಪಂ ಅಧ್ಯಕ್ಷ ಎನ್.ಬಾಲಚಂದ್ರ ನಾಯರ್ ರಾಷ್ಟ್ರ ಧ್ವಜಾರೋಹಣ ಮತ್ತು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಗಡಿ ಉತ್ಸವಕ್ಕೆ ಚಾಲನೆ ದೊರಕಲಿದೆ. ಬಳಿಕ ಗ್ರಾಮದ ಶ್ರೀಕೆ.ಎನ್.ಎನ್.ಎಂ. ಶಾಲೆಯಿಂದ ಎಳ್ಳುಕೊಚ್ಚಿಯವರೆಗೆ ಜಾನಪದ ಕಲಾ ತಂಡಗಳೊಂದಿಗೆ ವೈಭವದ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆಯೆಂದು ತಿಳಿಸಿದರು. ಉದ್ಘಾಟನೆ- ಗಡಿ ಉತ್ಸವದ ಸಮಾರಂಭವನ್ನು ಬೆಳಗ್ಗೆ 10.30 ಗಂಟೆಗೆ…
ಮಡಿಕೇರಿ ಜ.23 NEWS DESK : ಹುಟ್ಟಿನಿಂದಲೂ ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯವನ್ನು ಮೈಗೂಡಿಸಿಕೊಂಡು, ಬದುಕಿನ್ನುದ್ದಕ್ಕೂ ಉಳಿಸಿ, ಬೆಳೆಸಿ ಮುನ್ನಡೆಸುತ್ತಿರುವ ಐತಿಹಾಸಿಕ ಹಿನ್ನೆಲೆಯುಳ್ಳ 21 ಮೂಲ ನಿವಾಸಿ ಜನಾಂಗದವರ ಕೊಡವ ಭಾಷಿಕ ಸಮುದಾಯಗಳ ಕೂಟದ 2024-27ನೇ ಸಾಲಿನ ಅಧ್ಯಕ್ಷರಾಗಿ ಡಾ.ಮೇಚೀರ ಸುಭಾಷ್ ನಾಣಯ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೂಡಂಡ ಸಾಬ ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಗಣಪತಿ ಆರ್ಕೇಡ್ ಕಟ್ಟಡದ ಸಭಾಂಗಣದಲ್ಲಿ ನಡೆದ ಕೂಟದ ಮಹಾಸಭೆಯಲ್ಲಿ 21 ಜನಾಂಗಗಳ ಸದಸ್ಯರನ್ನೊಳಗೊಂಡ ಆಡಳಿತ ಮಂಡಳಿಯ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಖಜಾಂಚಿಯಾಗಿ ಪಡಿಞರಂಡ ಪ್ರಭುಕುಮಾರ್, ಉಪಾಧ್ಯಕ್ಷರುಗಳಾಗಿ ತೋರೆರ ಮುದ್ದಯ್ಯ, ಕುಡಿಯರ ಎಂ.ಮುತ್ತಪ್ಪ, ನೆರೆಯಂಡಮ್ಮಂಡ ಉಮಾ ಪ್ರಭು, ಪೊನ್ನೀರ ಗಗನ್, ಸಹ ಕಾರ್ಯದರ್ಶಿಗಳಾಗಿ ಮೊಳ್ಳೆಕುಟ್ಟಂಡ ದಿನು ಬೋಜಪ್ಪ ಹಾಗೂ ಪಟ್ಟಚಾರೀರ ದಿನೇಶ್ ಕಾರ್ಯಪ್ಪ ಆಯ್ಕೆಯಾದರು. ನಿರ್ದೇಶಕರುಗಳಾಗಿ ಕಣಿಯಂಡ ಜೆ.ಪ್ರಕಾಶ್, ಮೇದಪ್ಪಂಡ ಬಿ.ಕಿರಣ್, ತೋರೆರ ಕಾಶಿ ಕಾರ್ಯಪ್ಪ, ಪಾತಂಡ ಸಂತೋಷ್, ಜೋಕಿರ ಜೀವನ್, ಕೋಲೆಯಂಡ ಯು. ಗಿರೀಶ್, ಪೊಟ್ಟಂಡ ಗಣೇಶ್, ಬೀಕಚಂಡ ಬೆಳ್ಯಪ್ಪ, ಕಾಪಾಳ…
ನಾಪೋಕ್ಲು ಜ.23 NEWS DESK : ಕ್ರೀಡಾಕೂಟದ ಆಯೋಜನೆಯಿಂದ ಜನಾಂಗಬಾಂಧವರ ನಡುವೆ ಬಾಂಧವ್ಯ ವೃದ್ಧಿಸಲು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕುಂಜಿಲ ಗ್ರಾಮದ ನಾಲ್ನಾಡು ಶಿವಾಜಿ ಯೂತ್ಸ್ ವತಿಯಿಂದ ನಡೆದ ಪ್ರಥಮ ವರ್ಷದ ಕ್ರಿಕೆಟ್ ಪಂದ್ಯಾವಳಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿವಿಧ ಕ್ರೀಡಾಕೂಟಗಳಲ್ಲಿ ಗೆಲುವು ಸಾಧಿಸಿದವರು ಸಂಭ್ರಮಿಸಿದರೆ ಸೋತವರು ನಿರಾಶರಾಗುವ ಅಗತ್ಯವಿಲ್ಲ. ಇಂತಹ ಕ್ರೀಡಾಕೂಟಗಳಿಂದ ಸೌಹಾರ್ಧದ ವಾತಾವರಣ ಮೂಡುತ್ತದೆ. ಕುಟುಂಬಗಳ ನಡುವೆ ಮೂಡುವಂತೆ ಸಮಾಜದಲ್ಲೂ ಸೌಹಾರ್ಧದ ವಾತಾವರಣ ಏರ್ಪಡುವಂತಾಗಲಿ ಎಂದರು. ಸಮಾರಂಭದಲ್ಲಿ ಶಾಸಕ ಎಸ್. ಪೊನ್ನಣ್ಣ ಹಾಗೂ ಜನಪದ ತಜ್ಞ ಉತ್ತುಕುಟ್ಟಡ ತಿಮ್ಮಯ್ಯ (ಉಪ್ಪಚ್ಚ) ವಾಲಗ ತಜ್ಞ ಕೊಟ್ಟ ಕುಟ್ಟಂಡ ಶಂಭು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಲ್ನಾಡು ಶಿವಾಜಿ ಯೂತ್ ಕ್ಲಬ್ ಅಧ್ಯಕ್ಷ ಉತ್ತುಕುಟ್ಟಡ ನಿತಿನ್ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ…






