ಸೋಮವಾರಪೇಟೆ ಡಿ.4 NEWS DESK : ಆಲೂರುಸಿದ್ದಾಪುರ ಸಮೀಪದ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಡಿ.6 ರಂದು ಲಕ್ಷದೀಪೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಮಠಾಧಿಪತಿಗಳಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದಲ್ಲಿ ಕ್ಷೇತ್ರದ ದೇವರುಗಳಾದ ವೀರಭದ್ರೇಶ್ವರ,ತಪೋವನೇಶ್ವರಿ,ಗುರುಸಿದ್ಧವೀರೇಶ್ವರ ಹಾಗೂ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆಗಳು ನಡೆದಿದ್ದು ಇದೀಗ ಲಕ್ಷದೀಪೋತ್ಸವದ ಅಂಗವಾಗಿ ಪ್ರತಿನಿತ್ಯ ಅರ್ಚನೆ, ಅಭಿಷೇಕಗಳು ನಡೆಯುತ್ತಿವೆ ಎಂದು ತಿಳಿಸಿದ ಅವರು ಡಿ.6 ರ ಶನಿವಾರ ಲಕ್ಷದೀಪೋತ್ಸವದ ಅಂಗವಾಗಿ ವಿಶೇಷ ಪೂಜೆಗಳೊಂದಿಗೆ ರಾತ್ರಿ 8 ಗಂಟೆಗೆ ಸ್ವಾಮಿಯ ಉತ್ಸವ ನಡೆಯಲಿದೆ ಎಂದರು. ಸಂಜೆ 6 ಗಂಟೆಗೆ ಮಠದ ಆವರಣದಲ್ಲಿ ಧಾರ್ಮಿಕ ಸಮಾರಂಭ ನಡೆಯಲಿದೆ, ಕಾರ್ಯಕ್ರಮದಲ್ಲಿ ದೀಪೋತ್ಸವಕ್ಕೆ ಚಾಲನೆ ಹಾಗೂ ಕ್ಷೇತ್ರದ 2026ನೆ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಲಾಗುವುದು, ನಾಡಿನ ಹರಗುರು ಚರ್ಮೂರ್ತಿಗಳ ಸಾನಿಧ್ಯದಲ್ಲಿ,ವಿವಿಧ ಜನಪ್ರತಿನಿಧಿಗಳು,ಸಾಧಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಹಾಂತ ಸ್ವಾಮೀಜಿ ಹೇಳಿದ್ದಾರೆ.
ಲೇಖಕ: admin
ಮಡಿಕೇರಿ ಡಿ.4 NEWS DESK : ದಲಿತ ಸಂಘಟನೆಗಳ ಹಲವು ವರ್ಷಗಳ ಬೇಡಿಕೆಯಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಮಡಿಕೇರಿ ನಗರದ ಸುದರ್ಶನ ವೃತ್ತದ ಸರಕಾರಿ ಜಾಗದಲ್ಲಿ ಪ್ರತಿಮೆಯನ್ನು ಸ್ಥಾಪಿಸಲು ಡಿ.5 ರಂದು ಭೂಮಿಪೂಜೆ ನಡೆಯಲಿದೆ. ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆಯಾಗುತ್ತಿದ್ದು, ನಗರದ ಸುದರ್ಶನ ವೃತ್ತದ ಬಳಿಯ ಸರಕಾರಿ ಜಾಗವನ್ನು ಗುರುತಿಸಲಾಗಿದೆ. ಡಿ.5ರಂದು ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನಡೆಯಲಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಜೆ.ಮೋಹನ್ ಮೌರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕದ ಬಳಿಯ ನಗರಸಭೆಯ ಉದ್ಯಾನವನದಲ್ಲಿ ಶುಕ್ರವಾರ ಬೆಳಿಗ್ಗೆ 8.30 ಗಂಟೆಗೆ ಕೊಡಗು ಜಿಲ್ಲಾಡಳಿತ ಮತ್ತು ಮಡಿಕೇರಿ ನಗರಸಭೆಯ ಸಹಯೋಗದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದರು. ಅಂದಾಜು 2 ರಿಂದ 3…
ಮಡಿಕೇರಿ ಡಿ.4 NEWS DESK : ನಗರದ ಜಯನಗರ ಬಡಾವಣೆಯಲ್ಲಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರ ಉಪಸ್ಥಿತಿಯಲ್ಲಿ ಶಾಲಾ ವಿದ್ಯಾರ್ಥಿಗಳು ಉದ್ಘಾಟಿಸಿದರು. ನಂತರ ಮಾತನಾಡಿದ ಅಧ್ಯಕ್ಷರು ಜಯನಗರ ಬಡಾವಣೆಯ ನಿವಾಸಿಗಳ ಹಲವು ವರ್ಷಗಳ ಬೇಡಿಕೆ ಇದೀಗ ಈಡೇರಿದ್ದು, ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು. ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ 5ಲಕ್ಷ ರೂ.ಗಳಲ್ಲಿ 100 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ. ಈ ರಸ್ತೆಯ ಉಳಿದ ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ. ಮುಂದಿನ ಎರಡು ತಿಂಗಳುಗಳಲ್ಲಿ ನಗರದ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಸ್ಥಳೀಯ ನಿವಾಸಿಗಳು ಮಾತನಾಡಿ ವಾರ್ಡ್ನ ನಗರಸಭಾ ಸದಸ್ಯೆ ಉಷಾ ಕಾವೇರಪ್ಪ ಅವರು ನಮ್ಮ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದಾರೆ. ಉಳಿದಿರುವ ಕಾಮಗಾರಿಗಳನ್ನು ಕೂಡ ಪೂರ್ಣಗೊಳಿಸಿಕೊಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು. ನಗರಸಭಾ ಸದಸ್ಯರಾದ ಉಷಾ ಕಾವೇರಪ್ಪ ಮಾತನಾಡಿ ವಾರ್ಡ್ನಲ್ಲಿ ಮೂಲಭೂತ ಸೌಲಭ್ಯಗಳಿಗೆ…
ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಗಾಂಧಿನಗರದಲ್ಲಿ ನೂತನವಾಗಿ 12 ಲಕ್ಷಗಳಲ್ಲಿ ನಿರ್ಮಾಣಗೊಂಡಿರುವ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಸ್ವತಹ ನೂತನ ರಸ್ತೆಯಲ್ಲಿ ಸ್ಕೂಟರ್ ಚಲಾಯಿಸುವ ಮೂಲಕ ಶಾಸಕರು ಸಾರ್ವಜನಿಕರ ಗಮನ ಸೆಳೆದರು. ಉದ್ಘಾಟನೆಯ ಬಳಿಕ ರಸ್ತೆಯ ಗುಣಮಟ್ಟವನ್ನು ಸ್ವತಹ ಪರೀಕ್ಷಿಸಿದ ಶಾಸಕರು, ಸಾರ್ವಜನಿಕರು ಇದಷ್ಟೇಯ ಸದುಪಯೋಗ ಪಡೆದುಕೊಳ್ಳಲಿ ಎಂದು ಹಾರೈಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೊಳತಂಡ ಬೋಪಯ್ಯ ,ಕರ್ತಮಾಡ ಪೊನ್ನು, ಮಣಿ ,ಕುತಂಡ ರಂಜನ್ ,ವಾಟೆರೀರ ತಿಲಕ್ ,ಕಲಿಯಂಡ ಗಿರೀಶ್ , ಜೇರಿ ಲೋಬೊ , ಪೊನ್ನಣ್ಣ, ಪುರಾಸಭೆ ಮಾಜಿಸದಸ್ಯರು,ಪಕ್ಷದ ಮುಖಂಡರು ,ಕಾರ್ಯಕರ್ತರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ಈ ಹಿಂದೆ ಈ ಭಾಗದ ಜನರ ಮನವಿಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ಮಾನ್ಯ ಶಾಸಕರು ಅನುದಾನವನ್ನು ಒದಗಿಸಿದ್ದರು.
ಮಡಿಕೇರಿ ಡಿ.4 NEWS DESK : ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರಿ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಡಿ.4 NEWS DESK : ಕಾರ್ಮಿಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಕಟ್ಟಡ ಮತ್ತು ಇತರೆ ಕಾರ್ಮಿಕ ಮಂಡಳಿಯ ನೀಡಲಾಗುವ ಕಿಟ್ ಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಇದೇ ಸಂದರ್ಭ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಕಟ್ಟಡ ಇತರೆ ನಿರ್ಮಾಣ ಕಾಮಗಾರ ಕಲ್ಯಾಣ ಮಂಡಳಿ ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಸಂಚಾರಿ ಆರೋಗ್ಯ ಘಟಕವನ್ನು ಸಹ ಉದ್ಘಾಟನೆ ಮಾಡಿದರು. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪುರಸಭೆ ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್ ,ಪಕ್ಷದ ಮುಖಂಡರು ಮಹಾದೇವ, ಸತೀಶ್, ಕುಂಡಚ್ಚಿರ ಮಂಜು ದೇವಯ್ಯ, ಶಬೀರ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಡಿ.4 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆಯ ರಸ್ತೆಗಳನ್ನು ಪರಿಶೀಲಿಸಿದರು. ಪುರಸಭಾ ವ್ಯಾಪ್ತಿಯಲ್ಲಿ ಹಾದು ಹೋಗುವ ರೂ.5.60 ಕೋಟಿಗಳ ಅನುದಾನದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ, ಲೋಕೋಪಯೋಗಿ ರಸ್ತೆಗಳ ವೀಕ್ಷಣೆಯನ್ನು ಸ್ವತಃ ಕಾಲ್ನಡಿಗೆಯಲ್ಲಿ ಮೂಲಕ ತೆರಳಿ, ಅಧಿಕಾರಿಗಳ ತಂಡದೊಂದಿಗೆ ಚರ್ಚಿಸುತ್ತಾ ಅಗತ್ಯ ಇರುವ ಎಲ್ಲಾ ಕಡೆ ಸ್ವತಃ ಮುತುವರ್ಜಿಯಿಂದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಈಗ ಮಳೆ ನಿಂತಿರುವ ಕಾರಣ ತುರ್ತು ಗತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅತಿ ಶೀಘ್ರದಲ್ಲಿ ಈ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರ ನಾಗರಿಕರಿಗೆ ಸುಗಮವಾಗಲಿದೆ ಎಂದು ಹೇಳಿದರು. ಈ ಬಾರಿಯ ತೀವ್ರ ಮಳೆಯಿಂದಾಗಿ ರಸ್ತೆಗಳು ಹಾನಿಯಾಗಿದ್ದು ಸಾರ್ವಜನಿಕರು ಕೆಲಸ ಪೂರ್ಣಗೊಳ್ಳುವ ತನಕ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ನಗರ ಅಧ್ಯಕ್ಷರು ಮಾದಂಡ ತಿಮ್ಮಯ್ಯ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ…
ಕುಶಾಲನಗರ ಡಿ.4 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಣಕಾರ ಡಾ.ಕೆ.ಪಿ.ಪುತ್ತೂರಾಯ ಹೇಳಿದರು. ಪಟ್ಟಣದ ಬೈಚನಹಳ್ಳಿಯಲ್ಲಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿವೇಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ನಿರ್ಣಾಯಕ ಘಟ್ಟವಾಗಿದ್ದು, ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನಶೀಲತೆ ಕೈಗೊಂಡಲ್ಲಿ ಖಂಡಿತ ತಮ್ಮ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು ನಿರಂತರ ಅಧ್ಯಯನದ ಮೂಲಕ ವಿದ್ಯಾರ್ಥಿಗಳು ಪುಸ್ತಕ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು. ಶಿಸ್ತು ಬದ್ದ, ಶೀಲವಂತ ವಿದ್ಯಾರ್ಥಿಗಳೆ ಕಾಲೇಜಿನ ಆಧಾರ ಸ್ತಂಭವಾಗಿದೆ ಎಂದರು. ಸಮಾಜ ಸೇವೆ ಎಂದು ತಿಳಿದು ಶಿಕ್ಷಣ ಸಂಸ್ಥೆ ನಡೆಸಬೇಕು.ಯಾರು ಬೇಕಾದರೂ ವಿದ್ಯಾರ್ಥಿ, ಶಿಕ್ಷಕರು ಆಗಬಹುದು ಆದರೆ.ಎಲ್ಲರೂ ಸಂಸ್ಥಾಪಕರಾಗಲು ಸಾಧ್ಯವಿಲ್ಲ.ಅದಕ್ಕೆ ಯೋಗವು ಬೇಕು, ಯೋಗ್ಯತೆಯು ಬೇಕು ಎಂದರು.ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಿದರೆ ಎಂತಹ ವಿದ್ಯಾರ್ಥಿಯನ್ನು ಸರಿದಾರಿಗೆ ತಂದು ಮಾದರಿ ವಿದ್ಯಾರ್ಥಿಯಾಗಿ ರೂಪಿಸಲು ಸಾಧ್ಯ ಎಂದರು. ಆಂಗ್ಲ ಪ್ರಾಧ್ಯಾಪಕ ಡಾ.ಎಚ್.ಆರ್.ಪಾಂಡುರಂಗ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…
ಮಡಿಕೇರಿ ಡಿ.4 NEWS DESK : ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲಾ ವತಿಯಿಂದ ಅಂತರ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು. ಎಸ್, ಮೊಹಮ್ಮದ್ ಶಿಫಾನ್ ಕೆ.ಸಿ ಭಾಗವಹಿಸಿ ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡು, ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮಾಜಿ ಅಧ್ಯಕ್ಷರಾದ ಮೇಕೇರಿರ ಕೆ. ಕಾರ್ಯಪ್ಪ ಅವರ ಸ್ಮರಣಾರ್ಥಕವಾಗಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಮನ್ ಸುದೇಶ್ ಬಿ.ಎಸ್ ರವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕಿ, ಸಂಯೋಜಕಿ, ಬೋಧಕ ಬೋಧಕೇತರ ವೃಂದ ದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರ್ಕಳ ಡಿ.4 NEWS DESK : ಕರ್ನಾಟಕದ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಭೂಮಿಕೆಯನ್ನು ಶ್ರೀಮಂತಗೊಳಿಸುತ್ತಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಮಹೋತ್ಸವ “ಕ್ರಿಯೇಟಿವ್ ಆವಿರ್ಭವ-2025” ಡಿ.4, 5 ಮತ್ತು 6 ರಂದು ವೈಭವದೊಂದಿಗೆ ನಡೆಯಲಿದೆ. ಮೂರು ದಿನಗಳ ಸಂಭ್ರಮವು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಕ್ಯಾಂಪಸ್ನಲ್ಲಿ ವಿವಿಧ ಸಾಂಸ್ಕೃತಿಕ, ವಿದ್ಯಾಭ್ಯಾಸಿಕ ಮತ್ತು ಮನರಂಜನಾ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಡಿ.4 ರಂದು ಸಂಜೆ 6 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಾಂಸ್ಕೃತಿಕ ಸಂಭ್ರಮದ ಉದ್ಘಾಟನೆ ನಡೆಯಲಿದೆ. ಕರಾವಳಿಯ ಸಾಂಪ್ರದಾಯಿಕ ಕಲಾ ವೈಭವ, ಯಕ್ಷಗಾನ, ನೃತ್ಯ, ನಾಟಕ ಹಾಗೂ ಜಾನಪದ ಕಲಾಪ್ರದರ್ಶನಗಳು ಮುಖ್ಯ ಆಕರ್ಷಣೆಯಾಗಿವೆ. ಡಿ.5 ರಂದು ಮಧ್ಯಾಹ್ನ 2.30 ರಿಂದ ವಿವಿಧ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ, ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ ಹಾಗೂ ವಿಶೇಷ ಅತಿಥಿ ಉಪನ್ಯಾಸಗಳು ನಡೆಯಲಿವೆ. ಡಿ.6 ರಂದು ಬೆಳಗ್ಗೆ 10.30 ಕ್ಕೆ ಸಾಧಕರಿಗೆ ಗೌರವ ಸಮರ್ಪಣೆ, ಸನ್ಮಾನ್ಯ ಅತಿಥಿಗಳಿಂದ ಸಂದೇಶಗಳು…






