ಲೇಖಕ: admin

ಮಡಿಕೇರಿ ಡಿ.27 : ಕುಶಾಲನಗರದ ಸಂತ ಸೆಬಾಸ್ಟಿಯನ್ ಚರ್ಚ್ ನಲ್ಲಿ  ಕ್ರಿಸ್‌ಮಸ್ ಹಬ್ಬವನ್ನು  ಸಂಭ್ರಮದಿಂದ ಆಚರಿಸಲಾಯಿತು. ಯುವಕ ಸಂಘದಿಂದ  ನಿರ್ಮಿಸಲಾದ  ಗೋದಲಿಯಲ್ಲಿ ಧರ್ಮ ಕೇಂದ್ರದ ಗುರುಗಳಾದ ಎಂ.ಮಾರ್ಟಿನ್  ಬಾಲಯೇಸುವಿನ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ,  ಶಾಂತಿಯ ಸಂದೇಶವನ್ನು ಸಾರಿದರು. ಕ್ರಿಸ್ಮಸ್ ಕ್ಯಾರೋಲ್ಸ್ ಮತ್ತು ದಿವ್ಯ ಬಲಿಪೂಜೆಯ ನಂತರ ಗೋದಲಿಯಲ್ಲಿ ಪ್ರತಿಷ್ಠಾಪಿಸಿದ ಬಾಲಯೇಸುವಿಗೆ ಪುಷ್ಪನಮನ ಸಲ್ಲಿಸಿದರು. ಸಾವಿರಾರು ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮೊಂಬತ್ತಿ ಬೆಳಗಿ, ಸಿಹಿ ಹಂಚಿ ಸಂಭ್ರಮಿಸಿದರು.

Read More

ವಿರಾಜಪೇಟೆ ಡಿ.27 : ವಿರಾಜಪೇಟೆಯ ಮಗ್ಗುಲ ಲಿಟಲ್ ಸ್ಕಾಲರ್ರ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಶಾಲೆ ವತಿಯಿಂದ ಜ.6 ರಂದು ಬಿಟ್ಟಂಗಾಲದಲ್ಲಿ ಪ್ರಥಮ ಬಾರಿಗೆ ಸಾಂಸ್ಕೃತಿಕ ಉತ್ಸವ ಮತ್ತು ಪ್ರತಿಭಾನ್ವೇಷಣೆ ಕಾರ್ಯಕ್ರಮ “ಚಿಣ್ಣರ ಕಲಾ ಕೂಟ” ನಡೆಯಲಿದೆ ಎಂದು ಲಿಟಲ್ ಸ್ಕಾಲರ್ರ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಶಾಲೆ ಅಧ್ಯಕ್ಷರಾದ ಪೂಜಾ ಸಜೇಶ್ ಹೇಳಿದರು. ಶಾಲೆಯ ಕಛೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಲಿಟಲ್ ಸ್ಕಾಲರ್ಸ್ ಅಕಾಡೆಮಿ ಆಂಗ್ಲ ಮಾದ್ಯಮ ಶಾಲೆ ಮತ್ತು ಇಂಟೋಪೀಸ್ ಡಾನ್ಸ್ ಸ್ಟುಡಿಯೊ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಜ.6 ರಂದು ಬಿಟ್ಟಂಗಾಲದಲ್ಲಿರುವ ಯಜ್ನ ಟವರ್ ಮುಂಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.ಮಕ್ಕಳಲ್ಲಿ ಭಿನ್ನತೆಯಲ್ಲಿ ಏಕತೆಯನ್ನು ಕಾಣುವ ಉದ್ದೇಶದಿಂದ ಆಂಗ್ಲ ಮಾದ್ಯಮ ಶಾಲೆ ಮತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸಮಾನತೆಯ ಚಿತ್ರಣವನ್ನು ಬಿಂಬಿಸುವುದು, ಅಂಗನವಾಡಿ ಶಾಲೆಯಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಚಿಣ್ಣರ ಕಲರವ-2 ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದರು. ಎಲ್.ಕೆ.ಜಿಯಿಂದ ಯು.ಕೆ.ಜಿವರೆಗೆ ಪಾಶ್ಚಾತ್ಯ ಫ್ಯಾಷನ್ ಶೋ,…

Read More

ವಿರಾಜಪೇಟೆ ಡಿ.27 :  ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎಂದು ಸರ್ವೋದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಖಜಾಂಚಿ ಕೆ.ವಾಸಂತಿ ಹೇಳಿದರು. ವಿರಾಜಪೇಟೆ ಪಂಜಾರುಪೇಟೆಯಲ್ಲಿರುವ ಸರ್ವೋದಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಬಿಳಿ ಮಗ್ಗ ಸಮಾಜ ದಕ್ಷಿಣ ಕೊಡಗು’ ಇದರ ನಾಲ್ಕನೇ ವರ್ಷದ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,   ಹೆಣ್ಣು ಮಕ್ಕಳು ಸುಶಿಕ್ಷಿತರಾಗಬೇಕು. ಹೆಣ್ಣೊಂದು ಕಲಿತರೆ ಶಾಲೆಯೋಂದು ತೆರೆದಂತೆ ಪ್ರತಿಯೋಂದು ಹೆಣ್ಣು ಮಗು ವಿದ್ಯಾವಂತರಾಗಿ ಉನ್ನತ ಹುದ್ದೆಗೇರುವ ಮೂಲಕ ತಮ್ಮ ಬದುಕನ್ನು ರೂಪಿಸಿಕೊಳ್ಳುವಂತಾಗಬೇಕು. ಈ ಹಿಂದೆ ಹಿರಿಯರಾದ ಬಿ.ವಿ.ರಮಣ ಅವರು ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸರ್ವೋದಯ ಎಂಬ ಹೆಸರಿಟ್ಟರು ಈ ಸಂಸ್ಥೆಯಲ್ಲಿ ಸಾವಿರಾರು ಹೆಣ್ಣುಮಕ್ಕಳು ವಿದ್ಯೆ ಕಲಿತು ಉನ್ನತ ಸ್ಥಾನದಲ್ಲಿದ್ದಾರೆ ಎಂದರು.ಗೋಣಿಕೊಪ್ಪಲು ಚೆಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ಬಿ.ಎನ್. ಪ್ರಕಾಶ್ ಮಾತನಾಡಿ, ಬಿಳಿ ಮಗ್ಗ ಸಮಾಜದ ಸದಸ್ಯರು ಸಂಘಟನೆಯನ್ನು ಉತ್ತಮವಾಗಿ ನಡೆಸಲು ಕಾರ್ಯಪ್ರವೃತ್ತರಾಗಬೇಕು. ಸಂಘಟನೆಯ ಮೂಲಕ ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ಮುಂದಿನ ಪೀಳಿಗೆಗೆ…

Read More

ವಿರಾಜಪೇಟೆ ಡಿ.27 : ಪಟ್ಟಣದಲ್ಲಿರುವ ಕೊಡಗು ಬಾಲವಲೀಕಾರ್ ಉತ್ತಮ ಜೀವನ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿಯ ಒಟ್ಟು 15 ನಿರ್ದೇಶಕರ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಡಿ.27 (ಇಂದು) ನಾಮಪತ್ರ ಸಲ್ಲಿಕೆ ದಿನ ಆರಂಭವಾಗಿದ್ದು, ಡಿ. 30 ಸಂಜೆ 3 ಘಂಟೆವರೆಗೆ ನಾಮಪತ್ರ ಸಲ್ಲಿಸಬಹುದು. ಡಿ.31ರಂದು ನಾಮಪತ್ರ ಪರಿಶೀಲನೆ, ಜ.1 ಅಪರಾಹ್ನ 3 ಘಂಟೆಯ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಜ.7 ರಂದು ವಿರಾಜಪೇಟೆಯ ಸಂಘದ ಕಟ್ಟಡದಲ್ಲಿ ಬೆಳಿಗ್ಗೆ 9-4 ರ ತನಕ ಚುನಾವಣೆ ನಡೆಯಲಿದೆ ಎಂದು ಸಂಘದ ರಿಟನಿಂಗ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚುನಾವಣೆಗೆ ಸಂಭಂದಿಸಿದ ಎಲ್ಲಾ ಪ್ರಕ್ರಿಯೆಗಳು ಸಂಘದ ಕಚೇರಿಯಲ್ಲೇ ನಡೆಯಲಿದೆ.

Read More

ಮಡಿಕೇರಿ ಡಿ.27  : ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಮಡಿಕೇರಿ ನಗರಸಭೆ(ಸಿಎಂಸಿ) ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ತಲಾ ಒಂದು ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/FranchiseeRegister ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-49203888/ 8904085030 ಇ-ಮೇಲ್ onehelpdesk@karnataka.gov.in ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ  ತಿಳಿಸಿದ್ದಾರೆ. 

Read More

ಮಡಿಕೇರಿ ಡಿ.26 : ಎಲ್ಲಾ ಕೊಡವ ಸಮುದಾಯದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಡಿ.29 ಮತ್ತು 30 ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ (“ಗ್ಲೋಬಲ್ ಕೊಡವ ಸಮ್ಮಿಟ್”) ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಚೇಂದಂಡ ಶಮ್ಮಿ ಮಾದಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಯಲ್ಲಿ ಮಾತನಾಡಿದ ಅವರು, ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಡಿ.29 ರಂದು ಬೆಳಿಗ್ಗೆ 11.45ಕ್ಕೆ ಗಣ್ಯರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಅಖಿಲ ಕೊಡವ ಸಮಾಜದ ಅಧ್ಯಕ್ಷರು, ದೇಶ ತಕ್ಕರಾದ ಪರದಂಡ ಸುಬ್ರಮಣಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಬುದ್ಧ ಸಿದ್ಧಿ, ರಾಷ್ಟ್ರೀಯ ಪಠ್ಯಕ್ರಮ ಶಿಕ್ಷಣ ಸಚಿವಾಲಯದ ಮುಖ್ಯ ಸಲಹೆಗಾರರಾದ ಡಾ.ಚೇತನ್ ಸಿಂಘೈ, ರಶ್ಮಿ ಸಮಂತ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಡಾ.ಮಂಥರ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದರು. ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ್,…

Read More

ಮಡಿಕೇರಿ ಡಿ.26 :ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆಗೆ ದೊರೆತಿದೆ. ಈ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ‘ಭಿತ್ತಿಪತ್ರ’ ಬಿಡುಗಡೆ ಮಾಡುವ ಮೂಲಕ ‘ಯುವನಿಧಿ’ ಯೋಜನಾ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು 2023 ನೇ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ ಸೇರಿದಂತೆ) ಪ್ರತೀ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತೀ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ದೊರೆಯಲಿದೆ ಎಂದು ಅವರು ತಿಳಿಸಿದರು.’ ಪದವಿ/ ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ…

Read More

ಮಡಿಕೇರಿ ಡಿ.26 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್ 1 ಹೆಬ್ಬಾಲೆ, ಎಫ್ 2 ಕಾವೇರಿ, ಎಫ್13 ಎಸ್‍ಎಲ್‍ಎನ್ ಮತ್ತು ಎಫ್3 ನಂಜರಾಯಪಟ್ಟಣ ಫೀಢರ್‍ನಲ್ಲಿ ವಾಲ್ ಎಂಟ್ರಿ ಬುಶಿಂಗ್ ಮತ್ತು ಪಾಟ್‍ಹೆಡ್ ರಿಲೆಗಳು ಹಾನಿಗೊಂಡಿದ್ದು, ತುರ್ತಾಗಿ ಮರುಜೋಡಣೆ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ದಿನಾಂಕ 27.12.20233ರಂದು ಬೆಳಿಗ್ಗೆ 10:00ರಿಂದ ಸಂಜೆ 5:00 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.ಆದ್ದರಿಂದ ಸಿದ್ದಲಿಂಗಪುರ, ಬಸಿರುಗುಪಗಪ್ಪೆ, ದೊಡ್ಡಳುವಾರ ಅರಶಿಣಗುಪ್ಪೆ, ಬೈರಪ್ಪನಗುಡಿ, ಅಳುವಾರ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

Read More

ಮಡಿಕೇರಿ ಡಿ.19 : ಸರ್ಕಾರ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಆ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಅಳವಡಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಆಡಳಿತ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮವಹಿಸಬೇಕಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿಎಸ್‍ಟಿ ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೋಟೆಲ್‍ನಲ್ಲಿ ನಡೆದ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯವನ್ನೇ ಸ್ಥಾಪಿಸಿ ಸಹಕಾರ ಕ್ಷೇತ್ರದ ಮಹತ್ವವನ್ನು ತಿಳಿದು ಸಹಕಾರ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು…

Read More

ಮಡಿಕೇರಿ ಡಿ.26 : ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಇದೇ ಡಿ.29 ರಂದು ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ನಗರದ ಮಂಗೇರಿರ ಮುತ್ತಣ್ಣ ವೃತ್ತದ ಬಳಿ ಇರುವ ‘ಕುವೆಂಪು ಪ್ರತಿಮೆ’ಗೆ ಮಾಲಾರ್ಪಣೆ ಮಾಡಿ ನಂತರ ಸಭಾ ಕಾರ್ಯಕ್ರಮವು ಗಾಂಧಿ ಭವನದಲ್ಲಿ ನಡೆಯಲಿದ್ದು, ನಿಯಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಕುವೆಂಪು ಅವರು ವಿಶ್ವಮಾನವರಾಗಿದ್ದು,್ಲ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ವಿಶ್ವಮಾನವ ದಿನಾಚರಣೆ ಬೆಳಕು ಚೆಲ್ಲುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಕೊಡಗು ಜಿಲ್ಲಾ…

Read More