ಲೇಖಕ: admin

ಮಡಿಕೇರಿ ಡಿ.26 :  ಮೇಕೇರಿಯ ಸ್ವಾಗತ ಯುವಕ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ  ಆಶ್ರಯದಲ್ಲಿ ಉತ್ತಮ ಆಡಳಿತ ದಿನದ ಪ್ರಯುಕ್ತ ಡಿ.29 ರಂದು  12ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ಭಾರತ ಸರ್ಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲೂಕು ಯುವ ಒಕ್ಕೂಟ, ಮಡಿಕೇರಿ ಜಿಲ್ಲಾ ಆಸ್ಪತ್ರೆ, ಕಾರ್ಮಿಕ ಇಲಾಖೆ, ಮೇಕೇರಿ ಗ್ರಾ.ಪಂ, ಮೇಕೇರಿ ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ವಾಗತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಮೇಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ  ನಡೆಯಲಿರುವ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್  ಪಾಲ್ಗೊಳ್ಳಲಿದ್ದಾರೆ. ಉತ್ತಮ ಆಡಳಿತ ದಿನದ ಪ್ರಯುಕ್ತ 12ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮೇಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಡಿ.29ರ ಶುಕ್ರವಾರ…

Read More

ವಿರಾಜಪೇಟೆ ಡಿ.26 : ಚನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಶಾಲಾ ಪ್ರವಾಸದಲ್ಲಿ ಕೊಡಗಿನ ಪ್ರವಾಸಿ ತಾಣಗಳಗೆ ಭೇಟಿ ನೀಡಿ, ವೀಕ್ಷಿಸಿದರು. ಪಾಲಿಬೆಟ್ಟದ ಕೂರ್ಗ್ ಕ್ಲಿಪ್ ರೆಸಾರ್ಟ್ ಅವರ ಸಹಯೋಗದೊಂದಿಗೆ ವಿದ್ಯಾರ್ಥಿಗಳನ್ನು ಕೊಡಗಿನ ಪ್ರವಾಸಿ ತಾಣಗಳಾದ ಕಾವೇರಿ ನಿಸರ್ಗಧಾಮ ಹಾರಂಗಿ ಅಣೆಕಟ್ಟು ಗೋಲ್ಡನ್ ಟೆಂಪಲ್ ದುಬಾರೆ ಹಾಗೂ ಚಕ್ಲಿಹೊಳೆಗೆ ಒಂದು ದಿನದ ಪ್ರವಾಸ ಕೈಗೊಂಡಿದ್ದರು. ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ, ಸಂಭ್ರಮಿಸಿದರು.

Read More

ಮಡಿಕೇರಿ ಡಿ.26 :  ಮಧ್ಯಪ್ರದೇಶದ ಭೂಪಾಲ್ ನಲ್ಲಿ ಇಂದಿನಿಂದ ಆರಂಭಗೊಂಡಿರುವ ರಾಷ್ಟ್ರೀಯ ಸಬ್ ಜೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯ ಬಾಲಕ ಮತ್ತು ಬಾಲಕಿಯರ ತಂಡಗಳು ಜಯಗಳಿಸಿವೆ. ಬೆಳಿಗ್ಗೆ ನಡೆದ ಬಾಲಕಿಯರ ಪಂದ್ಯಾವಳಿಯಲ್ಲಿ ಕೊಡಗು ವಿದ್ಯಾಲಯ ತಂಡವು ತಮಿಳುನಾಡು ತಂಡವನ್ನು 5—0 ಗೋಲುಗಳ ಅಂತರದಲ್ಲಿ ಮಣಿಸಿದರೆ ಮಧ್ಯಾಹ್ನ ನಡೆದ ಬಾಲಕರ ಪಂದ್ಯದಲ್ಲಿ ಕೊಡಗು ವಿದ್ಯಾಲಯ ತಂಡವು ಉತ್ತರ ಪ್ರದೇಶ ತಂಡವನ್ನು 5—0 ಗೋಲುಗಳಿಂದ ಮಣಿಸಿ ಮುಂದಿನ ಹಂತಕ್ಕೆ ಪ್ರವೇಶಿಸಿದೆ. ಬಾಲಕರ ವಿಭಾಗದಲ್ಲಿ ಒಟ್ಟು 16 ತಂಡಗಳು ಹಾಗೂ ಬಾಲಕಿಯರ ವಿಭಾಗದಲ್ಲಿ ಒಟ್ಟು 15 ತಂಡಗಳು ರಾಪ್ಟ್ರೀಯ ಪ್ರಶಸ್ತಿಗಾಗಿ ಸೆಣಸಲಿವೆ. ಕೊಡಗು ವಿದ್ಯಾಲಯ ತಂಡವು ತರಬೇತುದಾರರಾಗಿರುವ ದಿನೇಶ್ ಹಾಗೂ ಪಾವರ್ತಿ ಅವರುಗಳ ಗರಡಿಯಲ್ಲಿ ಪಳಗಿದ್ದು, ಕೊಡಗು ವಿದ್ಯಾಲಯ ಬಾಲಕರ ಹಾಕಿ ತಂಡದ ನಾಯಕ ಧವನ್ ಉಪನಾಯಕ ಆಯುಷ್ ಶೆಟ್ಟಿ ಹಾಗೂ ಬಾಲಕಿಯರ ತಂಡದ ನಾಯಕಿ ನೀತು ಚೌಧರಿ ಉಪ ನಾಯಕಿ ಪರ್ಲಿನ್ ಪೊನ್ನಮ್ಮ  ತಂಡವನ್ನು ಮುನ್ನಡೆಸುತ್ತಿದ್ದಾರೆ.   

Read More

ಬೆಂಗಳೂರು ಡಿ.26 : ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Read More

ಬೆಂಗಳೂರು ಡಿ.26 : ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್  ಮತ್ತಿತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು.

Read More

ಬೆಂಗಳೂರು ಡಿ.26 :  ರಾಜ್ಯದ ಆಡಳಿರೂಢ ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಓರ್ವ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್…

Read More

ಮಡಿಕೇರಿ ಡಿ.26 : ವ್ಯಕ್ತಿಯೊಬ್ಬರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಬಂಡಡ್ಕ ಗಣಪಯ್ಯ ಎಂಬುವವರ ಪುತ್ರ ಮಹೇಶ್ (36) ಮೃತ ವ್ಯಕ್ತಿ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More

ಕಡಂಗ ಡಿ.26 :  ಫೋರ್ ಸ್ಟಾರ್ ಯುವಕ ಸಂಘದ ವತಿಯಿಂದ ಫೆ.10 ಮತ್ತು 11 ರಂದು  ಎಡಪಾಲ ಪ್ರೀಮಿಯರ್ ಕ್ರಿಕೆಟ್ ಲೀಗ್  10ನೇ ಆವೃತಿಯ ಕ್ರಿಕೆಟ್ ಪಂದ್ಯಾವಳಿಯುಎಡಪಾಲ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಇ ಪಿ ಎಲ್ ವ್ಯವಸ್ಥಾಪಕ ಹನೀಫ ಎರಟೆಂಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ಪಂದ್ಯಾವಳಿಯನ್ನು  ಉಸ್ಮಾನ್ ರಾಶಿದ್ ಶಂಸುದ್ದೀನ್ ನಜ್ಹೀರ್ ನವಾಜ್ಹ್  ನಡೆಸಿಕೊಡಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯ  ವ್ಯಕ್ತಿಗಳನ್ನು ಸನ್ಮಾನಿಸಿ, ಗೌರವಿಸಲಾಗುವುದೆಂದರು. ಸುದ್ದಿಗೋಷ್ಠಿಯಲ್ಲಿ ಇ ಪಿ ಎಲ್  ಪ್ರಮುಖರಾದ  ಅಬ್ದುಲ್ಲ, ಶೂಕೂರ್, ಸಿಯಬ್, ಉಸ್ಮಾನ್  ಉಪಸ್ಥಿತರಿದ್ದರು. ವರದಿ : ನೌಫಲ್ ಕಡಂಗ  

Read More

ನಾಪೋಕ್ಲು ಡಿ.26 : ಬಲ್ಲಮಾವಟಿ ಗ್ರಾ.ಪಂ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನೇತಾಜಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟ ಹಾಗೂ ಅಂತರ ಗ್ರಾಮ ಹಾಕಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ನೆಲಜಿ–ಎ ತಂಡದ ವಿರುದ್ಧ ಆಟವಾಡಿದ ಬಲ್ಲಮಾವಟಿ ತಂಡವು 1-0 ಅಂತರದಿಂದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪೇರೂರು-ಎ ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹಾಕಿ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಕಾಫಿ ಬೆಳೆಗಾರ ಮೂವೇರ ನಾಣಪ್ಪ ನೀಡಿದ ರೋಲಿಂಗ್ ಟ್ರೋಫಿ ಹಾಗೂ ಅಪ್ಪಚೆಟ್ಟೋಳಂಡ ಕುಟುಂಬ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ನೆಲಜಿ-ಎ ತಂಡಕ್ಕೆ ಮೂವೇರ ನಾಣಪ್ಪ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ವಿವಿಧ ಗ್ರಾಮಗಳ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ಹಗ್ಗ ಜಗ್ಗಾಟದ ಪಂದ್ಯದ ಅಂತಿಮ ಸ್ಪರ್ಧೆಯಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿಗಳಿಸಿತು. ದೊಡ್ಡಪುಲಿಕೋಟು ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ಇವರಿಗೆ ನೆರವಂಡ…

Read More

ನಾಪೋಕ್ಲು ಡಿ.26 : ಸಂತಮೇರಿ ಮಾತೆಯ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಧರ್ಮ ಗುರು ಜ್ಞಾನಪ್ರಕಾಶ್ ದೇವಾಲಯದಲ್ಲಿ ವಿಶೇಷ ಪೂಜೆ ಪ್ರಾರ್ಥನೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕ್ರಿಸ್ತ ಯೇಸುವಿ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಅವರಂತೆ ಬದುಕಿ ಬಾಳಬೇಕು ಎಂದರು. ಬೇರೆಯವರ ಭಾವನೆ ಅರ್ಥ ಮಾಡಿಕೊಂಡು ಅವರ ಕಷ್ಟಕ್ಕೆ ಸ್ಪಂದಿಸುವಂತಾಗ ಬೇಕೆಂದರು. ಬೇರೆಯವರ ಕಣ್ಣಲ್ಲಿ ಕಣ್ಣೀರು ತರಿಸದೆ ನಾವು ಸುಖವಾಗಿ ಬದುಕಿ ಬೇರೆಯವರು ಸುಖವಾಗಿ ಬದುಕುವಂತೆ ನಾವು ಯೋಚಿಸಿ ಬದುಕುವುದೇ ಕ್ರೈಸ್ತರ ಜೀವನ ಎಂದರು. ಈ ಸಂದರ್ಭ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕರಿಸಿ ಆಕರ್ಷಕ ಗೋದಲ್ಲಿಯನ್ನು ನಿರ್ಮಿಸಲಾಗಿತ್ತು. ಸ್ಪರ್ಧ ವಿಜೇತರು :: ಕಾರ್ಯಕ್ರಮದಲ್ಲಿ ಯೇಸುವಿನ ಜನನದ ಗೋದಲಿ ನಿರ್ಮಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಥಮ ಜಾಲಿ ಶರ್ಲಿ, ದ್ವಿತೀಯ ಸ್ಥಾನ ಕೆ.ಜೆ.ರಾಯ್, ತೃತೀಯ ಅಹಿಲ್ ಜೋಸೆಫ್ ಬಹುಮಾನ ಪಡೆದರು. ಸ್ಪರ್ಧೆಯ ವಿಜೇತರಿಗೆ ಧರ್ಮ ಗುರು ಜ್ಞಾನಪ್ರಕಾಶ್ ಬಹುಮಾನ ವಿತರಿಸಿದರು. ಕ್ರೈಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ…

Read More