ನಾಪೋಕ್ಲು ಡಿ.26 : ಉತ್ತಮ ಶಿಕ್ಷಣದಿಂದ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆಟೊಳಿರ ಪಿ.ಕುಟ್ಟಪ್ಪ ಹೇಳಿದರು. ಕಕ್ಕಬ್ಬೆ ವಿದ್ಯಾ ಸಂಸ್ಥೆಯಲ್ಲಿ ಜರುಗಿದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆ ಇನ್ನಿತರ ಚಟುವಟಿಕೆಗಳಲ್ಲೂ ಹೆಚ್ಚಿನ ಆಸಕ್ತಿ ವಹಿಸಿ ಮುಂದುವರಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಅತಿಥಿಗಳಾಗಿ ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಪೊಂಗೇರ ಶಿಲ್ಪ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದರು. ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಪಯಡಿ ಹಂಸ ಬಾತ್ಮಿದಾರರಾದ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಪರದಂಡ ಸದಾ ನಾಣಯ್ಯ, ಚೋಯಮಾಡ0ಡ ನಾಣಯ್ಯ, ಅಂಜಪರವಂಡ ಎ.ಕುಶಾಲಪ್ಪ ಇನ್ನಿತರರು ಹಾಜರಿದ್ದರು. ಗಣ್ಯರು ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ನಡೆದ ಸಾಮೂಹಿಕ ಅಂಗಸಾಧನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡಿ.ಅನಿಲ್ ರಾಜ್ ಶಾಲಾ ವರದಿ ವಾಚಿಸಿದರು. ಪ್ರಾಥಮಿಕ ಶಾಲಾ ವಿಭಾಗದ ವರದಿಯನ್ನು ಶಿಕ್ಷಕಿ ಕೆ.ಬಿ.ಲೀಲಾವತಿ…
ಲೇಖಕ: admin
ಬೆಂಗಳೂರು ಡಿ.26: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಮೇಲ್ kar-temperance@gmail.com ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ॥ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.
ಮಡಿಕೇರಿ ಡಿ.26 : ಮೂಲತಃ ಮೇಕೇರಿ ಗ್ರಾಮದ ನಿವಾಸಿಗಳು, ಪ್ರಸ್ತುತ ಪೋಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ರಕ್ತದಾನಿ ಬಿ.ಯಂ.ರಾಮಪ್ಪ ಅವರು ಇದೇ ಡಿ.29 ರಂದು ದಾಖಲೆಯ 50ನೇ ಬಾರಿಗೆ ರಕ್ತದಾನ ಮಾಡಲಿದ್ದಾರೆ. ಮೇಕೇರಿಯ ಶ್ರೀ ಸ್ವಾಗತ ಯುವಕ ಸಂಘದ ನೇತೃತ್ವದಲ್ಲಿ ನಡೆಯಲಿರುವ 12 ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಅವರು ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಲಿದ್ದಾರೆ. ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಇದೇ ಕಾರ್ಯಕ್ರಮದಲ್ಲಿ ರಾಮಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ. ಕೊಡಗು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಪುತ್ತೂರು ಡಿ.26 : ಜಾವೆಲಿನ್ ಥ್ರೋ ವಿಭಾಗದಲ್ಲಿ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕ್ರೀಡಾಕೂಟಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕೀರ್ತಿರಾಜ್.ಕೆ.ಎಸ್ ಆಯ್ಕೆಯಾಗಿದ್ದಾರೆ. ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಡಿಸೆಂಬರ್ 29 ರಿಂದ ಜನವರಿ 1ರವರೆಗೆ ತಮಿಳ್ನಾಡು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಶ್ವವಿದ್ಯಾನಿಲಯ ಚೆನ್ನೈ ಇದರ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಡಿ.26 : ರೋಟರಿ ಸಂಸ್ಥೆಯ ಶಿಕ್ಷಕರಾದ ಕೃಷ್ಣ ಪ್ರಸಾದ್ ಅವರು ಪ್ರತಿಲಿಪಿ ಅಂತರ್ಜಾಲ ಸಾಹಿತ್ಯ ವೇದಿಕೆಯ ಬರಹಗಾರರು ಗಳಿಸಬಹುದಾದ ಪ್ರತಿಷ್ಠಿತ ಗೌರವ ಗೋಲ್ಡನ್ ಬ್ಯಾಡ್ಜ್ ಪ್ರಮಾಣ ಪತ್ರಕ್ಕೆ ಪಾತ್ರರಾಗಿದ್ದಾರೆ.ಅಂತರ್ಜಾಲದ ಈ ಆ್ಯಪ್ ನಲ್ಲಿ ಇವರು ನಾಲ್ಕು ಸಾವಿರಕ್ಕೂ ಅಧಿಕ ಓದುಗರನ್ನು ಸಂಪಾದಿಸಿದ್ದು, ಸಾಹಿತ್ಯದ ವಿವಿಧ ಪ್ರಕಾರಗಳಾದ ಕಥೆ, ಲೇಖನ, ಧಾರವಾಹಿ, ಅನುಭವ ಬರಹ, ಹಾಸ್ಯ ಒಟ್ಟಾರೆಯಾಗಿ 126 ಬರಹಗಳನ್ನು ಬರೆದಿದ್ದಾರೆ. ಹಾಲುಗುಂದ ಗ್ರಾಮದವರಾಗಿದ್ದು, ಶಿಕ್ಷಕ ವೃತ್ತಿಯಲ್ಲಿ ಯಶಸ್ವಿಯಾಗಿ 14 ವರ್ಷದ ಅನುಭವವೂ ಇವರಿಗಿದೆ.
ಮಡಿಕೇರಿ, ಡಿ.26 : ಗೋಣಿಕೊಪ್ಪ ಕಾಪ್ಸ್ ಶಾಲೆಯಲ್ಲಿ ಕಾಶ್ಮೀರಿ ಯುವ ವಿನಿಮಯ’ ಕಾರ್ಯಕ್ರಮದ ಅಂಗವಾಗಿ ಜಮ್ಮು-ಕಾಶ್ಮೀರದ ಪುಲ್ವಾಮ, ಬದಗಾಂ, ಬಾರಮುಲ್ಲ, ಕುಪ್ಪಾರ, ಅನಂತ್ನಾಗ್, ಶ್ರೀನಗರ ಜಿಲ್ಲೆಗಳ ಯುವಕ, ಯುವತಿಯರು ಕೊಡಗಿಗೆ ಆಗಮಿಸಿದ್ದಾರೆ. ಭಾರತ ಸರ್ಕಾರ ಗೃಹ ಮಂತ್ರಾಲಯ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ಜಿಲ್ಲಾ ಯುವ ಒಕ್ಕೂಟ, ಕೂರ್ಗ್ ಪಬ್ಲಿಕ್ ಶಾಲೆ ಮತ್ತು ಪ್ರೀ ಯೂನಿವರ್ಸಿಟಿ ಕಾಲೇಜು ಸಹಯೋಗದಲ್ಲಿ ಇಂದು ಸಂಜೆ (ಡಿ.26) ಗೋಣಿಕೊಪ್ಪ ಕಾಪ್ಸ್ ಶಾಲೆಯಲ್ಲಿ ಕಾಶ್ಮೀರಿ ಯುವ ವಿನಿಮಯ ‘ಕಾರ್ಯಕ್ರಮ ನಡೆಯಲಿದೆ. ಇಲ್ಲಿಯ ಆಚಾರ-ವಿಚಾರ, ಕಲೆ, ಸಂಸ್ಕೃತಿ, ಉಡುಗೆ- ತೊಡುಗೆ, ಆಹಾರ ಪದ್ಧತಿ, ಜೀವನ ಶೈಲಿ, ಸರಕಾರದ ಯೋಜನೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಡುವ ಉದ್ದೇಶ ಇದೆ ಎಂದು ನೆಹರು ಯುವ ಕೇಂದ್ರ ದಕ್ಷಿಣ ಭಾರತ ವಲಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದ್ದಾರೆ. ಇಂದಿನಿಂದ ಡಿ.31ರ ವರೆಗೆ ನಡೆಯಲಿರುವ ಕಾರ್ಯಕ್ರಮವನ್ನು ಇಂದು ಸಂಜೆ 5 ಗಂಟೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ…
ಮಡಿಕೇರಿ ಡಿ.26 : ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷ ವಿರಾಜಪೇಟೆಯ ದುದ್ದಿಯಂಡ ಹೆಚ್. ಸೂಫಿ ಹಾಜಿ, ಇದರಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದಲ್ಲದೆ ಜಿಲ್ಲೆಯಿಂದ ಹೆಚ್ಚಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಬಹುದೆಂದು ಎಂದು ಅಭಿಪ್ರಾಯಪಟ್ಟಿದ್ದಾರೆ. ನಲ್ವತ್ತೋಕ್ಲಿನ ಚೋಕ್ ಸಿಟಿ ಫುಟ್ಬಾಲ್ ಕ್ಲಬ್ ಆಶಯದಲ್ಲಿ ಸ್ಥಳೀಯ ಮೊಹಿದೀನ್ ಜುಮ್ಮಾ ಮಸೀದಿಯ ಆಟದ ಮೈದಾನದಲ್ಲಿ ಕಳೆದ 2 ದಿನಗಳಿಂದ ನಡೆದ ಮೊದಲನೇ ವರ್ಷದ ರಾಜ್ಯಮಟ್ಟದ ಫೈಸ್ ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನಲ್ಲಿ ಮಳೆಗಾಲದ ಮೂರು ತಿಂಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಅವಧಿಯಲ್ಲೂ ಬೇರೆ ಬೇರೆ ರೀತಿಯ ಕ್ರೀಡಾಕೂಟಗಳು ನಿರಂತರವಾಗಿ ಜರುಗುತ್ತಿರುತ್ತವೆ. ಇದರಿಂದಾಗಿ ಕ್ರೀಡಾಕೂಟಗಳನ್ನು ಆಯೋಜಿಸುವ ತಂಡಗಳಿಗೆ ಸಹಜವಾಗಿಯೇ ಆರ್ಥಿಕ…
ಸೋಮವಾರಪೇಟೆ ಡಿ.25 : ಸೋಮವಾರಪೇಟೆ ಸಮೀಪದ ಅಬ್ಬೂರುಕಟ್ಟೆಯ ಸಂತ ಲಾರೆನ್ಸ್ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಸೋಮವಾರ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಭಾನುವಾರ ರಾತ್ರಿ 8ಕ್ಕೆ ಚರ್ಚ್ ಆವರಣದಲ್ಲಿ ಬಾಲ ಎಸುವನ್ನು ಗೋದಾಲಿಯಲ್ಲಿ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಚರ್ಚ್ನಲ್ಲಿ ಗಾಯನ ಆಡಂಬರ ಬಲಿಪೂಜೆ ನಡೆಯಿತು. ಕ್ರೈಸ್ತರೆಲ್ಲರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಫಾದರ್ ಜಾನ್ ಡಿಕೂನ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಎಂ. ಡಿಸಿಲ್ವ ಸೇರಿದಂತೆ ಹಲವರು ಇದ್ದರು.
ಮಡಿಕೇರಿ ಡಿ.25 : ಕ್ರಿಸ್ಮಸ್ ಮುನ್ನ ದಿನ ಭಾನುವಾರ ರಾತ್ರಿ ಸೋಮವಾರಪೇಟೆ ಜಯವೀರಮಾತೆ ಚರ್ಚ್ ನಲ್ಲಿ ಬಾಲಯೇಸುವಿನ ಮೂರ್ತಿಯನ್ನು ಗೋದಾಲಿಯಲ್ಲಿ ಮಲಗಿಸಿ ನಮನ ಸಲ್ಲಿಸಲಾಯಿತು. ನಂತರ ಗಾಯನ ಆಡಂಬರ ಬಲಿಪೂಜೆ ನಡೆಯಿತು. ಕ್ರೈಸ್ತರೆಲ್ಲರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಧರ್ಮಗುರುಗಳಾದ ಎಂ.ರಾಯಪ್ಪ, ಜಾನ್ ಫರ್ನಾಂಡೋ, ಹಾಗೂ ಚರ್ಚ್ನ ಪಾಲನ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸೋಮವಾರಪೇಟೆ ಡಿ.25 : ಸೋಮವಾರಪೇಟೆ ಪಟ್ಟಣದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಂಸದರ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಭಾನುವಾರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹೇಳಿದರು. ಹಲವು ದಶಕಗಳ ಹಿಂದೆ ನಿರ್ಮಾಣವಾಗಿರುವ ಬಸವೇಶ್ವರ ದೇವಾಲಯ ಮತ್ತು ಹಿಂಭಾಗದಲ್ಲಿರುವ ಅನ್ನದಾಸೋಹ ಕೊಠಡಿಗಳ ಅಭಿವೃದ್ಧಿಗೆ ಸಹಕಾರ ನೀಡುವಂತೆ ಸಮಿತಿಯ ಪ್ರಮುಖರು ಮಾಡಿದ ಮನವಿಗೆ ಸಂಸದರು ಸ್ಪಂದಿಸಿದರು. ಈ ಸಂದರ್ಭ ದೇವಾಲಯ ಯಜಮಾನ ಬಿ.ಪಿ. ಶಿವಕುಮಾರ್, ಶೆಟ್ರು ಬಿ.ಆರ್. ಮೃತ್ಯುಂಜಯ, ಕಾರ್ಯದರ್ಶಿ ನಾಗರಾಜು, ಪ್ರಮುಖರಾದ ಕೆ.ಜಿ. ಸುರೇಶ್, ಶಿವರಾಜ್, ಗಿರೀಶ್ ಇದ್ದರು.






