ಸುಂಟಿಕೊಪ್ಪ ಡಿ.25 : ಮಂಜಿಕೆರೆ ಗ್ರಾಮದಲ್ಲಿರುವ ಶ್ರೀ ಆಧಿಶಕ್ತಿ, ಚಾಮುಂಡೇಶ್ವರಿ, ಶ್ರೀ ಪಾಷಣ ಮೂರ್ತಿ ಅಮ್ಮನವರ ದೈವಸ್ಥಾನದಲ್ಲಿ 4ನೇ ವರ್ಷದ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸಂಜೆ ಭಂಡಾರ ಪೂಜೆ, ಕಲ್ಲುರ್ಟಿ ಕಲ್ಕುಡ ದೈವಗಳ ನೇಮ, ಶ್ರೀ ಚಾಮುಂಡೇಶ್ವರಿ ಮತ್ತು ಗುಳಿಗ ದೈವಗಳ ನೇಮ, ಶ್ರೀ ಭಧ್ರಕಾಳೇಶ್ವರಿ ದೈವದ ನೇಮ ನಡೆಯಿತು. ಮರುದಿನ ಬೆಳಿಗ್ಗೆ ಕೊರಗ ಮತ್ತು ತನಿಯಾ ದೈವಗಳ ಕೋಲ ನೇಮೋತ್ಸವ ಜರುಗಿತು. ಸುತ್ತಮುತ್ತಲ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಾಲಯದ ವತಿಯಿಂದ ಅನ್ನದಾನ ನಡೆಯಿತು.
ಲೇಖಕ: admin
ವಿರಾಜಪೇಟೆ ಡಿ.25 : ವೇದಿಕೆಯ ಆರಂಭ ಉತ್ತಮವಾಗಿದೆ ಆದರೆ ಅದನ್ನು ಮುಂದೆ ರಾಜಕೀಯ ಬೆರೆಯದಂತೆ ನೋಡಿಕೊಂಡು ಕಲಾವಿದೆಯರ ಬೆಳವಣಿಗೆಯ ವೇದಿಕೆಯಾಗಿ ಬೆಳೆಸಬೇಕು ಎಂದು ವಿರಾಜಪೇಟೆ ಪುರಸಭೆ ಸದಸ್ಯೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ವಿರಾಜಪೇಟೆ ಪುರಭವನದಲ್ಲಿ ದಕ್ಷಿಣ ಕೊಡಗು ಲೇಖಕಿಯರ ಮತ್ತು ಕಲಾವಿದರ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿತ್ಯ ಬದುಕಿನಲ್ಲಿ ಹೆಣ್ಣುಮಕ್ಕಳಿಗೆ ಪುರುಷರಿಗಿಂತ ಹೆಚ್ಚು ಜವಾಬ್ದಾರಿ ಹಾಗೂ ಕೆಲಸದ ಒತ್ತಡವಿರುತ್ತದೆ. ಆಕೆ ಸಂಸಾರಸ್ಥೆಯಾದರೆ ಸಂಸಾರದ ಹೊಣೆಗಾರಿಕೆ ನಿಭಾಯಿಸಬೇಕು. ಜೊತೆಗೆ ವೃತ್ತಿಪರತೆಯಾದರೆ ಅದನ್ನು ನಿಭಾಯಿಸಬೇಕು. ಆದರೆ ಈ ನಡುವೆ ತನಗೆ ಸಿಗುವ ಉತ್ತಮ ಅವಕಾಶಗಳನ್ನು ಬಳಸಿಕೊಂಡು ಸಮಾಜಮುಖಿಯಾಗಿಯೂ ಕೆಲಸ ಮಾಡಬೇಕಿದೆ. ಎಂದರು. ಉತ್ತಮ ಸಾಮಾಜಿಕ ಚಟುವಟಿಕೆ ಸಾಹಿತ್ಯ ಮುಂತಾದವುಗಳಲ್ಲಿ ತೊಡಗಿಸಿಕೊಂಡು ಒಳ್ಳೆಯ ಹೆಸರುಗಳಿಸುವುದರೊಂದಿಗೆ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ವೇದಿಕೆಯ ಸ್ಥಾಪಕ ಅಧ್ಯಕ್ಷೆ ಪುಷ್ಪಲತ ಶಿವಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಇದು ನಮ್ಮ ಬಹುದಿನಗಳ ಕನಸಾಗಿದ್ದು, ಗ್ರಾಮೀಣ ಪ್ರತಿಭೆಗಳನ್ನು ಹೊರತಂದು ಲೇಖಕಿಯರನ್ನು ಸಂಘಟಿಸಲು ಈ ವೇದಿಕೆಯನ್ನು ರಚಿಸಲಾಗಿದೆ ಎಂದರು. ಗ್ರಾಮೀಣ ಮಹಿಳೆಯರು…
ಸುಂಟಿಕೊಪ್ಪ ಡಿ.25 : ಏಸುಕ್ರಿಸ್ತನ ಜನ್ಮದಿನ ಕ್ರಿಸ್ಮಸ್ ಹಬ್ಬವನ್ನು ಸುಂಟಿಕೊಪ್ಪದ ವಿವಿಧೆಡೆ ಸಂಭ್ರಮದಿಂದ ಆಚರಿಸಿದರು. ಸಂತ ಅಂತೋಣಿ ದೇವಾಲಯದಲ್ಲಿ ಪ್ರಭು ಕ್ರಿಸ್ತರ ಜನನದ ಸ್ಥಳವಾದ ಗೋದಾಲಿಯನ್ನು ನಿರ್ಮಿಸಿ ಅದರಲ್ಲಿ ಏಸುಕ್ರಿಸ್ತರನ್ನು ಪ್ರತಿಷ್ಠಾಪಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಕ್ರೈಸ್ತ ಭಾಂದವರು ಅಡಂಬರ ದಿವ್ಯ ಬಲಿಪೂಜೆ ಆರಾಧನೆಯಲ್ಲಿ ಪಾಲ್ಗೊಂಡು ಮುಂಬತ್ತಿಯನ್ನು ಹಚ್ಚಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಂಗಳೂರಿನ ಯೇಸು ರಕ್ಷಕರ ದೇವಾಲಯದ ಧರ್ಮಗುರು ರಾಬಿನ್, ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾ. ಅರುಳ್ಸೇಲ್ವಕುಮಾರ್, ಸಹಾಯಕ ಧರ್ಮಗುರುಗಳಾದ ನವೀನ್ ಗಾಯನ ಬಲಿಪೂಜೆ ಹಾಗೂ ಪ್ರಭೋದನೆಯನ್ನು ನೇರವೇರಿಸಿದರು. ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತ್ರೀಯರು, ಮಕ್ಕಳು, ಯುವಕ, ಯವತಿರು, ಪುರುಷ ಹಾಗೂ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಸೇರಿದ ಕ್ರೈಸ್ತ ಭಾಂದವರು ಒಬ್ಬರಿಗೊಬ್ಬರು ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. 7ನೇ ಹೋಸಕೋಟೆ :: ಸುಂಟಿಕೊಪ್ಪ ವ್ಯಾಪ್ತಿಯ 7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾದ ರೇ.ಫಾ.ಸುನಿಲ್ ದಿವ್ಯ ಬಲಿಪೂಜೆಯನ್ನು ನೆರವೇರಿಸಿದರು. ಸುಂಟಿಕೊಪ್ಪ ಸಿಎಸ್ಐ ಇಮಾನ್ಯುವೇಲ್ ಚರ್ಚ್ ಸಭಾಪಾಲಕರಾದ ಜೋಯೆಲ್ ಸುಹಾಸ್…
ಮಡಿಕೇರಿ ಡಿ.25 : ಭಾಗಮಂಡಲ ಶ್ರೀ ಭಗಂಡೇಶ್ವರ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯಿಂದ ಚೆಟ್ಟಿಮಾನಿಯ ಸಿಂಗತ್ತೂರು ಗ್ರಾಮದಲ್ಲಿ 33 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.27 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೋಡಿ ಕೆ.ಪೊನ್ನಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಕಟ್ಟಡವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶ್ರೀ ಭಗಂಡೇಶ್ವರ ತೋಟಗಾರಿಕ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಕೋಡಿ ಕೆ.ಪೊನ್ನಪ್ಪ ವಹಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಹಾಗೂ ಕೊಡಗು ಜಿಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿ ಎಂ.ಪಿ.ಸುಜಾ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಅತಿಥಿಗಳಾಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ, ಕರ್ನಾಟಕ ರಾಜ್ಯ ತೋಟಗಾರಿಕಾ ಇಲಾಖೆ ನಿರ್ದೇಶಕ ಬಿ.ಎಸ್.ರಮೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ…
ಗೋಣಿಕೊಪ್ಪಲು ಡಿ.25 : ವಿವೇಕಾನಂದ, ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಅವರ ಜೀವನಾಧಾರಿತ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉತ್ತಮ ಬದಲಾವಣೆಯನ್ನು ಕಂಡು ಕೊಳ್ಳಬಹುದು ಎಂದು ಸಾಹಿತಿ ಹಾಗೂ ಪತ್ರಕರ್ತ ಜಗದೀಶ್ ಜೋಡುಬೀಟಿ ಸಲಹೆ ನೀಡಿದರು. ಗೋಣಿಕೊಪ್ಪಲು ಕಾವೇರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿರುವ ಕಾವೇರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರದ 3ನೇ ದಿನದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಒಮ್ಮೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಾತ್ರಕ್ಕೆ ಬದುಕೇ ಮುಗಿದು ಹೋಗುವುದಿಲ್ಲ, ಮತ್ತೆ ಪರೀಕ್ಷೆ ಎದುರಿಸಿ ಉತ್ತೀರ್ಣರಾಗಲು ಅವಕಾಶವಿದೆ. ಸೋತಾಗ ಎದೆಗುಂದದೇ, ಎದ್ದು ನಿಂತು ಸವಾಲುಗಳನ್ನು ಎದುರಿಸಲು ಸಿದ್ದರಾಗಬೇಕು ಎಂದು ಕರೆ ನೀಡಿದರು. ಹೆತ್ತವರು ತಮ್ಮ ಮಕ್ಕಳ ಏಳಿಗೆಗಾಗಿ ತಮ್ಮ ಸರ್ವಸ್ವವನ್ನು ತ್ಯಾಗ ಮಾಡುತ್ತಾರೆ. ಆದ್ದರಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಬದುಕನ್ನು ಹಸನಾಗಿಸಿಕೊಂಡು, ಹೆತ್ತವರ ಕನಸುಗಳನ್ನು ಈಡೇರಿಸಬೇಕು. ಗುರುಹಿರಿಯರಿಗೆ ಗೌರವ ನೀಡುವ ಗುಣವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.…
ವಿರಾಜಪೇಟೆ ಡಿ.25 : ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾದಿ ಪಂದ್ಯಂಡ ಬೆಳ್ಯಪ್ಪ, ಸ್ವಾತಂತ್ರ್ಯ ಹೋರಾಟಗಾರ್ತಿ ಪಂದ್ಯಂಡ ಸೀತಾ ಬೆಳ್ಯಪ್ಪ ಅವರ ಕುರಿತಾದ ಅವರ ಮೊಮ್ಮಗಳು ಬೊಮ್ಮಂಡ ಸವೇರ ಚಂಗಪ್ಪ ಬರೆದಿರುವ SOULFUL SOJOURN A tale of two souls ಪುಸ್ತಕ ಬಿಡುಗಡೆ ಗೊಂಡಿತು. ಸಿದ್ದಾಪುರ ಸ್ವರ್ಣಮಾಲ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಕೊಡಗಿನ ಗಾಂಧಿ ಎಂದೆ ಖ್ಯಾತಿ ಹೊಂದಿರುವ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪಂದ್ಯಂಡ ಬೆಳ್ಯಪ್ಪ, ಹಾಗೂ ಸ್ವಾತಂತ್ರ್ಯ ಹೋರಾಟಗಾರ್ತಿ ಪಂದ್ಯಂಡ ಸೀತಾ ಬೆಳ್ಯಪ್ಪ ಅವರು ಸ್ವಾತಂತ್ರ್ಯ ಇತಿಹಾಸ ಮಾತ್ರವಲ್ಲ ಸಾಮಾಜಿಕ ಕಳಕಳಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲೂ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ ಎಂದರು. ಕೊಡಗಿನ ಸಹಕಾರಿ ಕ್ಷೇತ್ರದಲ್ಲೂ ಅವರ ಸಾಧನೆ ಅಪಾರವಾದದ್ದು. ಶಿಕ್ಷಣ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸ್ಥಾಪನೆಗೆ ನೆಹರು ಅವರ ಕಾಲದಲ್ಲಿ…
ಮಡಿಕೇರಿ ಡಿ.25 : ತಡಿಯಂಡಮೋಳ್ ಬೆಟ್ಟವನ್ನೇರಲು ಆಗಮಿಸಿದ್ದ ಪ್ರವಾಸಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಕ್ಕಬೆಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಹರಿಯಾಣದ ಜತಿನ್ ಕುಮಾರ್ 23 ಎಂಬಾತನೇ ಮೃತಪಟ್ಟ ದುರ್ದೈವಿ. ಬೆಂಗಳೂರಿನಲ್ಲಿ ಕೆಲಸದಲ್ಲಿದ್ದ 6 ಜನರ ಚಾರಣಿಗರ ತಂಡ ಬೆಟ್ಟವನ್ನು ಏರಲು ಕಕ್ಕಬ್ಬೆ ಗೆ ಆಗಮಿಸಿತ್ತು. ಮೂವರು ಯುವಕರು ಮತ್ತು ಮೂವರು ಯುವತಿಯರ ತಂಡ ತಡಿಯಂಡಮೋಳ್ ಶಿಖರದ ತುದಿ ತಲುಪುತ್ತಿದ್ದಂತೆ ಉಸಿರಾಟದ ಸಮಸ್ಯೆಯಿಂದಾಗಿ ಜತಿನ್ ಕುಸಿದು ಬಿದ್ದಿದ್ದು ತಂಡದಲ್ಲಿದ್ದ ವೈದ್ಯರೊಬ್ಬರು ಪ್ರಥಮ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದೆ ಸಾವನಪ್ಪಿದ್ದಾರೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ತಡಿಯಂಡಮೋಳ್ ಶಿಖರದ ತುದಿಯಿಂದ ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಸಿಬ್ಬಂದಿ, ಗ್ರಾ.ಪಂ ಸದಸ್ಯ ಕುಡಿಯರ ಭರತ್, ಉಪ ವಲಯ ಅರಣ್ಯ ಅಧಿಕಾರಿ ಎಂ.ಬಿ.ಸುರೇಶ್, ಗಸ್ತು ಅರಣ್ಯ ಪಾಲಕ ಸೋಮಣ್ಣ ಗೌಡ ಕಠಿಣ ದಾರಿಯಲ್ಲಿ ಮೃತದೇಹವನ್ನು ಹೊತ್ತು ಕೆಳಕ್ಕೆ ತಂದರು. ಮೃತ ದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ. ಪೋಷಕರು ಆಗಮಿಸಿದ ಬಳಿಕ ಮರಣೋತ್ತರ…
ವಿರಾಜಪೇಟೆ ಡಿ, 25 : ವಿರಾಜಪೇಟೆ ಮಲೆತಿರಿಕೆ ಬೆಟ್ಟದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಮಾಹೋತ್ಸವವು ಡಿ.26 ರಿಂದ ಆರಂಭಗೊಂಡು ಜ.1 ರಂದು ಶ್ರೀ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆಯೊಂದಿಗೆ ಕೊನೆಯಾಗಲಿದೆ. ವಿರಾಜಪೇಟೆಯ ಮಲೆತಿರಿಕೆ ಬೆಟ್ಟದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಮಹೋತ್ಸವವು ಡಿ.26 ರಂದು ಸಂಜೆ ಆರಂಭಗೊಳ್ಳಲಿದ್ದು, ಕ್ಷೇತ್ರ ಪಾಲಕ ಗುಳಿಗನ ಪೂಜೆ, ಡಿ.27 ರಂದು ಬೆಳಿಗ್ಗೆ 6.30ಕ್ಕೆ ಧ್ವಜರೋಹಣ ಸಂಜೆ 7 ಗಂಟೆಗೆ ವರದವಿನಾಯಕ ಸೇವಾ ಸಮಿತಿ ಮಲೆತಿರಿಕೆ ಬೆಟ್ಟ ವತಿಯಿಂದ ಮಂಡಲಪೂಜೆ ನೆರವೇಲಿದೆ. ಡಿ.30 ರಂದು ಬೆಳಿಗ್ಗೆ ಮತ್ತು ರಾತ್ರಿ ಶ್ರೀ ಸ್ವಾಮಿಗೆ ವಿಶೇಷ ಪೂಜೆ, ಡಿ.31 ರಂದು ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆಗಳು ನಡೆಯಲಿದೆ. ಜ.1 ರಂದು ಬೆಳಿಗ್ಗೆ ಪ್ರಾತ:ಕಾಲ 5.30ಕ್ಕೆ ಗಣಪತಿ ಹೋಮ, ಲಕ್ಷ್ಮೀ ಪೂಜೆ, ಸರಸ್ವತಿ ಪೂಜೆ, 9 ಗಂಟೆಗೆ ತುಲಭಾರ ಸೇವೆ…
ಮಡಿಕೇರಿ ಡಿ.25 : ಏಸು ಕ್ರಿಸ್ತ ಜನನದ ಸಂಕೇತವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಿದರು. ವಿವಿಧ ಚರ್ಚ್ಗಳಲ್ಲಿ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಏಸು ಧರೆಗಿಳಿದನೆಂದು ಗೋದಲಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯನ್ನು ಮೆರೆದರು. ಮಡಿಕೇರಿಯ ಸಂತ ಮೈಕಲರ ಚರ್ಚ್ನಲ್ಲಿ ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ನಿರ್ದೇಶಕ ಮನೋಜ್ ಇಮೆನ್ಯುವಲ್ ಡಿಸೋಜಾ ಗೋದಲಿ ಬಾಲ ಏಸುವಿನ ಪ್ರತಿಕೃತಿಯನ್ನಿರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧರ್ಮಗುರು ಜಾಜ್ ದೀಪಕ್ ಪೂಜೆ ಸಲ್ಲಿಸಿ, ಏಸುವಿನ ಸಂದೇಶವನ್ನು ಸಾರಿದರು. ವಿಶೇಷ ಪ್ರಾರ್ಥನೆಯಲ್ಲಿ ಸಾವಿರಾರು ಕ್ರೈಸ್ತ ಬಾಂಧವರು ಪಾಲ್ಗೊಂಡು ಮೊಂಬತ್ತಿ ಬೆಳಗಿ, ಸಿಹಿ ಹಂಚಿ ಸಂಭ್ರಮಿಸಿದರು. ಗೋದಲಿಯಲ್ಲಿ ಪ್ರತಿಷ್ಠಾಪಿಸಿದ ಬಾಲಯೇಸುವಿಗೆ ಪುಷ್ಪನಮನ ಸಲ್ಲಿಸಿದರು. ಪ್ರವಾಸಿಗರು ಹಾಗೂ ಇತರ ಧರ್ಮೀಯರು ಕೂಡ ಚರ್ಚ್ಗೆ ಭೇಟಿ ನೀಡಿ ಮೊಂಬತ್ತಿ ಬೆಳಗಿ ಕ್ರಿಸ್ಮಸ್ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು. ಸುಂಟಿಕೊಪ್ಪ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ, ಗೋಣಿಕೊಪ್ಪ, ಸಿದ್ದಾಪುರ ಸೇರಿದಂತೆ ಎಲ್ಲಾ ಚರ್ಚ್ಗಳಲ್ಲಿ ಕ್ರಿಸ್ಮಸ್ ಸಡಗರ ಮುಗಿಲು ಮುಟ್ಟಿತ್ತು.
ನಾಪೋಕ್ಲು ಡಿ.25 : ಕೊಳಕೇರಿ ಗ್ರಾಮದ ಚಪ್ಪೆ೦ಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ತಿಮ್ಮಯ್ಯ ರಾಜ್ಯಮಟ್ಟದ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯಮಟ್ಟದ ಮಹಾ ಸಮ್ಮೇಳನ ಮತ್ತು ರಾಜ್ಯ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಸಲ್ಲಿಸಿದ ಶ್ಲಾಘನೀಯ ಸೇವೆಗಾಗಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಹಿಂದೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೂ ಇವರು ಭಾಜನರಾಗಿದ್ದರು. ಇವರ ಪತ್ನಿ ಕಸ್ತೂರಿ ತಿಮ್ಮಯ್ಯ ಕೂಡ ಮೂರ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಉತ್ತಮ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವರದಿ : ದುಗ್ಗಳ ಸದಾನಂದ






