ಮಡಿಕೇರಿ ಫೆ.24 NEWS DESK : ಕಮಿಷನ್ ದಂಧೆ ನಡೆಸುತ್ತಿದ್ದ ಬಿಜೆಪಿ ಸರ್ಕಾರವನ್ನು ಜನ ಮನೆಗೆ ಕಳುಹಿಸಿದ್ದಾರೆ. ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿದ್ದು, ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಿದ ಕಾರಣಕ್ಕಾಗಿ ನಮ್ಮ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಮಂದಿ ಪ್ರತಿಭಟನೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿರುಗೇಟು ನೀಡಿದ್ದಾರೆ. ಸುಮಾರು ರೂ.15 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ನಿರ್ಮಾಣಗೊಂಡಿರುವ ಗೋಣಿಕೊಪ್ಪಲು- ಅರುವತ್ತೊಕ್ಕಲು ಸಂಪರ್ಕ ಸೇತುವೆಯನ್ನು ಉದ್ಘಾಟಿಸಿದ ನಂತರ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿದರು. ಹುದಿಕೇರಿ ಸಹಕಾರ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ನನ್ನ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿರುವುದು ನನ್ನ ಗಮನಕ್ಕೆ ಬಂದಿದೆ. ಅವ್ಯವಹಾರದ ಬಗ್ಗೆ ಪ್ರಶ್ನಿಸುವುದು ತಪ್ಪೇ ಎಂದು ಪ್ರಶ್ನಿಸಿದ ಪೊನ್ನಣ್ಣ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದರೆ ಪ್ರತಿಭಟನೆ ನಡೆಸುತ್ತಾರೆ, ಪಾರದರ್ಶಕ ತನಿಖೆಯಿಂದ ಸತ್ಯಾಂಶ ಹೊರಬೀಳಲಿದೆ ಎಂದರು. ಬಿಜೆಪಿ ಪರ ಮತ ಚಲಾಯಿಸಿದ್ದವರು ಇಂದು ಕಾಂಗ್ರೆಸ್ ಸರ್ಕಾರದ ಪಾರದರ್ಶಕ…
ಲೇಖಕ: admin
ಮಡಿಕೇರಿ ಫೆ.24 NEWS DESK : ನಗರದ ತನಲ್ ಆಶ್ರಮಕ್ಕೆ ರೋಟರಿ ಮಡಿಕೇರಿ ವುಡ್ಸ್ ನಿಂದ ಗಾಲಿ ಕುರ್ಚಿಯನ್ನು ಕೊಡುಗೆಯಾಗಿ ನೀಡಲಾಯಿತು. ತನಾಲ್ ಆಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ರೋಟರಿ ಮಡಿಕೇರಿ ವುಡ್ಸ್ನ ಪ್ರಮುಖರು ಗಾಲಿ ಕುರ್ಚಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್ ಮಾತನಾಡಿ, ರೋಟರಿಯ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾವಿಸಿದರು. ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರಿನ ಯೋಜನೆ, ಪರಿಸರ ಸಂರಕ್ಷಣೆ ಮುಂತಾದ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ಮಾನವ ಸೇವೆಯೇ ಮಾಧವ ಸೇವೆ ಎಂಬಂತೆ ಆಶ್ರಮದಲ್ಲಿ ಮಾನವೀಯತೆ ಜೊತೆಗೆ ನೊಂದವರಿಗೆ ಆಸರೆಯಾಗಿ ನಿರಂತರ ಸೇವೆಯನ್ನು ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಸಲಹೆಗಾರ ರೊ. ಅನಂತ ಶಯನ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ನೊಂದವರಿಗೆ ಬೆಳಕಾಗಿ ಸೇವೆ ನೀಡುತ್ತಿರುವ ತನಾಲ್ ಆಶ್ರಮದ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ರೋಟರಿ ಉಪ ರಾಜ್ಯಪಾಲ ರೊ.ದೇವಣಿರ ತಿಲಕ್ ಮಾತನಾಡಿ, “ನೊಂದವರ ಬಾಳಿಗೆ ಆಸರೆಯಾಗುವದರ ಮೂಲಕ, ಅವರ ಜೀವನದಲ್ಲಿ ಭರವಸೆಯನ್ನು ಮೂಡಿಸುವ…
ಮಡಿಕೇರಿ ಫೆ.24 NEWS DESK : ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಕೋಕೇರಿ-ಕೊಳಕೇರಿ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿರುವ ಗ್ರಾಮಸ್ಥರು, ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಕೇರಿ ಗ್ರಾಮಸ್ಥ ಗಿರೀಶ್ ಪೂಣಚ್ಚ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಡೆದಾಡುವುದೇ ಕಷ್ಟವಾಗಿದೆ, ವಾಹನಗಳ ಸಂಚಾರ ಅಸಾಧ್ಯವಾಗಿದೆ. ಆಡಳಿತ ವ್ಯವಸ್ಥೆಯ ಗಮನಕ್ಕೆ ತಂದಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಆದ್ದರಿಂದ ಮಾ.11 ರಂದು ಕೊಳಕೇರಿ-ಕಕ್ಕಬ್ಬೆವರೆಗೆ `ರಸ್ತೆ ತಡೆ’ ಪ್ರತಿಭಟನೆ ನಡೆಸಲಾಗುವುದು ಎಂದರು. ನಾಪೋಕ್ಲು ಸಂಪರ್ಕ ರಸ್ತೆಯಾಗಿರುವ ಕೋಕೇರಿ-ಕೊಳಕೇರಿ ರಸ್ತೆಯು ಸುಮಾರು 5 ಕಿ.ಮೀ ಸಂಪೂರ್ಣ ಹದಗೆಟ್ಟಿದ್ದು, ಕಳೆದ 20 ವರ್ಷಗಳಿಂದ ಅಭಿವೃದ್ಧಿಯನ್ನೇ ಕಂಡಿಲ್ಲ. ಈ ರಸ್ತೆ ಕೋಕೇರಿ, ಕೊಳಕೇರಿ, ಬಾವಲಿ, ಕಿರುಂದಾಡು, ನರಿಯಂದಡ ಗ್ರಾಮ ಮತ್ತು ವಿರಾಜಪೇಟೆ ಸಂಪರ್ಕ ರಸ್ತೆಯಾಗಿದೆ. ಪ್ರತಿನಿತ್ಯ ಶಾಲಾ ವಾಹನಗಳು ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದು, ಪಾದಾಚಾರಿಗಳು ಕೂಡ ನಡೆದಾಡಲು ಸಾಧ್ಯವಾಗದ…
ಗೋಣಿಕೊಪ್ಪ ಫೆ.24 NEWS DESK : ಪೊನ್ನಂಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ 8ನೇ ವಾರ್ಷಿಕ ಮಹಾಸಭೆಯು ಶಾಲೆಯ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮೂಕಳೇರ ಕುಶಾಲಪ್ಪ, ಶಾಲೆಯ ಭಾವನಾತ್ಮಕ ಸಂಬಂಧದ ಬೇಸಿಗೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಚಿಂತನೆಯನ್ನು ಹಳೆಯ ವಿದ್ಯಾರ್ಥಿಗಳ ಸಂಘ ಹೊಂದಿದೆ ಎಂದರು. ಶತಮಾನೋತ್ಸವದ ಹಿನ್ನೆಲೆ ಶಾಲೆಗೆ ಪೂರಕವಾದ ತೆರೆದ ಸಭಾಂಗಣವನ್ನು ನಿರ್ವಹಿಸಿಕೊಡಲಾಗಿದೆ. ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಹಳೆಯ ವಿದ್ಯಾರ್ಥಿಗಳ ಸಂಘ ಸುಮಾರು 300ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದ್ದು, ಸಂಪೂರ್ಣವಾಗಿ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದು ಮೂಕಳೇರ ಕುಶಾಲಪ್ಪ ಹೇಳಿದರು. ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಸದಸ್ಯತ್ವವನ್ನು ಪಡೆಯುವ ಮೂಲಕ ಶಾಲಾ ಅಭಿವೃದ್ಧಿಗೆ, ಶಿಕ್ಷಣದ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭ ಕೋಳೆರ ಗೋಕುಲ್ ಸ್ಥಾಪಿಸಿದ ದತ್ತಿ ನಿಧಿಯನ್ನು ಹೆಚ್.ಕೆ.ಪ್ರಭು ಹಾಗೂ ಮಂಜುಳಾ ದಂಪತಿಗಳ ಪುತ್ರಿ…
ಮಡಿಕೇರಿ ಫೆ.24 NEWS DESK : ಒಂದು ತಿಂಗಳ ಕಾಲ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಗೆ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ಇಂದು ನಡೆದ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗು ಜಿ.ಪಂ.ಸಿಇಒ ವರ್ಣಿತ್ ನೇಗಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್ ಪ್ರಶಸ್ತಿ ಪತ್ರ ಸ್ವೀಕರಿಸಿದರು.
ಹುಣುಸೂರು ಫೆ.24 NEWS DESK : ಇತ್ತೀಚೆಗೆ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಹುಣಸೂರು ತಾಲ್ಲೂಕಿನ ರತ್ನಪುರಿ ಬಳಿಯ ದಾಸನಪುರದ ನಿವಾಸಿ ವಿದ್ಯಾರ್ಥಿ ಮುತ್ತುರಾಜ್ ಅವರ ಮನೆಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು. ಮುತ್ತುರಾಜ್ ಅವರ ತಂದೆ ರವಿಕುಮಾರ್ ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸಾಂತ್ವನ ಹೇಳಿದರು. ಸೂಕ್ತ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು. ಕಾಲೇಜು ವಿದ್ಯಾರ್ಥಿ ಮುತ್ತುರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿತ್ತು. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಮಡಿಕೇರಿ ಫೆ.24 NEWS DESK : ಗೋಣಿಕೊಪ್ಪಲು ಬೈಪಾಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಕಿರು ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಸ್ಥಳೀಯ ನಾಯಕರು, ಗ್ರಾಮಸ್ಥರು ಮತ್ತು ಸಾರ್ವಜನಿಕರು ಹಾಜರಿದ್ದರು.
ಮಡಿಕೇರಿ ಫೆ.24 NEWS DESK : ತಿತಿಮತಿ, ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ನಂತರ ಸಾಕಾನೆಯ ಮಾವುತರ ಯೋಗಕ್ಷೇಮವನ್ನು ವಿಚಾರಿಸಿ, ಪ್ರವಾಸಿ ತಾಣವಾಗಿ ಮಾರ್ಪಾಡಿಸುತ್ತಿರುವ ಆನೆ ಶಿಬಿರದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಫೆ.24 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಫೆ.29 ರಿಂದ ಮಾ.9ರ ವರೆಗೆ ಮಹಾಶಿವರಾತ್ರಿ ಮಹೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ. ಫೆ.29 ರಂದು ಬೆಳಿಗ್ಗೆ 9.30 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಸಂಜೆ 6.30 ಗಂಟೆಗೆ ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯ ಮಹಿಳಾ ಭಜನಾ ತಂಡ ಹಾಗೂ ಮೇಕೇರಿ ಶ್ರೀ ಗೌರಿಶಂಕರ ದೇವಾಲಯದ ಭಜನಾ ಸಮಿತಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಾ.1 ರಂದು ಸಂಜೆ 6.30 ಗಂಟೆಗೆ ಹಾಕತ್ತೂರು-ತೊಂಬತ್ತುಮನೆ ಶ್ರೀ ವಿನಾಯಕ ದೇವಾಲಯ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಮಾ.2 ರಂದು ಸಂಜೆ 6.30 ಗಂಟೆಗೆ ಭಾಗಮಂಡಲ ಸಿದ್ಧಿವಿನಾಯಕ ಭಜನಾ ಮಂಡಳಿಯಿಂದ ಕಾರ್ಯಕ್ರಮ ನಡೆಯಲಿದೆ. ಮಾ.3 ರಂದು ಸಂಜೆ 6.30ಕ್ಕೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ತಂಡ, ಮಾ.4 ರಂದು ಸಂಜೆ 6.30ಕ್ಕೆ ಮಡಿಕೇರಿ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಮಹಿಳಾ ಭಜನಾ ಸಮಿತಿ, ಮಾ.5 ರಂದು ಸಂಜೆ 6.30ಕ್ಕೆ ಮಡಿಕೇರಿ…
ಮಡಿಕೇರಿ ಫೆ.24 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಬಿ.ಜಯಶಂಕರ ಶೆಟ್ಟಿ ಉದ್ಘಾಟಿಸಿದರು. ನಂತರ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನಂದಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಎಂ.ಇ.ಎಸ್.ಕಾಲೇಜಿನ ಉಪನ್ಯಾಸಕ ಡಾ.ರವಿ ಅಪ್ಪಗೆರೆ, ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್, ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ಕಾರ್ಮಿಕ ಕಲ್ಯಾಣಧಿಕಾರಿ ಕೆ.ಕೆ.ಸೋಮಶೇಖರ್, ಮಡಿಕೇರಿ ಘಟಕ ವ್ಯವಸ್ಥಾಪಕ ಹೆಚ್.ಇ.ವೀರಭದ್ರಸ್ವಾಮಿ, ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ, ಪುತ್ತೂರು ವಿಭಾಗ ತನಿಖೆದಳದ ಸಾರಿಗೆ ಸಂಚಾರಿ ನಿರ್ದೇಶಕ ಜಯಣ್ಣ, ಕೆ.ರಾ.ರ.ಸಾ.ನಿ ಪಾ ಜಾ/ಪ ಪಂ ವರ್ಗಗಳ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶ್ರೀನಿವಾಸ್, ಪುತ್ತೂರು ವಿಭಾಗ ಪಾ.ಜಾ/ಪ.ಪಂ ವರ್ಗಗಳ…






