ಮಡಿಕೇರಿ, ಡಿ. 25 : ಅತ್ಯಂತ ಕುತೂಹಲ ಮೂಡಿಸಿದ್ದ ಪ್ರತಿಷ್ಠಿತ ಮಡಿಕೇರಿ ಪಟ್ಟಣ ಸಹಕಾರ ನಿಯಮಿತ ಬ್ಯಾಂಕ್ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತರು ಅತೀ ಹೆಚ್ಚು ಸ್ಥಾನ ಪಡೆದು ಕೊಂಡಿದ್ದಾರೆ. ನಗರದ ಬಾಲಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 1,614 ಮತಗಳ ಪೈಕಿ 1,372 ಮಂದಿ ಮತಚಲಾಯಿಸಿದರು. ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಮೀಸಲು, ಪ್ರವರ್ಗ ಎ ಹಾಗೂ ಬಿ ವಿಭಾಗಗಳಿಗೆ ಚುನಾವಣೆ ನಡೆಯಿತು. ಸಾಮಾನ್ಯ ಕ್ಷೇತ್ರದ 7 ಸ್ಥಾನಕ್ಕೆ 20 ಮಂದಿ, ಮಹಿಳಾ ಕ್ಷೇತ್ರದ 2 ಸ್ಥಾನಕ್ಕೆ 4, ಪರಿಶಿಷ್ಟ ಜಾತಿ ಕ್ಷೇತ್ರದ 1 ಸ್ಥಾನಕ್ಕೆ 2, ಪರಿಶಿಷ್ಟ ಪಂಗಡ ಕ್ಷೇತ್ರದ 1 ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿಯಲ್ಲಿ ಬಿಜೆಪಿ ಬೆಂಬಲಿತರು ಸಾಮಾನ್ಯ ಕ್ಷೇತ್ರದ ಒಂದು ಸ್ಥಾನ ಹೊರತುಪಡಿಸಿ ಬೇರೆಲ್ಲ ವಿಭಾಗದಲ್ಲಿ ಜಯ ಸಾಧಿಸಿ ಸ್ಪಷ್ಟಬಹುಮತ ದಾಖಲಿಸಿದ್ದಾರೆ. ಮತಗಳ ವಿವರ :: ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತರಾದ…
ಲೇಖಕ: admin
ನಾಪೋಕ್ಲು ಡಿ.25 : ಕಕ್ಕುಂದ ಕಾಡು ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ದರ್ಶನ ಹಾಗೂ ಪೂಜಾ ಕಾರ್ಯಗಳೊಂದಿಗೆ ಸಂಪನ್ನಗೊಂಡಿತ್ತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನಡೆಯಿತು. ನಂತರ ಶ್ರೀ ವೆಂಕಟೇಶ್ವರನಿಗೆ ಗಂಟೆ ಜಾಗಟ ವೇದ ಘೋಷಗಳೊಂದಿಗೆ ವಿಶೇಷ ಮಹಾ ಪೂಜೆ ನೆರವೇರಿ, ಮಹಾ ಮಂಗಳಾರತಿಯ ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ವೈಕುಂಠ ಏಕಾದಶಿ ಪ್ರಯುಕ್ತ ಬೆಳಗ್ಗೆಯಿಂದ ಭಗವಾನ್ ಭಕ್ತರು ಅಧಿಕ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ತಮ್ಮ ಇಷ್ಟಾರ್ಥ ಸೇವೆಗಳನ್ನು ನೆರವೇರಿಸಿಕೊಂಡರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಟಿ.ಎಸ್.ಮಂಜಯ್ಯ, ಗೌರವ ಕಾರ್ಯಾಧ್ಯಕ್ಷ ಟಿ ಎನ್ ರಮೇಶ್, ಕಾರ್ಯದರ್ಶಿ ಸುಜಿಕುಮಾರ್ ಟಿ.ಎ.ಖಜಾಂಜಿ ಯನ್. ಪಿ.ಗೋಪಾಲ ಹಾಗೂ ಹಿರಿಯರಾದ ಟಿ.ವಿ.ಶ್ರೀನಿವಾಸ್, ಟಿ.ಎ.ಆನಂದಸ್ವಾಮಿ, ಅಡಳಿತ ಮಂಡಳಿ ನಿರ್ದೇಶಕರಾದ ಟಿ.ಕೆ.ಸೂರ್ಯಕುಮಾರ, ಟಿ.ವಿ. ಭವಾನಿ ಹಾಗೂ ಇತರರು ಹಾಜರಿದ್ದರು. ದೇವಾಲಯದ ಮುಖ್ಯ ಅರ್ಚಕ ಸುದೀರ್ ಭಟ್ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು. ವರದಿ…
ಸುಂಟಿಕೊಪ್ಪ ಡಿ.25 : ಶ್ರೀ ಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ 53ನೇ ವರ್ಷದ ವಾರ್ಷಿಕ ಮಂಡಲ ಪೂಜಾ ಮಹೋತ್ಸವವು ಡಿ.27 ರಂದು ವಿವಿಧ ಪೂಜಾ ಕೈಂಕರ್ಯದೊಂದಿಗೆ ನಡೆಯಲಿದೆ ಎಂದು ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಂ.ಸುರೇಶ್ ಪುಟ್ಟ 27 ರ ಪೂರ್ವಾಹ್ನ ಗಣಪತಿ ಹೋಮದೊಂದಿಗೆ ಕಾರ್ಯಕ್ರಮಗಳು ಆರಂಭಗೊಂಡು ಬಿಲ್ವಪಾತ್ರೆ ಅರ್ಚನೆ, ತುಳಸಿ ಆರ್ಚನೆ ಪಂಚಾಮೃತ ಅಭೀಷೇಕ ದುರ್ವಾಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ಅಂದು ಮಧ್ಯಾಹ್ನ 1 ರಿಂದ 4 ಗಂಟೆಯವರೆಗೆ ಅನ್ನ ಸಂತರ್ಪಣೆ ನಡೆಯಲಿದ್ದು, ಸಂಜೆ 6.30 ಕ್ಕೆ ದೀಪರಾಧನನೆ ಮತ್ತು ಮೆರವಣಿಗೆ ನಡೆಯಲಿದೆ. ರಾತ್ರಿ 7.30 ಕ್ಕೆ ದುರ್ಗಾಪೂಜೆ ನಡೆಯಲಿದ್ದು, ಮಹಾಮಂಗಳಾರತಿ ನಡೆಯಲಿದ್ದು, ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಸುರೇಶ್ ತಿಳಿಸಿದರು.
ಸುಂಟಿಕೊಪ್ಪ ಡಿ.25 : ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶಾ ಜಿಲ್ಲಾ ಬಾಲ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದು, ಅವರನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 59ನೇ ವಾರ್ಷಿಕೋತ್ಸವದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡನೆಯ ವಿಷಯ, ಕಲುಷಿತಗೊಳ್ಳುತ್ತಿರುವ ನದಿ ತೀರಗಳು ವಿಚಾರದ ಕುರಿತು ಪ್ರಬಂಧ ಪ್ರಕಟಿಸಿ ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿ ತನ್ನದಾಗಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿನಿ ಶ್ರೀಶಾ ಅವರಿಗೆ ವೇದಿಕೆಯಲ್ಲಿದ್ದ ಜಿಲ್ಲಾ ಕಾನೂನು ಸಲಹೆಗಾರರಾದ ಎ.ಲೋಕೇಶ್ಕುಮಾರ್, ಬೆಂಗಳೂರು ಎಂಬೆಸ್ಸಿ ಗ್ರೂಪ್ ಸಹಉಪಾಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪ್ಪಳ್ಳಿ ರವೀಂದ್ರ, 7ನೇ ಹೊಸಕೋಟೆ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಸಿಸ್ಟರ್ ಜಿಜಿ ಎನ್.ಈ., ಕೊಡಗರಹಳ್ಳಿ ಗ್ರಾ.ಪಂ ಅಧ್ಯಕ್ಷೆ ನಾಗಚೆಟ್ಟೀರ ನಿರತ ಬೆಳ್ಳಿಯಪ್ಪ, ಸುಂಟಿಕೊಪ್ಪ ಗ್ರಾ.ಪಂ.ಉಪಾಧ್ಯಕ್ಷ ಪ್ರಸಾದ್ಕುಟ್ಟಪ್ಪ ಹಾಗೂ ನಿವೃತ್ತ ಮುಖ್ಯ ಶಿಕ್ಷಕಿ ಕೆ.ಎಸ್.ಸಾವಿತ್ರಿ ಹಾಗೂ ಶಾಲಾಮುಖ್ಯೋಪಾದ್ಯಾಯನಿ ಕೆ.ಎಸ್.ಇಂದಿರಾ…
ಮಡಿಕೇರಿ ಡಿ.24 : ಕೊಡಗಿಗೆ ಆಗಮಿಸುವ ಪ್ರವಾಸಿಗರು ಕೇವಲ ಕೊಡಗಿನ ಪರಿಸರವನ್ನು ನೋಡಿ ಆನಂದಿಸಿ ಮರಳಿದರೇ ಸಾಲದು. ಕೊಡಗಿನ ಮೂಲ ನಿವಾಸಿಗಳಾದ ಕೊಡವರು ಯಾರು, ದೇಶ ಮತ್ತು ರಾಜ್ಯಕ್ಕೆ ಕೊಡವರ ಕೊಡುಗೆಗಳೇನು ಎನ್ನುವ ಬಗ್ಗೆ ತಿಳಿಸಬೇಕು. ಕೊಡವರ ಸಂಸ್ಕೃತಿಯನ್ನು ಪ್ರತಿಬಿಂಬಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಸಲಹೆ ನೀಡಿದ್ದಾರೆ. ಮಡಿಕೇರಿ ಕೊಡವ ಸಮಾಜದ ವತಿಯಿಂದ ನಡೆದ ಪುತ್ತರಿ ಊರೊರ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಪೊನ್ನಣ್ಣ ಅವರು, ಕೊಡಗಿಗೆ ಬರುವ ಪ್ರವಾಸಿಗರಿಗೆ ಕೊಡವ ಸಮುದಾಯದ ಬಗ್ಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದರು. ಕೊಡವ ಸಮುದಾಯ ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಈ ಸಮುದಾಯದ ಅನೇಕ ಮಂದಿ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದಾರೆ. ಅವರು ತಾಯ್ನಾಡಿಗೆ ಮರಳಿದಾಗ ಅವರುಗಳನ್ನು ಅತಿಥಿಯಂತೆ ಸತ್ಕರಿಸಬೇಕು. ಇದರಿಂದ ಸಮುದಾಯದ ಒಗ್ಗಟ್ಟು ಸಮಾಜದ ಬೆಳವಣಿಗೆಗೂ ಸಹಕಾರಿಯಾಗಲಿದೆ. ಕೊಡವ ಸಮುದಾಯದ ಸಂಸ್ಕೃತಿ, ಆಚಾರ, ವಿಚಾರ, ಪದ್ದತಿ, ಪರಂಪರೆ ಇಡೀ ವಿಶ್ವದಲ್ಲೇ ವಿಶಿಷ್ಟವಾಗಿದೆ. ಇಂತಹ ವೈಶಿಷ್ಟö್ಯಪೂರ್ಣ…
ಮಡಿಕೇರಿ ಡಿ.24: ಅಕ್ರಮ ಸಕ್ರಮ ಸಮಿತಿ ಮತ್ತು ಅಕಾಡೆಮಿಗಳ ಅಧ್ಯಕ್ಷರುಗಳ ನೇಮಕ ಪ್ರಕ್ರಿಯೆಗಳನ್ನು ಶೀಘ್ರದಲ್ಲೇ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಅಕ್ರಮ ಸಕ್ರಮ ಸಮಿತಿ ನೇಮಕದ ಕುರಿತು ಸರ್ಕಾರ ಉತ್ಸುಕವಾಗಿದೆ. ಹಿರಿಯ ನಾಯಕರೊಂದಿಗೆ ಚರ್ಚಿಸಿ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡು ನೇಮಕಾತಿ ಮಾಡಲಾಗುತ್ತದೆ. ಬಳಿಕ ಫಾರಂ ನಂಬರ್ 53 ಮತ್ತು 57ಅನ್ನು ಕಾನೂನು ಪ್ರಕಾರ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದರು. ಉನ್ನತ ಮಟ್ಟದ ಸಮಿತಿಯೊಂದಿಗೆ ಚರ್ಚಿಸಿ ಅಕಾಡೆಮಿಗಳಿಗೆ ಅಧ್ಯಕ್ಷರುಗಳ ನೇಮಕವಾಗಲಿದೆ. ಎಲ್ಲ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣವಾಗಲಿದೆ ಎಂದರು. ::: ಕಾರಣಕರ್ತರಿಗೆ ಶಿಕ್ಷೆಯಾಗಲಿ ::: ತಾನು ದೇಶ ದ್ರೋಹಿಯೋ ದೇಶ ಪ್ರೇಮಿಯೋ ಎಂದು ಜನರೇ ಉತ್ತರ ನೀಡುತ್ತಾರೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಪೊನ್ನಣ್ಣ, ಸಂಸದರು ಚುನಾವಣೆ ನಿಲ್ಲುತ್ತಾರೋ ಬಿಡುತ್ತಾರೋ ಗೊತ್ತಿಲ್ಲ, ಅದನ್ನು ಅವರ ಪಕ್ಷವೇ ನಿರ್ಧರಿಸುತ್ತದೆ. ಸಂಸತ್…
ಮಡಿಕೇರಿ ಡಿ.24 : ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡುತ್ತಿದ್ದ ಸವಾರರಿಗೆ ಗೋಣಿಕೊಪ್ಪ ಪೊಲೀಸರು ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿದರು. ಗೋಣಿಕೊಪ್ಪ ಠಾಣಾಧಿಕಾರಿ ರೂಪಾ ದೇವಿ ಅವರು ಅತೀ ವೇಗದ ಚಾಲನೆ, ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದವರ ದಾಖಲಾತಿ ಪರಿಶೀಲನೆ ನಡೆಸಿ ಒಟ್ಟು 36 ಮಂದಿಗೆ ದಂಡ ವಿಧಿಸಿದರು. ಪೊಲೀಸರು ತಪಾಸಣೆ ನಡೆಸುತ್ತಿರುವುದನ್ನು ಅರಿತ ಕೆಲವು ವಾಹನ ಸವಾರರು ಪೊಲೀಸರಿದ್ದ ರಸ್ತೆಯನ್ನು ಬದಲಿಸಿ ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ದಂಡದಿಂದ ತಪ್ಪಿಸಿಕೊಂಡ ಪ್ರಸಂಗವೂ ನಡೆಯಿತು. ಚಾಲಕರಿಗೆ ಸುರಕ್ಷತೆಯ ಕುರಿತು ಪೊಲೀಸರು ಬುದ್ಧಿಮಾತು ಹೇಳಿದರು. ಗೋಣಿಕೊಪ್ಪ ಪೊಲೀಸ್ ಸಿಬ್ಬಂದಿಗಳಾದ ಪ್ರಮೀಳಾ, ಬಿ.ಹೆಚ್.ವಿರೇಶ್, ಬೀರಲಿಂಗ ಹಾಜರಿದ್ದರು.
ಮಡಿಕೇರಿ ಡಿ.24 : ಸೋಮವಾರಪೇಟೆಯ ಬಾಸ್ಕೆಟ್ ಬಾಲ್ ಮೈದಾನದ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ದೂರುಗಳು ಕೇಳಿ ಬಂದ ಹಿನ್ನೆಲೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಟರ್ಫ್ ಮೈದಾನದ ಸ್ಟೇಡಿಯಮ್ ದುರಸ್ತಿ ಕಾಮಗಾರಿ ಭರದಿಂದ ಸಾಗಿದೆ. ಮೂಲಭೂತ ಸೌಲಭ್ಯಗಳಾದ ಶೌಚಾಲಯ ವ್ಯವಸ್ಥೆ, ತಡೆಗೋಡೆ, ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಬಾಸ್ಕೆಟ್ ಬಾಲ್ ಮೈದಾನದ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕರು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಚಂಗಪ್ಪ, ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ.ಯು, ಪ್ರಮುಖರಾದ ಚೇತನ್, ವಿನಿ, ಸೋಮೇಶ್ ಮತ್ತಿತರರು ಹಾಜರಿದ್ದರು.
ಪೊನ್ನಂಪೇಟೆ ಡಿ.24 : ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ಇದೇ ತಿಂಗಳ 28ರಿಂದ ಜ.1ರವರೆಗೆ ನಡೆಯಲಿರುವ 17 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿರುವ ಕರ್ನಾಟಕ ತಂಡ ಸೋಮವಾರದಂದು ಬೆಂಗಳೂರಿನಿಂದ ಪ್ರಯಾಣ ಬೆಳೆಸಲಿದೆ. ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿರುವ ಎಲ್ಲಾ ಆಟಗಾರರು ಕೊಡಗಿನ ವಿದ್ಯಾರ್ಥಿಗಳು ಎಂಬುದು ವಿಶೇಷವಾಗಿದೆ. ಇದರಿಂದ ಕೊಡಗಿನ ಕ್ರೀಡಾ ಹಿರಿಮೆಗೆ ಮತ್ತೊಂದು ಗರಿ ಮೂಡಿದಂತಾಗಿದೆ. ಕಳೆದ ಅಕ್ಟೋಬರ್ 7 ರಿಂದ 9 ರವರೆಗೆ ಕೂಡಿಗೆಯಲ್ಲಿ ನಡೆದ 17 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಒಳಗೊಂಡ ಹಾಕಿ ತಂಡ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿತು. ಇದರಂತೆ ಪೊನ್ನಂಪೇಟೆಯ ಸಂತ ಅಂತೋಣಿ ಪ್ರೌಢಶಾಲೆಯ 11 ವಿದ್ಯಾರ್ಥಿಗಳು ಮತ್ತು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೂಡಿಗೆ ಕ್ರೀಡಾ ವಸತಿ ನಿಲಯದ 7 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 18 ವಿದ್ಯಾರ್ಥಿಗಳ ತಂಡ ಗ್ವಾಲಿಯರ್…
ಮಡಿಕೇರಿ ಡಿ.24 : ಕುಶಾಲನಗರ ಪಟ್ಟಣದಲ್ಲಿರುವ ಶ್ರೀ ಆಂಜನೇಯ ದೇವಾಲಯದಲ್ಲಿ ರಾಮಾಂಜನೇಯ ಉತ್ಸವ ಸಮಿತಿ ವತಿಯಿಂದ ಹನುಮ ಜಯಂತಿ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ವಿವಿಧ ಧಾರ್ಮಿಕ ಕೈಂಕರ್ಯಗಳು, ಅಭಿಷೇಕ, ಅರ್ಚನೆ, ಭಜನೆ ಮತ್ತು ಮಹಾಮಂಗಳಾರತಿಗೆ ನೂರಾರು ಭಕ್ತರು ಸಾಕ್ಷಿಯಾದರು. ಪೂಜೆಯಲ್ಲಿ ಪಾಲ್ಗೊಂಡ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ದೇವಾಲಯಕ್ಕೆ ಆಗಮಿಸಿ ಭಕ್ತಾದಿಗಳಿಗೆ ಶಾಸಕರು ಸಿಹಿ ಹಂಚಿದರು.






