ಲೇಖಕ: admin

ಸೋಮವಾರಪೇಟೆ ಡಿ.23 : ಇನ್ನರ್‍ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರಪೇಟೆ ಜೆಎಂಎಫ್ ನ್ಯಾಯಾಲಯಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಕ್ಲಬ್‍ನ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ, ಸೋಮವಾರಪೇಟೆ ಅಧ್ಯಕ್ಷೆ ಸಂಧ್ಯಾರಾಣಿ, ಕಾರ್ಯದರ್ಶಿ ತನ್ಮಯಿ ಪ್ರವೀಣ್ ಇದ್ದರು.

Read More

ಬೆಂಗಳೂರು ಡಿ.23 :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯ ‘ನಮ್ಮ ಕಾರ್ಗೋ’ ಟ್ರಕ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು. ಇಂದು 20 ಟ್ರಕ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವರು, ಒಂದು ತಿಂಗಳಲ್ಲಿ 100 ಟ್ರಕ್‌ಗಳನ್ನು ಮತ್ತು ಮುಂದಿನ ವರ್ಷದ ಅಂತ್ಯದ ವೇಳೆಗೆ 500 ಟ್ರಕ್‌ಗಳನ್ನು ಕಾರ್ಗೋ ಸೇವೆಗೆ ಒದಗಿಸಲಾಗುವುದು ಎಂದು ಹೇಳಿದರು. ಈ ಟ್ರಕ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವನ್ನು ಡಿಪೋವಾಗಿ ಬಳಸಿಕೊಳ್ಳಲಾಗುವುದು ಮತ್ತು ವಾಣಿಜ್ಯ ಆದಾಯ ಗಳಿಸಲು ಉಳಿದ ಖಾಲಿ ಜಾಗವನ್ನು ಸರ್ಕಾರಿ ಕಂಪನಿಗಳಿಗೆ ನೀಡಲಾಗುವುದು ಎಂದು ರೆಡ್ಡಿ ತಿಳಿಸಿದರು. ಕೆಎಸ್‌ಆರ್‌ಟಿಸಿ 2021 ರಲ್ಲಿಯೇ ಬಸ್ ಗಳಲ್ಲಿ ತನ್ನ ಸರಕು ವ್ಯಾಪಾರ ಸೇವೆಯನ್ನು ಪ್ರಾರಂಭಿಸಿತು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲು ಆರಂಭಿಸಿದೆ. ಈಗ ಆರು ಚಕ್ರಗಳ ಟ್ರಕ್​​ನಲ್ಲಿ 6 ಟನ್ ಸರಕುಗಳನ್ನು ಸಾಗಿಸಬಹುದಾಗಿದೆ. ಕೆಎಸ್‌ಆರ್‌ಟಿಸಿ ಪ್ರಕಾರ,…

Read More

ಪುತ್ತೂರು ಡಿ.23 : ಗುರಿಯನ್ನು ನಿರ್ಧರಿಸಿ ಕಾರ್ಯಯೋಜನೆಯನ್ನು ತಯಾರಿಸಿದ ಮೇಲೆ ಪ್ರತಿದಿನ ನಿಷ್ಠೆಯಿಂದ ಶ್ರಮವಹಿಸಿ ಅಭ್ಯಾಸ ಮಾಡಿದರೆ ನಮ್ಮ ನಾಳೆಗಳು ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಸುಳ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಶೆಟ್ಟಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಾರ್ಷಿಕ ಕ್ರೀಡಾ ಕೂಟದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಮಾನಸಿಕ ಗುರಿಯನ್ನು ಮುಟ್ಟಲು ದೈಹಿಕ ಸಾಮರ್ಥ್ಯ ಮುಖ್ಯವಾಗಿದೆ. ಈ ದೈಹಿಕ ಸಾಮರ್ಥ್ಯವನ್ನು ಗಳಿಸಿಕೊಳ್ಳಲು ನಿತ್ಯ ಮಿತವಾದ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ಹೇಳಿದರು. ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಉತ್ತಮ ತಂತ್ರಜ್ಞರಾಗಿ ಎಂದು ಅವರು ಹಾರೈಸಿದರು. ಗೌರವ ಅತಿಥಿಗಳಾದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಟಿ.ಎಸ್.ಸುಬ್ರಮಣ್ಯ ಭಟ್ ಮಾತನಾಡಿ ನಿರಂತರ ಪ್ರೋತ್ಸಾಹ, ಉತ್ತಮ ತರಬೇತಿ ಹಾಗೂ ಉನ್ನತ ಸಾಧನೆ ಇದ್ದಾಗ ನಾವು ಖಂಡಿತವಾಗಿಯೂ ಮೇಲ್ಮಟ್ಟಕ್ಕೆ ಏರಬಲ್ಲೆವು ಎಂದರು. ಸತತ ಎರಡು ವರ್ಷಗಳಿಂದ ನಮ್ಮ ಕಾಲೇಜಿನ ತಂಡವು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಚಾಂಪಿಯನ್ ಆಗಿರುವುದೇ ಇದಕ್ಕೆ…

Read More

ಮಡಿಕೇರಿ, ಡಿ.24: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ (ಎನ್.ಸಿ.ಎಸ್.ಟಿ.ಸಿ.), ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯಲ್ಲಿ  ನಡೆದ  ಕೊಡಗು ಜಿಲ್ಲಾ ಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: 2023 ದಲ್ಲಿ  ‘ಕಲುಷಿತಗೊಳ್ಳುತ್ತಿರುವ ನದಿಯ ತೀರಗಳು” ಎಂಬ ವಿಷಯದ ಕುರಿತು ಉತ್ತಮವಾಗಿ ವೈಜ್ಞಾನಿಕ ಯನ್ನು ಯೋಜನಾ ಪ್ರಬಂಧ ಮಂಡಿಸಿದ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿ ಸುಂಟಿಕೊಪ್ಪನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಜಾ ಳಿಗೆ ಬಾಲ ವಿಜ್ಞಾನಿ ಪ್ರಶಸ್ತಿ ಲಭಿಸಿದೆ. ಜನವರಿ ಮೊದಲ ವಾರ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ವಿಜ್ಞಾನ ಸಮಾವೇಶಕ್ಕೆ ಕೊಡಗು ಜಿಲ್ಲಾಮಟ್ಟದಿಂದ ಆಯ್ಕೆಗೊಂಡ ಎಂಟು ಮಂದಿ ಕಿರಿಯ ವಿಜ್ಞಾನಿಗಳ ವಿವರ ಈ…

Read More

ವಿರಾಜಪೇಟೆ ಡಿ.23 : ವಿರಾಜಪೇಟೆ ಕಾನ್‍ಫ್ರೆಂಡ್ಸ್ ಸ್ನೇಹಿತರ ಬಳಗದ ವತಿಯಿಂದ ವತಿಯಿಂದ ಕ್ರೀಡಾ  ಕ್ಷೇತ್ರದಲ್ಲಿ ಸಾಧನೆಗೈದ ಮೂವರು ಸಾಧಕರನ್ನು ಸನ್ಮಾನಿಸಲಾಯಿತು. ನಗರದ ಕ್ರೇಡೊ ಮೆಡಿಕಲ್ ಸೆಂಟರ್ ಸಮೀಪದ ಖಾಸಗಿ ಸ್ಥಳದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅಂತರ್ ರಾಷ್ಟೀಯ ಮಟ್ಟದ ಏಷ್ಯಾ ಫೆಸಿಫಿಕ್ ಕಾರ್ ರ‍್ಯಾಲಿ ಚಾಂಪಿಯನ್‍ಶಿಪ್‍ನಲ್ಲಿ ಪ್ರಥಮ ಸ್ಥಾನ ಪಡೆದ ಸುಹೇಮ್ ಕಬೀರ್, ಕೀರ್ತನ್ ಕುಟ್ಟಪ್ಪ, ಕೂರ್ಗ್ ಮಾರುತಿ ಪಾಯಿಂಟ್ ಮಾಲೀಕರಾದ ಶಾಫಿ ಅಹಮ್ಮದ್, ಅಂತರ್ ರಾಷ್ಟ್ರೀಯ ರಗ್ಬಿ ಪಟು ಮಾದಂಡ ಪಿ.ತಿಮ್ಮಯ್ಯ ಹಾಗೂ ಮತ್ತು ಹೊಂಡಾ ಶೋ ರೂಂ ಮಾಲೀಕರಾದ ಮೊಹಮ್ಮದ್ ಕಬೀರ್ ಅವರನ್ನು ಬಳಗದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.ಈ ಸಂದರ್ಭ ಮಾತನಾಡಿದ ಪುರಸಭೆಯ ಸದಸ್ಯ ಮೊಹಮ್ಮದ್ ರಾಫಿ, ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಗಾಲ್ಫ್, ರಗ್ಬಿ, ಟೆನ್ನಿಸ್, ಆಟೋ ಕ್ರಾಸ್ ನಂತಹ ಕ್ರೀಡೆಗಳನ್ನು ಅರಿಯಲು ಮತ್ತು ಕಲಿಯಲು ಗರಿಷ್ಟ ಮಟ್ಟದಲ್ಲಿ ಧನ ವ್ಯಯವಾಗುತ್ತದೆ. ಆದರೂ ಮಕ್ಕಳ ಸಾಧನೆಗೆ ಅಡ್ಡಿಯಾಗದೆ ಪೋಷಕರು ಪ್ರೋತ್ಸಾಹ…

Read More

ಮಡಿಕೇರಿ ಡಿ.23 – ಕೊಡಗಿನ ಯುವ ಮೋಟಾರ್ ರ‍್ಯಾಲಿ ಸಾಧಕ ಅಭಿನ್ ರೈ, ಪ್ರತಿಷ್ಟಿತ ಇಂಡಿಯನ್ ನ್ಯಾಷನಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಬೆಂಗಳೂರು ಬಳಿಯ ಗುಬ್ಬಿಯಲ್ಲಿ ಮುಕ್ತಾಯವಾದ ಇಂಡಿಯನ್ ರ‍್ಯಾಲಿ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಚಾಂಪಿಯನ್ ಆಗಿ ಅಭಿನ್ ರೈ ಹೊರಹೊಮ್ಮಿದರು. ಇಂಡಿಯನ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4 ವಿಭಾಗದಲ್ಲೂ ಉತ್ತಮ ಸಾಧನೆ ಮಾಡಿರುವ ಅಬಿನ್, ಇದಕ್ಕೂ ಮೊದಲು ಅರುಣಾಚಲ ಪ್ರದೇಶ, ಚೆನ್ನೈ , ಕೊಯಮತ್ತೂರು, ಹೈದರಾಬಾದ್, ಬೆಂಗಳೂರು ಮತ್ತು ಕೊಡಗಿನಲ್ಲಿ ನಡೆದ ಇಂಡಿಯನ್ ನ್ಯಾಷನಲ್ ರ‍್ಯಾಲಿ ಸೇರಿದಂತೆ ಆರು ರ‍್ಯಾಲಿಗಳಲ್ಲಿಯೂ ಅತ್ಯುತ್ತಮ ಅಂಕ ಗಳಿಸಿ ರಾಷ್ಟ್ರೀಯ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಬಿನ್ ರೈ ಮೇಕೇರಿ ಗ್ರಾಮದ ಹೋಟೆಲ್ ಉದ್ಯಮಿ ರತ್ನಾಕರ್ ರೈ ಮತ್ತು ನಮಿತಾ ರೈ ದಂಪತಿ ಪುತ್ರರಾಗಿದ್ದು, ಈಗಾಗಲೇ ಹಲವಾರು ಮೋಟಾರ್ ಚಾಂಪಿಯನ್ ಶಿಪ್ ರ‍್ಯಾಲಿಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.

Read More

ಮಡಿಕೇರಿ ಡಿ.23 :  ಕ್ರಿಸ್ ಮಸ್ ಮತ್ತು ಹೊಸವಷಾ೯ಚರಣೆ ಸಂದಭ೯ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ನೀಡಲಾಗಿದ್ದ ಮಂಗಳವಾರದ ವಾರದ ರಜೆಯನ್ನು ರದ್ದುಗೊಳಿಸಿ, ಡಿ.26 ರಂದು ಮ್ಯೂಸಿಯಂನ್ನು ಸಂದಶ೯ಕರಿಗಾಗಿ ತೆರೆಯಲಾಗುತ್ತದೆ. ಹೀಗಾಗಿ ಸಂದಶ೯ಕರು, ಪ್ರವಾಸಿಗರು ಡಿ.26 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ  ತಿಳಿಸಿದ್ದಾರೆ.

Read More

ವಿರಾಜಪೇಟೆ  ಡಿ.23 : ತಿತಿಮತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ವಿರಾಜಪೇಟೆ ನಗರ ಪೋಲಿಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ತಿತಿಮತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕ್ರೈಂ ಬ್ರಾಂಚ್‍ನ ಎಎಸ್‍ಐ ಗಣಪತಿ ಮಾತನಾಡಿ, ಮಕ್ಕಳಿಗೆ ಅಪಘಾತ ಮತ್ತು ಸುರಕ್ಷತೆ, ಅಪರಾಧ ತಡೆ ಮತ್ತು ಅದರ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರು ಯಾವುದೇ ಕಾನೂನು ಬಾಹಿರ ಕೆಲಸಗಳಲ್ಲಿ ತೊಡಗಬಾರದು, ಚಿಕ್ಕ ಮಕ್ಕಳಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಬಾರದು ಹಾಗೂ ದೊಡ್ಡವರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ಚಾಲನೆ ಮಾಡಬೇಕು, ನಾಲ್ಕು ಚಕ್ರ ವಾಹನಗಳನ್ನು ಓಡಿಸಲು ಡಿಎಲ್, ಇನ್ಸೂರೆನ್ಸ್ ಹೊಂದಿರುವುದು ಕಡ್ಡಾಯ ಎಂದು ಮನವಿ ಮಾಡಿದರು. ಕಾಲಕ್ಕೆ ತಕ್ಕಂತೆ ಅಪರಾಧಗಳ ಶೈಲಿಯೂ ಬದಲಾಗುತ್ತಿದೆ. ಸೈಬರ್ ಅಪರಾಧ, ದರೋಡೆ, ಮನೆ ಕಳ್ಳತನ, ಮಾದಕ ವಸ್ತುಗಳ ಸಾಗಾಣಿಕೆ, ಮಾನವ ಕಳ್ಳ ಸಾಗಾಣಿಕೆ ಸೇರಿದಂತೆ ಅನೇಕ…

Read More

ಮಡಿಕೇರಿ ಡಿ.23 :  ಮೈಸೂರಿನ ಶ್ರೀ ಇಗ್ಗುತ್ತಪ್ಪ ಕೊಡವ ಸಂಘದಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

ಮಡಿಕೇರಿ ಡಿ.23 :  ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಂಜನೇಯ  ದೇವಾಲಯದ ಸಮಿತಿ ವತಿಯಿಂದ  ಡಿ.24 ರಂದು ನಡೆಯಲಿರುವ ಹನುಮ ಜಯಂತಿ ಆಚರಣೆ ಅಂಗವಾಗಿ ಅನ್ನದಾನ ಹಾಗೂ 9 ಸಮಿತಿ ವತಿಯಿಂದ ಅಲಂಕೃತ ಮೆರವಣಿಗೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸುಮಾರು 13 ಸಾವಿರದಿಂದ 15 ಸಾವಿರದಷ್ಟು ಜನ ಸೇರುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.24ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕುಶಾಲನಗರ ಮತ್ತು ಸುತ್ತಮುತ್ತಲ 20 ಕಿ.ಮೀ ವ್ಯಾಪ್ತಿಯ ಎಲ್ಲಾ ರೀತಿಯ ಮದ್ಯದ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

Read More