*NEWS DESK ADVERTISEMENT*
ಲೇಖಕ: admin
ವಿರಾಜಪೇಟೆ ಡಿ.23 : ವಿರಾಜಪೇಟೆ ಹೊರ ವಲಯದ ಚೆಂಬೆಬೆಳ್ಳೂರು ಗ್ರಾಮದ ತೆಕ್ಕಮಕ್ಕಿ ಎಂಬಲ್ಲಿ ದಲಿತ ಸಂಘರ್ಷ ಸಮಿತಿಯ ನೂತನ ಘಟಕವನ್ನು ಉದ್ಘಾಟಿಸಲಾಯಿತು. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಅಧಿಕಾರಿ ವಾಣಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯಾವುದೇ ರೀತಿಯ ಸಮಸ್ಯೆಯಾದರೆ ನನ್ನನ್ನು ನೇರವಾಗಿ ಸಂಪರ್ಕಿಸಿ. ಇಲ್ಲಿನ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುವಂತಾಗಲಿ, ಸರ್ಕಾರದ ಸೌಲಭ್ಯಗಳು ಎಲ್ಲರಿಗೂ ಸಿಗುವಂತಾಗಲಿ ಎಂದರು. ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಉಪಾಧ್ಯಕ್ಷ ಎಚ್.ಜಿ ಗೋಪಾಲ ಮಾತನಾಡಿ, ನಮಗೆ ತಿಳಿಯದೆ ಇರುವ ಅನೇಕ ದಲಿತ ಕುಟುಂಬಗಳು ಈ ನಮ್ಮ ಕೊಡಗಿನ ವಿವಿಧ ಭಾಗಗಳಲ್ಲಿ ಇದ್ದಾರೆ, ಅವರಿಗೆ ಸರ್ಕಾರದ ವತಿಯಿಂದ ಸರಿಯಾದ ರೀತಿಯಲ್ಲಿ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ, ಕೆಲವರಿಗೆ ಇದರ ಬಗ್ಗೆ ಮಾಹಿತಿ ಕೂಡ ಇರುವುದಿಲ್ಲ, ಚೆಂಬೆಬೆಳ್ಳೂರು ಗ್ರಾಮದಲ್ಲಿ ಸುಮಾರು ಹದಿನೈದು ದಲಿತ ಕುಟುಂಬವೂ ಹಲವಾರು ವರ್ಷಗಳಿಂದ ನಿರಂತರವಾಗಿ ಇಲ್ಲಿ ವಾಸ ಮಾಡುತ್ತಿವೆ, ಇವರಿಗೆ ಸರ್ಕಾರದ ಯಾವುದೇ ಸೌಲಭ್ಯ ಸಿಗದೆ ವಂಚನೆಗೊಳಗಾಗಿದ್ದಾರೆ. ಇಲ್ಲಿ ವಾಸ ಮಾಡುವ…
ಮಡಿಕೇರಿ ಡಿ.23 : ಮಡಿಕೇರಿಯಿಂದ NCT ENTERPRISE UMRAH PACKAGE ಸೌಲಭ್ಯಗಳು ಹೀಗಿವೆ >>>(TRAVEL DATE : 30 JAN 2024) ನುರಿತ ಅಮೀರುಗಳ ಸಾನಿಧ್ಯ ಮತ್ತು ಅಧ್ಯಾತ್ಮಿಕ ತರಗತಿ ಕಣ್ಣೂರಿನಿಂದ ನೇರ ವಿಮಾನ ಯಾತ್ರೆ ಹರಂಗಳ ಸಮೀಪ ವಾಸ್ತವ್ಯ ಕೇರಳ ಮಾದರಿಯ ಉಟೋಪಚಾರ ಚರಿತ್ರೆ ಪ್ರಸಿದ್ಧವಾದ ಪುಣ್ಯ ಸ್ಥಳಗಳ ವಿವರಣೆ ಮತ್ತು ಸಂದರ್ಶನ ಆಸಕ್ತರು ತಕ್ಷಣ ಸಂಪರ್ಕಿಸಿ ಅಮೀರ್: ಹಮೀದ್ ಮಧನಿ 97418 19098
ಸಿದ್ದಾಪುರ ಡಿ.22 : ಕಾನೂನು ಅರಿವಿನ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಕಿರು ಉದ್ಯಮ ಶೀಲತೆ ಅಭಿವೃದ್ಧಿಯ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಸಲಹೆ ನೀಡಿದರು. ನಬಾರ್ಡ್ ಮತ್ತು ಓಡಿಪಿ ಸಂಸ್ಥೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಭಾಗಿತ್ವದಲ್ಲಿ ವಾಲ್ನೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗುಂಡಿ ಹಾಡಿಯಲ್ಲಿ ಕಾನೂನು ಅರಿವು ಹಾಗೂ ಅಭಿವೃದ್ಧಿ ಕಾರ್ಯಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬುಡಕಟ್ಟು ಆದಿವಾಸಿಗಳು ಶಿಕ್ಷಣದ ಮೂಲಕ ಕಾನೂನು ಅರಿವನ್ನು ಪಡೆದುಕೊಂಡು ಅಭಿವೃದ್ಧಿಯೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು. ನಬಾರ್ಡ್ನ ಮಹಾ ಪ್ರಬಂಧಕ ಡಾ.ಕೆ.ಎಸ್.ಮಹೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವು ವರ್ಷಗಳಿಂದಲೂ ಬುಡಕಟ್ಟು ಆದಿವಾಸಿ ಸಮುದಾಯ ಬಾಂಧವರನ್ನ ಕಿರು ಉದ್ಯಮ ಶೀಲತೆ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಹಿಳಾ ಸಬಲೀಕರಣ…
ಸುಂಟಿಕೊಪ್ಪ ಡಿ.23 : ಸುಂಟಿಕೊಪ್ಪ ಗ್ರಾ.ಪಂ ವತಿಯಿಂದ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಐಶ್ವರ್ಯ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆಯಲ್ಲಿ ಶಾಲೆಯ ವಿವಿಧ ಸಮಸ್ಯೆಗಳ ಬಗ್ಗೆ ಮಕ್ಕಳು ಗಮನ ಸೆಳೆದರು. ಶಾಲೆಯ ಹೂವಿನ ಗಿಡಗಳು ಆಡು ದನಕರುಗಳ ಪಾಲು, ಕುಡಿಯಲು ಶುದ್ಧ ನೀರು, ಹೆದ್ದಾರಿಯಲ್ಲಿ ದಾಟಲು ಜಿಬ್ರಾ ಕ್ರಾಸ್ ಅಳವಡಿಸಿ, ಹಾನಿಗೊಳ್ಳುತ್ತಿರುವ ಕುಡಿಯುವ ನೀರಿನ ಟ್ಯಾಪ್, ಶಾಲಾ ಗೇಟ್ ಮುಂಭಾಗದಲ್ಲಿ ವಾಹನಗಳ ನಿಲುಗಡೆ, ಶಾಲಾ ಅವಧಿಯ ವೇಳೆ ಮೈದಾನಕ್ಕೆ ಸಾರ್ವಜನಿಕರು ಆಗಮಿಸುವುದು. ಶಾಲೆ ಬಿಡುವ ವೇಳೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆಗೊಳಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಹಮದ್ ಆರಫನ್ ಮಾತನಾಡಿ, ಶಾಲೆಯಲ್ಲಿ ಶುದ್ಧ ಕುಡಿಯವ ನೀರಿನ ಘಟಕವನ್ನು ಒದಗಿಸಿಕೊಡುಂವಂತೆ ಮನವಿ ಮಾಡಿದರು. ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೃತಿಕ ಪಂಚಾಯಿತಿ ವತಿಯಿಂದ ಕುಡಿಯುವ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು…
ಮಡಿಕೇರಿ ಡಿ.23 : ನಗರಸಭೆಯ ಸರ್ವ ಪಕ್ಷಗಳ ನಿಯೋಗ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಮಾಡಿ 4ನೇ ಹಂತದ ನಗರೋತ್ಥಾನ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬ, ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಗಮನ ಸೆಳೆಯುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭ ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್ ಸೇರಿದಂತೆ ನಗರಸಭಾ ಸದಸ್ಯರು ಹಾಜರಿದ್ದರು.
ಮಡಿಕೇರಿ ಡಿ.23 : ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳುವುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ/ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ. ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಸ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಲು ಅರ್ಹತೆ ಹೊಂದಿರುತ್ತಾರೆ. ಸೌಲಭ್ಯಗಳು: ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. 2 ಲಕ್ಷ ಹಾಗೂ ಜೀವ ವಿಮಾ ರೂ. 2 ಲಕ್ಷ ಸೇರಿ ಒಟ್ಟು ರೂ. 4 ಲಕ್ಷಗಳು. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. 2 ಲಕ್ಷಗಳು. ಆಸ್ಪತ್ರೆ ವೆಚ್ಚ ಮರುಪಾವತಿ ರೂ.…
ಮಡಿಕೇರಿ ಡಿ.23 : ಪ್ರಸಕ್ತ(2023-24) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್ಡಿ ಅಧ್ಯಯನದಲ್ಲಿ ತೊಡಗಿರುವ (ದಿನಾಂಕ 30-01-203 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಪ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ.ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗಧಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ರೂ.3.50 ಲಕ್ಷ, ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಪೂರ್ಣಾವಧಿ ಪಿಎಚ್ಡಿ ಅಧ್ಯಯನಕ್ಕಾಗಿ ಮಾಡಿರುವ ನೋಂದಣಿ…
ಮಡಿಕೇರಿ ಡಿ.22 : ರೂಪಾಂತರಿ ಕೋವಿಡ್ ಬಗ್ಗೆ ಎಚ್ಚರ ವಹಿಸುವಂತೆ ಸರ್ಕಾರ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ವರ್ತಕರು ಹಾಗೂ ಸಾರ್ವಜನಿಕರು ಪಾಲಿಸಬೇಕು ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಎಂ.ಧನಂಜಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನೆರೆಯ ಕೇರಳ ರಾಜ್ಯದಲ್ಲಿ ರೂಪಾಂತರಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಆದ್ದರಿಂದ ಗಡಿ ಭಾಗದ ಕೊಡಗು ಜಿಲ್ಲೆಯಲ್ಲಿ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ. ವರ್ಷಾಂತ್ಯದ ರಜಾ ದಿನಗಳಲ್ಲಿ ಅಧಿಕ ಸಂಖ್ಯೆಯ ಪ್ರವಾಸಿಗರು ಮಡಿಕೇರಿ ನಗರಕ್ಕೆ ಬರುತ್ತಾರೆ. ಈ ಸಂದರ್ಭ ಮಾಸ್ಕ್ ಕಡ್ಡಾಯ ಮಾಡುವುದು ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಚಿಂತನೆ ನಡೆಸಬೇಕಾಗಿದೆ. ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಬೇಕು. ಅಲ್ಲದೆ ನಗರದ ವರ್ತಕರು ಕೂಡ ಪ್ರವಾಸಿಗರಲ್ಲಿ ಹಾಗೂ ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಬೇಕು ಎಂದು ಧನಂಜಯ ಹೇಳಿದ್ದಾರೆ. 60…
ಮಡಿಕೇರಿ ಡಿ.22 : ನಗರಸಭೆಯ ಪೌರಾಯುಕ್ತರು ಸಮಾನ್ಯ ಸಭೆಯಲ್ಲಿ ಮರಣದಂಡನೆಯ ಮಾತನಾಡಿದ್ದು, ಇದು ಅತ್ಯಂತ ವಿಷಾದಕರ ಬೆಳವಣಿಗೆಯಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸದಸ್ಯರು ಹಾಗೂ ಅಧಿಕಾರಿಗಳು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕೆ ಹೊರತು ಮಾನಸಿಕ ಒತ್ತಡ ನೀಡಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಅಭಿವೃದ್ಧಿಗೆ ಸದಸ್ಯರು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಜೋಡೆತ್ತುಗಳಂತೆ ದುಡಿಯಬೇಕಾಗುತ್ತದೆ. ಆದರೆ ನಗರಸಭೆಯಲ್ಲಿ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದ್ದು, ಇದು ಸಾರ್ವಜನಿಕರ ಕೆಲಸ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ನಗರಸಭೆಯ ಇತಿಹಾಸದಲ್ಲೇ ಈ ರೀತಿಯ ಅಸಹಾಯಕ ಆಡಳಿತವನ್ನು ಜನರು ನೋಡಿರಲಿಲ್ಲ. ಯಾವುದೇ ಪೌರಾಯುಕ್ತರು ಮರಣದಂಡನೆ ನೀಡಿ ಎಂದು ಹೇಳಿರಲಿಲ್ಲ. ಅಧಿಕಾರಿಯೊಬ್ಬರು ತುಂಬಿದ ಸಭೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದರೆ ಮಾನಸಿಕ ಒತ್ತಡದ ನಡುವೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವುದು ಸಾಬೀತಾಗಿದೆ. ಹಲವು ಅಧಿಕಾರಿಗಳು ಈಗಾಗಲೇ ವರ್ಗಾವಣೆ ಪಡೆದುಕೊಂಡು ತೆರಳಿದ್ದಾರೆ. ಉಳಿದ ಅಧಿಕಾರಿಗಳು ಕೂಡ ಇದೇ ದಾರಿ…






