ಪುತ್ತೂರು ಡಿ.4 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ. ಆಂಧ್ರಪ್ರದೇಶÀ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿ.10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈಗಾಗಲೇ ಶಾಸಕರು ಮಳೆ ಕಡಿಮೆಯಾದೊಡನೆ ರಸ್ತೆ ಅಭಿವೃದ್ಧಿ ಕಡೆಗೆ ವಿಶೇಷ ಗಮನಹರಿಸುತ್ತಿದ್ದು, ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣದ ಬಗ್ಗೆ ವಿಶೇಷ ಸಭೆಯನ್ನು ಇಂದು ಕರೆದಿದ್ದರು. ಈ ಸಂದರ್ಭ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್, ಪುರಸಭೆ ಮುಖ್ಯ ಅಧಿಕಾರಿ ನಾಚಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ಮತೀನ್, ರಾಫಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ಡಿ.4 NEWS DESK : ವಿರಾಜಪೇಟೆ ಬಾರ್ ಅಸೋಸಿಯೇಷನ್ ವತಿಯಿಂದ ವಕೀಲರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪೆರಂಬಾಡಿಯ ಖಾಸಗಿ ರೆಸಾರ್ಟ್ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು, ಸಮಾಜದಲ್ಲಿ ವಕೀಲ ವೃತ್ತಿಯು ಅತ್ಯಂತ ಪವಿತ್ರ ಹಾಗೂ ವಿಶ್ವಾಸನೀಯವಾದುದಾಗಿದೆ. ನಿಮ್ಮಲ್ಲಿಗೆ ಬರುವ ನಿಮ್ಮ ಕಕ್ಷಿದಾರರ ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನ್ಯಾಯ ಕೊಡಿಸಲು ಸಕಲ ಪ್ರಯತ್ನ ಮಾಡುವುದೇ ವಕೀಲರ ಆದ್ಯ ಕರ್ತವ್ಯವಾಗಿದೆ ಎಂದು ಕಿವಿಮಾತು ಹೇಳಿದರು. ಎಲ್ಲಕ್ಕಿಂತ ಮಿಗಿಲಾಗಿ ನಾವೆಲ್ಲರೂ ಸಂವಿಧಾನಕ್ಕೆ ತಲೆಬಾಗಬೇಕು. ಇಂದಿನ ದಿನದಲ್ಲಿ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿಯುವ ಕೆಲಸ ವಕೀಲರು ಮಾಡಬೇಕಾಗಿದೆ. ದೇಶದ ಭದ್ರತೆ, ದೇಶದ ಏಳಿಗೆ ಹಾಗೂ ದೇಶದ ಜನರ ಬದುಕಿಗೆ ದಾರಿದೀಪ ಆಗುವ ಕೆಲಸ ವಕೀಲರ ಪಾಲಿಗೆ ಲಭಿಸುತ್ತದೆ. ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆಯನ್ನು ಬೆಳೆಸಿಕೊಂಡು ತಮ್ಮನ್ನು ನಂಬಿದ ಕಕ್ಷಿದಾರರಿಗೆ ನ್ಯಾಯ ಒದಗಿಸಿಕೊಡುವುದೇ ವಕೀಲ ವೃತ್ತಿಯ ಪರಮಧರ್ಮ ಆಗಿರಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯಾಯಧಿಶರಾದ ನಟರಾಜ್, ಮಂಜುನಾಥ್, ಪ್ರದೀಪ್ ಪೊತದರ್, ವಿರಾಜಪೇಟೆ ಬಾರ್ ಅಸೋಸಿಯೇಷನ್…
ಮಡಿಕೇರಿ ಡಿ.4 NEWS DESK : ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಹಾಡಿರೆ ರಾಗಗಳ ತೂಗಿರೆ ದೀಪಗಳ’ ವಿಶೇಷ ಘಟಕ ಯೋಜನೆಯಡಿ ನಡೆದ ಹಾಡು, ನೃತ್ಯ ವಿಶೇಷ ಹಾಗೂ ವಿಭಿನ್ನತೆಯೊಂದಿಗೆ ಸಾಂಸ್ಕೃತಿಕ ವೈವಿಧ್ಯತೆಗಳಿಗೆ ಸಾಕ್ಷಿಯಾಯಿತು. ಬೆಂಗಳೂರಿನ ಜೋಗಿಲ ಸಿದ್ದರಾಜು ಮತ್ತು ತಂಡದವರು ಹಾಡಿರೆ ರಾಗಗಳ ತೂಗಿರೆ ದೀಪಗಳ ಹಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುವೆ ನಿನ್ನ ಆಟ ಬಲ್ಲವರ್ಯಾರೂ, ಶಿವನೇ ನಿನ್ನ ಆಟ ಬಲ್ಲವರ್ಯಾರೂ, ಚೆಲ್ಲಿದರೂ ಮಲ್ಲಿಗೆಯ ಬಾನಸು ಏರಿ ಮೇಲೆ, ಮಾದಪ್ಪ ಬರುವಾಗ, ಮಾಳೆಲ್ಲಾ ಗಮ್ಮೆಂದಿತು, ಮತ್ತಿತರ ಜಾನಪದ ಗೀತೆಗಳನ್ನು ಹಾಡುವ ಮೂಲಕ ಕಲಾಪ್ರೇಮಿಗಳನ್ನು ಕುಣಿಯುವಂತೆ ಮಾಡಿದ್ದು, ವಿಶೇಷವಾಗಿತ್ತು. ಮೈಸೂರು ಜಿಲ್ಲೆ ಎಚ್ಡಿಕೋಟೆ ತಾಲ್ಲೂಕಿನ ದೇವರಾಜು ಮತ್ತು ತಂಡದವರು ಸುಗಮ ಸಂಗೀತ ನುಡಿಸುವ ಮೂಲಕ ಗಮನ ಸೆಳೆದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಮಹೇಶ್ ಕುಮಾರ್ ಮತ್ತು ತಂಡದವರು ರಂಗ ಗೀತೆ ಹಾಡುವ ಮೂಲಕ ಗಮನ ಸೆಳೆದರು. ವಿರಾಜಪೇಟೆ ತಾಲ್ಲೂಕಿನ…
ಮಡಿಕೇರಿ ಡಿ.4 NEWS DESK : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಟಿಇಟಿ)ಯನ್ನು ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಯಂತೆ ನಿಯಮಾನುಸಾರ ನಡೆಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಸಿದ್ಧತೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಟಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ಗೊಂದಲಗಳಿಗೆ ಅವಕಾಶ ಮಾಡದೆ, ಸುಸೂತ್ರವಾಗಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಇರಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಗಾಳಿ, ಬೆಳಕು, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತಿತರ ಕನಿಷ್ಠ ಸೌಲಭ್ಯ ಇರಬೇಕು ಎಂದು ಸಲಹೆ ನೀಡಿದರು. ಟಿಇಟಿ ಪರೀಕ್ಷೆಗೆ ನಿಯೋಜಿಸಿರುವ ಮೇಲ್ವಿಚಾರಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಎಲ್ಲರೂ ತಮ್ಮ ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕು. ಕಳೆದ ಬಾರಿಯಂತೆ ಈ ಬಾರಿಯು ಸಹ ವೆಬ್ಕಾಸ್ಟಿಂಗ್ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.…
ಮಡಿಕೇರಿ ಡಿ.3 NEWS DESK : ವಿಶೇಷಚೇತನರಿಗೆ ಅನುಕಂಪದ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ ಮತ್ತು ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಓಂಕಾರ ಸದನದಲ್ಲಿ ಬುಧವಾರ ‘ಸಾಮಾಜಿಕ ಪ್ರಗತಿ ಸಾಧಿಸಲು ವಿಶೇಷ ಚೇತನರನ್ನು ಒಳಗೊಂಡ ಸಮಾಜ ರೂಪಿಸುವುದು’ ಎಂಬ ಘೋಷವಾಕ್ಯದೊಂದಿಗೆ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ವಿಶೇಷ ಚೇತನರಿಗೂ ಸಹ…
ಮಡಿಕೇರಿ NEWS DESK ಡಿ.3 : ಹೃದಯಾಘಾತದ ಸಂದರ್ಭ “ಸಮಯವೇ ಜೀವನ”, ಯಾಕೆಂದರೆ ತುರ್ತು ಪರಿಸ್ಥಿತಿಯಲ್ಲಿ ನೀಡುವ ತಕ್ಷಣದ ನೆರವು ಮತ್ತು ವೈದ್ಯಕೀಯ ಚಿಕಿತ್ಸೆ ರೋಗಿಯ ಜೀವ ಉಳಿಸುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಅಬ್ದುಲ್ ಅಜೀಜ್ ಅವರು ತಿಳಿಸಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಕಾಲೇಜ್ ನಲ್ಲಿ ನಡೆದ ಪ್ರಥಮ ಚಿಕಿತ್ಸೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೃದಯಾಘಾತದ ಲಕ್ಷಣಗಳನ್ನು ಸರಿಯಾಗಿ ಗುರುತಿಸಬೇಕು, ಸೂಕ್ತ ಕ್ರಮ ಕೈಗೊಂಡರೆ ಜೀವ ರಕ್ಷಣೆ ಸಾಧ್ಯ. ಹೃದಯ ಸ್ತಂಭನದ ಕುರಿತು ಜಾಗೃತಿ, ತುರ್ತು ನೆರವು ಹಾಗೂ ಆರೋಗ್ಯಕರ ಜೀವನಶೈಲಿ ನಮ್ಮ ಹೃದಯದ ರಕ್ಷಕರು. ಪ್ರತಿಯೊಬ್ಬರು ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಪಡೆದಲ್ಲಿ ಇನ್ನೊಬ್ಬರ ಜೀವನವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಅಗತ್ಯತೆಯ ಕುರಿತು ಮಾಹಿತಿ ಮತ್ತು ಆಪತ್ಕಾಲದಲ್ಲಿ ಸಿಲುಕಿದವರ ಪ್ರಾಣವನ್ನು ಉಳಿಸಬಹುದಾದ ಕ್ರಮಗಳ…
ಮಡಿಕೇರಿ ಡಿ.3 NEWS DESK : ಜಿಲ್ಲೆಯ ಶೋಷಿತ ಸಮೂಹಗಳಾದ ಪರಿಶಿಷ್ಟರು ಹಾಗೂ ಆದಿವಾಸಿಗಳ ಸಂಕಷ್ಟಗಳಿಗೆ ಸ್ಪಂದಿಸುವಂತೆ ಆಗ್ರಹಿಸಲು ಇದೇ ತಿಂಗಳಿನಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳ ಶಾಸಕರನ್ನು ಭೇಟಿಯಾಗುವ ‘ಆದಿವಾಸಿಗಳ ನಡೆ ಶಾಸಕರ ಮನೆ ಕಡೆ’ ಕಾರ್ಯಕ್ರಮವನ್ನು ರೂಪಿಸಿರುವುದಾಗಿ ಆಲ್ ಇಂಡಿಯಾ ಯುನೈಟೆಡ್ ಕಿಸಾನ್ ಸಭಾ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಿ ನಮ್ಮ ಸಂಕಷ್ಟಗಳನ್ನು ಅವರ ಮುಂದಿಡಲಾಗುತ್ತದೆ. ಇದಕ್ಕೆ ಅವರಿಂದ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಕಳೆದ ಚುನಾವಣಾ ಸಂದರ್ಭದಲ್ಲಿ ದಲಿತ ಆದಿವಾಸಿಗಳ ಸಂಪೂರ್ಣ ಬೆಂಬಲದೊಂದಿಗೆ ಆಯ್ಕೆಯಾಗಿ ಬಂದ ಜಿಲ್ಲೆಯ ಇಬ್ಬರು ಶಾಸಕರುಗಳ ಬಗ್ಗೆ ಇದ್ದ ಆಶಾಭಾವನೆ ಇಂದು ಕರಗಿದೆ. ಇವರು ಜಿಲ್ಲೆಯ ನೊಂದ, ದೌರ್ಜನ್ಯಗಳಿಗೆ ಒಳಗಾಗಿರುವ ಆದಿವಾಸಿಗಳ ಸಮಸ್ಯೆಯ ಪರಿಹಾರಕ್ಕೆ ಕಾಳಜಿ ತೋರುತ್ತಿಲ್ಲವೆಂದು ಆರೋಪಿಸಿದರು. ಜಿಲ್ಲೆಯಲ್ಲಿಂದು ಸಹಸ್ರಾರು ಏಕರೆ ಸರ್ಕಾರಿ ಜಾಗ ಉಳ್ಳವರಿಂದ ಅತಿಕ್ರಮಣಕ್ಕೆ…
ಮಡಿಕೇರಿ ಡಿ.3 NEWS DESK : ರಾಜ್ಯ ಕಾಂಗ್ರೆಸ್ ಸರಕಾರ ರೈತ ವಿರೋಧಿ ಧೋರಣೆಯನ್ನು ನುಸರಿಸುತ್ತಿದೆ, ಬೆಳೆಹಾನಿ ಪರಿಹಾರ ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿಯ ರೈತ ಮೋರ್ಚಾ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿತು. ರಾಜ್ಯ ಸರಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಮಾಜಿ ಶಾಸಕರು ಹಾಗೂ ಬಿಜೆಪಿ ಪ್ರಮುಖರು ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು 5 ತಿಂಗಳಿಗೂ ಹೆಚ್ಚಿನ ಕಾಲ ವಿಸ್ತರಿಸಿದ ಪರಿಣಾಮ ಕೊಡಗು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ವ್ಯಾಪಕವಾದ ಕೃಷಿ ಹಾನಿಯಾಗಿದೆ. ಜಿಲ್ಲೆಯ ಆರ್ಥಿಕ ಬೆನ್ನೆಲುಬಾಗಿರುವ ಕಾಫಿ, ಕರಿಮೆಣಸು ಕೃಷಿಗಳಿಗೆ ಶೇ.60 ರಿಂದ 70 ರಷ್ಟು ನಷ್ಟ ಉಂಟಾಗಿದೆ. ಈ ಕುರಿತು ಸರ್ವೇ ನಡೆಸಿದ ಸರ್ಕಾರ ಕೇವಲ ಶೇ.30 ರಷ್ಟು ಮಾತ್ರ ಕೃಷಿ ಹಾನಿಯಾಗಿದೆ ಎಂದು ವರದಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ…
ಮಡಿಕೇರಿ ಡಿ.3 NEWS DESK : ಉಡೋತ್ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6 ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ. ಡಿ.6 ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು, ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ. ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ 9900931278, 9591304757, 9483399077 ಸಂಪರ್ಕಿಸಬಹುದಾಗಿದೆ.






