ಲೇಖಕ: admin

ಮಡಿಕೇರಿ ಜ.2 NEWS DESK :  ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ,…

Read More

ದುಬೈ  ಜ.2 NEWS DESK : ಹೆಮ್ಮೆಯ ದುಬೈ ಕನ್ನಡ ಸಂಘದ ವತಿಯಿಂದ ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ನಾಡ ಹಬ್ಬ ಅರಬ್ ನಾಡಿನಲ್ಲಿ ಎಂಬ ದ್ಯೇಯ ವಾಕ್ಯದೊಂದಿಗೆ ಕಳೆದ ಆರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ದುಬೈ ದಸರಾ ಕ್ರೀಡೋತ್ಸವ “ಕರ್ನಾಟಕ ರಾಜ್ಯ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ನೆಲಸಿರುವ ಅನಿವಾಸಿ ಕೊಡಗಿನ ಯುವಕರು ಜಯ ಸಾಧಿಸಿ ಏಳನೇ ವರ್ಷದ ಚಾಂಪಿಯನ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದುಬೈಯಲ್ಲಿರುವ ಎಥಿಸಲಾತ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಉಳ್ಳಾಲ ಗಯ್ಸ್ ತಂಡವನ್ನು ಪೆನಾಲ್ಟಿ ಶೂಟಿನಲ್ಲಿ ಕೂರ್ಗ್ ಯುನೈಟೆಡ್ ಎಫ್ಸಿ ದುಬೈ ತಂಡವು ಮಣಿಸಿತ್ತು. ಕೊಡಗಿನ ತಂಡದಲ್ಲಿ ನಾಯಕನಾಗಿ ರಫೀಕಲಿ ಕುಂಜಿಲ ಅವರು ಮುನ್ನೆಡೆಸಿದರೆ, ಆಟಗಾರರಾಗಿ ಅಸಿಫ್ ಕುಂಜಿಲ, ಅಫ್ರೀದ್ ಹೊಸಕೋಟೆ, ಜಾಫರ್ ಕಡಂಗ, ಆರಿಫ್ ಕುಂಜಿಲ, ಅಫ್ರಿದ್ ಸುಂಟಿಕೊಪ್ಪ, ತಬಶೀರ್ ಕುಂಜಿಲ, ರಾಝಿಕ್ ಸುಂಟಿಕೊಪ್ಪ, ಶುಹೈಬ್ ಕೊಟ್ಟಮುಡಿ ಸ್ಪರ್ಧಿಸಿದ್ದರು. ಶಂಸಿ ಚಾಮಿಯಾಲ ಅವರು ಗೋಲ್ ಕೀಪರ್ ಆಗಿ ಕಾರ್ಯನಿರ್ವಹಿಸಿ…

Read More

ಮಡಿಕೇರಿ ಜ.2 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ನಿ. ಬೆಂಗಳೂರು ಹಾಗೂ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆಯನ್ನು ಆಚರಿಸಲಾಯಿತು. ಕೊಡವ ಸಮಾಜ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಕೊಡವ ಸಮಾಜದ ಉಪಾಧ್ಯಕ್ಷರು ಹಾಗೂ ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಕಾರ್ಯಾಧ್ಯಕ್ಷರಾದ ಕೇಕಡ ಎ.ದೇವಯ್ಯ ಉದ್ಘಾಟಿಸಿ ಮಾತನಾಡಿ, ಸದಸ್ಯರು ಸಂಘದೊಂದಿಗೆ ನಿರಂತರ ವ್ಯವಹರಿಸಿ  ಸಂಘದ ಏಳಿಗೆಗೆ ಸಹಕರಿಸುವಂತೆ ತಿಳಿಸಿದರು. ಸಂಘದ ಬೆಳವಣಿಗೆಗೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಸೇವೆ ಮುಖ್ಯ ಪಾತ್ರವಹಿಸಲಿದೆ ಎಂದರು. ಜಮ್ಮಾಜಾಗ ಸಮಸ್ಯೆ ಬಗ್ಗೆ ಕೊಡಗಿನ‌ ಇಬ್ಬರು ಶಾಸಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಡುವಂಡ ಪಿ.ಮುತ್ತಪ್ಪ‌, 2005ರಲ್ಲಿ ಮಾಜಿ ಕಾನೂನು ಸಚಿವ ಹಾಗೂ ಹಿರಿಯ ಸಹಕಾರಿಗಳಾದ ಎಂ.ಸಿ.ನಾಣಯ್ಯ ಅವರ ಸಲಹೆ ಮೇರೆಗೆ ಮಡಿಕೇರಿ ಕೊಡವ ಸಮಾಜದ ಕಟ್ಟಡದಲ್ಲಿ ಪ್ರಾರಂಭಿಸಲಾಯಿತು. ಪ್ರಸ್ತುತ 1 ಕೋಟಿ 10 ಲಕ್ಷ ಪಾಲು…

Read More

ನಾಪೋಕ್ಲು ಜ.2 NEWS DESK : ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‍ಗೆ ಕೊಡಗಿನ ವರ್ಷಿಣಿ ಆಯ್ಕೆಯಾಗಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಉಜಿರೆಯಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿರುವ ವರ್ಷಿಣಿ ಜ.26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ಇವರು 5karnataka batalian NAVAL unit  NCC senior wing kartavya path ಗೆ ಆಯ್ಕೆಯಾಗಿದ್ದಾರೆ. ವರ್ಷಿಣಿ ಕಾಂತೂರು ಮೂರ್ನಾಡು ಗ್ರಾಮ ಪಂಚಾತಿಯ ಕಿಗ್ಗಾಲು ಗ್ರಾಮದ ಬಿ.ಎಸ್.ಬಾಲು, ರೇಖಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಜ.2 NEWS DESK : ಹಳೆ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಹೊಸ ವರ್ಷಾಚರಣೆಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಬಾಲ ವಿಕಾಸ ಸಲಹಾ ಸಮಿತಿ ಅಧ್ಯಕ್ಷರಾದ ಸೋನಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅಂಗನವಾಡಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಇದರಲ್ಲಿ ತರಕಾರಿಗಳ ಬಳಕೆ ಹಾಗೂ ಉಪಯೋಗಗಳ ಬಗ್ಗೆ ನೃತ್ಯ ರೂಪಕ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಕೊಳಕೇರಿ ಗ್ರಾಮದ ಕಾಫಿ ಬೆಳೆಗಾರ ಕುಂಡಿಯೊಳಂದ ಬಿಪಿನ್ ಮತ್ತು ತಾಲೂಕು ಸ್ತ್ರೀಶಕ್ತಿ ಗುಂಪಿನ ಕಾರ್ಯದರ್ಶಿ ಅನಿತಾ ಹಾಗೂ ಪ್ರಮುಖರು ಭಾಗವಹಿಸಿದ್ದರು. ಹಾಗೂ ಕೇಕ್ ಕತ್ತರಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಭಾಗವತಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಈ ಸಂದರ್ಭ ಸ್ತ್ರೀ ಶಕ್ತಿ ಗುಂಪಿನ ಹಾಗೂ ಬಾಲ ವಿಕಾಸ ಸಮಿತಿ ಸದಸ್ಯರು ಪೆÇೀಷಕರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.

Read More

ಸುಂಟಿಕೊಪ್ಪ ಜ.2 NEWS DESK : ಚದುರಂಗ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವುದರಿಂದ ಕ್ರೀಡಾಪಟುಗಳ ಮಾನಸಿಕತೆ, ಏಕಾಗ್ರತೆ ಹಾಗೂ ಚಿಂತನ ಶೀಲತೆ ಹೆಚ್ಚಾಗುತ್ತದೆ ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಸುಂಟಿಕೊಪ್ಪದ ಕೂರ್ಗ್ ಚೆಸ್ ಕ್ಲಬ್ ವತಿಯಿಂದ ಶ್ರೀ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಟ್ಟದ ಚದುರಂಗ (ಚೆಸ್) ಪಂದ್ಯಾವಳಿಯನ್ನು ಉದ್ಘಾಟಿಸಿ, ಮಾತನಾಡಿದ ಅವರು ಚದುರಂಗ ಕ್ರೀಡೆಗೆ ವಯೋಮನದ ಮಿತಿ ಇಲ್ಲ ಹಿರಿಯರು ಕಿರಿಯರು ಎನ್ನದೆ ಕ್ರೀಡೆಯಲ್ಲಿ ಭಾಗವಹಿಸಬಹುದಾಗಿದೆ. ಈ ಕ್ರೀಡೆಯಲ್ಲಿ ಮಾನವರ ಮಾಸಿಕತೆ ಮತ್ತು ಬುದ್ಧಿ ಮಟ್ಟವನ್ನು ಹೆಚ್ಚಿಸುತ್ತದೆ. ವೈಯಕ್ತಿಕ ಚಿಂತನ ಶೀಲತೆಯು ಹೆಚ್ಚಾಗುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಧೃಡಗೊಳ್ಳಲು ಈ ಕ್ರೀಡೆಯು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. 7 ರಿಂದ 14 ವರ್ಷ ಪ್ರಾಯದ ಮಕ್ಕಳ ವಿಭಾಗದಲ್ಲಿ 42 ಮಂದಿ ಪಾಲ್ಗೊಂಡಿದ್ದು, ರೋಶನ್ ಆರ್ ನಾಯಕ್ ಪ್ರಥಮ ಬಹುಮಾನ ರೂ. 3000, ಭೂಷಣ್ ಎಂ.ಆರ್.ದ್ವಿತೀಯ ಬಹುಮಾನ ರೂ. 2000, ಮಿಲಿದ್ ನಾರಾಯಣ ತೃತೀಯ ಬಹುಮಾನ…

Read More

ಮಡಿಕೇರಿ NEWS DESK ಜ.1 : ಕಳೆದ 30 ವರ್ಷಗಳಿಂದ ಕೊಡಗಿನ ಮನೆ ಮಾತಾಗಿರುವ ಮಡಿಕೇರಿಯ ಪ್ರತಿಷ್ಠಿತ ಎಲೆಕ್ಟ್ರಾನಿಕ್ & ಫರ್ನಿಚರ್ ಶೋರೂಮ್ “ವ್ಯಾಂಡಮ್ ಎಂಟರ್ ಪ್ರೈಸಸ್” ಸಂಸ್ಥೆಯ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಭವ್ಯವಾಗಿ ಬಿಡುಗಡೆಗೊಳಿಸಲಾಯಿತು. ಈ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಖ್ಯಾತ ಹಿರಿಯ ವಕೀಲರು, ಲೇಖಕರು, ಸಾಹಿತಿಗಳು ಹಾಗೂ ವಿಮರ್ಶಕರಾದ ಕೆ.ಪಿ.ಬಾಲಸುಬ್ರಹ್ಮಣ್ಯ ಹಾಗೂ ಹಿರಿಯರಾದ ಆಶಾ ಬಾಲಸುಬ್ರಹ್ಮಣ್ಯ, ಬೆಂಗಳೂರು ನಗರದ ಪ್ರತಿಷ್ಠಿತ “Tooth Fix” Dental Health Care ಸಂಸ್ಥೆಯ ಡೆಂಟಲ್ ಸರ್ಜನ್ ಡಾ.ಅನಿರುದ್ಧ್ ಕೆ.ಬಿ ಹಾಗೂ ಡೆಂಟಲ್ ಓರಲ್ ಸರ್ಜರಿ ತಜ್ಞೆ ಡಾ.ಪವಿತ್ರಾ ಭಟ್ ಅವರ ಅವರ ಉಪಸ್ಥಿತಿಯಲ್ಲಿ ನಡೆಯಿತು. ವ್ಯಾಂಡಮ್ ಎಂಟರ್ ಪ್ರೈಸಸ್ ನ ಮಾಲೀಕ ಕೆ.ಕೆ.ದಾಮೋದರ್ ಅವರು ಮಾತನಾಡಿ ವ್ಯಾಂಡಮ್ ಎಂಟರ್ ಪ್ರೈಸಸ್ ಸಂಸ್ಥೆಯ ಯಶಸ್ವಿ ಪಯಣಕ್ಕೆ ಇದು ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ ಎಂದರು.

Read More

ಮಡಿಕೇರಿ NEWS DESK ಜ.1 : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಬಿಂದುಮಣಿ ಅವರು ಇಂದು ನಗರದ ಎಸ್ ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿಗೆ ವರ್ಗಾವಣೆಗೊಂಡ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅಧಿಕಾರ ಹಸ್ತಾಂತರಿಸಿದರು.

Read More

ಮಡಿಕೇರಿ NEWS DESK ಜ.1 : ಮೂಲನಿವಾಸಿ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಬುಡಕಟ್ಟು ಜನಾಂಗಕ್ಕೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆಯನ್ನು ಒಳಗೊಂಡAತೆ ಹತ್ತು ಗೌರವಾನ್ವಿತ ಗುರಿಗಳು ಮತ್ತು ಸಂವಿಧಾನಿಕ ಆಶಯಗಳನ್ನು ಈಡೇರಿಸಲು ಸುದೀರ್ಘ ಪಯಣವನ್ನು ಮುಂದುವರೆಸಿರುವ ಕೊಡವ ನ್ಯಾಷನಲ್ ಸಂಘಟನೆ ನೂತನ ವರ್ಷದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಆಂತರಿಕ ರಾಜಕೀಯ ಸ್ವ-ನಿರ್ಣಯ ಮತ್ತು ಸ್ವ-ಆಡಳಿತದ ಹಕ್ಕು ಸೇರಿದಂತೆ ಸಂವಿಧಾನ ಬದ್ಧ ಹಕ್ಕುಗಳಿಗಾಗಿ ತನ್ನ ಗುರಿಯನ್ನು ಪ್ರತಿಪಾದಿಸಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ನಿಂದ ಎಲ್ಲರಿಗೂ ಜಾಗತಿಕ ಹೊಸ ವರ್ಷದ ಪ್ರಯುಕ್ತ ಸಿಎನ್‌ಸಿ ಸರ್ವರಿಗೂ ಸಮೃದ್ಧ, ಸುಖ, ಶಾಂತಿ ಮತ್ತು ನೆಮ್ಮದಿಯನ್ನು ಹಾರೈಸುವುದರೊಂದಿಗೆ 2026 ರ ಸದಾಶಯವನ್ನು ಕೋರುತ್ತದೆ. ಕೊಡವ ಪಂಚಾಂಗದ ಪ್ರಕಾರ ಆದಿವಾಸಿ ಆದಿಮಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಏಪ್ರಿಲ್ 14 ರಂದು “ಎಡ್ಮ್ಯಾರ್ ಒಂದ್” ಎಂಬ ಹೊಸ ವರ್ಷವನ್ನು ಆಚರಿಸುತ್ತದೆ. ಸಿಎನ್‌ಸಿ ಇದರ ಪ್ರಮುಖ ರೂವಾರಿಯಾಗಿದೆ. ಆದರೆ…

Read More

ಮಡಿಕೇರಿ ಜ.1 NEWS DESK : 66/11 ಕೆ.ವಿ ಶನಿವಾರಸಂತೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಶನಿವಾರಸಂತೆ ಟೌನ್ ಫೀಡರ್‍ನಲ್ಲಿ ಜನವರಿ, 02 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ. 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್2 ನಾಪೋಕ್ಲು ಎಫ್5 ಹೊದ್ದೂರು ಹಾಗೂ ಪಾರಾಣೆ ಫೀಡರ್‍ಗಳಲ್ಲಿ ಜನವರಿ, 02 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಪಾಲೂರು, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ, ನರಿಯಂದಡ,…

Read More