ಲೇಖಕ: admin

ಬೆಂಗಳೂರು ಡಿ.21 : ಕೊಡಗಿನ ಪ್ರಖ್ಯಾತ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬ ಕುಂಡ್ಯೊಳಂಡ ಕಪ್ ಹಾಕಿ-2024 ರ  ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಬೋಪಣ್ಣ ಮತ್ತು ಕುಂಡ್ಯೊಳಂಡ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.21 : ಸುಮಾರು 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ. ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾದಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ. ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿದೆ. ಲಿಯೋ ಕೊಡಗು ಪೊಲೀಸ್…

Read More

ಮಡಿಕೇರಿ ಡಿ.21 : ಸುಮಾರು 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ. ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾದಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ. ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿದೆ. ಲಿಯೋ ಕೊಡಗು ಪೊಲೀಸ್…

Read More

ವಿರಾಜಪೇಟೆ  ಡಿ.21 :  ಜಗತ್ತಿಗೆ ಶಾಂತಿಯ ಸಂದೇಶ ಸಾರುವ ಹಬ್ಬವೇ ಕ್ರಿಸ್ಮಸ್ ಹಬ್ಬವಾಗಿದೆ ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಾಕರ್  ಅಭಿಪ್ರಾಯಪಟ್ಟರು.  ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನಲ್ಲಿ ನಡೆದ ಕ್ರಿಸ್ ಮಸ್ ಆಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ  ಮಾತನಾಡಿದ ಅವರು,  ಶಾಂತಿ, ಪ್ರೀತಿ, ಬ್ರಾತೃತ್ವ ಕ್ರಿಸ್ ಮಸ್ ನ ಹಬ್ಬದ ಸಂದೇಶಗಳಾಗಿವೆ. ಯೇಸು ಕ್ರಿಸ್ತರು ಜನಿಸಿದ ಪುಣ್ಯ ಕ್ಷಣ ಇದಾಗಿದೆ. ವಿಶ್ವದಾದ್ಯಂತ ಆಚರಿಸಲ್ಪಡುವ ಈ ಹಬ್ಬವು ಇಡೀ ವಿಶ್ವದಲ್ಲಿ ಸುಖ ಶಾಂತಿಯನ್ನು ಮೂಡಿಸಲಿ. ಪರಸ್ಪರ ಅನ್ಯೋನ್ಯತೆ ನೆಲೆಸಲಿ ಎಂದರು. ಸಂತ ಅನ್ನಮ್ಮ ಪಿ.ಯು.ಕಾಲೇಜು ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು  ಮಾತನಾಡಿ,  ಕ್ರಿಸ್ಮಸ್ ದೇವರ ಹಬ್ಬವಾಗಿದ್ದು, ಯೇಸು ಕ್ರಿಸ್ತರ ಜನನದ ಸಂಕೇತವನ್ನು ತೋರಿಸುತ್ತದೆ. ಲೋಕಕಲ್ಯಾಣಕಾಗಿ ಯೇಸು ಕ್ರಿಸ್ತರ ಜನನವಾಯಿತು. ಈ ಕ್ರಿಸ್ಮಸ್ ಹಬ್ಬವು ಎಲ್ಲರಲ್ಲಿ ಶಾಂತಿ ನೆಮ್ಮದಿಯನ್ನು ಹೊತ್ತು ತರಲಿ ಎಂದು ಶುಭ ಹಾರೈಸಿದರು. ಸೆಂಟ್ ಆನ್ಸ್ ಪದವಿ ಕಾಲೇಜು ಪ್ರಾಂಶುಪಾಲೆ…

Read More

ಮಡಿಕೇರಿ ಡಿ.21 : ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಅಭಿವ್ಯಕ್ತಪಡಿಸಲು ಸೂಕ್ತ ವೇದಿಕೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಕಾಂತ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳ ಆಸಕ್ತಿ ಅಭಿರುಚಿ ಗುರುತಿಸಿ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಿಸಲು ಉತ್ತಮ ವೇದಿಕೆಯಾಗಿದೆ. ಕೊಡಗು ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಯಶಸ್ಸು ಗಳಿಸಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿ.ಟಿ.ಸೋಮಶೇಖರ್ ಅವರು ಮಾತನಾಡಿ ಎಲೆ ಮರೆಯ ಕಾಯಿಯಂತೆ ಗೂಡಿನಲ್ಲಿ ಇರುವವರಿಗೆ ಪ್ರತಿಭೆ ಹೊರತರಲು ಸೂಕ್ತ ವೇದಿಕೆಯಾಗಿದೆ ಎಂದರು. ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಆಸಕ್ತಿ…

Read More

ಮಡಿಕೇರಿ, ಡಿ.21 : ವಿಧ್ಯಾರ್ಥಿಗಳು ಸಾಹಿತ್ಯ ಅಧ್ಯಯನದ ಮುಖಾಂತರ ಸಾಹಿತ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟ್ರಕವಿ, ವಿಶ್ವ ಮಾನವ ಕುವೆಂಪು ಅವರ ಜನ್ಮದಿನದ ಅಂಗವಾಗಿ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಕಾರದೊಂದಿಗೆ ಕುಶಾಲನಗರ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ತಾ. 30 ರಂದು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕುವೆಂಪು ಅವರ ಸಾಹಿತ್ಯ, ನಾಡು, ನುಡಿ, ಕಲೆ ವಿಷಯದ ಮೇಲೆ ರಸಪ್ರಶ್ನೆ ನಡೆಯಲಿದೆ.ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಂಸನ ಪತ್ರ, ಪ್ರಥಮ, ದ್ವಿತೀಯ ಹಾಗು ತೃತೀಯ ನಗದು ಬಹುಮಾನ ಮತ್ತು ಫಲಕ ನೀಡಲಾಗುವುದು. ಭಾಗಬಹಿಸುವ ವಿಧ್ಯಾರ್ಥಿ ಗಳು ತಮ್ಮ ಕಾಲೇಜಿನ ಪ್ರಾಂಶುಪಾಲರಿಂದ ಗುರುತಿನ ಪತ್ರ ತರಬೇಕು. ಒಂದು ಕಾಲೇಜಿನಿಂದ ತಲಾ ಮೂರು ವಿಧ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶ ವಿರುತ್ತದೆ. ಸ್ಪರ್ಧಿಗಳು ತಾ. 28 ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬಳಗದ ಅಧ್ಯಕ್ಷ -ಲೋಕೇಶ್ ಸಾಗರ್ (9980988123),…

Read More

ಮಡಿಕೇರಿ ಡಿ.21 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಡಿಸೆಂಬರ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತ್‍ಮನೆ, ಬೆಟ್ಟಗೇರಿ, ಚೇರಂಬಾಣೆ, ಅಪ್ಪಂಗಳ, ಕೋಪಟ್ಟಿ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಡಿ.21 : 2024 ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ/ ಹೊರಜಿಲ್ಲೆ/ ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಶಬ್ಧ ಮಾಲಿನ್ಯ ನಿಯಂತ್ರಣ ಮಂಡಳಿ ವಿಂಗಡಿಸಿರುವ ಪ್ರದೇಶಗಳಲ್ಲಿ ನಿಗಧಿಪಡಿಸಿರುವ ಡೆಸಿಬಲ್‍ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ/ಧ್ವನಿವರ್ಧಕಗಳನ್ನು ಉಪಯೋಗಿಸಬಾರದು ಹಾಗೂ ಪ್ರವಾಸಿಗರು ಬಳಸಲು ಯಾವುದೇ ರೀತಿಯ ಅವಕಾಶಗಳನ್ನು ನೀಡಬಾರದು. ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಸರಬರಾಜು/ಬಳಕೆ ಮಾಡುವುದು ಕಂಡುಬಂದಲ್ಲಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳ ಮಾಲೀಕರು ಹಾಗೂ ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಮತ್ತು ಮಾಹಿತಿ ನೀಡದೇ ಮಾದಕ ವಸ್ತುಗಳನ್ನು ಮಾರಟ/ಬಳಕೆ ಮಾಡಲು ಸಹಕರಿಸಿರುವುದು…

Read More

ಮಡಿಕೇರಿ, ಡಿ.21 : ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ನವದೆಹಲಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ( ಕೆ- ಸ್ಟೆಪ್ಸ್ ) ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ಕೊಡಗು ವಿದ್ಯಾಲಯದ ವತಿಯಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ  ಡಿ.22 ರಂದು ಬೆಳಿಗ್ಗೆ 10.00 ಗಂಟೆಗೆ ಮಡಿಕೇರಿ ನಗರದ ಕೊಡಗು ವಿದ್ಯಾಲಯದಲ್ಲಿ “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ”ಎಂಬ ಕೇಂದ್ರ ವಿಷಯದಡಿ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023 ವನ್ನು ಸಂಘಟಿಸಲಾಗಿದೆ. ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಕೇಂದ್ರ ವಿಷಯದಡಿ ನಾನಾ ಉಪ-ವಿಷಯಗಳ ಅಭ್ಯಾಸಾತ್ಮಕ ಚಟುವಟಿಕೆ ಕುರಿತು ಇಬ್ಬರು ವಿದ್ಯಾರ್ಥಿಗಳ ತಂಡ ತಮ್ಮ ಶಿಕ್ಷಕರ ಮಾರ್ಗದರ್ಶನದೊಂದಿಗೆ ವಿಜ್ಞಾನಿಗಳ ಮಾದರಿಯಲ್ಲಿ ವೈಜ್ಞಾನಿಕ ಯೋಜನಾ ವರದಿ ತಯಾರಿಸಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸಲಿದ್ದಾರೆ ಎಂದು ಎಂದು ರಾಜ್ಯ…

Read More

ಮಡಿಕೇರಿ ಡಿ.21 : ಏಳು ವರ್ಷದ ಬಾಲಕಿ ಮಾಯಾ ಅಪ್ಪಚ್ಚು ತನ್ನ ಶಾಲೆಯ ಆರಂಭದ ದಿನಗಳಲ್ಲಿ ಅಲ್ಲಿಯ ಹೊಸ ವಾತಾವರಣದಲ್ಲಿ ತನಗೆ ಉಂಟಾದ ಭಯ, ಆತಂಕ, ಮನಸ್ಸಿನ ಗೊಂದಲಗಳು ಹಾಗೂ ಅದ್ಭುತ ಕಲ್ಪನಾ ಶಕ್ತಿಯನ್ನು ಸ್ವತ: ತಾನೇ ವಿಶೇಷವಾಗಿ ವಿವರಿಸಿರುವ “ಮಾಯಾಳ ಮಾಂತ್ರಿಕ ಜಗತ್ತು” ಪುಸ್ತಕ ಇಂದು ಬಿಡುಗಡೆಗೊಂಡಿತು. ಮಡಿಕೇರಿಯಲ್ಲಿ ಮಾಯಾ ಅಪ್ಪಚ್ಚು ಬರೆದಿರುವ “The girl who unleashed MAGIC”  ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮಾಯಾಳ ತಾಯಿ ಸಂಚಿತ್ ಅಪ್ಪಚ್ಚು, ತಂದೆ ಕಾರ್ತಿಕ್ ಅಪ್ಪಚ್ಚು, ಮಾಯಾಳ ನೆನಪುಗಳನ್ನು ಮೆಲುಕು ಹಾಕಿ, ಅವಳ ಬರಹಳನ್ನು ಪುಸ್ತಕ ರೂಪದಲ್ಲಿ ಸಂಗ್ರಹಿಸಿದ ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಕೊಡವ ಮಕ್ಕಡ ಕೂಟದ ಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಮಾಯಾಳ ಸಾಧನೆಯನ್ನು ಇತರ ವಿದ್ಯಾರ್ಥಿಗಳಿಗೆ ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ಕೊಡಗಿನ ಶಾಲಾ ಕಾಲೇಜುಗಳ ಗ್ರಂಥಾಲಯಗಳಿಗೆ ಪುಸ್ತಕವನ್ನು ನೀಡಲಾಗುವುದೆಂದರು. ಮಾಯಾಳ ಪುಟ್ಟ ಸಹೋದರ ವರುಣ್ ಹಾಜರಿದ್ದರು. ಅಮೇರಿಕದ ಹೈಕ್ರಾಫ್ಟ್…

Read More