ಮಡಿಕೇರಿ ಡಿ.21 : ಜಿಲ್ಲಾ ಕೇಂದ್ರ ಮಡಿಕೇರಿ ಜನತೆಯ ನಿದ್ದೆಗೆಡಿಸುತ್ತಿರುವ ‘ಬೀದಿ ನಾಯಿ’ಗಳ ಉಪಟಳ ಇದೀಗ ನಗರಸಭೆಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿರುವಂತೆಯೇ, ಕೆಲವು ಬಡಾವಣೆಗಳಲ್ಲಿನ ಮುಳ್ಳುಹಂದಿ, ಕಾಡು ಹಂದಿಗಳ ಉಪಟಳವೂ ಇದರೊಂದಿಗೆ ಸೇರಿಕೊಳ್ಳುವ ಮೂಲಕ ಒಟ್ಟು ಸಮಸ್ಯೆಯನ್ನು ಜಟಿಲಗೊಳಿಸಿದೆ. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ನಗರಸಭಾ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಕೆ.ಎಸ್.ರಮೇಶ್, ನಗರದ ಪ್ರತಿ ರಸ್ತೆ ರಸ್ತೆಯಲ್ಲು ಬೀದಿ ನಾಯಿಗಳ ಹಿಂಡು ಕಂಡು ಬರುತ್ತಿದ್ದು, ಸಾಕಷ್ಟು ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ದಷ್ಟ ಪುಷ್ಟವಾಗಿರುವ ಬೀದಿನಾಯಿಗಳ ಕಾಟಕ್ಕೆ ಕೊನೆ ಹಾಡಬೇಕಾಗಿದೆ ಎಂದರು. ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಿಸಿದರು ನಾಯಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಲೆ ಇದೆ ಎಂದು ಆತಂಕ ವ್ಯಕ್ತಪಡಿಸಿದ ರಮೇಶ್, ಪರಿಸ್ಥಿತಿ ಕೈ ಮೀರುವುದಕ್ಕೂ ಮೊದಲು ನಗರದಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಹಿಡಿಯಬೇಕು. ನಗರ ವ್ಯಾಪ್ತಿಯ ಯಾವುದಾದರು ಅರ್ಧ ಏಕರೆ ಪ್ರದೇಶದ ಸುತ್ತ ಬೇಲಿ ಅಳವಡಿಸಿ ಅಲ್ಲಿ ಈ ನಾಯಿಗಳನ್ನು ಬಿಡಬೇಕು. ಬೀದಿನಾಯಿಗಳ ನಿಯಂತ್ರಣಕ್ಕೆ…
ಲೇಖಕ: admin
ಮಡಿಕೇರಿ ಡಿ.21 : ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತ ವಿಜಯ ಅವರ ವಿರುದ್ಧ ಅಸಮಾಧಾನ ಸ್ಫೋಟಗೊಂಡಿತು. ನಗರಸಭಾ ಆಡಳಿತ ಸಂಪೂರ್ಣವಾಗಿ ವಿಫಲಗೊಂಡಿದ್ದು, ಸಾರ್ವಜನಿಕರಿಗೆ ನ್ಯಾಯ ದೊರಕಿಸಲು ಸಾಧ್ಯವಾಗುತ್ತಿಲ್ಲವೆಂದು ಸದಸ್ಯರು ಅಸಹಾಯಕತೆ ವ್ಯಕ್ತಪಡಿಸಿದರು. ವ್ಯವಸ್ಥೆಯ ಸುಧಾರಣೆಗೆ ಅಧ್ಯಕ್ಷೆ ಅನಿತಾ ಪೂವಯ್ಯ ಅವರಿಗೆ ಪಕ್ಷಾತೀತವಾಗಿ ಬೆಂಬಲ ಸೂಚಿಸುವ ಮೂಲಕ ಸದಸ್ಯರು ಒಗ್ಗಟ್ಟು ಪ್ರದರ್ಶಿಸಿದರು. ನಗರಸಭಾ ಸಭಾಂಗಣದಲ್ಲಿ ಅಧ್ಯಕ್ಷೆ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳಲ್ಲಿ ಅಧಿಕಾರಿಗಳು ತೋರುತ್ತಿರುವ ಅಸಹಕಾರ ಮನೋಭಾವದ ಕುರಿತು ಸದಸ್ಯರುಗಳು ವಾಗ್ಧಾಳಿ ನಡೆಸಿದರು. ವಿರೋಧ ಪಕ್ಷ ಎಸ್ಡಿಪಿಐ ನ ಸದಸ್ಯರುಗಳಾದ ಅಮಿನ್ ಮೊಹ್ಸಿನ್ ಹಾಗೂ ಎಂ.ಕೆ.ಮನ್ಸೂರ್ ಆಲಿ ಮಾತನಾಡಿ ಮಾರುಕಟ್ಟೆ ಬಳಿ 8 ತಾತ್ಕಾಲಿಕ ಮಳಿಗೆಗಳ ನಿರ್ಮಾಣಕ್ಕೆ ರಿ-ಟೆಂಡರ್ ಪ್ರಕ್ರಿಯೆ ನಡೆಸದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ಪೌರಾಯುಕ್ತರು ಆಸಕ್ತಿ ವಹಿಸಿ ರಿ-ಟೆಂಡರ್ ಮಾಡಬೇಕಾಗಿತ್ತು. ಆದರೆ ನಗರಸಭಾ ಕಚೇರಿಯಲ್ಲಿ ಅಧಿಕಾರಿಗಳೇ ಇರುವುದಿಲ್ಲ. ರಜೆ ಅಥವಾ…
ಮಡಿಕೇರಿ ಡಿ.22 : ಕೇಂದ್ರ ಬಿಜೆಪಿ ಸರಕಾರವು ಸಂಸತ್ತಿನ ಉಭಯ ಸದನಗಳ 142 ಸಂಸದರನ್ನು ಅಸಂವಿಧಾನಿಕ ರೀತಿಯಲ್ಲಿ ಅಮಾನತ್ತುಗೊಳಿಸಿ, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಡಿ.22 ರಂದು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ. ಎಐಸಿಸಿ ಹಾಗೂ ಕೆಪಿಸಿಸಿ ರಾಷ್ಟ್ರವ್ಯಾಪ್ತಿ ಕರೆ ನೀಡಿರುವ ಹಿನ್ನೆಲೆ ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಇರುವ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದ್ದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ಸಚಿವರುಗಳು ಹಾಗೂ ಶಾಸಕರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ನಗರ ಸಭಾ ಮಾಜಿ ಸದಸ್ಯರು ,ಮಡಿಕೇರಿ ನಗರದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, 29 ಬೂತ್ ಗಳ ಎಲ್ಲಾ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾಂಗ್ರೆಸ್…
ಸುಂಟಿಕೊಪ್ಪ,ಡಿ.20: ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ ಮತ್ತು ವಾರ್ಷಿಕೋತ್ಸವವು ಡಿ.22 ಮತ್ತು 23 ರಂದು ನಡೆಯಲಿದೆ. ಡಿ.22 ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸೈನಿಕ ಸುಬ್ರಾಯ ಕಾಸ್ಪಾಡಿ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರಿಗೆ, ಮಾಧ್ಯಮಿಕ ಶಾಲಾ ಬಾಲಕ ಮತ್ತು ಬಾಲಕಿಯರಿಗೆ, ಸಾರ್ವಜನಿಕ ಪುರುಷ ಮತ್ತು ಮಹಿಳೆಯರಿಗೆ ಆಯೋಜಿಸಲಾಗಿದೆ. ಪುರುಷರ ಪ್ರದರ್ಶನ ಕಬಡ್ಡಿ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪ, 7ನೇ ಹೊಸಕೋಟೆ, ಕಂಬಿಬಾಣೆ ಹಾಗೂ ಕೊಡಗರಹಳ್ಳಿ ತಂಡಗಳು ಪಾಲ್ಗೊಳ್ಳಲಿವೆ. ಸಮಾರೋಪ ಸಮಾರಂಭ ಸೋಮವಾರಪೇಟೆ ಶಾಲಾ ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಕುಮಾರಿ, ಕೊಡಗರಹಳ್ಳಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹೆಚ್.ಪಿ.ರವೀಶ್, ಸುಂಟಿಕೊಪ್ಪ ಪಿ.ಎ.ಸಿ.ಎಸ್. ಉಪಾಧ್ಯಕ್ಷೆ ರಮ್ಯ ಮೋಹನ್ ಆಗಮಿಸಲಿದ್ದಾರೆ. ಡಿ.23 ರಂದು ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಲಿದ್ದು, ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ಕುಮಾರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆ.ಎಸ್.ಮಂಜುನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಎಂ.ಚಂದ್ರಕಾಂತ್,…
ನಾಪೋಕ್ಲು ಡಿ.21 : ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಪೊಕ್ಲು ಇದರ ವತಿಯಿಂದ ಇಲ್ಲಿಗೆ ಸಮೀಪದ ಹಳೇ ತಾಲೂಕಿನಲ್ಲಿರುವ ಅಂಗನವಾಡಿ ಶಾಲೆಯಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಶ್ರಮದಾನ ನಡೆಯಿತು. ಅಂಗನವಾಡಿಯ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿ ಕಡಿದು ಸ್ವಚ್ಛಗೊಳಿಸಿದಲ್ಲದೆ ತರಕಾರಿ ಬೆಲೆಸಲು ಪೂರಕವಾದ ಪಾತಿ ನಿರ್ಮಿಸಿದರು. ಶ್ರಮದಾನದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿ ಬಾಳೆಯಡ ದಿವ್ಯ, ಉಮಾಲಕ್ಷ್ಮಿ ,ಚಂದ್ರಕಲಾ, ದಿಲೀಶ್ ,ಶಂಕರ, ಶರವಣ ಮತ್ತು ಅಂಗನವಾಡಿಯ ಶಿಕ್ಷಕಿಯಾದ ಜ್ಯೋತಿ ಸಹಾಯಕಿ ಸರೋಜಾ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಡಿ.21 : ಮಡಿಕೇರಿಯ ತನಲ್ ನೆರಳಿನ ಮನೆಯ ವೃದ್ಧಾಶ್ರಮದ ವತಿಯಿಂದ ನಡೆದ ವಾರ್ಷಿಕ ಸಭೆಯಲ್ಲಿ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಸಮರ್ಥ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ಎರಡು ವರ್ಷಗಳಿಂದ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕ ತಂಡವು ಮಡಿಕೇರಿಯಲ್ಲಿರುವ ತನಲ್ ನೆರಳಿನ ಮನೆ ವೃದ್ಧಾಶ್ರಮಕ್ಕೆ ಹೋಗಿ ತನ್ನ ಕೈಲಾದಂತಹ ಸೇವೆಯನ್ನ ಮಾಡುತ್ತಾ ಬರುತ್ತಿತ್ತು. ಮಾತ್ರವಲ್ಲದೇ ವಿವಿಧ ಕಡೆಯಲ್ಲೂ ನಿಸ್ವಾರ್ಥ ಸೇವೆಯನ್ನ ಮಾಡುತ್ತಿರುವುದನ್ನು ಗಮನಿಸಿದ ನೆರಳಿನ ಮನೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವಾರ್ಷಿಕ ಸಭೆಯಲ್ಲಿ ಸಮರ್ಥ ಸೇವಾ ಪುರಸ್ಕಾರ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಬಾಳೆಯಡ ದಿವ್ಯ ಮಂದಪ್ಪ ಅವರ ತಂಡದ ಸ್ವಯಂ ಸೇವಕರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಡಿ.29 : ಕಕ್ಕುಂದಕಾಡು ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಡಿ.23 ರಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ದರ್ಶನ ಹಾಗೂ ಪೂಜೆ ನಡೆಯಲಿದೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳವಂತೆ ದೇವಸ್ಥಾನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ವರದಿ : ದುಗ್ಗಳ ಸದಾನಂದ
ಸೋಮವಾರಪೇಟೆ ಡಿ.21 : ಕಾಫಿ ಬೆಳೆಗಾರರ 10ಎಚ್ಪಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಬೇಕು. ಡಿಬಿಟಿ ಯೋಜನೆಯನ್ನು ಕೈಬಿಡಬೇಕು. ಬೆಳೆಗಾರರ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡಬೇಕೆಂದು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಾಫಿ ಬೆಳೆಗಾರರು ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬೆಳೆಗಾರರು ಮಾನವ ಸರಪಳಿ ನಿರ್ಮಿಸಿ, ವಿದ್ಯುತ್ ಮೀಟರ್ ಹಾಗು ಬಿಲ್ಗಳಿಗೆ ಬೆಂಕಿ ಕೊಟ್ಟು ಅಕ್ರೋಶ ವ್ಯಕ್ತಪಡಿಸಿ, ಇಂಧನ ಸಚಿವರು ಮತ್ತು ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರ್ಕಾರ ಕೊಡಗು ಜಿಲ್ಲೆಗೆ ಅನ್ಯಾಯ ಮಾಡುತ್ತಿದೆ. ಮಲತಾಯಿ ಧೋರಣೆ ಎಸಗುತ್ತಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೊಡಗಿನಲ್ಲಿ ರೈತರೇ ಕಾಫಿ ಬೆಳೆಯುತ್ತಿದ್ದಾರೆ. ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬಿಟ್ಟು, ಪಂಪ್ಸೆಟ್ಗಳ ವಿದ್ಯುತ್ ಬಿಲ್ ಕಟ್ಟಿ ಇಲ್ಲಂದ್ರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಬೆದರಿಕೆ ಹಾಕುವ ನೋಟಿಸ್ ಮಾಡುತ್ತಿದ್ದಾರೆ. ಇದು ಕೊಡಗಿನ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು…
ಸಿದ್ದಾಪುರ ಡಿ.21 : ಹಲವಡೆ ಬೆಳೆಯುವ ಸಾಧಾರಣ ನಿಂಬೆ ಹಣ್ಣುಗಳ ಸಣ್ಣ ಗಾತ್ರ ಕಂಡಿದ್ದೇವೆ ಆದರೆ ಪಾಲಿಬೆಟ್ಟದ ಕಾಫಿ ತೋಟ ಒಂದರಲ್ಲಿ ಬೆಳೆದ ಗಿಡದಲ್ಲಿ ಬರೋಬ್ಬರಿ 5 ಕೆಜಿ ಗಾತ್ರದ ಗಜ ನಿಂಬೆಹಣ್ಣು ಕಂಡು ಕಾರ್ಮಿಕ ಸ್ಥಳೀಯ ರೈತರು ಬೆರಗಾಗಿದ್ದಾರೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರ ಕಾಫಿ ತೋಟದಲ್ಲಿ ನಿಂಬೆಹಣ್ಣು ಕಂಡುಬಂದಿದ್ದು, ಅಚ್ಚರಿ ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡಗಳಲ್ಲಿ ಸಣ್ಣ ಗಾತ್ರದಿಂದ ಬರೋಬರಿ 5 ಕೆ.ಜಿ ತೂಕದ ನಿಂಬೆ ಹಣ್ಣುಗಳು ಕಂಡು ಬಂದು ಅಚ್ಚರಿ ಮೂಡಿಸಿದೆ. ನಾಲ್ಕು ವರ್ಷಗಳ ಹಿಂದೆ ವಿಜು ಸುಬ್ರಮಣಿ ಅವರು ಮೈಸೂರು ಮಾರುಕಟ್ಟೆಯಲ್ಲಿ ಸಿಟ್ರಸ್ ಹಣ್ಣು ಖರೀದಿ ಮಾಡಿ ತಂದಿದ್ದರು. ಉಪಯೋಗಕ್ಕೆ ಬಾರದ ಒಂದು ಹಣ್ಣನ್ನು ಮನೆಯ ಹಿಂಬದಿಯ ತೋಟದಲ್ಲಿ ಹೆಸದಿದ್ದರೂ ಕೆಲ ದಿನಗಳ ನಂತರ ಸಣ್ಣ ಎರಡು ಗಿಡಗಳು ಬೆಳೆದು ಬಂದವು. ನಂತರ ಗಿಡವನ್ನು ಕಿತ್ತು ತೋಟದ ಬದಿಯಲ್ಲಿ ಆರ್ಗನಿಕ್ ಗೊಬ್ಬರವನ್ನು ಬಳಸಿ…
ಮಡಿಕೇರಿ ಡಿ.21 : ಇಂದಿರಾನಗರದ ಕುಂದುರು ಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ಸುದರ್ಶನ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ಆವರಣದಲ್ಲಿ ತಂತ್ರಿಗಳಾದ ಕೇರಳದ ಮನೋಹರ್ ಪಣಿಕರ್ ಅವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ಮುಂಜಾನೆಯಿಂದಲೆ ಗಣಪತಿ ಹೋಮ, ಸುದರ್ಶನ್ ಹೋಮ, ಅಗೋರ ಹೋಮ, ಪ್ರತ್ಯಂಗರಿ ಹೋಮ, ಯಮರಾಜ ಹೋಮ, ತಿಲ ಹೋಮ, ದುರಿದ ವೆರವಾಡ್ ಹೋಮ, ಪ್ರೇತ ಹೋಮ, ಸಾಯುಜ್ಯ ಹೋಮ, ರಾಜಗೋಪಾಲ್ ಹೋಮ ಹಾಗೂ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಹಾಗೂ ಇಂದಿರ ನಗರ, ತಾಳತ್ ಮನೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.






