ಸಿದ್ದಾಪುರ ಡಿ.21 : ಹಲವಡೆ ಬೆಳೆಯುವ ಸಾಧಾರಣ ನಿಂಬೆ ಹಣ್ಣುಗಳ ಸಣ್ಣ ಗಾತ್ರ ಕಂಡಿದ್ದೇವೆ ಆದರೆ ಪಾಲಿಬೆಟ್ಟದ ಕಾಫಿ ತೋಟ ಒಂದರಲ್ಲಿ ಬೆಳೆದ ಗಿಡದಲ್ಲಿ ಬರೋಬರಿ 5 ಕೆಜಿ ಗಾತ್ರದ ಗಜ ನಿಂಬೆಹಣ್ಣು ಕಂಡು ಕಾರ್ಮಿಕ ಸ್ಥಳೀಯ ರೈತರು ಬೆರಗಾಗಿದ್ದಾರೆ. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ ಅವರ ಕಾಫಿ ತೋಟದಲ್ಲಿ ನಿಂಬೆಹಣ್ಣು ಕಂಡುಬಂದಿದ್ದು, ಅಚ್ಚರಿ ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡಗಳಲ್ಲಿ ಸಣ್ಣ ಗಾತ್ರದಿಂದ ಬರೋಬರಿ 5 ಕೆ.ಜಿ ತೂಕದ ನಿಂಬೆ ಹಣ್ಣುಗಳು ಕಂಡು ಬಂದು ಅಚ್ಚರಿ ಮೂಡಿಸಿದೆ. ನಾಲ್ಕು ವರ್ಷಗಳ ಹಿಂದೆ ವಿಜು ಸುಬ್ರಮಣಿ ಅವರು ಮೈಸೂರು ಮಾರುಕಟ್ಟೆಯಲ್ಲಿ ಸಿಟ್ರಸ್ ಹಣ್ಣು ಖರೀದಿ ಮಾಡಿ ತಂದಿದ್ದರು. ಉಪಯೋಗಕ್ಕೆ ಬಾರದ ಒಂದು ಹಣ್ಣನ್ನು ಮನೆಯ ಹಿಂಬದಿಯ ತೋಟದಲ್ಲಿ ಹೆಸದಿದ್ದರೂ ಕೆಲ ದಿನಗಳ ನಂತರ ಸಣ್ಣ ಎರಡು ಗಿಡಗಳು ಬೆಳೆದು ಬಂದವು. ನಂತರ ಗಿಡವನ್ನು ಕಿತ್ತು ತೋಟದ ಬದಿಯಲ್ಲಿ ಆರ್ಗನಿಕ್ ಗೊಬ್ಬರವನ್ನು ಬಳಸಿ…
ಲೇಖಕ: admin
ಮಡಿಕೇರಿ ಡಿ.20 : ಭಾಗಮಂಡಲ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ರೀತಿಯ ವೈದ್ಯಕೀಯ ಸೇವೆ ಕಲ್ಪಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಯ್ಯಂಗೇರಿ ಘಟಕ ಒತ್ತಾಯಿಸಿದೆ. ಅಯ್ಯಂಗೇರಿ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಆಗಮಿಸಿದ ಸಂದರ್ಭ ಮನವಿ ಪತ್ರ ಸಲ್ಲಿಸಿದ ಎಸ್ಡಿಪಿಐ ಪ್ರಮುಖರು ಭಾಗಮಂಡಲ ಆಸ್ಪತ್ರೆಯಲ್ಲಿರುವ ಕೊರತೆಗಳ ಬಗ್ಗೆ ವಿವರಿಸಿದರು. ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ಶಾಸಕರು ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ಲಭಿಸುವಂತೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಸುವ ಸಂದರ್ಭ ಎಸ್ಡಿಪಿಐ ಅಯ್ಯಂಗೇರಿ ಘಟಕದ ಅಧ್ಯಕ್ಷ ಉಸ್ಮಾನ್, ಕೋಶಾಧಿಕಾರಿ ಸಲಾಂ, ಸದಸ್ಯರಾದ ಮುನೀರ್ ಹಾಗೂ ಸಲಾಂ ಉಪಸ್ಥಿತರಿದ್ದರು.
ಗೋಣಿಕೊಪ್ಪಲು.ಡಿ.20: ಕೊಡವರ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಪದ್ಧತಿ , ಪರಂಪರೆ ಉಳಿಸುವ ನಿಟ್ಟಿನಲ್ಲಿ ಸರ್ವರು ಸಹಕಾರ ನೀಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಿಂದ ತಿಂಗಳಿಗೊಂದು ಹೆಜ್ಜೆಯೆಂಬಂತೆ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕಲೆಯನ್ನು ಉಳಿಸಲು ಎಲ್ಲಾ ಪ್ರಯತ್ನ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪೊಂಬೊಳ್ಚ ಕೂಟ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಕೂಟದ ಜಿಲ್ಲಾಧ್ಯಕ್ಷ ಮಾಳೆಟಿರ ಶ್ರೀನಿವಾಸ್ ಅಭಿಪ್ರಾಯ ಪಟ್ಟರು. ಗೋಣಿಕೊಪ್ಪಲುವಿನ ಇಗ್ಗುತ್ತಪ್ಪ ಕೊಡವ ಸಂಘದ ಸಭಾಂಗಣದಲ್ಲಿ ಪೊಂಬೊಳ್ಚ ಕೂಟದಿಂದ ಆಯೋಜನೆಗೊಂಡಿದ್ದ ಜಿಲ್ಲಾ ಮಟ್ಟದ ಕವಿಗೋಷ್ಠಿಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡವ ಕವಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದರೂ ಇವರಿಗೆ ವೇದಿಕೆಗಳು ಲಭಿಸುತ್ತಿಲ್ಲ. ಹೀಗಾಗಿ ಕವಿಗಳಿಗೆ ವೇದಿಕೆ ನೀಡುವ ಕಾರ್ಯಕ್ರಮ ಪೊಂಬೊಳ್ಚ ಕೂಟದಿಂದ ನಡೆಯುತ್ತಿದೆ. ಆ ಮೂಲಕ ಕಲೆ ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು. ಮುಂದಿನ ವರ್ಷದಿಂದ ನಾಪೋಕ್ಲು ಕೊಡವ ಸಮಾಜದಿಂದ ಕಾರ್ಯಕ್ರಮಗಳನ್ನು ಆರಂಭಿಸಲಾಗುವುದು ಈ ಕಾರ್ಯಕ್ರಮದಲ್ಲಿ ಕೊಡವರ ಪದ್ಧತಿ, ಪರಂಪರೆಯ ಭಾಗವಾಗಿರುವ ದುಡಿಕೊಟ್ಟ್ , ಬಾಳೋಪಾಟ್ ಬೊಳಕಾಟ್ಗಳನ್ನು ಮಕ್ಕಳಿಗೆ…
ಕಡಂಗ ಡಿ.20 : ಕೊಡಗು ಮುಸ್ಲಿಂ ಕ್ರಿಕೆಟ್ ಟ್ರಸ್ಟ್ ನ ಸಿ.ಎ.ರಾಜಿಕ್ ಅವರನ್ನು ಆಯ್ಕೆ ಮಾಡಲಾಯಿತು. ಮುರ್ನಾಡುವಿನ ಉಸ್ತಾದ್ ಹೋಟೆಲ್ ಸಭಾಂಗಣದಲ್ಲಿ ಟ್ರಸ್ಟನ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತೂರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜಿಕ್ ಅವರನ್ನು ಆಡಳಿತ ಮಂಡಳಿಯ ಸರ್ವ ಸದಸ್ಯರ ಒಮ್ಮತದಿಂದ ಆಯ್ಕೆ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದರು. ಇದೇ ಸಂದರ್ಭ ಟ್ರಸ್ಟಿನ ನಿರ್ದೇಶಕರಾಗಿ ಗೋಣಿಕೊಪ್ಪಲುವಿನ ಫೈಜ್ ಅಹಮ್ಮದ್ ಅವರನ್ನು ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಕ್ರಿಕೆಟ್ ಪಂದ್ಯಾವಳಿಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಮುಸ್ಲಿಂ ಕ್ರಿಕೆಟ್ ಕಪ್ ಸ್ಥಾಪಕ ರಶೀದ್ ಎಡಪಾಲ ಮತ್ತು ಸದಸ್ಯರು ಪಾಲ್ಗೊಂಡಿದ್ದರು. ಟ್ರಸ್ಟಿನ ಕಾರ್ಯದರ್ಶಿ ಆದಂ ಸ್ವಾಗತಿಸಿದರು. ವರದಿ : ನೌಫಲ್ ಕಡಂಗ
ಕುಶಾಲನಗರ, ಡಿ.20 : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ( ಕೆ.ಆರ್.ಇ.ಡಿ.ಎಲ್.) ವತಿಯಿಂದ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೀಕರಿಸಬಹುದಾದ ಇಂಧನ / ಶಕ್ತಿ ಸಂಪನ್ಮೂಲಗಳ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಮುಗಿದು ಹೋಗುತ್ತಿರುವ ಫಾಸಿಲ್ ಇಂಧನ ಮೂಲಗಳಿಗೆ ಪರ್ಯಾಯವಾಗಿ ನಾವು ಪರಿಸರ ಸ್ನೇಹಿ ನವೀಕರಿಸಬಹುದಾದ ಬದಲಿ ಇಂಧನ ಮೂಲಗಳ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದರು. ಇಂಧನ ಸಂರಕ್ಷಣೆ ಮತ್ತು ಶಕ್ತಿಯ ಸಮರ್ಥ ಬಳಕೆಯ ಕಡೆಗೆ ಹೆಚ್ಚಿನ ಗಮನ ಹರಿಸಲು ಇಂತಹ ಕಾರ್ಯಾಗಾರ ಸಹಕಾರಿಯಾಗಿದೆ. ನಾವು ಪರಿಸರ ಸ್ನೇಹಿ ಇಂಧನ ಬಳಕೆ ಮಾಡುವ ಮೂಲಕ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ದಿಟ್ಟ ಹೆಜ್ಜೆ ಇಡಬೇಕು. ನಾವು ನಮ್ಮ ಮನೆ, ಕಟ್ಟಡಗಳು, ಕಛೇರಿ ಹೀಗೆ ಲಭ್ಯವಿರುವ…
ಮಡಿಕೇರಿ ಡಿ.20 : ನಗರದ ರಾಜಸೀಟು ಉದ್ಯಾನವನದಲ್ಲಿ ಪ್ರಸಕ್ತ ಸಾಲಿನ ‘ಫಲಪುಷ್ಪ ಪ್ರದರ್ಶನ’ವನ್ನು ಜನವರಿ, 26 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ರಾಜಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತೀ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಮತ್ತಿತರ ಸಂಬಂಧ ವಿಶೇಷ ಗಮನಹರಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ರಾಜಾಸೀಟು ಮಾರ್ಗದ ರಸ್ತೆಯನ್ನು ಸರಿಪಡಿಸಬೇಕು. ರಾಜಾಸೀಟು ಉದ್ಯಾನವನದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ನೀರು ಪೂರೈಕೆ ಮತ್ತು ಲೈಟಿಂಗ್ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ರಾಜಾಸೀಟು ಉದ್ಯಾನವನದ ಫೌಂಟೇನ್ನ್ನು (ಕಾರಂಜಿ) ಉತ್ತಮವಾಗಿ ನಿರ್ವಹಣೆ ಮಾಡುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ತಿಳಿಸಿದರು. ಫಲಪುಷ್ಪ ಪ್ರದರ್ಶನ ಏರ್ಪಡಿಸುವ ಸಂಬಂಧ ಕೊಡಗು ಜಿಲ್ಲೆಯ…
ಮಡಿಕೇರಿ ಡಿ.20 : ಜಿಲ್ಲಾ ಕಾರಾಗೃಹದಲ್ಲಿನ ಬಂಧಿಗಳು ಮುಂದಿನ ದಿನಗಳಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಚ್.ಸಿ.ಶಾಮ್ ಪ್ರಸಾದ್ ಅವರು ಕರೆ ನೀಡಿದ್ದಾರೆ. ನಗರದ ಹೊರ ವಲಯದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿನ 50 ಬಂಧಿಗಳಿಗೆ ನಬಾರ್ಡ್, ಒಡಿಪಿ ಹಾಗೂ ಜಿಲ್ಲಾ ಕಾರಾಗೃಹ ವತಿಯಿಂದ ಒಂದು ತಿಂಗಳ ಕಾಲ ಎಲೆಕ್ಟ್ರೀಷಿಯನ್ ಮತ್ತು ಪ್ಲಂಬಿಂಗ್ ಸಂಬಂಧ ಏರ್ಪಡಿಸಲಾಗಿದ್ದ ‘ವೃತ್ತಿ ಕೌಶಲ್ಯ ತರಬೇತಿ’ ಕಾರ್ಯಾಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ನಬಾರ್ಡ್ ವತಿಯಿಂದ ಏರ್ಪಡಿಸಲಾಗಿದ್ದ ವೃತ್ತಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವು ಬಹು ಉಪಯುಕ್ತವಾಗಿದ್ದು, ಕಾರಾಗೃಹ ಬಂಧಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ ಎಂದರು. ನಬಾರ್ಡ್ನ ಮಹಾ ಪ್ರಬಂಧಕರಾದ ಡಾ.ಕೆ.ಎಸ್.ಮಹೇಶ್ ಅವರು ಮಾತನಾಡಿ ವೃತ್ತಿ ಕೌಶಲ್ಯ ತರಬೇತಿ ಪಡೆಯುವುದರಿಂದ ಸ್ವ ಉದ್ಯೋಗ ಕೈಗೊಳ್ಳಲು ಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಕಾರಾಗೃಹ ಬಂಧಿಗಳು ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸುವತ್ತ ಗಮನಹರಿಸಬೇಕು ಎಂದು…
ಮಡಿಕೇರಿ ಡಿ.20 : ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯ 11 ಸ್ಟಾರ್ಸ್ ಕ್ರಿಕೆಟರ್ಸ್ ವತಿಯಿಂದ ಕಂಬಿಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.23 ಹಾಗೂ 24 ರಂದು ಮೊದಲನೇ ವರ್ಷದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪ್ರಥಮ ಬಹುಮಾನವಾಗಿ ರೂ.30 ಸಾವಿರ ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ರೂ.20 ಸಾವಿರ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುತ್ತದೆ. ಇದಲ್ಲದೆ ವೈಯಕ್ತಿಕ ಪ್ರಶಸ್ತಿಗಳಾದ ಉತ್ತಮ ಬ್ಯಾಟ್ಸ್ಮ್ಯಾನ್, ಉತ್ತಮ ಬೌಲರ್, ಸರಣಿ ಶ್ರೇಷ್ಠ, ಪಂದ್ಯ ಪುರುಶೋತ್ತಮ ಪ್ರಶಸ್ತಿ ವಿತರಿಸಲಾಗುತ್ತದೆ. ಸಾಧಕರಿಗೆ ಸನ್ಮಾನ : ಡಿ.23ರ ಶನಿವಾರ ರಾತ್ರಿ 7.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಇತ್ತೀಚೆಗೆ ನಡೆದ ಮೂರು ರಾಷ್ಟ್ರಗಳ ನಡುವಿನ 16ನೇ ಏಷ್ಯನ್ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ ಅರ್ಚನಾ ಜಯನ್ ಹಾಗೂ ಅಪ್ಸರ ಜಯನ್, ಪೊಲೀಸ್ ಅಧಿಕಾರಿ ಶ್ರೀನಿವಾಸ್ ಎಸ್.ಎಸ್, ರಾಜ್ಯ ಸಬ್ ಜೂನಿಯರ್ ಕಬಡ್ಡಿ ಆಟಗಾರ ಎಚ್.ಎಂ. ಅನೀಶ್ ಅವರನ್ನು ಸನ್ಮಾನಿಸಲಾಗುತ್ತಿದೆ.
ಮಡಿಕೇರಿ ಡಿ.20 : ಯುವ ಸಮೂಹದಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಿ ಸತ್ಪ್ರಜೆಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಸುನ್ನಿ ಸ್ಟುಡೆಂಡ್ಸ್ ಫೆಡರೇಷನ್(ಎಸ್ಎಸ್ಎಫ್) ವತಿಯಿಂದ ಡಿ.23 ಮತ್ತು 24 ರಂದು ನೆಲ್ಲಿಹುದಿಕೇರಿಯಲ್ಲಿ ‘ಕೊಡಗು ಜಿಲ್ಲಾ ಸಾಹಿತ್ಯೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಝುಬೈರ್ ಸಅದಿ ಮಾಲ್ದಾರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಲಿಹುದಿಕೇರಿಯ ಶಾದಿ ಮಹಲ್ನಲ್ಲಿ ಡಿ.23 ರಂದು ಬೆಳಗ್ಗೆ 10 ಗಂಟೆಗೆ ಸಾಹಿತ್ಯೋತ್ಸವವನ್ನು ಎಂಎಲ್ಸಿ ವಿಶ್ವನಾಥ್ ಅವರು ಉದ್ಘಾಟಿಸಲಿದ್ದಾರೆ. ಬಳಿಕ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳಿಗಾಗಿ 5 ಪ್ರತ್ಯೇಕ ವೇದಿಕೆಗಳಲ್ಲಿ 130 ಕ್ಕೂ ಹೆಚ್ಚಿನ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದ್ದು, 10 ಮಂದಿ ತೀರ್ಪುಗಾರರು ಕಾರ್ಯನಿರ್ವಹಿಸಲಿದ್ದಾರೆ. ಸ್ಪರ್ಧೆಗಳು ಕನ್ನಡ, ಹಿಂದಿ, ಇಂಗ್ಲೀಷ್, ಮಲಯಾಳಂ, ಉರ್ದು ಮತ್ತು ಅರೇಬಿಕ್ ಭಾಷೆಗಳಲ್ಲಿ ನಡೆಯಲಿದೆ. ಅಂದು ಸಂಜೆ ಧಾರ್ಮಿಕ ಪ್ರವಚನ ನಡೆಯಲಿದೆಯೆಂದು ತಿಳಿಸಿದರು. ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗುವ ಸ್ಪರ್ಧಿಗಳು ಭಟ್ಕಳದಲ್ಲಿ ನಡೆಯುವ ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿದ್ದು, ಅಲ್ಲಿ ಗೆಲುವು ಸಾಧಿಸುವವರು…
ಮಡಿಕೇರಿ ಡಿ.20 : ಕರ್ನಾಟಕ ಸ್ಪೋರ್ಟ್ಸ್ ಅಸೋಷಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ಆಶ್ರಯದಲ್ಲಿ ಮೈಸೂರಿನ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಹೆಗ್ಗಳ ಗ್ರಾಮದ ಪಿ.ಎ.ಇಶಾನಿ ಎರಡು ಪದಕ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಎಸ್. ಎಂ. ಎಸ್ ಅರಮೇರಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಇಶಾನಿ ವಿರಾಜಪೇಟೆಯ ಹೆಗ್ಗಳ ಗ್ರಾಮದ ಪಡಂಬೈಲು ಅನಿಲ್ ಮತ್ತು ತೀರ್ಥ ದಂಪತಿಗಳ ಪುತ್ರಿ. ಈಕೆ ವಿದುಷಿ ಹೇಮಾವತಿ ಕಾಂತರಾಜ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.






