ಲೇಖಕ: admin

ಸೋಮವಾರಪೇಟೆ ಡಿ.20 :  ಸೋಮವಾರಪೇಟೆ ಪ.ಪಂ ವತಿಯಿಂದ ಡಿ.21 ರಂದು  ನಡೆಯಬೇಕಾಗಿದ್ದ  60 ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಕಾರಣಾಂತರ ಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮುಖ್ಯಾಧಿಕಾರಿ ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಪುತ್ತೂರು ಡಿ.20 : ಕಳೆದೊಂದು ದಶಕದಿಂದ ಅಟೋಮೊಬೈಲ್ ಕ್ಷೇತ್ರದಲ್ಲಿ ವ್ಯಾಪಕ ಬದಲಾವಣೆಯಾಗುತ್ತಿದ್ದು, ಕೃತಕ ಬುದ್ದಿಮತ್ತೆ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಅಳವಡಿಕೆಯಿಂದ ಸಾಕಷ್ಟು ಹೊಸತನ ಕಂಡುಬರುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರು ಹಾಗೂ ಖ್ಯಾತ ಸ್ವರ್ಣೋದ್ಯಮಿಗಳೂ ಆದ ಬಲರಾಮ ಆಚಾರ್ಯ.ಜಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಹೊಸ ಹಾಗೂ ಹಳೆಯ ಕಾರುಗಳ ಹಾಗೂ ದ್ವಿಚಕ್ರ ವಾಹನಗಳ ಪ್ರದರ್ಶನ ಮೋಟರ್ ಮೋಬ್-2023ಕ್ಕೆ ಚಾಲನೆ ನೀಡಿ ಮಾತಾಡಿದರು. ಶೇ. 90 ಜನ ಪ್ರಯಾಣಕ್ಕೆ ಹಾಗೂ ಸಾಗಾಟಕ್ಕೆ ವಾಹನಗಳನ್ನು ಬಳಸಿಕೊಳ್ಳುತ್ತಾರೆ. ಶೇ. 10 ಜನರಿಗೆ ವಾಹನಗಳನ್ನು ಹೊಂದುವುದು ಒಂದು ಹವ್ಯಾಸ ಎಂದರು. ಇಂತಹ ಪ್ರದರ್ಶನವು ಪುತ್ತೂರಿಗೆ ಹೊಸತು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ವಾಹನವನ್ನು ಓಡಿಸುವ ಸಂದರ್ಭದಲ್ಲಿ ನನ್ನಂತೆ ಇತರರೂ ರಸ್ತೆಯಲ್ಲಿ ವಾಹನವನ್ನು ಓಡಿಸುತ್ತಿದ್ದಾರೆ ಎನ್ನುವ ಅರಿವು ಪ್ರತಿಯೊಬ್ಬ…

Read More

ಮಡಿಕೇರಿ ಡಿ.20 : ಮಧ್ಯಪ್ರದೇಶದ ಇಂದೋರಿನಲ್ಲಿ ನಡೆದ ಅಖಿಲ ಭಾರತ ಔಷದ ವ್ಯಾಪಾರಿಗಳ ಸಂಘದ ಸರ್ವಸದಸ್ಯರ ಮಹಾಸಭೆಯಲ್ಲಿ ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಗೌರವ ಕಾರ್ಯದರ್ಶಿಯಾಗಿರುವ ಅಂಬೇಕಲ್ ಜೀವನ್ ಅವರು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘವು ಮುಂಬೈನಲ್ಲಿ ತನ್ನ ಕೇಂದ್ರ ಕಚೇರಿಯನ್ನು ಹೊಂದಿದ್ದು, ಅಲ್ಲಿಂದ ಅಖಿಲ ಭಾರತ ಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ಇದು ಅಖಿಲ ಭಾರತ ಮಟ್ಟದಲ್ಲಿ ಅತ್ಯಂತ ಹೆಚ್ಚಿನ (ಸುಮಾರು 13 ಲಕ್ಷ) ಸದಸ್ಯರನ್ನು ಹೊಂದಿರುವ ಏಕೈಕ ಸಂಸ್ಥೆಯಾಗಿದೆ. ಕಳೆದ ಹಲವಾರು ದಶಕಗಳಿಂದ ಔಷಧ ವ್ಯಾಪಾರಿಗಳ ಕ್ಷೇಮಭಿವೃದ್ಧಿಗಾಗಿ ಮತ್ತು ಔಷಧ ವ್ಯಾಪಾರಿಗಳ ಅನೇಕ ಮೂಲ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಮೂಲಕ ತನ್ನನ್ನು ಗುರುತಿಸಿಕೊಂಡಿದೆ.

Read More

ಸುಂಟಿಕೊಪ್ಪ, ಡಿ.20: ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಮರದ ಕೊಂಬೆ ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ. ಸಮೀಪದ ಡಿ.ಪನ್ಯ ತೋಟದ ಲೈನ್ ಮನೆಯಲ್ಲಿ ವಾಸವಿರುವ ಕಾರ್ಮಿಕ ಬಪ್ಪಯ್ಯ ಎಂಬವರ ಪತ್ನಿ ಲಕ್ಷ್ಮೀ (48) ಮೃತ ದುರ್ದೈವಿ. ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮರದ ಕೊಂಬೆ ತಲೆ ಮೇಲೆ ಬಿದ್ದಿದ್ದು, ಗಾಂಭೀರ ಗಾಯಗೊಂಡ ಲಕ್ಷೀ ಅವರಿಗೆ ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಆದರೆ ಆದಾಗಲೇ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದರು. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

ಸುಂಟಿಕೊಪ್ಪ, ಡಿ.20 : ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯ ಸಮಿತಿ ವತಿಯಿಂದ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ಜರುಗಿತು. ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ಹಾಗೂ ರಾತ್ರಿ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನೇರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ತೀರ್ಥ ಪ್ರಸಾದ ಸ್ವೀಕರಿಸಿದರು. ನಂತರ ಕುಂದನ ನೃತ್ಯಾಲಯ ತಂಡದಿಂದ ನಡೆದ ಅತ್ಯಕರ್ಷ ನೃತ್ಯ ವೈವಿಧ್ಯಗಳು ಸಾರ್ವಜನಿಕರ ಗಮನ ಸೆಳೆಯಿತು. ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೆ, ಮಾಗಲು ವಸಂತ, ಶ್ರೀನಿವಾಸ್, ಪಿ.ಸಿ.ಮೋಹನ ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ ಸೇರಿದಂತೆ ಸಮಿತಿ ಸದಸ್ಯರು ಹಾಜರಿದ್ದರು.          

Read More

ನಾಪೋಕ್ಲು ಡಿ.20 : ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ಆವರಣದಲ್ಲಿ ನಡೆದ ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಸಂಪನ್ನಗೊಂಡಿತು. ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಅಜ್ಜಪ್ಪ ಕೋಲ ಹಾಗೂ ವಿಷ್ಣುಮೂರ್ತಿ ಕೋಲಗಳು ತಮ್ಮ ಸಾಂಪ್ರದಾಯಿಕ ವೇಷಭೂಷಣಗಳೊಂದಿಗೆ ಮೇಲೇರಿ (ಕೆಂಡಸೇವೆ) ಗಮನ ಸೆಳೆದವು. ವಿವಿಧ ಗ್ರಾಮಗಳಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿವಿಧ ರೀತಿಯ ಹರಕೆ, ಸೇವೆಗಳನ್ನು ಅರ್ಪಿಸಿದರು. ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಅನ್ನದಾನ ನಡೆಯಿತು. ಉತ್ಸವದ ಅಂಗವಾಗಿ 16 ಶನಿವಾರ ದಂದು ಹರಕೆಯ ನಾಯಿ ಒಪ್ಪಿಸಲಾಯಿತು. ಕೊಟ್ಟಿ ಹಾಡಿ, ದೀಪಾರಾಧನೆ, ತೆರೆ ಹಾಗೂ 19,ಮಂಗಳವಾರ ದಂದು ವಿವಿಧ ಭೂತಾರಾಧನೆ ಹಾಗೂ ಮೇಲೇರಿ ವಾರ್ಷಿಕ ಹಬ್ಬ ನಡೆಯಿತು. ದೇವಾಲಯದ ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉತ್ಸವದಲ್ಲಿ…

Read More

ಮಡಿಕೇರಿ ಡಿ.20 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೃಷಿಯೇತರ ಮತ್ತು ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಆದಾಯ ತೆರಿಗೆ, ಜಿಎಸ್‍ಟಿ ಮತ್ತು ಸಹಕಾರ ಸಂಘಗಳ ಆಡಳಿತ ನಿರ್ವಹಣೆ ಕುರಿತು ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮವು ಡಿಸೆಂಬರ್, 26 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಯೂರ ವ್ಯಾಲಿ ವ್ಯೂ ಹೋಟೆಲ್‍ನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾದ ಜಯಕರಶೆಟ್ಟಿ ಬಿ. ಇಂದ್ರಾಳಿ ಅವರು ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಬಿ.ಸಿ.ಲೋಕಪ್ಪಗೌಡ, ಕೊಡಗು ಜಿಲ್ಲಾ ಸಹಕಾರ ಯೂನಿಯರ್ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರು ಇತರರು ಪಾಲ್ಗೊಳ್ಳಲಿದ್ದಾರೆ. 

Read More

ಮಡಿಕೇರಿ ಡಿ.20 : ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಡಿಸೆಂಬರ್, 21 ರಂದು ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ನಾಪೋಕ್ಲು ಡಿ.20 : ಕಾಫಿ ಬೆಳೆಗಾರರಿಗೆ ತೆರೆದ ಬಾವಿ, ಕಣ ನಿರ್ಮಾಣ , ಕೆರೆ ನಿರ್ಮಾಣ ಹಾಗೂ ಪಂಪ್ ಸೆಟ್ ಅಳವಡಿಸಲು ಕಾಫಿ ಮಂಡಳಿಯಿಂದ ರಿಯಾಯಿತಿ ದರದಲ್ಲಿ ಸಬ್ಸಿಡಿ ನೀಡಲಾಗುವುದು. ಇದನ್ನು ಬೆಳೆಗಾರರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಭಾರತ ಸರ್ಕಾರದ ಕಾಫಿ ಮಂಡಳಿಯ ನಿರ್ದೇಶಕ ತಳೂರು ಎ .ಕಿಶೋರ್ ಕುಮಾರ್ ಹೇಳಿದರು. ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕಾಫಿ ಮಂಡಳಿ ವತಿಯಿಂದ ರೈತರಿಗೆ ಆಯೋಜಿಸಲಾಗಿದ್ದ ಕಾಫಿ, ಕಾಳು ಮೆಣಸು ಮತ್ತು ಹಣ್ಣು ಹಂಪಲುಗಳ ತೋಟಗಾರಿಕೆ ಬೆಳೆಗಳ ಬಗ್ಗೆ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಫಿ ಮಂಡಳಿ ವತಿಯಿಂದ ಬೆಳೆಗಾರರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ .ಕಾಫಿ ಬೆಳೆ ಮಾಡಲು ಮಿನಿ ಹಲ್ಲರ್ ಗಳನ್ನು ರೈತರ ಅನುಕೂಲಕ್ಕಾಗಿ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ .ಎಲ್ಲಾ ಸಬ್ಸಿಡಿಗಳ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಸೂಚಿಸಿದರು. ಕಾರ್ಯಕ್ರಮದಲ್ಲಿ ರೈತರು ತೋಟಕ್ಕೆ ಯಾವ ಪ್ರಮಾಣದಲ್ಲಿ ಗೊಬ್ಬರ ಹಾಕಬೇಕು ಮತ್ತು ಮಣ್ಣು ಪರೀಕ್ಷೆಯಿಂದ ಆಗುವ…

Read More

ವಿರಾಜಪೇಟೆ ಡಿ.20 : ತಾಲೂಕಿನ ಗಡಿಭಾಗದಲ್ಲಿರುವ ಮಲೆಯಾಳಂ ಶಾಲೆಯಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿರಾಜಪೇಟೆ ತಾಲೂಕಿನ ಕ್ಲಸ್ಟರ್ ಮಟ್ಟದ ಸಮಾಲೋಚನಾ ಸಭೆ ನಡೆಯಿತು. ಗಡಿಭಾಗದಲ್ಲಿರುವ ಮಲೆಯಾಳ ಶಾಲೆಯಲ್ಲಿ ಇದೆ ಮೊದಲ ಬಾರಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್‍ನ ಶಿಕ್ಷಕರು ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಬಿಆರ್‍ಪಿ ಕೆ.ಸಿ. ಗೀತಾಂಜಲಿ ಸಭೆಯನ್ನುದ್ದೇಶಿಸಿ ಮಾತನಾಡಿ, ಮಕ್ಕಳ ಕಲಿಕೆ ಹಾಗೂ ಪ್ರಗತಿಯ ಬಗ್ಗೆ ತಿಳಿಸಿದರು. ಕಲ್ತೋಡ್ ಕ್ಲಸ್ಟರ್‍ನ ಸಿಆರ್‍ಪಿ ವಿ.ಟಿ. ವೆಂಕಟೇಶ್ ಹಾಗೂ ಅರಣ್ಯ ಇಲಾಖೆಯ ಸಂಪತ್ ಕುಮಾರ್ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಶಾಲೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎ.ವಿ. ಮಂಜುನಾಥ್ ವಹಿಸಿ ಮಾತನಾಡಿ, ಮಲೆಯಾಳಂ ಶಾಲೆ ನಡೆದುಬಂದ ಹಾದಿ ಸೇರಿದಂತೆ ಇನ್ನಿತರ ವಿಚಾರಗಳನ್ನು ತಿಳಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕರಾದ ಸಜೇಶ್ ಕುಮಾರ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.

Read More