ಕುಶಾಲನಗರ ಜ.15 : ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗ್ರಾ.ಪಂ ನ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು. ಕೂಡುಮಂಗಳೂರು ಗ್ರಾ.ಪಂ ನ ಆರು ಪೌರಕಾರ್ಮಿಕರಿಗೆ ಹಾಗೂ ಈ ಹಿಂದೆ ಮರಣ ಹೊಂದಿದ್ದ ಶಂಕರ್ ಹಾಗೂ ರಂಗರವರ ಕುಟುಂಬಕ್ಕೆ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಜನ್ಮ ದಿನಾಚರಣೆ ಎಂಬುದು ಸದಾ ನೆನಪಿನಲ್ಲಿರಬೇಕು. ಈ ದೃಷ್ಟಿಯಿಂದ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ತಮ್ಮ ಪಂಚಾಯಿತಿಯ ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡುವ ಮೂಲಕ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದ್ದಾರೆ ಎಂದರು. ಹಿರಿಯ ಪತ್ರಕರ್ತರಾದ ಕೆ.ಕೆ.ನಾಗರಾಜ್ ಶೆಟ್ಟಿ ಮಾತನಾಡಿ, ಜನ್ಮ ದಿನದಂದು ಮೋಜು ಮಸ್ತಿ ಮಾಡಿ ಹಣವನ್ನು ಪೋಲು ಮಾಡುತ್ತಾರೆ. ಆದರೆ ಸ್ನೇಹಿತರು ಹಾಗೂ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪೌರಕಾರ್ಮಿಕರಿಗೆ ಆಹಾರ ಕಿಟ್ ನೀಡಿ ಜನ್ಮ ದಿನವನ್ನು ಆಚರಣೆ ಮಾಡಿರುವುದು ಸಂತಸದ ವಿಷಯ ಎಂದರು. ಕೊಡಗು ಜಿಲ್ಲಾ…
ಲೇಖಕ: admin
ಕಡಂಗ ಜ.15 : ಎಸ್ವೈಎಸ್ 30ನೇ ವಾರ್ಷಿಕ ಮಹಾ ಸಮ್ಮೇಳನ ಪ್ರಯುಕ್ತ ಎಸ್ವೈಎಸ್ ಕಡಂಗ ಯೂನಿಟ್ ವತಿಯಿಂದ ಎಸ್ಬಿಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಕಾರ್ಯಕ್ರಮ ನಡೆಯಿತು. ಜಾಥಾಕ್ಕೆ ಬದ್ರಿಯಾ ಸುನ್ನಿ ಮಸೀದಿಯ ಅಧ್ಯಕ್ಷ ಕೆ.ಇ.ಉಸ್ಮಾನ್ ಚಾಲನೆ ನೀಡಿದರು. ಜಾಥಾವು ಕೊಕ್ಕಂಡಬಾಣೆ ದರ್ಗಾಷರೀಫ್ ನಿಂದ ಕಡಂಗದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬದ್ರಿಯಾ ಮಸೀದಿಯಲ್ಲಿ ಸಮಾಪ್ತಿ ಗೊಂಡಿತು. ಈ ಸಂದರ್ಭ ಎಸ್ ವೈ ಎಸ್ ಅಧ್ಯಕ್ಷ ಅಶ್ರಫ್ ಮಾತನಾಡಿ, 30ನೇ ಮಹಾ ಸಮ್ಮೇಳದ ಪ್ರಚಾರಾರ್ಥ ಕಡಂಗ ಯೂನಿಟ್ ವತಿಯಿಂದ ಎಸ್ ಬಿ ಎಸ್ ವಿದ್ಯಾರ್ಥಿಗಳ ಸೈಕಲ್ ಜಾಥಾ ಹಮ್ಮಿಕೊಂಡಿದ್ದು, ಜಾಥಾ ಯಶಸ್ವಿಯಾಗಿದೆ ಎಂದರು. ಸದರ್ ಮುಹಲಿಮ್ ಶಿಯಾಬುದ್ದೀನ್ ಚೌಹರಿ ಮಾತನಾಡಿ ಮಂಗಳೂರಿನಲ್ಲಿ ನಡೆಯಲಿರುವ ಎಸ್ವೈಎಸ್ 30ನೇ ಮಹಾ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಬದ್ರಿಯಾ ಮಸೀದಿಯ ಉಮ್ಮರ್ ಮುಸ್ಲಿಯಾರ್, ಎಸ್ ವೈ ಎಸ್ ಕಡಂಗ ಸರ್ಕಲ್ ಕಾರ್ಯದರ್ಶಿ ಸಿ.ಎ.ರಜಾಕ್, ಯೂನಿಟ್ ಸಹ ಕಾರ್ಯದರ್ಶಿ ಶಂಸುದ್ದಿನ್, ಸರ್ಕಲ್ ಇಶಾಬ ಕಾರ್ಯದರ್ಶಿ ಕಬೀರ್, ರಾಝಿಕ್…
ಮಡಿಕೇರಿ ಜ.15 : ಪ್ರೊ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪನೆಯಾಗಿ 50ನೇ ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಜ.20 ಮತ್ತು 21 ರಂದು ಬಿಜಾಪುರದಲ್ಲಿ “ದಲಿತ ಐಕ್ಯತೆ ಸಂಘ ಸಂಘರ್ಷ-ಆರದ ಶೋಷಿತರ ಹಣತೆ” ಅಧ್ಯಯನ ಶಿಬಿರ ನಡೆಯಲಿದ್ದು, ಇದರಲ್ಲಿ ಕೊಡಗು ಜಿಲ್ಲಾ ಸಮಿತಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸಮಿತಿ ಸದಸ್ಯ ಕೆ.ಪಳನಿ ಪ್ರಕಾಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ಬಿಜಾಪುರದ ಹರ್ಡೆಕರ್ ಮಂಜಪ್ಪ ಸ್ಮಾರಕ ಭವನದಲ್ಲಿ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿದ ಬಿ.ಕೃಷ್ಣಪ್ಪ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಕಾಗದ ಕಾರ್ಖಾನೆಯ 4ನೇ ದರ್ಜೆ ನೌಕರರನ್ನು ಸಂಘಟಿಸಿ 1974-75ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಚಳುವಳಿಯನ್ನು ಕಟ್ಟಿದರು. ಇದೀಗ ಸುವರ್ಣ ಸಂಭ್ರಮ ಆಚರಿಸುತ್ತಿರುವ ಸಂಘಟನೆಯ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಎಲ್ಲಾ ಹಂತರ ಪದಾಧಿಕಾರಿಗಳು…
ಮಡಿಕೇರಿ ಜ.15 : ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಟ ವೇತನ ನಿಗಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಆರ್.ಭರತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಸೇರಿದಂತೆ ಶಾಸಕರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ 31 ಸಾವಿರ ರೂ.ಗಳನ್ನು ಕನಿಷ್ಟ ವೇತನವಾಗಿ ನಿಗದಿಪಡಿಸಬೇಕೆನ್ನುವುದು ತಮ್ಮ ಪ್ರಮುಖ ಬೇಡಿಕೆಯಾಗಿದೆ. ಇದರೊಂದಿಗೆ ನಿವೃತ್ತ ಪಂಚಾಯ್ತಿ ನೌಕರರ ಬದುಕಿಗೆ ಆರ್ಥಿಕ ಸ್ಥಿರತೆ ನೀಡಲು 6 ಸಾವಿರ ರೂ. ಪಿಂಚಣಿ ನೀಡಬೇಕು. ಅನಾರೋಗ್ಯಕ್ಕೆ ಒಳಗಾದ ನೌಕರರಿಗೆ ಆಸ್ಪತ್ರೆ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಂಚಾಯ್ತಿಗಳಿಗೆ ನೌಕರರನ್ನು ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. 2023ರ ನ.18 ರಂದು…
ಮಡಿಕೇರಿ ಜ.15 : ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 34ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮಕರ ಸಂಕ್ರಾಂತಿ ಪ್ರಯುಕ್ತ ಜ.14ರ ಮುಂಜಾನೆಯಿಂದಲೇ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಶ್ರೀ ಮುತ್ತಪ್ಪ ಮತ್ತು ಶ್ರೀ ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆ, ಶ್ರೀ ಕುಟ್ಟಿಚಾತನ್ ದೇವರ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಅಯ್ಯಪ್ಪನ ಅಲಂಕಾರ ಪೂಜೆ, ದೀಪಾರಾಧನೆ ಜರುಗಿತು ಶ್ರೀ ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆ ನಂತರ ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನದಾನ ನಡೆಯಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜ.15 : ಹುಲಿದಾಳಿಗೆ ಹಸು ಬಲಿಯಾದ ಘಟನೆ ಪೊನ್ನಂಪೇಟೆ ತಾಲ್ಲೂಕು ಬೆಸಗೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಕೋಳೆರ ರಘ ಸೋಮಯ್ಯ ಅವರಿಗೆ ಸೇರಿದ ಹಸು ಇದಾಗಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಗ್ರಾಮದಲ್ಲಿ ಆತಂಕ ಮೂಡಿಸಿರುವ ಹುಲಿಯನ್ನು ತಕ್ಷಣ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಜ.15 : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಸಮಿತಿಯ ಪದಾಧಿಕಾರಿಗಳ ಸಭೆ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಳು ಸಮ್ಮೇಳನ ನಡೆಸುವ ಕುರಿತು ಒಮ್ಮತ್ತದ ನಿರ್ಧಾರ ಕೈಗೊಳ್ಳಲಾಯಿತು. ಕೊಡಗು ಜಿಲ್ಲೆಯಲ್ಲಿ ತುಳುಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಒಂದೇ ವೇದಿಕೆಯಡಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ತುಳು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಮುಖಂಡರುಗಳು ಹಾಗೂ ತುಳು ಭಾಷಿಕ ಜನಾಂಗ ಬಾಂಧವರು ಸಮ್ಮೇಳನದಲ್ಲಿ ತೊಡಗಿಸಿಕೊಳ್ಳುವಂತೆ ಬಿ.ಬಿ.ಐತ್ತಪ್ಪ ರೈ ಮನವಿ ಮಾಡಿದರು. ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ವಿಚಾರಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ತುಳು ನಾಡಿನ ಸಂಸ್ಕೃತಿ ಬಿಂಬಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆಯನ್ನು ಆಕರ್ಷಣೀಯಗೊಳಿಸಬೇಕು. ತುಳುನಾಡಿನ ಪ್ರಸಿದ್ಧ ಕಲಾವಿದರುಗಳನ್ನು ಆಹ್ವಾನಿಸುವ ಮೂಲಕ ಸಮ್ಮೇಳನವನ್ನು ವರ್ಣರಂಜಿತಗೊಳಿಸಬೇಕು. ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಪ್ರಮುಖರ ಮತ್ತು…
ಮಡಿಕೇರಿ ಜ.15 : ಅಯೋಧ್ಯೆಯ ಶ್ರೀರಾಮಚಂದ್ರನ ಜನ್ಮಸ್ಥಳದಲ್ಲಿರುವ ಭವ್ಯವಾದ ರಾಮ ದೇವಾಲಯವು ಭರತ ವರ್ಷದ ಪ್ರಾಚೀನ ಆಧ್ಯಾತ್ಮಿಕ ನಾಗರಿಕತೆಯ ನಿಜವಾದ ಪುನರುತ್ಥಾನವಾಗಿದೆ. ಇದೇ ಮಾದರಿಯಲ್ಲಿ ಅಪರಿಮಿತ ದೇಶಭಕ್ತಿಯ ಯೋಧ ಜನಾಂಗವಾದ ಕೊಡವರಿಗಾಗಿ ಕೊಡವ ಲ್ಯಾಂಡ್ನಲ್ಲಿ ರಾಮರಾಜ್ಯದ ಪುನರ್ ಜೀವವಾಗಬೇಕಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸ್ವತಃ ರಾಮ ಭಕ್ತರಾದ ಡಾ.ಸುಬ್ರಣಿಯನ್ ಸ್ವಾಮಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು ಕೊಡವ ಲ್ಯಾಂಡ್ ನಲ್ಲಿ ರಾಮರಾಜ್ಯದ ಪುನರುಜ್ಜೀವನದ ಪರಿಕಲ್ಪನೆ, ಎರಡಕ್ಕೂ ಪ್ರಮುಖ ವಕೀಲರಾಗಿದ್ದಾರೆ. ಆದ್ದರಿಂದ ನ್ಯಾಯ ಮತ್ತು ಸಮಾನತೆಯ ಹಿತದೃಷ್ಟಿಯಿಂದ ಅಯೋಧ್ಯೆಯ ಭವ್ಯವಾದ ರಾಮ ಮಂದಿರದಂತೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪುನರುಜ್ಜೀವನದ ಸಮಯ ಪಕ್ವವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪುನರುಜ್ಜೀವನದ ಸಮಯ ಪಕ್ವವಾಗಿದೆ. ಕೊಡವ ನೆಲ ಅರ್ಥಾತ್ ಯಾನೆ ಕ್ರೋಢ ದೇಶವು ಕೋಸಲ ರಾಜ್ಯದ ರಾಜಾಧಿಪತಿ ಭರತ ವರ್ಷದ ಚಕ್ರವರ್ತಿಯಾಗಿದ್ದ ದಶರಥನ ಆಳ್ವಿಕೆಯ ಅಡಿಯಲ್ಲಿತ್ತು. 1956 ರವರೆಗೆ ಈ…
ಹಾವೇರಿ ಜ.15 : ಹಾವೇರಿಯ ನರಸಾಪುರದಲ್ಲಿ ನಡೆದ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನರಸಾಪುರ ಗುರು ಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಮತ್ತು ಚರಮೂರ್ತಿ ಚರಂತೇಶ್ವರ ಮಠದ ಶರಣಬಸವ ದೇವರು ದಿವ್ಯ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಗುರುಮಹಾಂತ ಮಹಾಸ್ವಾಮಿಗಳು, ಜ್ಞಾನಪ್ರಕಾಶ ಮಹಾಸ್ವಾಮಿಗಳು, ಶಾಂತವೀರ ಮಹಾಸ್ವಾಮಿಗಳು, ಅನ್ನದಾನಿ ಬಸವಪ್ರಿಯ ಅಪ್ಪಣ್ಣ ಮಹಾಸ್ವಾಮಿಗಳು, ಬಸವಮಾಚಿದೇವ ಮಹಾಸ್ವಾಮಿಗಳು, ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ನಿಜಗುಣದೇವರು, ಯೋಗಾನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಸಚಿವರಾದ ಮಂಕಾಳ ವೈದ್ಯ, ಶಿವಾನಂದ ಪಾಟೀಲ್ ಪಾಲ್ಗೊಂಡಿದ್ದರು.
ಬೆಂಗಳೂರು ಜ.15 : ಫೆಬ್ರವರಿ 2ರಿಂದ ಮೂರು ದಿನಗಳ ನಡೆಯಲಿರುವ ಹಂಪಿ ಉತ್ಸವದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಈ ಸಂದರ್ಭ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಜಿಲ್ಲಾಧಿಕಾರಿ ದಿವಾಕರ್ ಹಾಗೂ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ, ನಿರ್ದೇಶಕಿ ಕವಿತಾ ಲಂಕೇಶ್ ಹಾಜರಿದ್ದರು.






