ಲೇಖಕ: admin

ಮಡಿಕೇರಿ ಡಿ.19 : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2023-24ನೇ ಸಾಲಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೊ.ಯು.ಆರ್.ರಾವ್ ಪುರಸ್ಕಾರ, ಪದವಿ ವಿದ್ಯಾರ್ಥಿಗಳಿಗೆ ಪ್ರೊ.ಎಸ್.ಕೆ.ಶಿವಕುಮಾರ್ ಪುರಸ್ಕಾರ ಮತ್ತು ಜನಸಾಮಾನ್ಯರು ಮತ್ತು ಭೋದಕರಿಗೆ ಕೆಎಸ್‍ಟಿಎ ಪುರಸ್ಕಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್‍ಸೈಟ್ www.kstacademy.in ನಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜನವರಿ, 20 ಕೊನೆಯ ದಿನವಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.19 : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಡಿ.21 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.19 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟಿಸಲಾಗುತ್ತಿರುವ ‘ಹಿಂಗಾರ’ ತ್ರೈಮಾಸಿಕಕ್ಕೆ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಜಾನಪದ, ಸಂಸ್ಕೃತಿ , ಕಲೆ, ಸಾಹಿತ್ಯ, ವ್ಯಕ್ತಿಚಿತ್ರ, ಹನಿಗವನ ಮತ್ತಿತರ ವಿಷಯಗಳ ಕುರಿತ ಬರಹ/ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜ.5 ರೊಳಗೆ ‘ಅರೆಭಾಷೆಯಲ್ಲಿ ಬರಹ’ಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ, 1 ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇರಿ 571 201 ಇಲ್ಲಿಗೆ ‘ವಿಷಯ ಆಧಾರಿತ ಚಿತ್ರಸಹಿತ ಬರಹ’ಗಳನ್ನು ಲಿಖಿತವಾಗಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ, ಕೊಡಗು ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 6362588677 ಸಂಪರ್ಕಿಸಬಹುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.19 : ಸಮಗ್ರ ಕಾರ್ಯಯೋಜನೆಗಳಿಗಾಗಿ ಕೊಡಗು ಜಿಲ್ಲೆಯ ಭಾರತೀಯ ರೆಡ್‍ಕ್ರಾಸ್ ಘಟಕಕ್ಕೆ ರಾಜ್ಯದಲ್ಲಿಯೇ ಅತ್ಯುತ್ತಮ ರೆಡ್‍ಕ್ರಾಸ್ ಪ್ರಶಸ್ತಿ ದೊರಕಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಭಾರತೀಯ ರೆಡ್‍ಕ್ರಾಸ್‍ನ ಕರ್ನಾಟಕ ರಾಜ್ಯ ಘಟಕದ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ರೆಡ್‍ಕ್ರಾಸ್‍ನ ಸಭಾಧ್ಯಕ್ಷರಾಗಿರುವ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಯನ್ನು ಕೊಡಗು ಘಟಕದ ಸಭಾಪತಿ ಬಿ.ಕೆ.ರವೀಂದ್ರ ರೈ ಅವರಿಗೆ ವಿತರಿಸಿದರು. ಈ ಸಂದರ್ಭ ಕರ್ನಾಟಕ ರೆಡ್‍ಕ್ರಾಸ್ ಸಭಾಪತಿ ವಿಜಯ್ ಕುಮಾರ್ ಪಾಟೀಲ್, ಉಪಾಧ್ಯಕ್ಷ ಆನಂದ್ ಎಸ್. ಜಿಗಜಿಣಗಿ, ಕೊಡಗು ಯೂತ್ ರೆಡ್‍ಕ್ರಾಸ್ ನಿರ್ದೇಶಕ ಎಂ.ಧನಂಜಯ್ ಹಾಜರಿದ್ದರು. ಕೋವಿಡ್ ಸಂದರ್ಭದಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಣೆ, ರಕ್ತದಾನದ 10 ಶಿಬಿರಗಳು, ರೆಡ್‍ಕ್ರಾಸ್ ಸಭಾಭವನ ನಿರ್ಮಾಣ, ಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಕಿಟ್ ವಿತರಣೆ, ವಿಕಲಾಂಗರಿಗೆ ನೆರವು, ದಿವ್ಯಾಂಗರಿಗೆ ತರಬೇತಿ ಶಿಬಿರ, 15 ಜೀವಾವಧಿ ಸದಸ್ಯರ ನೋಂದಣಿ, ಆರೋಗ್ಯ ಸಂಬಂಧಿತ 5 ಶಿಬಿರಗಳ ಆಯೋಜನೆ, ಪ್ರಥಮ ಚಿಕಿತ್ಸೆ ಶಿಬಿರ ಆಯೋಜನೆ ಸೇರಿದಂತೆ ಅನೇಕ ಜನಸೇವಾ ಕಾರ್ಯ ಯೋಜನೆಗಳನ್ನು ರಾಜ್ಯದಲ್ಲಿಯೇ ಅತ್ಯಧಿಕ ಸಂಖ್ಯೆಯಲ್ಲಿ…

Read More

ಮಡಿಕೇರಿ ಡಿ.19 : ಹುತ್ತರಿ ಹಬ್ಬದ ಪ್ರಯುಕ್ತ ಮರಗೋಡಿನ ನೂರೊಕ್ಲು ಊರೋರ್ಮೆ ಕೂಟದ ವತಿಯಿಂದ 50ನೇ ವರ್ಷದ ಸುವರ್ಣ ಸಂಭ್ರಮದ ಸಂತೋಷ ಕೂಟ ನಡೆಯಿತು. ಸಂಘದಲ್ಲಿ ನಡೆದ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸ್ಥಾಪಕ ಸದಸ್ಯ ಕಾನಡ್ಕ ದಾಮೋದರ್, 1972ರಲ್ಲಿ ಸ್ಥಾಪಿತವಾದ ನೂರೊಕ್ಲು ಊರೋರ್ಮೆ ಕೂಟ ಎಲ್ಲರ ಸಹಕಾರದಿಂದ ಇಂದು ದೊಡ್ಡ ರೀತಿಯಲ್ಲಿ ಬೆಳವಣಿಗೆಯನ್ನು ಕಂಡಿರುವುದು ಹೆಮ್ಮೆಯ ವಿಚಾರ. ಸಂಘ 100 ವರ್ಷಗಳನ್ನು ಪೂರೈಸಲಿ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿರಿಯರಾದ ಕಾನಡ್ಕ ಚಿರಾಮಣಿ ಅಪ್ಪಾಜಿ, ಅಂದಿನ ಹಿರಿಯರು ಕಟ್ಟಿಬೆಳೆಸಿದ ಸಂಘವನ್ನು ಮುಂದುವರೆಸಿಕೊಂಡು ಬಂದು 50 ವರ್ಷವನ್ನು ಪೂರೈಸಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳು ಜನರು ಒಗ್ಗಟ್ಟಿನಿಂದ, ಶಾಂತಿ ಸಹಬಾಳ್ವೆಯಿಂದಿರಲು ಸಹಕಾರಿಯಾಗಿದೆ ಎಂದರು.ಹಿರಿಯ ಸದಸ್ಯರಾದ ಅಯ್ಯಂಡ್ರ ಅಪ್ಪಯ್ಯ ಮಾತನಾಡಿ, ಹಿಂದಿನ ದಿನಗಳಲ್ಲಿ ಹುತ್ತರಿ ಹಬ್ಬದ ಪ್ರಯುಕ್ತ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಪ್ರಸ್ತುತ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ನಶಿಸಿ ಹೋಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಆಚಾರ, ವಿಚಾರ,…

Read More

ಮಡಿಕೇರಿ ಡಿ.19 : ಬುಡಕಟ್ಟು ಜನರು ಈ ದೇಶದ ಮಾಲೀಕರು, ತಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಉಳಿವಿಗಾಗಿ ಕೊಡವರು ಎಸ್‍ಟಿ ಟ್ಯಾಗ್ ಹೊಂದುವುದರಲ್ಲಿ ತಪ್ಪಿಲ್ಲ ಎಂದು ರಾಜ್ಯಸಭಾ ಮಾಜಿ ಸದಸ್ಯ, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಅಲ್ಪಸಂಖ್ಯಾತ ಜನಾಂಗಗಳ ಹಕ್ಕುಗಳ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನಾಪೋಕ್ಲು ಕೊಳಕೇರಿಯ ನೂರಂಬದ ನಾಡ್ ನಲ್ಲಿ ನಡೆದ 14ನೇ ವರ್ಷದ “ಗನ್ ಕಾರ್ನಿವಲ್ ತೋಕ್ ನಮ್ಮೆ” ಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡವರು ತಮ್ಮತನವನ್ನು ತಾವು ಉಳಿಸಿಕೊಳ್ಳಲು ಎಸ್‍ಟಿ ಟ್ಯಾಗ್ ನ್ನು ಪಡೆಯಲೇಬೇಕು. ಬುಡಕಟ್ಟು ಜನರು ಈ ದೇಶದ ಮಾಲೀಕರಾಗಿದ್ದು, ಉತ್ತರ ಭಾರತ ಮತ್ತು ದಕ್ಷಿಣ ಭಾರತದಲ್ಲಿ ಪ್ರಬಲರಾಗಿದ್ದಾರೆ. ಮೇಘಾಲಯ, ಅರುಣಾಚಲ ಪ್ರದೇಶ, ನಾಗಲ್ಯಾಂಡ್ ನಲ್ಲಿ ರಾಜಕೀಯ ಮೀಸಲಾತಿಯ ಮೂಲಕ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದ್ದಾರೆ. ಕೊಡವರು ಕೂಡ ತಮ್ಮ ಹಕ್ಕನ್ನು ತಾವು…

Read More

ಮಡಿಕೇರಿ ಡಿ.19 : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಪ್ರವಾಸೋದ್ಯಮ ಇಲಾಖೆಯ ಆನ್‍ಲೈನ್ ಪೋರ್ಟಲ್ ನಲ್ಲಿ ನೂತನವಾಗಿ ನೋಂದಣಿಗೊಂಡಿರುವ ಹೋಂ-ಸ್ಟೇಗಳಿಗೆ ಶಾಸಕ ಡಾ.ಮಂತರ್ ಗೌಡ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಣಿಗೊಳ್ಳುವುದರ ಮುಖಾಂತರ ಉತ್ತಮ ಆದಾಯ ಗಳಿಸಲು ಮತ್ತು ಸುಸ್ಥಿರ ಮತ್ತು ಜವಾಬ್ದಾರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೋರಿದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇ, ಹೋಟೆಲ್ ಮತ್ತು ರೆಸಾರ್ಟ್‍ಗಳು ಕೂಡ ನಿಯಮಗಳನ್ನು ಪಾಲಿಸಿ ಪ್ರವಾಸೋದ್ಯಮ ಇಲಾಖೆಯ ಕೆ.ಟಿ.ಟಿ.ಎಫ್ ಆನ್‍ಲೈನ್ ಪೋರ್ಟಲ್ ನಲ್ಲಿ ನೋಂದಾಯಿಸಿಗೊಳ್ಳುವಂತೆ ಕರೆ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ ಇತರರು ಉಪಸ್ಥಿತರಿದ್ದರು.

Read More

ಕೊಂಡಂಗೇರಿ ಡಿ.19 :    ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ(ಎಸ್ ವೈ ಎಸ್)ದ 30ನೇ ವಾರ್ಷಿಕ ಮಹಾ ಸಮ್ಮೇಳನದ ಭಾಗವಾಗಿ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕೊಂಡಂಗೇರಿಯಲ್ಲಿ “ಉಲಮಾ ಸಂಗಮ” ಕಾರ್ಯಕ್ರಮ ನಡೆಯಿತು. ಜ.24 ರಂದು ಮಂಗಳೂರಿನ ಅಡ್ಯಾರ್‌ನಲ್ಲಿ ನಡೆಯಲಿರು ಬೃಹತ್ ಸಮಾವೇಶದ ಪ್ರಚಾರಾರ್ಥ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ “ಉಲಮಾ ಸಂಗಮ”ವು ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷ  ಅಬ್ದುಲ್ ಹಮೀದ್ ಮುಸ್ಲಿಯಾರ್ ಕೊಳಕೇರಿಯವರ ಅಧ್ಯಕ್ಷತೆಯಲ್ಲಿ ಕೊಂಡಂಗೇರಿಯ ಶಾದಿ ಮಹಲ್ ನಲ್ಲಿ ನಡೆಯಿತು. ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಹ್ಸನಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್‌ವೈಎಸ್ ರಾಜ್ಯಾಧ್ಯಕ್ಷ  ಅಬ್ದುಲ್ ಹಫೀಳ್ ಸ‌ಅದಿ ಪ್ರಸ್ತಾವಿಕ ಭಾಷಣ  ಮಾಡಿದರು. ವಿಪಿಎ ದಾರಿಮಿ ತಂಙ್ಞಳ್, ಆಟೀರಿ(ಕೇರಳ) ತರಗತಿ ನಡೆಸಿದರು. ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿ ಅಹ್ಮದ್ ಮುಸ್ಲಿಯಾರ್ ಸ್ವಾಗತಿಸಿದರು. ಅಬ್ದುಲ್ ಅಝೀಝ್ ಸಖಾಫಿ  ವಂದಿಸಿದರು.

Read More

ಮಡಿಕೇರಿ ಡಿ.19 : ಮಹಿಳೆಯರು ಮನೆಯ ನಾಲ್ಕು ಗೋಡೆಗಳ ನಡುವಿನಿಂದ ಹೊರಬಂದಾಗ ಮಾತ್ರ ಅವರ ಮನಸ್ಸಿನಲ್ಲಿನ ಸುಪ್ತ ಪ್ರತಿಭೆ ಹೊರಬರಲು ಸಾಧ್ಯವಾಗುತ್ತದೆ ಎಂದು ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಅಭಿಪ್ರಾಯಪಟ್ಟಿದ್ದಾರೆ. ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಮಡಿಕೇರಿಯ ರಾಧಿಕಾ ವಿಶ್ವನಾಥ್ ಬರೆದಿರುವ ಒಲವಧಾರೆ ಕವನ ಸಂಕಲನ ಲೋಕಾಪ೯ಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಲೇಖಕ, ಕಲಾವಿದ ಸುಬ್ರಾಯ ಸಂಪಾಜೆ, ಗೃಹಿಣಿಯೋವ೯ಳು ಮನೆಯವರ ಪಾಲಿಗೆ ಅಮ್ಮ, ಅತ್ತೆ, ಸಹೋದರಿ, ನಾದಿನಿ ಮುಂತಾದ ಸಂಬಂಧ ಮಾತ್ರ ಆಗಿರುವ ಮನಸ್ಥಿತಿಯಲ್ಲಿ ಆಕೆಯ ನಿಜವಾದ ಪ್ರತಿಭೆ ಬೆಳಕಿಗೆ ಬರುವುದಿಲ್ಲ. ಇಂಥ ಪರಿಸ್ಥಿತಿಯಲ್ಲಿ ಗೃಹಿಣಿಯೋವ೯ಳು ಸಮಾಜದ ಮುಖ್ಯವಾಹಿನಿಗೆ ಬಂದು ತನ್ನ ಸುಪ್ತ ಪ್ರತಿಭೆ ಬೆಳಕಿಗೆ ತಂದಾಗ ಮಾತ್ರ ಆಕೆ ಸಾಧಕಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು. ಹಿರಿಯ ಲೇಖಕ ಜಿ.ಟಿ. ರಾಘವೇಂದ್ರ ಮಾತನಾಡಿ, ಇಂದಿನ ದಿನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಲೇಖಕರು, ಕವಿಗಳು ಹೊರಹೊಮ್ಮುತ್ತಿದ್ದಾರೆ. ಇಂಥವರಿಂದ ಸಾಹಿತ್ಯ ಕ್ಷೇತ್ರಕ್ಕೆ ಸುದೀಘ೯ ಕಾಲ ಸ್ಮರಣೀಯವಾಗುವ ಸಾಹಿತ್ಯ ದೊರಕವಂತಾಗಲಿ ಎಂದು ಹಾರೈಸಿದರು.…

Read More

ವಿರಾಜಪೇಟೆ ಡಿ.19 : ವಿರಾಜಪೇಟೆ ಸಮೀಪದ ಕಡಂಗಮೂರುರು ಗ್ರಾಮದ ಪಳಂಗಂಡ ಪೊನ್ನಪ್ಪ(80) ನಿಧನರಾದರು. ಮೃತರ ಅಂತ್ಯಕ್ರಿಯೆ ಕುಟುಂಬದ ಸ್ಮಶಾನದಲ್ಲಿ ನಡೆಯಿತು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More