ಲೇಖಕ: admin

ನಾಪೋಕ್ಲು ಜ.13 : ಅಪಾಯದ ಹಂತದಲ್ಲಿದದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ಮೋರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಕ್ಕಬ್ಬೆ ಪಟ್ಟಣದಿಂದ ದೇವಾಲಯಕ್ಕೆ ತೆರಳುವ ರಸ್ತೆಯ ಮುಖದ್ವಾರದ ಸಮೀಪ ಸುಮಾರು 200 ಮೀ ರಸ್ತೆ ತೀವ್ರ ಹದಗೆಟ್ಟಿದ್ದು ಮಾತ್ರವಲ್ಲದೆ ರಸ್ತೆಯಲ್ಲಿರುವ ಹಳೆಯ ಮೋರಿಯ ಮಧ್ಯದಲ್ಲಿ ಕುಸಿದಿರುವುದರಿಂದ ಕಕ್ಕಬ್ಬೆ ಪಾಡಿ ಶ್ರೀ ಇತ್ತಪ್ಪ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿನ್ನಪ್ಪ ಶಾಸಕರ ಗಮನಕ್ಕೆ ತಂದಿದ್ದರು. ಇವರ ಮನವಿಯನ್ನು ಪರಿಗಣಿಸಿ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಹಾಗೂ ಮೋರಿಯನ್ನು ವೀಕ್ಷಿಸಿದ ಶಾಸಕರು, ರಸ್ತೆ ಹಾಗೂ ಮೋರಿಯನ್ನು ದುರಸ್ತಿ ಪಡಿಸಿ ಕೊಡುವ ಭರವಸೆಯನ್ನು ನೀಡಿದರು. ಅಲ್ಲದೇ ಸ್ಥಳದಲ್ಲೇ ಲೋಕೋಪಯೋಗಿ ಇಲಾಖೆಯ ಅಭಿಯಂತರಿಗೆ ಕರೆ ಮಾಡಿ ತಕ್ಷಣವೇ ರಸ್ತೆ ಹಾಗೂ ಮೋರಿ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ವ್ಯವಸ್ಥಾಪನ…

Read More

ಮಡಿಕೇರಿ ಜ.15 : ಕಾಡಾನೆ ದಾಳಿ ಮಾಡಿದ ಪರಿಣಾಮ  ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಹ್ಯ ಪಳ್ಳಕೆರೆ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಮಿರನಾ (35) ಎಂಬುವವರೇ ಗಾಯಗೊಂಡಿರುವ ಮಹಿಳೆಯಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು.

Read More

ಮಡಿಕೇರಿ ಜ.15 : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 32ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆಯು ಜ.23 ರಂದು ನಡೆಯಲಿದೆ. ತಾಳತ್ತಮನೆಯ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮತ್ತು ತಾಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 9 ಗಂಟೆಗೆ ತಾಳತ್ತಮನೆಯ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ವಾಲಿಬಾಲ್, ಥ್ರೋಬಾಲ್ ಹಾಗೂ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ಮಕ್ಕಳ ಮ್ಯಾರಾಥಾನ್ ಸ್ಪರ್ಧೆಗಳು ನಡೆಯಲಿದೆ. ಭಾಗವಹಿಸುವ ಕ್ರೀಡಾಪಟುಗಳು ಜ.22ರ ಒಳಗೆ 9480251938, 8431168783, 8762066118, 6361059178 ಸಂಪರ್ಕಿಬಹುದಾಗಿದೆ ಎಂದು ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಜ.15 : ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಷಿಯೇಷನ್ ವತಿಯಿಂದ ಮಂಡ್ಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ಗಗನಶ್ರೀ ಹಾಗೂ ಆರ್.ವಿನಿಷ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಜಮ್ಮು ಕಾಶ್ಮೀರದಲ್ಲಿ ಫೆ.5 ಮತ್ತು 6 ರಂದು ಸ್ಪರ್ಧೆ ನಡೆಯಲಿದೆ. ಗಗನಶ್ರೀ ವಿರಾಜಪೇಟೆಯ ವಿಜಯನಗರದ ನಿವಾಸಿ ಶಶಿಕುಮಾರ್ ಮತ್ತು ದಿವ್ಯ ದಂಪತಿಗಳ ಪುತ್ರಿ. ಆರ್.ವಿನಿಷ ವಿರಾಜಪೇಟೆ ಸುಭಾಷ್ ನಗರದ ನಿವಾಸಿ ಕೆ.ರಜನಿಕಾಂತ್ ಮತ್ತು ಆರ್.ಅರ್ಪಿತಾ ದಂಪತಿಗಳ ಪುತ್ರಿ. ಈ ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.

Read More

ನಾಪೋಕ್ಲು ಜ.15 : ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡುವುದಿಲ್ಲ , ಅಭಿವೃದ್ಧಿ ಕೆಲಸಗಳು ಜನರಿಗೆ ಗೋಸ್ಕರ ಹೊರತು ಯಾವುದೇ ಪಕ್ಷಗಳಿಗೆ ಅಥವಾ ಯಾವುದೇ ಪಕ್ಷದ ನಾಯಕರಿಗಾಗಿ ಅಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಬಲ್ಲಮಾವಟಿ ಗ್ರಾ.ಪಂ ಒಳಪಟ್ಟ ಕಕ್ಕಬ್ಬೆ-ನೆಲಜಿ ರಸ್ತೆಯ ಒಂದುವರೆ ಕಿಲೋಮೀಟರ್ ದೂರದ ರಸ್ತೆ 35 ಲಕ್ಷ ರೂ.ಗಳ ಅನುದಾನದಲ್ಲಿ ಮರು ಡಾಂಬರೀಕರಣ ಆದ ರಸ್ತೆಯನ್ನು ನಾಪೋಕ್ಲು-ಭಾಗಮಂಡಲ -ಕಕ್ಕಬ್ಬೆ ಜಂಕ್ಷನ್ ನ ನೆಲಜಿ ಯಲ್ಲಿ ಉದ್ಘಾಟಿಸಿ ಮಾತನಾಡಿದರು. ನಿಗಧಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಿ ಪೂರ್ಣಗೊಂಡಿದೆ. ಇದೇ ರೀತಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು. ಎರಡು ಮೂರು ತಿಂಗಳಲ್ಲಿ ಆರಂಭಿಸಿದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ ಎಂದರು. ಈ ಸಂದರ್ಭ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು, ನಾಪೋಕ್ಲು-ಭಾಗಮಂಡಲ ರಸ್ತೆಯ ಹಳೆ ತಾಲೂಕಿನಿಂದ ಪುಲಿಕೋಟುವರೆಗಿನ ರಸ್ತೆ ದುರಸ್ತಿ ಕಾರ್ಯ ಒಂದು ತಿಂಗಳ ಒಳಗೆ ರಸ್ತೆಗಳ ಗುಂಡಿ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ…

Read More

ಮಡಿಕೇರಿ ಜ.14 :NEWS DESK ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ರಾಜ್ಯ ಜೀವ ವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಮಕ್ಕಂದೂರು ಗ್ರಾಮದ ನಾಪಂಡ ರವಿ ಕಾಳಪ್ಪ ಅವರು ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರವಿ ಕಾಳಪ್ಪ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಜ.14 : ಬೆಂಗಳೂರಿನ ಕೊಡಗು ಗೌಡ ಸಮಾಜದಲ್ಲಿ ಬೆಂಗಳೂರಿನ ಎಲ್ಲಾ ಗೌಡ ಸಮಾಜ ಮತ್ತು ಒಕ್ಕಲಿಗ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ಜ.14 ರಂದು ನಡೆಯಿತು. ಕೊಡಗಿನಲ್ಲಿ ನಡೆಯುತ್ತಿರುವ ಕೊಡವ ಲ್ಯಾಂಡ್ ಬೇಡಿಕೆ ಹಾಗೂ ಡಾ.ಸುಬ್ರಮಣ್ಯಂ ಸ್ವಾಮಿ ಅವರು ಕೊಡವರ ಪರವಾಗಿ ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಹೂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಕೊಡವರನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸಬೇಕೆನ್ನುವ ಒತ್ತಾಯವಿರುವ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ಕೊಡಗಿನಲ್ಲಿ ಶೇ.80 ರಿಂದ 90 ರಷ್ಟು ಮಂದಿ ಗೌಡರು, ಒಕ್ಕಲಿಗರು, ಹಿಂದುಳಿದ ವರ್ಗದವರು ಹಾಗೂ ಇತರೆ ಜನಾಂಗದವರು ವಾಸಿಸುತ್ತಿದ್ದಾರೆ. ಕೇವಲ ಅಲ್ಪಸಂಖ್ಯಾತ ವರ್ಗಕ್ಕೆ ಪ್ರತ್ಯೇಕ ರಾಜ್ಯ ಅಥವಾ ಸ್ವಾಯತ್ತತೆ ನೀಡುವುದು ಎಷ್ಟು ಸಮಂಜಸ ಎಂದು ಸಮಾಲೋಚಿಸಲಾಯಿತು. ಸರಕಾರ ಇಂತಹ ಬೇಡಿಕೆಗಳಿಗೆ ಮಣಿದರೆ, ಜನಾಂಗೀಯ ಸಂಘರ್ಷಕ್ಕೆ ಒಳಗಾಗುವ ಪರಿಸ್ಥಿತಿ ಉದ್ಭವವಾಗಬಹುದು ಎಂದು ಸಭೆ ಆತಂಕ ವ್ಯಕ್ತಪಡಿಸಿತು. ಹಾಗಾಗಿ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ನಾವೆಲ್ಲರೂ ರಾಷ್ಟ್ರದ ಐಕ್ಯತೆಗಾಗಿ, ಸಂವಿಧಾನದ ಮೂಲಭೂತ ತತ್ವಗಳಿಗೆ ಧಕ್ಕೆಯಾಗದ…

Read More

ಮಡಿಕೇರಿ ಜ.14 : ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಹುಲ್ಲು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರಪೇಟೆ ಸಮೀಪ ಯಡೂರು ಗ್ರಾಮದ ಮಾರಿಗುಡಿ ಜಂಕ್ಷನ್ ನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕುಂದಳ್ಳಿ ಗ್ರಾಮದ ಪ್ರವೀಣ್ ಎಂಬುವವರು ತಮ್ಮ ಟ್ರ್ಯಾಕ್ಟರ್ ನಲ್ಲಿ ಬಸವನಕಟ್ಟೆಯಿಂದ ಹುಲ್ಲನ್ನು ತುಂಬಿಸಿ, ತೆರಳುತ್ತಿದ್ದ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಗೊಂಡು ಬೆಂಕಿ ಕಾಣಿಸಿಕೊಂಡಿತು. ಹುಲ್ಲು ಸಂಪೂರ್ಣ ನಾಶವಾಗಿದ್ದು, ಬೇರೆ ಯಾವುದೇ ಅನಾಹುತ ಸಂಭವಿಸಿಲ್ಲ.

Read More

ಮಡಿಕೇರಿ ಜ.14 : ಸೋಮವಾರಪೇಟೆ ಪುಷ್ಪಗಿರಿ ಜೇಸೀ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್.ಆರ್.ವಸಂತ್ ಅವರನ್ನು ಸನ್ಮಾನಿಸಲಾಯಿತು. ಸಂಕಪ್ಪ ಸಭಾಂಗಣದಲ್ಲಿ ನಡೆದ ಜೇಸೀ ಪದಗ್ರಹಣ ಸಮಾರಂಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಲೋಮನ್ ಡೇವಿಡ್, ನಿಕಟಪೂರ್ವ ಅಧ್ಯಕ್ಷ ಸುರೇಶ್ ಮಾವುಟ್ಕರ್, ಕುಶಾಲನಗ ಶ್ರೀ ಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜುಕುಮಾರ್, ದಕ್ಷಿಣ ಕೊಡಗು ಛಾಯಾಗ್ರಹಕರ ಸಂಘದ ಮಾಜೀ ಅಧ್ಯಕ್ಷ ರವೀಂದ್ರ ರೈ, ಸೋಮವಾರಪೇಟೆ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿನಯ್‌ಕುಮಾರ್ ಸೇರಿದಂತೆ ಇತರರು ವಸಂತ್ ಅವರನ್ನು ಸನ್ಮಾನಿಸಿದರು. ಜೇಸಿ ನಿಕಟಪೂರ್ವ ಅಧ್ಯಕ್ಷೆ ಎಂ.ಎ.ರುಬೀನಾ ಉಪಸ್ಥಿತರಿದ್ದರು.

Read More

ಮಡಿಕೇರಿ ಜ.14 : ಸೋಮವಾರಪೇಟೆಯ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ನಡೆಯಿತು. ಪಟ್ಟಣದ ವೃತ್ತದಲ್ಲಿರುವ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಯುವ ಶಕ್ತಿಯಿಂದ ಮಾತ್ರ ದೇಶದ ಬೆಳವಣಿಗೆ ಸಾಧ್ಯ. ಯುವ ಸಮುದಾಯದ ಮೇಲೆ ಸ್ವಾಮಿ ವಿವೇಕಾನಂದರು ಅದಮ್ಯ ವಿಶ್ವಾಸ ಇಟ್ಟಿದ್ದರು. ಇವರ ಜೀವನ ಚರಿತ್ರೆಯೇ ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದರು. ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಸಮಾಜದ ಮೇಲೆ ಅತೀವ ಕಾಳಜಿ, ಧರ್ಮ ಶ್ರದ್ಧೆಯೊಂದಿಗೆ ಭಾರತದ ಪ್ರಾಚೀನ ಸಂಸ್ಕೃತಿಯನ್ನು ಜಗತ್ತಿಗೆ ತೋರಿಸಿದ ಕೀರ್ತಿ ವಿವೇಕಾನಂದರಿಗೆ ಸಲ್ಲಬೇಕು ಎಂದು ತಿಳಿಸಿದರು. ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪಿ.ಕೆ.ರವಿ, ರೋಟರಿ ಸಂಸ್ಥೆ ಅಧ್ಯಕ್ಷ ನಂಗಾರು ವಸಂತ್, ಕಾರ್ಯದರ್ಶಿ ಚೇತನ್, ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ಮಾಜೀ ಅಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಮಹೇಶ್,…

Read More