ಲೇಖಕ: admin

ಮಡಿಕೇರಿ ಡಿ.19  :  ಗ್ರಾಮೀಣ ವಿದ್ಯಾಥಿ೯ಗಳಿಗೆ ಉನ್ನತ ಶಿಕ್ಷಣದ ಮಹತ್ವವನ್ನು ಪರಿಣಾಮಕಾರಿ ಮಾಗದಶ೯ನದೊಂದಿಗೆ ತಿಳಿಸಿದರೆ ಹಳ್ಳಿಯ ಮಕ್ಕಳೂ ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯಲು ಸುಲಭಸಾಧ್ಯ ಎಂದು ಪಾಂಡಿಚೇರಿ ಸರ್ಕಾರದ ಆರೋಗ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಬಿ.ಆರ್.ಬಾಬು ಸಲಹೆ ನೀಡಿದ್ದಾರೆ. ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಇದೇ ಸಂಸ್ಥೆಯ ಹಳೇ ವಿದ್ಯಾಥಿ೯ಯಾಗಿದ್ದ ಬಿ.ಆರ್.ಬಾಬು, ಗ್ರಾಮೀಣ ಸಂಸ್ಥೆಯಲ್ಲಿ ಓದುವ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸದ ಬಗ್ಗೆ ಅರಿವು ಮೂಡಿಸಿ ಸೂಕ್ತ ತರಬೇತಿಯನ್ನು ನೀಡಿದರೆ ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯಬಹುದು ಎಂಬುದಕ್ಕೆ ತಾನೇ ಸಾಕ್ಷಿಯಾಗಿದ್ದೇನೆ ಎಂದು  ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಕರ್ನಲ್ ಬಿ. ಜಿ. ವಿ .ಕುಮಾರ್ , ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿ ಇದೇ ವೇದಿಕೆಗೆ ಅತಿಥಿಗಳಾಗಿ ಆಗಮಿಸಿದರೆ ಇದಕ್ಕಿಂತ ಸಾರ್ಥಕ್ಯ ಮತ್ತೊಂದಿಲ್ಲ ಎಂದರು.ಬಾಬು ಅವರಿಗೆ ಡಿ. ಚೆನ್ನಮ್ಮ…

Read More

ಪುತ್ತೂರು ಡಿ.19 : ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಬಾಷೆಯು ಪ್ರಾಚೀನವಾದದ್ದು, 12 ನೇ ಶತಮಾನದ ಶಿಲಾ ಶಾಸನಗಳನ್ನು ಅಧ್ಯಯನ ಮಾಡಿದಾಗ ಇದರ ಬಗ್ಗೆ ವಿವರಗಳು ಸಿಗುತ್ತವೆ ಎಂದು ಜೈ ತುಳುನಾಡು ಕಾಸರಗೋಡು ವಿಭಾಗದ ಅಧ್ಯಕ್ಷೆ ಕುಶಾಲಾಕ್ಷಿ ವಿ ಕುಲಾಲ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ವಿದ್ಯಾಭಾರತಿ ಉಚ್ಚ ಶಿಕ್ಷಣ ಸಂಸ್ಥಾನ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆದ ಭಾರತೀಯ ಭಾಷಾ ಉತ್ಸವ ಕಾರ್ಯಕ್ರಮದಲ್ಲಿ ತುಳು ಭಾಷೆ ಮತ್ತು ಸಾಹಿತ್ಯ ಈ ವಿಷಯದ ಬಗ್ಗೆ ಮಾತಾಡಿದರು. ತಾಯಿ ಭಾಷೆಯಲ್ಲಿ ಸಂವಹನ ಮಾಡುವುದು ಅತ್ಯಂತ ಆನಂದದಾಯಕವಾದದ್ದು, ಹೀಗಾಗಿ ತಾಯಿ ಭಾಷೆ, ತಾಯ್ನೆಲದ ಬಗ್ಗೆ ವಿಶೇಷ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು. ಪುರಾತನ ತುಳುವ ಆಚರಣೆಗಳು, ತರವಾಡು ಮನೆತನ, ದೇವಾಲಯ, ದೈವಾಲಯ, ನಾಗಾಲಯಗಳಲ್ಲಿ ನಡೆಯುವ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಇದರ ಬಗ್ಗೆ ಹೆಚ್ಚಿನ ತಿಳುವಳಿಕೆಯನ್ನು ಹೊಂದುವ ಪ್ರಯತ್ನವನ್ನು ಯುವಜನತೆ ಮಾಡಬೇಕು ಎಂದರು. ತುಳು…

Read More

ಮಡಿಕೇರಿ ಡಿ.19 :  ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದ ನಾಗಬನದಲ್ಲಿ ಶ್ರದ್ಧಾಭಕ್ತಿಯಿಂದ ಸುಬ್ರಹ್ಮಣ್ಯ ಷಷ್ಠಿ ಪೂಜೆ ನಡೆಯಿತು. ನಾಗ ದೇವರಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಭಿಷೇಕ  ಸೇರಿದಂತೆ ವಿವಿಧ ಪೂಜಾ ಕೈಕಂರ್ಯಗಳು ಜರುಗಿದವು. ನಂತರ  ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಲಾಯಿತು.   ಮಹಾಮಂಗಳಾರತಿಯ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂರ್ಪಣೆ ನೆರವೇರಿತು.  ಊರಿನವರು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಭಕ್ತರು ಷಷ್ಠಿ ಪೂಜೆಯಲ್ಲಿ  ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಮುಖ್ಯ ಅರ್ಚಕ ಸುಬ್ರಮಣ್ಯ ಕೇಕುನ್ನಾಯ ನೇತೃತ್ವದಲ್ಲಿ ಪೂಜಾವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಊರು ತಕ್ಕರಾದ ಚಮ್ಮಟೀರ ಕುಟುಂಬಸ್ಥರ ತಕ್ಕಾಮೆಯಲ್ಲಿ ನಡೆದ ಷಷ್ಠಿ ಪೂಜೆಯಲ್ಲಿ ಮೂಕಳೇರ, ಮಚ್ಚಿಯಂಡ, ಚೇಂದಿಮಾಡ, ಕೂಕಂಡ, ಮನೆಯಪಂಡ, ಸಣ್ಣುವಂಡ, ಕೊಳೇರ ಸೇರಿದಂತೆ ಊರಿನ ವಿವಿಧ ಕುಟುಂಬಸ್ಥರು ಮತ್ತು ಗ್ರಾಮ‌ಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು.   

Read More

ಮಡಿಕೇರಿ ಡಿ.19 :  ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್  ಗುಂಡೂರಾವ್ ಅವರು ಭೇಟಿ ನೀಡಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಜೊತೆ ಪಕ್ಷದ ಚಟುವಟಿಕೆಗಳ ಕುರಿತು ಮಾತುಕತೆ ನಡೆಸಿದರು. ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ  ಹಾಜರಿದ್ದರು.

Read More

ಮಡಿಕೇರಿ ಡಿ.18 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಅಲ್ಪಸಂಖ್ಯಾತ ಜನಾಂಗಗಳ ಹಕ್ಕುಗಳ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 14ನೇ ವರ್ಷದ “ಗನ್ ಕಾರ್ನಿವಲ್ ತೋಕ್ ನಮ್ಮೆ” ನಾಪೋಕ್ಲು ಕೊಳಕೇರಿಯ ನೂರಂಬದ ನಾಡ್ ನಲ್ಲಿ ಸಂಭ್ರಮದಿಂದ ನಡೆಯಿತು. ಕೊಳಕೇರಿಯ ನೂರಂಬದ ನಾಡ್ ನಲ್ಲಿರುವ ರಮ್ಮಿ ನಾಣಯ್ಯ ಹಾಗೂ ರೀನಾ ನಾಣಯ್ಯ ಅವರ ಕಾವೇರಿ ಎಸ್ಟೇಟ್ ನ ಕಾವೇರಿ ನದಿ ದಂಡೆಯಲ್ಲಿ ನಡೆದ ನಮ್ಮೆಯಲ್ಲಿ ಕೋವಿಗಳನ್ನು ಸಾಂಪ್ರದಾಯಿಕ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯಸಭಾ ಮಾಜಿ ಸದಸ್ಯ, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ವಿರೋಧ ಪಕ್ಷದ ಮಾಜಿ ನಾಯಕ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು “ತೋಕ್ ನಮ್ಮೆ” ಗೆ ಸಾಕ್ಷಿಯಾದರು. ನಮ್ಮೆಯ ನೇತೃತ್ವ ವಹಿಸಿ ಮಾತನಾಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಜನಪದೀಯ ಹಬ್ಬವಾಗಿ ತೋಕ್ ನಮ್ಮೆಯನ್ನು ಅತಿ ಉತ್ಸಾಹದಿಂದ ಸಾರ್ವತ್ರಿಕವಾಗಿ ಆಚರಿಸುವ ಮೂಲಕ ಕೋವಿ ಹೊಂದುವ…

Read More

ಮಡಿಕೇರಿ ಡಿ.18 : ಕೊಡಗು ಜಿಲ್ಲೆಯಲ್ಲಿ 29 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಗಳ ಪ್ರಗತಿ ಹಾಗೂ ಅನುಷ್ಠಾನ ಸಂಬಂಧ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕೆಲವು ಜಿಲ್ಲೆಯಲ್ಲಿ ಭ್ರೂಣಹತ್ಯೆ ಮಾಡುವುದು ಕೇಳಿಬರುತ್ತಿದ್ದು, ಭ್ರೂಣಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವರು ತಾಕೀತು ಮಾಡಿದರು. ಕೊಡಗು ಜಿಲ್ಲೆಯಲ್ಲಿ ಕಳೆದ 21 ವರ್ಷದಲ್ಲಿ ಸ್ಕ್ಯಾನಿಂಗ್ ಕೇಂದ್ರಗಳ ಸಂಬಂಧ ಒಂದು ಪ್ರಕರಣವು ದಾಖಲಾಗಿಲ್ಲ. ಆ ನಿಟ್ಟಿನಲ್ಲಿ ಎಲ್ಲವೂ ಸರಿಯಿದೆಯೇ ಎಂಬುದನ್ನು ಆತ್ಮವಿಮರ್ಶೆ ಮಾಡಬೇಕಿದೆ ಎಂದು ಸಚಿವರು ಹೇಳಿದರು. ಈ ಕುರಿತು ಧ್ವನಿಗೂಡಿಸಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ವೈದ್ಯಾಧಿಕಾರಿಗಳ…

Read More

ಮಡಿಕೇರಿ ಡಿ.18 : ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ನಂದಿನಿ ಕೊಲೆಯಾದ ಮಹಿಳೆಯಾಗಿದ್ದು, ಈಕೆಯ ಪತಿ ಪಣಿಯರವರ ಮಂಜು ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಾಫಿ ತೋಟದ ಲೈನ್ ಮನೆಯೊಂದರಲ್ಲಿ ವಾಸವಾಗಿದ್ದ ದಂಪತಿ ನಡುವೆ ಮಕ್ಕಳಾಗದಿದ್ದ ಕಾರಣಕ್ಕೆ ಕಲಹ ನಡೆಯುತಿತ್ತು ಎನ್ನಲಾಗಿದೆ. ಡಿ.17ರಂದು ರಾತ್ರಿ ಮಂಜು ಮದ್ಯದ ಅಮಲಿನಲ್ಲಿ ಕಲಹ ನಡೆಸಿ ಪತ್ನಿ ನಂದಿನಿಯ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಹಲ್ಲೆಯಿಂದ ಪತ್ನಿ ಸಾವನ್ನಪ್ಪಿರುವುದನ್ನು ಅರಿತ ಮಂಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಶ್ರೀಮಂಗಲ ಪೊಲೀಸರು ಹಾಗೂ ಹಾಗೂ ಅಪರಾಧ ಕೃತ್ಯ ಪತ್ತೆ ಅಧಿಕಾರಿಗಳ ವಿಶೇಷ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದೆ.

Read More

ಸೋಮವಾರಪೇಟೆ ಡಿ.18 : ಶ್ರೀ ಆಂಜನೇಯ ದೇವಾಲಯದಲ್ಲಿ ಡಿ.24 ರಂದು ಶ್ರೀ ಹನುಮ ಜಯಂತಿ ನಡೆಯಲಿದೆ. ಅಂದು ಬೆಳಿಗ್ಗೆ 6 ಗಂಟೆಯಿಂದ ವಿಶೇಷ ಕೈಂಕರ್ಯಗಳು ಜರುಗಲಿದ್ದು, ಹನುಮ ಮೂರ್ತಿಗೆ ಪಂಚಾಮೃತ ಅಭಿಷೇಕ, 9ಕ್ಕೆ ಮಾರುತಿ ಹೋಮ, ಸಂಜೆ ಹೂವಿನ ಅಲಂಕಾರ ನೆರವೇರಲಿದೆ. 6 ಗಂಟೆಯ ನಂತರ ರವಿ ಭೂತನಕಾಡು ಅವರಿಂದ ಭಕ್ತಿಗೀತೆ, 7ಗಂಟೆಗೆ ಮಹಾ ಮಂಗಳಾರತಿಯೊಂದಿಗೆ ಅನ್ನದಾನ ನೆರವೇರಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಡಿ.18 : ವಿರಾಜಪೇಟೆಯ ಹೆಗ್ಗಳ ಗ್ರಾಮದಲ್ಲಿರುವ ಪಾಲ್ಟ್ ಮಕ್ಕಿ ನಾಗಬನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಅರ್ಚಕ ವೇಣುಗೋಪಾಲ್ ಭಟ್ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿದರು. ಮುಂಜಾನೆ ಸಂಕಲ್ಪ ಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಮಾಡಲಾಯಿತು. ನಾಗನ ಮೂರ್ತಿಗೆ ಸೀಯಾಳ ಹಾಗೂ ಹಾಲಿನ ಅಭಿಷೇಕ ನಡೆಸಿದರು. ನಂತರ ಅರ್ಚಕರು ನಾಗತಂಬಿಲವನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ಮಹಾಪೂಜೆಯ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಕಾರ್ಯಕ್ರಮ ನಡೆಯಿತು. ಬೇಟೋಳಿ, ಹೆಗ್ಗಳ, ಬೂದಿಮಾಳ, ರಾಮನಗರ, ವಿರಾಜಪೇಟೆ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.

Read More

ಸುಂಟಿಕೊಪ್ಪ ಡಿ.18: ವರ್ಕ್‍ಶಾಪ್ ಮಾಲೀಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಪಿ.ಆರ್.ಸುನಿಲ್‍ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಪುನರ್ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಅನಿಸ್, ಸಹಕಾರ್ಯದರ್ಶಿಯಾಗಿ ನಿತಿನ್, ಸಂಘಟನಾ ಕಾರ್ಯದರ್ಶಿಯಾಗಿ ಫೆಲಿಕ್ಸ್, ಖಜಾಂಚಿಯಾಗಿ ಸಂದೀಪ್, ಗೌರವಧ್ಯಕ್ಷರುಗಳಾಗಿ ಬಿ.ಎ.ಸಂತೋಷ್, ಪಿ.ಆರ್.ಸುಕುಮಾರ್, ಕೆ.ಪಿ.ವಿನೋದ್, ಸಮಿತಿ ಸದಸ್ಯರುಗಳಾಗಿ ಕೆ.ಜಿ.ಸತೀಶ್, ಯೇಸುದಾಸ್, ಸುರೇಶ್, ರಜಾಕ್ ಹಾಗೂ 9 ಮಂದಿ ಆಡಳಿತ ಮಂಡಳಿ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಕಚೇರಿಯಲ್ಲಿ ನಡೆದ 21ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಾರ್ಷಿಕ ಖರ್ಚು ವೆಚ್ಚಗಳ ಲೆಕ್ಕ ಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು.

Read More