ಲೇಖಕ: admin

ಮಡಿಕೇರಿ ಡಿ.18 : ಕೊಡಗು ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ತಾಲ್ಲೂಕುಗಳಲ್ಲಿ ಒಂದಾಗಿರುವ ‘ಕುಶಾಲನಗರ ತಾಲ್ಲೂಕು’ವಿನಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಬ್ರಾಹ್ಮಣ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿತ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು,ಕುಶಾಲನಗರ ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ತಾನು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಲ್ಲದೆ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಸ್ಥಳೀಯ ಬ್ರಾಹ್ಮಣರ ಸಂಘಕ್ಕೆ ಸಹಕಾರ ನೀಡಲಾಗುವುದೆಂದು ಹೇಳಿದರು. ಆರೋಗ್ಯ ಕೇಂದ್ರ ಮೇಲ್ದರ್ಜೆಗೆ- ಊರಿನ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆ ಎಲ್ಲ ರೀತಿಯ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗುವುದು. ರಥ ಬೀದಿಯಲ್ಲಿರುವ ಬ್ರಾಹ್ಮಣ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲಾಗುವುದು. ಕುಶಾಲನಗರ ತಾಲೂಕು ಆಸ್ಪತ್ರೆಗೆ 100 ಬೆಡ್ ಕಲ್ಪಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಜೊತೆಗೆ ಡಯಾಲಿಸಿಸ್ ಕೇಂದ್ರ ಮುಂದಿನ ತಿಂಗಳು ಸೇವೆಗೆ ಲಭ್ಯವಾಗಲಿದೆ ಎಂದರು. ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಮಿನಿ ವಿಮಾನ ನಿಲ್ದಾಣ ರೈಲ್ವೆ…

Read More

ಸುಂಟಿಕೊಪ್ಪ,ಡಿ.18: ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ‘ಚಡ್ಡಿದೋಸ್ತ್’ ಬಳಗದ ವತಿಯಿಂದ ಗುಡ್ಡೆಹೊಸೂರು ಐಚೆಟ್ಟೀರ ನರೇನ್ ಸೋಮಯ್ಯ ಸ್ಪೋಟ್ರ್ಸ್ ಸೆಂಟರ್ ಮೈದಾನದಲ್ಲಿ ಆಯೋಜಿಸಿದ್ದ 5ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಸೌಹಾರ್ದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಶಿಕ್ಷಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ಚಡ್ಡಿದೋಸ್ತ್ ‘ಎ’ ತಂಡ ದ್ಚಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ಟೆನ್ನಿಸ್ ಬಾಲ್ ಕ್ರಿಕೆಟ್ ಲೀಗ್ ಪಂದ್ಯದಲ್ಲಿ ಚಡ್ಡಿದೋಸ್ತ್ ‘ಎ’ ಮತ್ತು ‘ಬಿ’ ತಂಡ, ಕೊಡಗು ಶಿಕ್ಷಕರ ತಂಡ, ಅರಣ್ಯ ಇಲಾಖೆ ಮತ್ತು ಕೊಡಗು ಪ್ರೆಸ್ ಕ್ಲಬ್ ತಂಡಗಳು ಭಾಗವಹಿಸಿದ್ದವು. ಸಂಜೆ ನಡೆದ ಫೈನಲ್ ಪಂದ್ಯದಲ್ಲಿ ಕೊಡಗು ಶಿಕ್ಷಕರ ತಂಡ ಮತ್ತು ಚಡ್ಡಿದೋಸ್ತ್ ‘ಎ’ ತಂಡಗಳ ನಡುವೆ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಚಡ್ಡಿದೋಸ್ತ್ ತಂಡ ನಿಗಧಿತ 6 ಓವರುಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡು 48 ರನ್ ಬಾರಿಸಿತು. 49 ರನ್ನುಗಳ ಗುರಿ ಬೆನ್ನಟ್ಟಿದ್ದ ಕೊಡಗು ಶಿಕ್ಷಕರ ತಂಡ ಆಕರ್ಷಕ ಆಟದ…

Read More

ಮಡಿಕೇರಿ ಡಿ.18 : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಾಲ್ಲೂಕಿನ ಒಂದು ಹೋಬಳಿ ಕೇಂದ್ರದಲ್ಲಿ ಸುವರ್ಣ ಸಂಭ್ರಮ ಗ್ರಾಮ ಸಿರಿ ಕಾರ್ಯಕ್ರಮವನ್ನು ನಡೆಸಲು ಕೊಡಗು ಜಿಲ್ಲೆಯ 5 ತಾಲ್ಲೂಕು ಕಸಾಪ ಅಧ್ಯಕ್ಷರುಗಳ ಸಭೆ ನಿರ್ಧರಿಸಿದೆ. ನಗರದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷರುಗಳ ಸಭೆ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರ ಗೈರು ಹಾಜರಿಯಲ್ಲಿ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಕಸಾಪದ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ ಸುವರ್ಣ ಕರ್ನಾಟಕ 50ರ ಸಂಭ್ರಮದ ಗ್ರಾಮಸಿರಿ ಕಾರ್ಯಕ್ರಮವನ್ನು ಎಲ್ಲರ ಸಹಕಾರ ಪಡೆದು ಅರ್ಥಪೂರ್ಣಗೊಳಿಸಬೇಕೆಂದು ಕರೆ ನೀಡಿದರು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಆಪ್ ಮೂಲಕ ಸದಸ್ಯತ್ವ ನೋಂದಣಿ ಆರಂಭಿಸಿದ್ದು, ಸರ್ವರ್ ಸಮಸ್ಯೆ ಎದುರಾಗಿರುವುದನ್ನು…

Read More

ಕಡಂಗ ಡಿ.18 :  ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ  ವಿಶೇಷ ಪೂಜೆ ನಡೆಯಿತು. ಈ ಸಂದರ್ಭ ಸುಬ್ರಹ್ಮಣ್ಯ ದೇವರಿಗೆ ಎಳನೀರು ಹಾಗೂ ಹಾಲಿನ ಅಭಿಷೇಕ ನಡೆಸಲಾಯಿತು. ನಂತರ ದೇವರಿಗೆ ಮಹಾಪೂಜೆ,  ಮಹಾಮಂಗಳಾರತಿ ನಡೆಯಿತು.   ನಂತರ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದ ಅರ್ಚಕರಾದ ಕೀರ್ತಿಶ್  ಪೂಜಾ ವಿಧಿವಿಧಾನವನ್ನು ನಡೆಸಿಕೊಟ್ಟರು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ  ಚಿತ್ರ ಬೆಳ್ಯಪ್ಪ , ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅನ್ನಪ್ರಸಾದವನ್ನು ಕೋಡಿರ ಸುಭಾಶ್ ಮುತ್ತಣ್ಣ ಮತ್ತು ಸಂಸಾರದವರು ಏರ್ಪಡಿಸಿದ್ದರು. ವರದಿ : ನೌಫಲ್ ಕಡಂಗ

Read More

ಮಡಿಕೇರಿ ಡಿ.18 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿತು. ಮಹಾಪೂಜೆ ಮತ್ತು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಡಿ.18 : ಕುಶಾಲನಗರ ಸಮೀಪದ ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಷಷ್ಠಿ ಪ್ರಯುಕ್ತ 55ನೇ ವರ್ಷದ ಮಹಾ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸುಬ್ರಹ್ಮಣ್ಯ ಸ್ವಾಮಿಗೆ ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು, ಮಹಾಮಂಗಳಾತಿ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ರಥಬಲಿ ನಂತರ ರಥಪೂಜೆ ನೆರವೇರಿಸಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಮೂರ್ತಿಯನ್ನು ರಥದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.ಅಯ್ಯಪ್ಪ ಮಾಲಾಧಾರಿಗಳು ಭಜನೆಯೊಂದಿಗೆ ಬೃಹತ್ ಪ್ರಮಾಣದಲ್ಲಿ ಕರ್ಪೂರ ಹಚ್ಚಿ ಭಕ್ತಿಭಾವ ಮೆರೆದರು. ರಥವು ಕೂಡಿಗೆ-ಕುಶಾಲನಗರ ಮುಖ್ಯ ರಸ್ತೆಯ ಮೂಲಕ ಕೂಡುಮಂಗಳೂರು ಗ್ರಾಮದವರೆಗೆ ಸಾಗಿತು. ರಥೋತ್ಸವಕ್ಕೆ ಅಗಮಿಸಿದ ಸಾವಿರಾರು ಭಕ್ತರಿಗೆ ದೇವಾಲಯ ಸಮಿತಿಯ ವತಿಯಿಂದ ಅನ್ನಸಂತರ್ಪಣೆ ನಡೆಯಿತು.

Read More

ಮಡಿಕೇರಿ ಡಿ.18 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ಶ್ರೀ ಸುಬ್ರಹ್ಮಣ್ಯ ದೇವರಿಗೆ ಅಭಿಷೇಕ, ಅಲಂಕಾರ, ಅರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿತು. ಮಹಾಪೂಜೆ ಮತ್ತು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಡಿ.18 : ಕೊಡಗು ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿಲ್ಲವ ಸಮುದಾಯ ಬಾಂಧವರಿಗಾಗಿ ಡಿ.30 ಮತ್ತು 31 ರಂದು 17ನೇ ವರ್ಷದ ಕೋಟಿ ಚೆನ್ನಯ್ಯ ಕ್ರೀಡಾಕೂಟ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷೆ ಬಿ.ಎಸ್.ಲೀಲಾವತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಸಮಾಜದ ಹಾಗೂ ಜಿಲ್ಲೆಯ ಗಣ್ಯ ವ್ಯಕ್ತಿಗಳು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದರು. ಎರಡು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್, ಪುರುಷ ಹಾಗೂ ಮಹಿಳೆಯರಿಗೆ ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ಮಹಿಳೆಯರಿಗೆ ಥ್ರೋಬಾಲ್, ವಿಷದ ಚೆಂಡು, ಪುರುಷರಿಗೆ ವಾಲಿಬಾಲ್, 5 ವರ್ಷದೊಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, 1 ರಿಂದ 2ನೇ ತರಗತಿಯ ಮಕ್ಕಳಿಗೆ ಕಪ್ಪೆ ಜಿಗಿತ, 3 ರಿಂದ 5ನೇ ತರಗತಿ ಮಕ್ಕಳಿಗೆ 50 ಮೀ. ಓಟ, 5ನೇ ತರಗತಿಯಿಂದ 7ನೇ ತರಗತಿ ಬಾಲಕ-ಬಾಲಕಿಯರಿಗೆ 100 ಮೀ.…

Read More

ಮಡಿಕೇರಿ ಡಿ.18 : ನೆರೆಯ ಕೇರಳ ರಾಜ್ಯದಲ್ಲಿ ಕೊರೋನ ರೂಪಾಂತರಿ ಜೆಎನ್.1 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗುತ್ತಿದೆ. ಆದರೆ ಸಧ್ಯಕ್ಕೆ ತೀವ್ರ ನಿರ್ಬಂಧ ಹೇರುವ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಮಂಗಳವಾರ ಕೊರೋನ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಗಡಿ ಭಾಗವಾದ ಕೊಡಗು, ಮಂಗಳೂರು ಮತ್ತು ಚಾಮರಾಜನಗರ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗುವುದು. ಪ್ರಸಕ್ತ ರಾಜ್ಯದಲ್ಲಿ ಸಹಜ ಸ್ಥಿತಿ ಇದೆ. ಶೀತ, ಜ್ವರ ಕೆಮ್ಮು ಇರುವವರು ಕೊರೋನ ಟೆಸ್ಟ್ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಪ್ರಕರಣ ಬಂದರಷ್ಟೇ ನಿಬರ್ಂಧ ಇತ್ಯಾದಿ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ…

Read More

ಮಡಿಕೇರಿ ಡಿ.18 : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಜರುಗಿತು. ಮಧ್ಯಾಹ್ನ ಶ್ರೀ ಸುಬ್ರಮಣ್ಯ ದೇವರ ಬೂತ ಬಲಿ ನೆರವೇರಿತು. ನಂತರ ಮಹಾಮಂಗಳಾರತಿ ಹಾಗೂ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ.

Read More