ಲೇಖಕ: admin

ಅರಂತೋಡು ಡಿ.18 :  ಅರಂತೋಡುವಿನ   ತೆಕ್ಕಿಲ್ ಹೆಚ್.ಪಿ. ಗ್ಯಾಸ್ ಏಜೆನ್ಸಿ ವತಿಯಿಂದ ಡಿ.19 ರಂದು ಪ್ರಧಾನಮತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಣಾ ಕಾರ್ಯಕ್ರಮ ನಡೆಯಲಿದೆ. ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ  ನಡೆಯಲಿರುವ ಕಾರ್ಯಕ್ರಮದಲ್ಲಿ  ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ  ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ ಮಾಡಲಿದ್ದಾರೆ. ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿಯ ಮಾಲೀಕ ಟಿ.ಎಂ ಶಹೀದ್ ತೆಕ್ಕಿಲ್ ಅವರ  ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ  ಸುಳ್ಯ ತಾ.ಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಅರಂತೋಡು ಜಿ.ಪಂ ನ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಗೌರವ ಉಪಸ್ಥಿತಿಯಾಗಿ ಆಗಮಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಅರಂತೋಡು ಗ್ರಾ.ಪಂ ಅಧ್ಯಕ್ಷ ಕೇಶವ ಅಡ್ತಲೆ, ಅರಂತೊಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ವಿವಿಧ ಗ್ರಾ.ಪಂ ಅಧ್ಯಕ್ಷರಾದ ಸುಮತಿ ಶಕ್ತಿಮೇಲು…

Read More

ಮಡಿಕೇರಿ ಡಿ.18 : ಕೇರಳ ರಾಜ್ಯದಲ್ಲಿ ಕೊರೋನಾ ರೂಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ  ನಮ್ಮ ರಾಜ್ಯದಲ್ಲಿಯೂ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಮಾಸ್ಕ್, ವೆಂಟಿ ಲೇಟರ್, ಪಿಪಿ ಕಿಟ್, ಬೆಡ್‍ಗಳ ಕೊರತೆ ಉಂಟಾಗದಂತೆ ಎಚ್ಚರ ವಹಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ, ಜ್ವರ, ಕೆಮ್ಮು ರೋಗ ಲಕ್ಷಣ ಕಂಡುಬಂದಲ್ಲಿ ಕಡ್ಡಾಯ ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು. ಅಗತ್ಯ ಕ್ರಮಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಡಾ.ರವಿ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದರು. ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಸ್ಥಳಗಳಲ್ಲಿ ನಿಗಾ ತಪಾಸಣೆ ಮಾಡಲಾಗುವುದು. ಹೆಚ್ಚು ಟೆಸ್ಟಿಂಗ್ ಮಾಡಲು ಆರೋಗ್ಯ ಇಲಾಖೆಗೆ ಆದೇಶ ನೀಡಲಾಗಿದ್ದು, ಹೆಚ್ಚು ಪಾಸಿಟಿವ್ ಕೇಸ್ ಬಂದರೆ ನಿರ್ಬಂಧದ ಬಗ್ಗೆ ಯೋಚಿಸುವುದಾಗಿ ತಿಳಿಸಿದರು.

Read More

ಮೈಸೂರು  ಡಿ.18 :  ವ್ಯಾಪಾರಸ್ಥರ ದೈನಂದಿನ ಬದುಕು ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕವಾಗಿದ್ದು, ಪೈಪೋಟಿಗಳ ನಡುವೆ ಒತ್ತಡದ ಬದುಕನ್ನು ಸಾಗಿಸುತ್ತಿದ್ದಾರೆ. ದಿನದ ಒಂದು ಘಂಟೆಗಳ ಕಾಲ ಬಿಡುವು ಮಾಡಿಕೊಂಡು ಆಯಾಮಗಳ‌ ಮೂಲಕ ತಮ್ಮಗಳ ಆರೋಗ್ಯವನ್ನು ಕಾಪಾಡಿಕೊಳ್ಳಿ.‌ ಅಂತೆಯೇ ಗ್ರಾಹಕರ ಆರೋಗ್ಯದ ಕಾಳಜಿಗಾಗಿ ಆಹಾರ ಪದಾರ್ಥ ಮಾರುವ ಹಾಗೂ ತಯಾರಿಸುವ ವ್ಯಾಪಾರಸ್ಥರು ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ (ಎಫ್‌ಎಸ್‌ಎಸ್‌ ಎಐ) ಪರವಾನಗಿ ಕಡ್ಡಾಯವಾಗಿ ಪಡೆದಿರಬೇಕು ಎಂದು ಮೈಸೂರು ಜಿಲ್ಲಾ ಅಂಕಿತ ಅಧಿಕಾರಿ ಡಾ.‌ಕಾಂತರಾಜ್ ಹೇಳಿದರು. ಹೂಟಗಳ್ಳಿ ಕೆಎಚ್‌ಬಿ ಬಡಾವಣೆಯ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ನಡೆದ ನೂತನ ಸದಸ್ಯರಿಗೆ ಸಂಘದ ಗುರುತಿನ ಚೀಟಿ ಹಾಗೂ ಪ್ರಮಾಣ ಪತ್ರವನ್ನು ವಿತರಣೆ ಮಾಡುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು‌, ಆಹಾರ ಉತ್ಪನ್ನಗಳು ತಯಾರಾಗುವ, ಸಂಗ್ರಹಿಸುವ ಸ್ಥಳದ ಮೇಲೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ಕಲಬೆರೆಕೆ ಹಾಗೂ ಗುಣಮಟ್ಟವಿಲ್ಲದ ಆಹಾರ ಉತ್ಪನ್ನಗಳನ್ನು ತಯಾರಿಸುವವರ ವಿರುದ್ಧ ಕ್ರಮ ಕೈಗೊಳ್ಳುವ…

Read More

ಮಡಿಕೇರಿ ಡಿ.18 : ನಗರದ  ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ  “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ನಾಪೋಕ್ಲು ಡಿ.18 : ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ನಂತರ ಶಾಲೆಯ ಗೋಡೆಗಳಿಗೆ ಬಣ್ಣ ಬಳಿದು ಅಂದಗೊಳಿಸಿದರು. ನಿರಂತರ ಮೂರು ದಿನಗಳು ನಾಪೋಕ್ಲು ಶೌರ್ಯ ಘಟಕದ ಸದಸ್ಯರು ಶಾಲೆಯ ಸ್ವಚ್ಛತಾ ಶ್ರಮದನದಲ್ಲಿ ತೊಡಗಿಕೊಂಡಿದ್ದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು. ಸ್ವಚ್ಛತಾ ಕಾರ್ಯದಲ್ಲಿ ಘಟಕದ ಸದಸ್ಯರುಗಳಾದ ಎನ್.ಬಿ.ದಿಲೀಶ್, ಬಿ.ಹೆಚ್.ಶಂಕರ್, ಸೀನಾ ಮಾಧವನ್, ಸುನೀತಾ, ದಿವ್ಯ ಬಾಳೆಯಡ, ಚಂದ್ರಕಲಾ, ಶ್ಯಾಮಲಾ, ನಾರಾಯಣ, ಮಾಯಿಲಪ್ಪ, ಉಮಾಲಕ್ಷ್ಮಿ ಸೇವಾ ಕಾರ್ಯದಲ್ಲಿ ಭಾಗವಹಿಸಿದರು. ವರದಿ – ದುಗ್ಗಳ ಸದಾನಂದ

Read More

ನಾಪೋಕ್ಲು ಡಿ.18 : ನರಿಯಂದಡ ಗ್ರಾಮದ ಎಡಪಾಲಕೇರಿ ಅಯ್ಯಪ್ಪ ದೇವಸ್ಥಾನದ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬಿಳಿಯ೦ಡ್ರ ಹರಿಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ಪೊಕ್ಕುಳ೦ಡ್ರ ಅಭಿಲಾಶ್ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ತೋಟಂ ಬೈಲು ಅನಂತಕುಮಾರ್, ಉಪಾಧ್ಯಕ್ಷರಾಗಿ ಪೊಕ್ಕುಳ೦ಡ್ರ ಸೂರಜ್, ಸಲಹಾ ಸಮಿತಿ ಗೌರವ ಸದಸ್ಯರಾಗಿ ಪೊಕ್ಕುಳ೦ಡ್ರ ಮನೋಹರ, ಪೊಕ್ಕುಳ೦ಡ್ರ ಸತ್ಯ , ಕಾರ್ಯಕಾರಿಣಿ ಸದಸ್ಯರಾಗಿ ಮಞಪುರ ಛಾಯಾಪ್ರಕಾಶ್, ರವಿ ಬೋಪಯ್ಯ, ಬಾಲಕೃಷ್ಣ , ತನು, ದಿಲೀಪ್ ಕುಮಾರ್, ರಕ್ಷಿತ್ , ತೋಟಂಬೈಲ್ ಪವನ್, ಕುವೆಂಡ್ರ ದಿನೇಶ್ ಅವರನ್ನು ಆಡಳಿತ ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಡಿ.17 :NEWS DESK ಕೇರಳ ರಾಜ್ಯದಲ್ಲಿ ಕೊರೋನಾ ರುಪಾಂತರಿ ಜೆಎನ್.1 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಮಾಲೋಚಿಸಿದ ಸಚಿವರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕೊರೋನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಬೇಕು. ಜಿಲ್ಲೆಯ ಆರೋಗ್ಯ ಇಲಾಖೆಯು ಸನ್ನದ್ದವಾಗಿದ್ದು ಎಲ್ಲಾ ರೀತಿಯ ಪರಿಸ್ಥಿತಿಗಳನ್ನ ನಿಭಾಯಿಸಲು ಸಜ್ಜಾಗಿರಬೇಕು. ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಕ್ರಮಗಳನ್ನ ಕೈಗೊಳ್ಳಬೇಕು. ಕೊರೋನಾ ಪ್ರಕರಣಗಳು ಕಂಡುಬಂದಲ್ಲಿ ನಿಯಮಾನುಸಾರ ಚಿಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ…

Read More

ಸೋಮವಾರಪೇಟೆ ಡಿ.17: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ 60 ಅಂಗಡಿ ಮಳಿಗೆ ಹರಾಜು ವಿಚಾರ ಭಾರೀ ಚರ್ಚೆಗೆ ಒಳಪಟ್ಟಿರುವ ಬೆನ್ನಲ್ಲೇ ಶಾಸಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲೂ ತೀರ್ಮಾನ ಅಂತಿಮಗೊಂಡಿಲ್ಲ. ಸಭೆಯಲ್ಲಿ ಚರ್ಚೆಗಳು ನಡೆದರೂ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಅಂತಿಮವಾಗಿ ಜಿಲ್ಲಾಧಿಕಾರಿಗಳ ಅಂಗಳಕ್ಕೆ ಟೆಂಡರ್ ಪ್ರಕ್ರಿಯೆಯ ಚೆಂಡನ್ನು ಎಸೆಯಲಷ್ಟೇ ಸಭೆ ಸೀಮಿತವಾಯಿತು. ಮಳಿಗೆಗಳ ಹರಾಜು ವಿಚಾರ ಮುನ್ನೆಲೆಗೆ ಬಂದಾಗಿನಿಂದಲೂ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳ ನಡುವೆ ತಿಕ್ಕಾಟ ಆರಂಭಗೊಂಡಿದ್ದು, ಶಾಸಕರ ಮಧ್ಯೆ ಪ್ರವೇಶದ ನಂತರವೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ತಾ.14ರಂದು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಆಡಳಿತಾಧಿಕಾರಿಗಳ ನಡುವೆ ಪಂಚಾಯಿತಿ ಮುಂಭಾಗವೇ ಸಾರ್ವಜನಿಕರೆದುರು ಜಟಾಪಟಿ ನಡೆದಿದ್ದು, ಈ ಸಂದರ್ಭ ತಾ.16ರಂದು ಸಭೆ ಕರೆಯುವ ಬಗ್ಗೆ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ತಹಶೀಲ್ದಾರ್ ನರಗುಂದ್ ಅವರು ಭರವಸೆ ನೀಡಿದ್ದರು. ಅದರಂತೆ ನಿನ್ನೆ (ಡಿ.16)ಸಂಜೆ 5 ಗಂಟೆಗೆ ಪಟ್ಟಣ ಪಂಚಾಯಿತಿಯಲ್ಲಿ ಸಭೆ ನಿಗದಿಯಾಗಿದ್ದರೂ, ಸಭೆಯನ್ನು ನಿಗದಿ ಮಾಡಿದ್ದ ಆಡಳಿತಾಧಿಕಾರಿ ನಿಗದಿತ ಸಮಯಕ್ಕೆ ಸಭೆಗೆ ಆಗಮಿಸಲಿಲ್ಲ.…

Read More

ಸುಂಟಿಕೊಪ್ಪ ಡಿ.17 : ಅರೆಭಾಷೆ ಗೌಡ ಸಮುದಾಯದ ಸಂಸ್ಕೃತಿ, ಪರಂಪರೆಯ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ಸುಂಟಿಕೊಪ್ಪ ನಾಡು ಗೌಡ ಸಂಘವನ್ನು ಸಬಲಗೊಳಿಸಲು ಎಲ್ಲರೂ ಕೈಜೋಡಿಸುವಂತೆ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಕರೆ ನೀಡಿದ್ದಾರೆ. ಸುಂಟಿಕೊಪ್ಪದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಸಂಘದ 8ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ, ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕಳೆದ 7 ವರ್ಷಗಳಿಂದ ಸಂಘ ಕಾರ್ಯನಿರ್ವಹಿಸುತ್ತಿದೆ. ಶೈಕ್ಷಣಿಕ, ಸಮಾಜ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜನಾಂಗದವರನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಲಾಗುತ್ತಿದೆ. ಸಂಘದ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬಲ್ಲಡ್ಕ ಅಭಿಜನ್, ಪುಳ್ಳಿಜ್ಜನ ರಿತೀಶ್, ವಾಣಿಜ್ಯ ವಿಭಾಗದಲ್ಲಿ ಅಯ್ಯಂಡ್ರ ದಿವ್ಯಶ್ರೀ, ಯಂಕನ ವರ್ಧಿನಿ ಪುರಸ್ಕಾರಕ್ಕೆ ಪಾತ್ರರಾದರು. ಕೊಡಗು ಜಿಲ್ಲಾ ಸರಕಾರಿ ನಿವೃತ್ತ ಗೌಡ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್, ಸುಂಟಿಕೊಪ್ಪ…

Read More

ಮಡಿಕೇರಿ ಡಿ.17 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಷಷ್ಠಿ ಮತ್ತು ಸುಬ್ರಹ್ಮಣ್ಯ ರಥೋತ್ಸವದಲ್ಲಿ ಪಾಲ್ಗೊಳ್ಳಲು ಮಡಿಕೇರಿ ನಗರದ ಅಯ್ಯಪ್ಪ ಮಾಲಾಧಾರಿ ಭಕ್ತರು ಹಾಗೂ ಯುವಕರು ಕಾಲ್ನಡಿಗೆ ಮೂಲಕ ಮಡಿಕೇರಿಯಿಂದ ಸುಬ್ರಹ್ಮಣ್ಯಕ್ಕೆ ಸಾಗಿದರು. 60 ಕ್ಕೂ ಹೆಚ್ಚು ಭಕ್ತರು ಮಡಿಕೇರಿಯಿಂದ ಬೆಳಿಗ್ಗೆ ಐದು ಗಂಟೆಗೆ ಹೊರಟು ಗಾಳಿಬೀಡು, ವಣಚಲು, ಕಡಮಕಲ್ಲು ಸೇರಿದಂತೆ ದಟ್ಟ ಅರಣ್ಯದ ನಡುವೆ ನಡೆದುಕೊಂಡು ಹೋಗಿ‌ ಸಂಜೆ ವೇಳೆಗೆ ಸುಬ್ರಹ್ಮಣ್ಯ ದೇವಾಲಯಕ್ಕೆ ತಲುಪಿದ್ದಾರೆ. ಸೋಮವಾರ ನಡೆಯುವ ಷಷ್ಠಿ ಮತ್ತು ಸುಬ್ರಹ್ಮಣ್ಯ ರಥೋತ್ಸವದಲ್ಲಿ ಪಾಲ್ಗೊಂಡು ಮರಳಲಿದ್ದಾರೆ.  

Read More