ಮಡಿಕೇರಿ ಜ.1 NEWS DESK : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾರ್ಯಕ್ರಮಗಳ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನಾ ಕಾರ್ಯಕ್ರಮ ಪ್ರಗತಿ ಸಂಬಂಧಿಸಿದಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ವಿದ್ಯುತ್, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ನಗರಾಭಿವೃದ್ಧಿ, ನೀರಾವರಿ ಹೀಗೆ ವಿವಿಧ ಇಲಾಖೆಗಳು ನಿಗಧಿ ಮಾಡಿರುವ ಶೇಕಡಾವಾರು ಪ್ರಗತಿ ಸಾಧನೆಗೆ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. :: ಜಿಲ್ಲಾ ಜಾಗೃತಿ ಸಮಿತಿ ಸಭೆ :: ಸಫಾಯಿ ಕರ್ಮಚಾರಿಗಳ/ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯದ…
ಲೇಖಕ: admin
ಮಡಿಕೇರಿ ಜ.1 NEWS DESK : ಪರಿಶಿಷ್ಟ ಸಮುದಾಯದ ಯುವಕನನ್ನು ವಿವಾಹವಾದ ಕಾರಣಕ್ಕಾಗಿ ಯುವತಿಯನ್ನು ಆಕೆಯ ತಂದೆ ಮತ್ತಿತರರು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಗಲ್ಲುಶಿಕ್ಷೆಗೆ ಗುರಿ ಪಡಿಸಬೇಕೆಂದು ಮಾನವ ಬಂಧುತ್ವ ವೇದಿಕೆಯ ಕೊಡಗು ಜಿಲ್ಲಾ ಸಂಚಾಲಕರಾದ ಜೆ.ಎಲ್.ಜನಾರ್ಧನ್ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹುಬ್ಬಳ್ಳಿ ತಾಲ್ಲೂಕು ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿಯ ಮರ್ಯಾದಾ ಹತ್ಯೆ ಪ್ರಕರಣ ಇಡೀ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಜಾತಿ ವ್ಯವಸ್ಥೆ ಇನ್ನೂ ಕೂಡ ಜೀವಂತವಾಗಿರುವುದಕ್ಕೆ ಈ ಘಟನೆ ಸ್ಪಷ್ಟ ಸಾಕ್ಷಿಯಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳೇ ಆಗಿದ್ದರೂ ಸಂವಿಧಾನದ ರಕ್ಷಣೆಯಡಿ ಪ್ರತಿಯೊಬ್ಬರು ಸ್ವತಂತ್ರವಾಗಿ ಬದುಕಲು ಸಾಧ್ಯವಾಗದೆ ಇರುವುದು ವಿಷಾದಕರ ಎಂದು ತಿಳಿಸಿದ್ದಾರೆ. ಜಾತ್ಯತೀತತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಈ ಮರ್ಯಾದಾ ಹತ್ಯೆ ಪ್ರಕರಣ ಕಪ್ಪುಚುಕ್ಕೆಯಾಗಿದೆ. ಮೃತ ಯುವತಿಯ ಪತಿ, ಪರಿಶಿಷ್ಟ ಸಮುದಾಯದ ವಿವೇಕಾನಂದ…
ಮಡಿಕೇರಿ ಜ.1 NEWS DESK : ಅಮರಶಿಲ್ಪಿ ಜಕಣಾಚಾರಿ ಅವರು ನಾಡುಕಂಡ ಅದ್ಭುತ ಶಿಲ್ಪಿ ಎಂದು ಸಾಹಿತಿ ಉ.ರಾ.ನಾಗೇಶ್ ಅವರು ವರ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಮರಶಿಲ್ಪಿ ಜಕಣಾಚಾರಿ ಅವರು ಹೊಯ್ಸಳ ಶೈಲಿಯ ಕಲ್ಯಾಣ ಚಾಲುಕ್ಯರ ದೇವಾಲಯಗಳಾದ ಬೇಲೂರು ಮತ್ತು ಹಳೇಬೀಡುವಿನಂತಹ ಕಲಾಕೃತಿಗಳನ್ನು ನಿರ್ಮಿಸಿದ್ದಾರೆ ಎಂದು ಅವರು ಹೇಳಿದರು. ‘ಜಕಣಾಚಾರಿ ಅವರು ತುಮಕೂರು ಜಿಲ್ಲೆಯ ಕೈದಾಳ ಗ್ರಾಮದಲ್ಲಿ ಜನಿಸಿ ಸುಮಾರು 80 ವರ್ಷಗಳ ಕಾಲ ಬದುಕಿ 150 ಕ್ಕೂ ಹೆಚ್ಚು ದೇವಾಲಯಗಳನ್ನು ನಿರ್ಮಿಸಿ ಅಮರಶಿಲ್ಪಿ ಬಿರುದು ಹೊಂದಿದ್ದಾರೆ ಎಂದು ಉ.ರಾ.ನಾಗೇಶ್ ಅವರು ತಿಳಿಸಿದರು.’ ಬಾಲ್ಯದಿಂದಲೇ ಶಿಲ್ಪಕಲೆಗೆ ತನ್ನನ್ನು ಅರ್ಪಿಸಿಕೊಂಡು ದೇಶದಾದ್ಯಂತ ಸಂಚರಿಸಿ ನೂರಾರು ದೇವಾಲಯಗಳನ್ನು ನಿರ್ಮಿಸಿದ್ದಾರೆ ಎಂದರು. ಕರ್ನಾಟಕ ಜನಪದ ಸಂಸ್ಕøತಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರವಾಗಿದ್ದು, ರಾಜ್ಯ ಸರ್ಕಾರವು ಮಾಸ್ಟರ್ ಶಿಲ್ಪಿಗಳಿಗಾಗಿ ‘ಅಮರಶಿಲ್ಪಿ…
ಕುಶಾಲನಗರ ಜ.1 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಎಂಬ ವಿಷಯವಾರು ಕೀಳೆರಿಮೆ ಹಾಗೂ ವ್ಯತ್ಯಾಸವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ಅವರ ಇಚ್ಛೆ ಹಾಗೂ ಆಸಕ್ತಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಎಲ್ಲಾ ವಿಭಾಗಗಳು ಮುಖ್ಯವಾಗಿವೆ. ಚನ್ನಾಗಿ ಓದಿ ಉತ್ತಮ ಅಂಕಗಳಿಸಿದಲ್ಲಿ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯವಿದೆ ಎಂದರು. ಈ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಪ್ರಮಾಣ ಜಾಸ್ತಿ ಇದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಹೆಚ್ಚಿನ ಆದ್ಯತೆ ನೀಡಲಾಗಿದೆ.ಅದು ನಿಮ್ಮ ಹಕ್ಕು ಕೂಡ ಆಗಿದೆ. ಹೆಣ್ಣು ಮಕ್ಕಳು ವಿದ್ಯಾವಂತರಾದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬಡಕುಟುಂಬದಲ್ಲಿ ಹುಟ್ಟಿದ್ದರು ಕೂಡ ಅವರು ಪುಸ್ತಕಗಳನ್ನು ಸಂಗ್ರಹಿಸಿ ಅಧ್ಯಯನ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಶ್ವದಲ್ಲಿಯೇ ಶ್ರೇಷ್ಠ ಜ್ಞಾನಿ ಎನಿಸಿಕೊಂಡರು. ಈ…
ಮಡಿಕೇರಿ ಜ.1 NEWS DESK : ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹೊಸ ವರ್ಷದ ಪ್ರಯುಕ್ತ ಟ್ರ್ಯಾಕ್ಶೂಟ್ ಅನ್ನು ವಿತರಿಸಿದರು. ಶಾಲೆಯ ಶಿಕ್ಷಕ ವೃಂದ ಹಾಗೂ ಎಸ್ ಡಿಎಂಸಿಯ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು ಜ.1 NEWS DESK : ಏರ್ ಮಾರ್ಷಲ್ ಸೀತೆಪಲ್ಲಿ ಶ್ರೀನಿವಾಸ್ ಅವರು 2026ರ ಜ.1 ರಂದು ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ನ ವಾಯುಪಡೆಯ ಕಮಾಂಡಿಂಗ್-ಇನ್-ಚೀಫ್ (ಎಒಸಿ-ಇನ್-ಸಿ) ಆಗಿ ಅಧಿಕಾರ ವಹಿಸಿಕೊಂಡರು. ಹೊಸ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಏರ್ ಮಾರ್ಷಲ್ ತರಬೇತಿ ಕಮಾಂಡ್ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛವಿರಿಸುವ ಮೂಲಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಏರ್ ಮಾರ್ಷಲ್ ಶ್ರೀನಿವಾಸ್ ಅವರನ್ನು 1987 ರ ಜೂ.13 ರಂದು ಐಎಎಫ್ ನ ಫೈಟರ್ ವಿಭಾಗದಲ್ಲಿ ನಿಯೋಜಿಸಲಾಗಿತ್ತು. ಅವರು ಮಿಗ್-21, ಇಸ್ಕ್ರಾ, ಕಿರಣ್, ಪಿಸಿ-7 ಎಂಕೆ II, ಎಚ್ ಪಿಟಿ-32 ಮತ್ತು ಮೈಕ್ರೋಲೈಟ್ ಸೇರಿದಂತೆ ಇತರ ವಿಮಾನಗಳಲ್ಲಿ 4200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದಾರೆ. ಅವರು‘ಎ ಶ್ರೇಣಿಯ’ಅರ್ಹ ಫ್ಲೈಯಿಂಗ್ ಬೋಧಕರಾಗಿದ್ದು, ಚೇತಕ್ / ಚೀತಾ ಹೆಲಿಕಾಪ್ಟರ್ನಲ್ಲಿ 2 ನೇ ಪೈಲಟ್ ಮತ್ತು ಪೆಚೋರಾ ಕ್ಷಿಪಣಿ ವ್ಯವಸ್ಥೆಯಲ್ಲಿ ಕಾರ್ಯಾಚರಣೆ ಅಧಿಕಾರಿಯಾಗಿಯೂ ಅವರು ಅರ್ಹತೆ ಪಡೆದಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ…
ಮಡಿಕೇರಿ ಜ.1 NEWS DESK : ಇಂದಿನ ತಂತ್ರಜ್ಞಾನದ ಯುಗದಲ್ಲಿ ಬರಹಗಾರರ ಸಂಖ್ಯೆ ಕ್ಷೀಣಿಸುತ್ತಿದ್ದು, ಹೊಸ ಬರಹಗಾರರಿಗೆ ಪ್ರೋತ್ಸಾಹ ಮತ್ತು ದಾನಿಗಳ ಸಹಕಾರದ ಅಗತ್ಯವಿದೆ ಎಂದು ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಹೊಸ ವರ್ಷದ ಪ್ರಯುಕ್ತ ಕೊಡವ ಮಕ್ಕಡ ಕೂಟದ 123ನೇ ಪುಸ್ತಕ ಹಾಗೂ ಲೇಖಕಿ ಕರವಂಡ ಸೀಮಾ ಗಣಪತಿ ಅವರ ಮೂರನೇ ಪುಸ್ತಕ “ನೊಂದ ಜೀವ” ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳು ಪ್ರಭಾವ ಬೀರಿರುವ ಈ ಯುಗದಲ್ಲಿ ಬರಹಗಾರರನ್ನು ಗುರುತಿಸುವುದು ಅಪರೂಪವೆನಿಸಿದೆ. ಪರಿಸ್ಥಿತಿ ಹೀಗಿದ್ದರೂ ಲೇಖಕಿ ಕರವಂಡ ಸೀಮಾ ಗಣಪತಿ ಅವರು, ತಮ್ಮ ಕಾರ್ಯದ ನಡುವೆಯೂ ಪುಸ್ತಕವನ್ನು ಹೊರತಂದಿದ್ದಾರೆ. ಆ ಮೂಲಕ ಲೇಖಕರಿಗೆ ತಾಳ್ಮೆ ಮುಖ್ಯ ಎನ್ನುವುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಟು ತಾತಪಂಡ ಜ್ಯೋತಿ ಸೋಮಯ್ಯ ಅವರು ಮಾತನಾಡಿ, ತಮ್ಮ ಕಾರ್ಯಚಟುವಟಿಕೆಯ ನಡುವೆಯೂ ಕಾದಂಬರಿ ಬರೆದು ಓದುಗರ ಮುಂದಿಡುವುದು ಸವಾಲಿನ…
ವಿರಾಜಪೇಟೆ ಜ.1 NEWS DESK : ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ವಿರಾಜಪೇಟೆಯಲ್ಲಿ ಪತ್ರ ಚಳುವಳಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಯಿತು. ಸಂಘಟನೆ ವತಿಯಿಂದ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ಇರುವ ಪ್ರದಾನ ಅಂಚೆ ಕಚೇರಿಯಲ್ಲಿ ಮುಖ್ಯಮಂತ್ರಿಗಳಿಗೆ ಪತ್ರವನ್ನು ಪೋಸ್ಟ್ ಮಾಡಿ ಬಳಿಕ ಹುಬ್ಬಳ್ಳಿಯ ಲಿಂಗಾಯಿತ ಸಮುದಾಯದ ಯುವತಿ ದಲಿತ ಸಮುದಾಯದ ಯುವಕನನ್ನು ವಿವಾಹವಾಗಿದ್ದ ಕಾರಣಕ್ಕೆ, ಆಕೆ ಗರ್ಭಿಣಿಯಿದ್ದಾಗಲೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿ, ಆಕೆಯ ಗಂಡ ಮತ್ತವನ ತಂದೆತಾಯಿಗಳ ಮೇಲೂ ದೈಹಿಕವಾಗಿ ದಾಳಿ ನಡೆಸಿದ್ದಾರೆ. ಕೃತ್ಯವನ್ನು ಖಂಡಿಸುವ ಜೊತೆಗೆ, ಮರ್ಯಾದೆ ಹತ್ಯೆಗಳ ನಿಗ್ರಹಕ್ಕೆ ಪ್ರತ್ಯೇಕ ಕಾಯ್ದೆ ರೂಪಿಸಬೇಕು ಎಂದು ಸಂಘಟನೆಯವರು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಂಚಾಲಕಿ ಪದ್ಮಿನಿ ಶ್ರೀಧರ್, ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳು ನಡೆಯದಂತೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ…
ನಾಪೋಕ್ಲು ಜ.1 NEWS DESK : ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಹೆಚ್.ವಿ.ವತ್ಸಲ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ 2019 ರಿಂದ 2025 ರವರೆಗೆ ಪಿಡಿಒ ಆಗಿ ಉತ್ತಮ ಸೇವೆ ಸಲ್ಲಿಸಿ ಇದೀಗ ನಿರ್ಗಮಿಸುತ್ತಿರು ಎ.ಎ ಅಬ್ದುಲ್ಲ ಅವರನ್ನು ಗುರುವಾರ ಪಂಚಾಯಿತಿ ವತಿಯಿಂದ ಆತ್ಮೀಯವಾಗಿ ಮತ್ತು ಗೌರವಪೂರ್ವಕ ಸನ್ಮಾನಿಸಿ ಬೀಳ್ಕೊಡಲಾಯಿತು. ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿಯ ಅಧ್ಯಕ್ಷರಾದ ಹೆಚ್.ಎ.ಹಂಸ ಅವರು ವಹಿಸಿ ಮಾತನಾಡಿ, ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಹೇಳಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಅನುರಾಧ, ಸದಸ್ಯರುಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.1 NEWS DESK : ಗೋಣಿಕೊಪ್ಪಲಿನ ಹರಿಶ್ಚಂದ್ರ ಪುರದ ನಿವಾಸಿ, ಚಾಲಕ ನವಾಜ್ ಸಾವಿನ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರನ್ನು ತಕ್ಷಣ ಬಂಧಿಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೆಲವರು ಹಾತೂರು ಕುಂದಾ ರಸ್ತೆಯಲ್ಲಿ ಮಾರಣಾಂತಿಕ ರೀತಿಯಲ್ಲಿ ಹಲ್ಲೆ ನಡೆಸಿರುವ ಕುರಿತು ತಿಳಿದು ಬಂದಿದೆ. ಮೃತದೇಹದಲ್ಲಿ ಹಲ್ಲೆಯ ಗುರುತುಗಳಿದ್ದು, ಇದೊಂದು ಅಮಾನುಷ ಕೃತ್ಯವಾಗಿದೆ. ಈ ದಾಳಿಯನ್ನು ಎಸ್ಡಿಪಿಐ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಕಠಿಣ ಕಾನೂನು ಕ್ರಮಕ್ಕೆ ಗುರಿ ಪಡಿಸಬೇಕು. ಆ ಮೂಲಕ ಮೃತ ನವಾಜ್ ನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ತಪ್ಪಿದಲ್ಲಿ ಎಸ್ಡಿಪಿಐ ಪಕ್ಷ ಬೀದಿಗಳಿದು ಹೋರಾಟ ನಡೆಸಲಿದೆ ಎಂದು ಅಮೀನ್ ಮೊಹಿಸಿನ್ ಎಚ್ಚರಿಕೆ ನೀಡಿದ್ದಾರೆ.






