ಮಡಿಕೇರಿ ಡಿ.3 NEWS DESK : ಪೊನ್ನಂಪೇಟೆ-ಕಾನೂರು-ನಿಟ್ಟೂರು ರಸ್ತೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕಾಮಗಾರಿಯನ್ನು ಅತ್ಯಂತ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಂಡು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರು ರಮೇಶ್, ಪಂಚಾಯಿತಿ ಸದಸ್ಯರು ಬೋಪಣ್ಣ, ದಾನಿಗಳು ಜೀವನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪ್ರತ್ಯು, ಹಿರಿಯರು ಪೆಮ್ಮಂಡ ಪೊನ್ನಪ್ಪ, ಪಕ್ಷದ ಮುಖಂಡರು ಮುಕಟೀರ ಸಂದೀಪ್, ವಿನು ಉತ್ತಪ್ಪ, ಮನು, ಸಿದ್ದು ನಾಚಪ್ಪ, ನಿಖಿಲ್ ಸೋಮಣ್ಣ, ಅಜ್ಜಿಕುಟ್ಟಿರ ಪೊನ್ನು, ಪಮು, ಅಣ್ಣಳ್ಳಮಾಡ ಹರೀಶ್, ಅಂಟೋನಿ, ಚೆಕೇರ ಸುಧೀರ್, ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು. ರಸ್ತೆಯ ಅಭಿವೃದ್ಧಿಗೆ ಶಾಸಕರು ರಾಜ್ಯ ಸರ್ಕಾರದಿಂದ ₹…
ಲೇಖಕ: admin
ಮಡಿಕೇರಿ ಡಿ.3 NEWS DESK : ಪೊನ್ನಂಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಮಲ್ಲಗೆರೆ ಶ್ರೀ ಮಾರಮ್ಮ ಹಾಗೂ ಶ್ರೀ ಈಶ್ವರ ದೇವಾಲಯದ ಮುಖ್ಯ ಹೆಬ್ಬಾಗಿಲನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದಶಾಸಕರು, ಅತ್ಯಂತ ಸುಂದರ ಹಾಗೂ ಸಾವಿರಾರು ಭಕ್ತರು ಆಗಮಿಸುವ ಈ ದೇವಸ್ಥಾನಕ್ಕೆ ನೂತನ ಹೆಬ್ಬಾಗಿಲು ಮತ್ತಷ್ಟು ಮೆರಗು ನೀಡುತ್ತದೆ ಎಂದು ಬಣ್ಣಿಸಿದರು. ಶ್ರೀ ದೇವರು ಭಕ್ತಾದಿಗಳ ಇಷ್ಟಾರ್ಥ ಈಡೇರಿಸಿ ನಾಡಿಗೆ ಸುಖ, ಸಂತೋಷ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮೀದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರು ರಮೇಶ್, ಪಂಚಾಯಿತಿ ಸದಸ್ಯರು ಬೋಪಣ್ಣ, ದಾನಿಗಳು ಜೀವನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಬಾನಂಡ ಪ್ರತ್ಯು, ಹಿರಿಯರು ಪೆಮ್ಮಂಡ ಪೊನ್ನಪ್ಪ, ಪಕ್ಷದ ಮುಖಂಡರು ಮುಕಟೀರ ಸಂದೀಪ್, ವಿನು ಉತ್ತಪ್ಪ, ಮನು, ಸಿದ್ದು ನಾಚಪ್ಪ, ನಿಖಿಲ್ ಸೋಮಣ್ಣ, ಅಜ್ಜಿಕುಟ್ಟಿರ ಪೊನ್ನು,…
ಮಡಿಕೇರಿ ಡಿ.3 NEWS DESK : ಎಲೆಕ್ಟ್ರಿಕ್ ಆಟೋರಿಕ್ಷಾಗಳ ಸಂಚಾರಕ್ಕೆ ಈಗಾಗಲೇ ಕೇಂದ್ರ ಸರಕಾರ ಜಾರಿಗೆ ತಂದಿರುವ ಆದೇಶಗಳನ್ವಯ ಕೆಲವು ವಿನಾಯಿತಿಗಳನ್ನು ನೀಡಬೇಕು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಈ ಆದೇಶಕ್ಕೆ ವಿರುದ್ಧವಾದ ನಿಯಮಗಳನ್ನು ಜಾರಿಗೆ ತರಬಾರದೆಂದು ಆಟೋ ರಿಕ್ಷಾ ಮಾಲೀಕರ ಹಾಗೂ ಚಾಲಕರ ಸಂಘ ಒತ್ತಾಯಿಸಿದೆ. ನಗರದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದ ಚಾಲಕರು ಜಿಲ್ಲೆಯಲ್ಲಿ ಎಲೆಕ್ಟ್ರಿಕ್ ಆಟೋ ಮಾಲೀಕರು ಹಾಗೂ ಚಾಲಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಅನುಸರಿಸುತ್ತಿರುವ ಕ್ರಮಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಸರಕಾರದ ಆದೇಶದ ಪ್ರಕಾರ ಎಲೆಕ್ಟ್ರಿಕ್ ಆಟೋ ರಿಕ್ಷಾವನ್ನು ಓಡಿಸಲು ರಹದಾರಿಯ ಅಥವಾ ಅನುಮತಿಯ ಅಗತ್ಯವಿಲ್ಲ. ಆದರೆ ಮಡಿಕೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇನ್ನು ಮುಂದೆ ರಹದಾರಿ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ. ಅಲ್ಲದೆ ಕೇವಲ 15 ಕಿ.ಮೀ ದೂರ ಮಾತ್ರ ಓಡಿಸಲು ಅವಕಾಶವಿದೆ ಎಂದಿದ್ದಾರೆ. ಇದು ಸರಕಾರದ ನಿಯಮಕ್ಕೆ ವಿರುದ್ಧವಾದ ಕ್ರಮ ಎಂದು ಆಟೋ…
ಮಡಿಕೇರಿ ಡಿ.3 NEWS DESK : ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲೂರು ಗ್ರಾಮದ ಮಾದೇಶ್ವರ ದೇವಸ್ಥಾನದಿಂದ ಐಗುಂದ ಎಸ್ಟೇಟ್ ವರೆಗಿನ ಪೂರ್ಣಗೊಂಡಿರುವ 11 ಕೆವಿ ವಿದ್ಯುತ್ ಮಾರ್ಗದ ರೀ ರೂಟಿಂಗ್ ಹಾಗೂ ರೀ ಕಂಡಕ್ಟರಿಂಗ್ ರೂ 14.71ಲಕ್ಷ ರೂ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಪ್ರಮುಖವಾಗಿ ಕೃಷಿ ಅವಲಂಬಿತ ಕೊಡಗಿನ ಜನತೆಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗಾಗಿ ಕ್ಷೇತ್ರದಾದ್ಯಂತ ಇಂತಹ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರೈತರ ಕಡೆಯಿಂದ ಮೆಚ್ಚುಗೆಯ ಸಂದೇಶಗಳು ಬರುತ್ತಿವೆ. ನಾಡಿನ ರೈತರ ಹಾಗೂ ವಿದ್ಯುತ್ ಬಳಕೆದಾರರ ಹಿತ ದೃಷ್ಟಿಯಿಂದ ಈ ಯೋಜನೆ ತಂದಿದ್ದು ಇದರ ಸದುಪಯೋಗವನ್ನು ನಾಡಿನ ಜನತೆ ಪಡೆದುಕೊಳ್ಳಬೇಕೆಂದು ಶಾಸಕರು ಕರೆ ನೀಡಿದರು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮೀದೇರಿರ ನವೀನ್, ವಲಯ ಅಧ್ಯಕ್ಷರು ಚಂಗುಲಂಡ ಸೂರಜ್, ಹಿರಿಯರು ಮುಕಳೆರ ಕುಶಾಲಪ್ಪ, ಪೆಮ್ಮಂಡ ಪೊನ್ನಪ್ಪ, ಸುಧೀರ್, ಅಜ್ಜಿಕುಟ್ಟಿರ ಗಿರೀಶ್, ಪಮು, ಸುರೇಂದ್ರ, ಯೋಗೇಶ್,…
ಮಡಿಕೇರಿ NEWS DESK ಡಿ.3 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 31ನೇ ವರ್ಷದ ಸಾರ್ವತ್ರಿಕ ‘ಪುತ್ತರಿ ನಮ್ಮೆ’ಯನ್ನು ಆದಿಮಸಂಜಾತ ಆನಿಮಿಸ್ಟಿಕ್ ನಂಬಿಗೆಯ ಏಕ ಜನಾಂಗೀಯ ಕೊಡವರ ಸಕಲ ಜನಪದ ಪರಂಪರೆಯAತೆ ರೋಹಿಣಿ ನಕ್ಷತ್ರದ ಆರಂಭದಲ್ಲಿ ಡಿ.4 ರಂದು ಬೆಳಿಗ್ಗೆ 10 ಗಂಟೆಗೆ ಬಾಳೆಲೆ ಹೋಬಳಿಯ “ಪತ್ತ್ ಕಟ್” ನಾಡ್ ನ ಬಿಳೂರು ಗ್ರಾಮದಲ್ಲಿ ಆಚರಿಸಲಾಗುವುದು ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಗುರುವಾರ ಬೆಳಿಗ್ಗೆ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ನೇತೃತ್ವದಲ್ಲಿ ಕದಿರು ತೆಗೆಯುವ ಮೂಲಕ ‘ಪುತ್ತರಿ ನಮ್ಮೆ’ಯನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕೊಡವರ ರಾಜ್ಯಾಂಗದತ್ತ ಹಕ್ಕುಗಳ ಮಂಡನೆಗೆ ಪೂರಕವಾಗಿ ಮತ್ತು ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಾಗೂ ಹಸ್ತಾಂತರಿಸುವ ಉದ್ದೇಶದಿಂದ ಕಳೆದ ಮೂರು ದಶಕಗಳಿಂದ ಕೊಡವರ ಎಲ್ಲಾ ಹಬ್ಬಗಳನ್ನು ಸಿಎನ್ಸಿ ಸಂಘಟನೆ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದೆ. ಅತೀ…
ನಾಪೋಕ್ಲು ಡಿ.3 NEWS DESK : ಕೊಡಗು ಸಂಪದ್ಭರಿತವಾದ ಕೃಷಿ, ಪ್ರವಾಸೋದ್ಯಮ ಹೊಂದಿದ್ದು, ಇದರಲ್ಲಿ ವಿಪುಲ ಅವಕಾಶ ಇರುವುದರಿಂದ ಮಕ್ಕಳು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಜಿಲ್ಲೆ ಬಿಟ್ಟು ಹೋಗುವ ಅವಶ್ಯಕತೆ ಇಲ್ಲ ಎಂದು ಪೊನ್ನಂಪೇಟೆ ಅರಣ್ಯ ವಿದ್ಯಾಲಯದ ನಿವೃತ್ತ ಡೀನ್ ಚೆಪ್ಪುಡಿರ ಜಿ. ಕುಶಾಲಪ್ಪ ಅವರು ಹೇಳಿದರು. ಮೂರ್ನಾಡಿನ ಮಾರುತಿ ವಿದ್ಯಾ ಸಂಸ್ಥೆಯ 42ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ತಂದೆಯ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ತಾಯಿಯ ತ್ಯಾಗವನ್ನು ಅರಿತು ಮುನ್ನಡೆಯಬೇಕು ಎಂದ ಅವರು ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಅದನ್ನು ಈಡೇರಿಸುವ ದಿಶೆಯಲ್ಲಿ ನಿರಂತರ ಕನಸು ಕಾಣುವಂತಾಗಬೇಕೆಂದು ಹೇಳಿದರು. ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪಿಯುಸಿ ಹಂತದಲ್ಲಿ ತಮ್ಮ ಮುಂದಿನ ಗುರಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಅದಕ್ಕೆ ತಕ್ಕಂತೆ ಪ್ರಾಮಾಣಿಕ ಪ್ರಯತ್ನವೂ ಇರಬೇಕು. ಎಲ್ಲಾ ಕ್ಷೇತ್ರದಲ್ಲೂ ವಿಪುಲ ಅವಕಾಶವಿರುವುದರಿಂದ ಯಾರು ಕೂಡ ಇಂದು ನಿರುದ್ಯೋಗಿ ಎನ್ನುವಂತಿಲ್ಲ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಮಣಿಪಾಲ ಡಿ.3 NEWS DESK : ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ.ಎ.ಪೈ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ತಮ್ಮ ಚಾತುರ್ಯ, ಸಮಯ ಪ್ರಜ್ಞೆ ಮತ್ತು ಧೈರ್ಯಶಾಲಿ ಮಹತ್ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರದಾನ ಮಾಡಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಐಸಿಡಿಎಸ್ ಗೋಲ್ಡನ್ ಜ್ಯೂಬಿಲಿ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರವು ಮಕ್ಕಳ ಧೈರ್ಯ, ಸಮಯಪ್ರಜ್ಞೆ ಮತ್ತು ತ್ವರಿತ ನಿರ್ಧಾರಶಕ್ತಿಗೆ ನೀಡುವ ಅತ್ಯುನ್ನತ ಗೌರವಗಳಲ್ಲಿ ಹೊಯ್ಸಳ ಶೌರ್ಯ ಪ್ರಶಸ್ತಿಯು ಪ್ರಮುಖವಾಗಿದೆ. ಈ ಪ್ರಶಸ್ತಿ ದೊರೆತ ದೀಪೇಶ್ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಮತ್ತು ಟಿ.…
ನಾಪೋಕ್ಲು ಡಿ.3 NEWS DESK : ಕೋಡಗು ಜಿಲ್ಲಾ ವಿಶ್ವವಿದ್ಯಾಲಯ ಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಗೌತಮ್ ಶೆಟ್ಟಿ ಪ್ರಥಮ ಸ್ಥಾನ ಪಡೆದು ಆಲ್ ಇಂಡಿಯಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ಕೋಡಗು ಜಿಲ್ಲಾ ವಿಶ್ವವಿದ್ಯಾಲಯ ಮಟ್ಟದ 10 ಕಿ.ಮೀ ಪುರುಷರ ಗುಡ್ಡಗಾಡು ಓಟ 2024-25 (ಕ್ರಾಸ್-ಕಂಟ್ರಿ) ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನದ ಫಲವಾಗಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ಬಿ ಎ ವಿದ್ಯಾರ್ಥಿ ಗೌತಮ್ ಶೆಟ್ಟಿ ಇವರಿಗೆ ವಿಕಾಸ್ ಶ್ರೀನಿವಾಸ್ ಮಾರ್ಗದರ್ಶಕರಾಗಿ ಈ ಸಾಧನೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ. ವಿರಾಜಪೇಟೆಯ ಶೇಖರ್ ಮತ್ತು ಶೋಭಾ ದಂಪತಿಯ ಪುತ್ರನಾದ ಗೌತಮ್ ಮುಂದಿನ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡುವ ನಿರೀಕ್ಷೆಯಿದೆ . ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.3 NEWS DESK : ಕಾಫಿ ಬೆಳೆಗಾರರು ಕಾಫಿಯ ಉತ್ಪಾದನೆಯನ್ನು ಹೆಚ್ಚಿಸುವುದರ ಜೊತೆ ಗುಣಮಟ್ಟವನ್ನು ವೃದ್ಧಿಸಬೇಕು. ಆಗ ಬೆಳೆಗಾರರು ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಕಾಫಿ ರಾಷ್ಟ್ರೀಯ ಪಾನೀಯ ಹೋರಾಟ ಸಮಿತಿ ಸಂಚಾಲಕ ಮಾಚಿಮಾಡ ರವೀಂದ್ರ ಹೇಳಿದರು. ಭಾರತೀಯ ಕಿಸಾನ್ ಸಂಘದ ವತಿಯಿಂದ ನಾಪೋಕ್ಲು ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷರಾದ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಅವರ ಅಧ್ಯಕ್ಷತೆಯಲ್ಲಿ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ ಕವಿ ಸಭಾಂಗಣದಲ್ಲಿ ನಡೆದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಸಾಧಕ, ಬಾಧಕ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಕಾಫಿ ಬೆಳೆಗಾರರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಕಾಫಿಯ ಆಂತರಿಕ ಬಳಕೆ ಹೆಚ್ಚಬೇಕು. ಕಾಫಿ ರಾಷ್ಟ್ರೀಯ ಪಾನೀಯ ಆಗಬೇಕು ಎಂದ ಅವರು, ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸಚಿವರು ಚಿಕ್ಕಮಂಗಳೂರಿನ ಬಾಳೆಹೊನ್ನೂರಿಗೆ ಆಗಮಿಸಲಿದ್ದು, ಈ ಸಂದರ್ಭ ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಲಾಗುವುದು ಎಂದರು. ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಸ್ವಾಮಿ ಮಾತನಾಡಿ,…
ಸುಂಟಿಕೊಪ್ಪ ಡಿ.3 NEWS DESK : ಪ್ರತಿಭಾ ಕಾರಂಜಿ ಕೇವಲ ಸ್ಪರ್ಧೆಯಲ್ಲ, ಬದಲಿಗೆ ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಸಹಾಯ ಮಾಡುವ ಒಂದು ಬೃಹತ್ ಕಲಿಕೆಯ ಹಬ್ಬವಾಗಿದೆ ಎಂದು ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಯ್ಯ ತಿಳಿಸಿದರು. 7ನೇ ಹೊಸಕೋಟೆಯ ದೀಪ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಪ್ರತಿಭಾ ಕಾರಂಜಿ ಎನ್ನುವುದು ಶಾಲಾ ಮಟ್ಟದಲ್ಲಿ ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಮತ್ತು ಹೊರತರಲು ಇರುವ ಒಂದು ಅತ್ಯುತ್ತಮ ವೇದಿಕೆಯಾಗಿದೆ. ಕೇವಲ ಶೈಕ್ಷಣಿಕವಲ್ಲದೆ, ಚಿತ್ರಕಲೆ, ಹಾಡು, ನೃತ್ಯ, ನಾಟಕ, ಕಥೆ ಹೇಳುವುದು, ಭಾಷಣ, ಜಾನಪದ ಕಲೆ, ವಿಜ್ಞಾನ ಮಾದರಿಗಳ ಪ್ರದರ್ಶನ ಮುಂತಾದ ಅನೇಕ ಸ್ಪರ್ಧೆಗಳಿಗೆ ಅವಕಾಶ ನೀಡುತ್ತದೆ. ಇದರಿಂದ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಾಗಿ, ಉತ್ತಮ ವ್ಯಕ್ತಿಯಾಗಿ ಬೆಳೆಯಲು ಸಹಾಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಛದ್ಮವೇಷ ಅಭಿನಯ ಗೀತೆ, ಜಾನಪದ ನೃತ್ಯ, ದೇಶಭಕ್ತಿ ಗೀತೆ, ಭಾಷಣ ಚಿತ್ರಕಲೆ ಇನ್ನಿತರ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ ನಡೆಯಿತು. ವೇದಿಕೆಯಲ್ಲಿ…






