ಲೇಖಕ: admin

ಮಡಿಕೇರಿ, NEWS DESK ಮಾ.೯ : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯ ಮೀನುಕೊಲ್ಲಿ ಎಂಬಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಸದಸ್ಯೆ, ಬಾಳೆಗುಂಡಿ ಹಾಡಿ ನಿವಾಸಿ ಸ್ವಾಮಿ ಎಂಬುವವರ ಪತ್ನಿ ಜಲಜಾಕ್ಷಿ (೫೩) ಮೃತ ದುರ್ದೈವಿ. ಇಂದು ಬೆಳಿಗ್ಗೆ ಹಾಡಿ ಮುಂಭಾಗದಲ್ಲಿ ಆರು ಮಹಿಳೆಯರು ಹೋಗುತ್ತಿದ್ದಾಗ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಜಲಜಾಕ್ಷಿ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸಿಎಫ್ ಗೋಪಾಲ್ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಇದೇ ಸಂದರ್ಭ ಕಾಡಾನೆ ಹಾವಳಿ ತಡೆಗಟ್ಟಬೇಕು, ಸ್ಥಳದಲ್ಲೇ ಪರಿಹಾರ ಘೋಷಿಸಬೇಕು ಎಂದು ಹಾಡಿ ನಿವಾಸಿಗಳು ಒತ್ತಾಯಿಸಿದರು. ಕಾಡಾನೆ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಿಂದ ಈ ಭಾಗದಲ್ಲಿ ಕೈಗೊಂಡಿರುವ ಯೋಜನೆಗಳು ವಿಫಲವಾಗಿವೆ ಎಂದು ನಂಜರಾಯಪಟ್ಟಣ ಗ್ರಾ.ಪಂ ಮಾಜಿ ಅಧ್ಯಕ್ಷ ಸಿ.ಎಲ್.ವಿಶ್ವ ಆರೋಪಿಸಿದರು. ನಂಜರಾಯಪಟ್ಟಣ ಗ್ರಾ.ಪಂ…

Read More

ಮಡಿಕೇರಿ, NEWS DESK ಮಾ.೯ : ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರದ ಆನೆ “ಅಭಿ” (೨೧) ಅನಾರೋಗ್ಯದಿಂದ ಮೃತಪಟ್ಟಿದೆ. ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಬಳಕೆಯಾಗುತ್ತಿದ್ದ “ಅಭಿ” ಕಳೆದ ೬ ತಿಂಗಳಿನಿAದ ಕಾಲು ನೋವಿನಿಂದ ಬಳಲುತ್ತಿದ್ದ. ಸುದೀರ್ಘ ಕಾಲದ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾನೆ. ಪಶುವೈದ್ಯ ಡಾ.ರಮೇಶ ಮರಣೋತ್ತರ ಪರೀಕ್ಷೆ ನಡೆಸಿದರು. ಡಿಎಫ್ ಓ, ಡಿಸಿಎಫ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ, NEWS DESK ಮಾ.09 : ಕಾಡಾನೆ ದಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು ನಾಲ್ಕು ಮಂದಿ ಸಾವನ್ನಪ್ಪಿದ್ದು, ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಮಾಜ ಸೇವಕ ಪ್ರಸನ್ನ ಎಡಿಕೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ‌. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೋಮವಾರ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ(53) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕಾಡಾನೆ ದಾಳಿಯಿಂದ ಕೊಡಗು ಜಿಲ್ಲೆಯಲ್ಲಿ ಜ.1ರಂದು ಶನಿವಾರಸಂತೆ ಸಮೀಪದ ಗಣಗೂರಿನಲ್ಲಿ ಪೊನ್ನಪ್ಪ(61), ಜನವರಿ 29ರಂದು ವಿರಾಜಪೇಟೆ ತಾಲೂಕಿನ ಸಿದ್ದಾಪುರ ಕಾಫಿ ತೋಟದಲ್ಲಿ ಲತೀಫ್(72), ಫೆ.28ರಂದು ಮಡಿಕೇರಿ ತಾಲೂಕಿನ ಮದೆನಾಡುವಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜಾ(17) ಮೃತಪಟ್ಟಿದ್ದಾರೆ. ಎರಡು ತಿಂಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರೂ ಕೂಡ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಹೀಗೆ ಮುಂದುವರೆದರೆ ಅಮಾಯಕ ಕಾರ್ಮಿಕರು ಕಾಡಾನೆ ದಾಳಿಗೆ ತುತ್ತಾಗುತ್ತಾರೆ. ಆದ್ದರಿಂದ ಆದಷ್ಟು ಕೂಡಲೇ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮುಂದೆ ಇಂತಹ…

Read More

ಕಣಿವೆ, NEWS DESK ಮಾ.09: ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಬೋಧಕರ ತಂಡದಿಂದ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. ಶಿಕ್ಷಕರು ಸಾಮೂಹಿಕವಾಗಿ ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಸಂಭ್ರಮಿಸಿದರು. ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಎಸ್.ನಿಂಗಪ್ಪ, ಪ್ರಾಂಶುಪಾಲೆ ಸತ್ಯ ಸುಲೋಚನಾ ಹಾಗೂ ಶಿಕ್ಷಕರಿದ್ದರು.

Read More

ಮಡಿಕೇರಿ, NEWS DESK ಮಾ.09:-ಅಂಚೆ ಅದಾಲತ್‍ನ ಮುಂದಿನ ಸಭೆಯು ಮಾರ್ಚ್, 16 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ, ಅಶೋಕ್‍ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಮಾರ್ಚ್, 13 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಮಾರ್ಚ್, 16 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಮಾ.9 : ಕೊಡಗು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

Read More

ಬೆಂಗಳೂರು/ಕಲಬುರಗಿ, ಮಾರ್ಚ್ 9, 2026: ವಿಶ್ವ ಮಹಿಳಾ ದಿನದ ಸಂಭ್ರಮದ ನಡುವೆಯೇ ಕೇಂದ್ರದ ಮೋದಿ ಸರ್ಕಾರವು ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು 60 ರೂ. ಏರಿಕೆ ಮಾಡುವ ಮೂಲಕ ಗೃಹಿಣಿಯರಿಗೆ ಬಿಗ್ ಶಾಕ್ ನೀಡಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದು, ಇದು ಮಹಿಳೆಯರಿಗೆ ನೀಡಿದ ‘ಅಘಾತಕಾರಿ ಕೊಡುಗೆ’ ಎಂದು ಟೀಕಿಸಿದ್ದಾರೆ. ಬಿಜೆಪಿ ಸಂಸದರ ವಿರುದ್ಧ ವಾಗ್ದಾಳಿ ಕಲಬುರಗಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯದ ಬಿಜೆಪಿ ಸಂಸದರ ಮೌನವನ್ನು ಪ್ರಶ್ನಿಸಿದರು. “ಸಣ್ಣ ಪುಟ್ಟ ವಿಷಯಗಳಿಗೂ ನಾಟಕೀಯವಾಗಿ ಮಾಧ್ಯಮಗಳ ಮುಂದೆ ಬರುವ ರಾಜ್ಯದ ಬಿಜೆಪಿ ‘ಖಾಲಿ ಟ್ರಂಕ್’ ಸಂಸದರು, ಜನಸಾಮಾನ್ಯರ ಈ ಸಂಕಷ್ಟದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಈ ದರ ಏರಿಕೆ ವಿರುದ್ಧ ನಿಮ್ಮ ಹೋರಾಟ ಎಲ್ಲಿ?” ಎಂದು ನೇರವಾಗಿ ಸವಾಲು ಹಾಕಿದರು. ಕೇಂದ್ರಕ್ಕೆ ಸಹೋದರಿಯರ ಮೇಲೆ ಕಾಳಜಿ ಇದ್ದರೆ ಕೂಡಲೇ ಬೆಲೆ ಏರಿಕೆ ಹಿಂಪಡೆಯಲಿ ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರದ ಸಾಧನೆಗಳ ಪಟ್ಟಿ:…

Read More

ಕುಶಾಲನಗರ, NEWS DESK ಮಾ.09: ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕವಾದ ಕದಳಿ ಘಟಕದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಕುಶಾಲನಗರದ ಸರೋಜಾ ಆರಾಧ್ಯ ಅವರನ್ನು ಕದಳಿ ರಾಜ್ಯ ಸಂಚಾಲಕರಾದ ಸುಶೀಲಾ ಸೋಮಶೇಖರ್ ನೇಮಕ ಗೊಳಿಸಿದ್ದಾರೆ. ಹಾಗೆಯೇ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಯುವ ಘಟಕಗಳನ್ನು ರಚನೆ ಮಾಡಲು ಅವರು ಸೂಚಿಸಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ, NEWS DESK ಮಾ.09:-ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ ಸಮರ್ಪಕವಾಗಿ ನಡೆಯಬೇಕಿದ್ದಲ್ಲಿ ತಾಯಿ ಆರೋಗ್ಯ ಪೂರ್ಣವಾಗಿರಬೇಕು. ಇದರಿಂದ ಮಕ್ಕಳು ಹಾಗೂ ಕುಟುಂಬದ ನಿರ್ವಹಣೆ ಸುಗಮವಾಗಿ ಸಾಗಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಆಧುನಿಕ ಶರವೇಗದ ಜಗತ್ತಿನಲ್ಲಿ ಆಹಾರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಕಲುಷಿತತೆಯನ್ನು ಕಾಣಬಹುದಾಗಿದೆ. ಆದ್ದರಿಂದ ಶುದ್ದ ಕುಡಿಯುವ ನೀರು, ಮನೆಯಲ್ಲಿಯೇ ಬೇಯಿಸಿದ ಆಹಾರ ಉಪಯೋಗಿಸುವುದರಿಂದ ಆರೋಗ್ಯದತ್ತ ಗಮನಹರಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು…

Read More

ಮಡಿಕೇರಿ NEWS DESK ಮಾ.9 : ಅಪಾಯದ ಸಂದರ್ಭಗಳಲ್ಲಿ ಅಸಾಮಾನ್ಯ ಧೈರ್ಯ, ಸಾಹಸ ಮತ್ತು ಸಮಯಪ್ರಜ್ಞೆ ತೋರಿಸಿ ಇತರರ ಪ್ರಾಣ ರಕ್ಷಿಸಲು ಮುಂದಾದ ಮಕ್ಕಳನ್ನು ಗೌರವಿಸುವ ಉದ್ದೇಶದಿಂದ ರೋಟರಿ ಮಡಿಕೇರಿ ವತಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2025ರ ಜನವರಿ 1ರಿಂದ 2026ರ ಫೆಬ್ರವರಿ 28ರವರೆಗೆ ಸಂಭವಿಸಿದ ಘಟನೆಗಳಲ್ಲಿ ತಮ್ಮ ಪ್ರಾಣದ ಹಂಗನ್ನು ಲೆಕ್ಕಿಸದೆ ಧೈರ್ಯ ಹಾಗೂ ಸಾಹಸ ಪ್ರದರ್ಶಿಸಿ ಇತರರ ಪ್ರಾಣ ರಕ್ಷಿಸಲು ಮುಂದಾದ 06 ರಿಂದ 14 ವರ್ಷದೊಳಗಿನ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಅರ್ಹ ಮಕ್ಕಳ ಪರವಾಗಿ ಪೋಷಕರು, ಶಿಕ್ಷಕರು, ಶಾಲೆಗಳು ಅಥವಾ ಸಾರ್ವಜನಿಕರು ನಾಮ ನಿರ್ದೇಶನ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್ 2026 ಎಂದು ರೋಟರಿ ಮಡಿಕೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಆಯ್ಕೆಯಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ ಬಹುಮಾನ ರೂ.5 ಸಾವಿರ, ದ್ವಿತೀಯ ಬಹುಮಾನ ರೂ.3 ಸಾವಿರ ಹಾಗೂ ತೃತೀಯ ಬಹುಮಾನ ರೂ.2 ಸಾವಿರ ನೀಡಲಾಗುವುದು. ನಾಮ ನಿರ್ದೇಶನ…

Read More