ಮಡಿಕೇರಿ ಡಿ.16 : ಭಾರತ ಮತ್ತು ಪಾಕಿಸ್ತಾನ ಗಡಿ ಭಾಗದಲ್ಲಿ 1971 ರಲ್ಲಿ ನಡೆದ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ವಿಜಯ ಸಾಧಿಸಿದ ಹಿನ್ನೆಲೆ ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ವಿಜಯ್ ದಿವಸ್ ಆಚರಿಸಲಾಯಿತು. ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಎನ್ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ಜೆಫಿರಿನ್ ಅರಾನ್ಹಾ (Col. Zephyrin Aranha), ಜಿ.ಪಂ.ಸಿಇಒ ವರ್ಣಿತ್ ನೇಗಿ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಕೆ.ಪಿ.ಸೋಮಣ್ಣ, ಮಡಿಕೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಪಿ.ಕೆ.ಕುಟ್ಟಪ್ಪ, ಮಾಜಿ ಸೈನಿಕರಾದ ಟಿ.ಸಿ.ಗಣಪತಿ, ಕೆ.ಪಿ.ಮುತ್ತಣ್ಣ, ಕಾವೇರಪ್ಪ, ಗೌಡಂಡ ತಿಮ್ಮಯ್ಯ, ಎನ್.ಎ.ಅಯ್ಯಪ್ಪ, ಎಚ್.ಆರ್.ವಾಸಪ್ಪ, ಪ್ರಭಾಕರ, ಸುಬ್ರಮಣಿ, ಚಿಣ್ಣಪ್ಪ, ಎನ್.ಎಂ.ಸೋಮಯ್ಯ, ಎಂ.ಕೆ.ನಾಚಪ್ಪ, ಕೆ.ಪಿ.ಮ್ಯಾಥ್ಯು, ಬಿ.ಸಿ.ಎಂ.ಇಲಾಖೆ ಅಧಿಕಾರಿ ಎನ್.ಮಂಜುನಾಥ್, ರೆಡ್ಕ್ರಾಸ್ ಜಿಲ್ಲಾ ಉಪಾಧ್ಯಕ್ಷರಾದ ಎಚ್.ಟಿ.ಅನಿಲ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು. ನಂತರ ಮೌನ ಆಚರಿಸಲಾಯಿತು. …
ಲೇಖಕ: admin
ಮಡಿಕೇರಿ ಡಿ.16 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ 2.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಡಿ.23 ರಿಂದ 29 ರವರೆಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರು ಈ ಕುರಿತು ಮಾಹಿತಿ ನೀಡಿ, ಗ್ರಾಮಸ್ಥರು ಮತ್ತು ದಾನಿಗಳ ಸಹಕಾರದಿಂದ ಕಟ್ಟೆಮಾಡು ಗ್ರಾಮದ 3.80 ಏಕರೆ ಪ್ರದೇಶದಲ್ಲಿ ಶ್ರೀ ಮಹಾ ಮೃತ್ಯುಂಜಯ ಮಹದೇಶ್ವರ ದೇಗುಲವನ್ನು ನಿರ್ಮಿಸಲಾಗಿದೆ. ದೇವಸ್ಥಾನದಲ್ಲಿ ಶಿವಲಿಂಗದೊಂದಿಗೆ ತೀರ್ಥಮಂಟಪ, ಶ್ರೀ ವಿಷ್ಣುವಿನ ಗುಡಿ, ಶ್ರೀಗಣಪತಿ ಗುಡಿ, ನಾಗನಕಟ್ಟೆ, 46 ಅಡಿಯ ಧ್ವಜಸ್ತಂಭವನ್ನು ನಿರ್ಮಿಸಲಾಗಿದೆಯೆಂದು ತಿಳಿಸಿದರು. ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ಮತ್ತು ಬ್ರಹ್ಮಶ್ರೀ ಇರುವೈಲು ಕೃಷ್ಣದಾಸ ತಂತ್ರಿಗಳವರ ನೇತೃತ್ವದಲ್ಲಿ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದೆ. ಡಿ.23 ರಂದು ಸಂಜೆ ಕ್ಷೇತ್ರದ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಡಿ.24…
ಮಡಿಕೇರಿ ಡಿ.16 : ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.18 ರಂದು ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ” ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ ಎಂದು ಮಾಹಿತಿ ನೀಡಿದರು. ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಶ್ರೀ ಬೂತ ಬಲಿ, 12.20 ಗಂಟೆಗೆ ಮಹಾಮಂಗಳಾರತಿ ಜರುಗಲಿದ್ದು, ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ…
ಕಾರ್ತಿಕ ಮಾಸ ಮುಗಿದ ನಂತರ ಬರುವ ಮಾರ್ಗಶಿರ ಮಾಸದ ಶುಕ್ಲಪಕ್ಷದ ಷಷ್ಠಿ ತಿಥಿಯಂದು ಪ್ರತೀ ವರ್ಷ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಿಸಲಾಗುತ್ತದೆ. ಈ ದಿನವನ್ನು ಇಂಗ್ಲೀಷ್ ಕ್ಯಾಲೆಂಡರ್ ದಿನಾಂಕದಂತೆ ನಿರ್ಧರಿಸಲಾಗುವುದಿಲ್ಲ. ಬದಲಿಗೆ ಹಿಂದೂ ಪಂಚಾಂಗದ ಕ್ಯಾಲೆಂಡರ್ ಪ್ರಕಾರವೇ ನಿರ್ಧರಿಸಲಾಗುತ್ತದೆ. ಸುಬ್ರಹ್ಮಣ್ಯ ಷಷ್ಠಿಯನ್ನು ಸ್ಕಂದ ಷಷ್ಠಿ, ಚಂಪಾ ಷಷ್ಠಿಯಂತಲೂ ಕರೆಯುತ್ತಾರೆ. ಸುಬ್ರಹ್ಮಣ್ಯ ಷಷ್ಠಿಯಂದು ಭಗವಾನ್ ಶಿವ ಪಾವರ್ತಿಯರ ಎರಡನೇ ಮಗನಾದ ಶ್ರೀ ಸುಬ್ರಹ್ಮಣ್ಯನನ್ನು ಪೂಜಿಸಲಾಗುತ್ತದೆ. ಸೂರಪದ್ಮನೆಂಬ ಮಹಾನ್ ರಾಕ್ಷಸನು ತನ್ನ ಸಹೋದರರಾದ ಸಿಂಹಮುಖ ಹಾಗೂ ತಾರಕಾಸುರರೊಡಗೂಡಿ ದೇವಾದಿದೇವತೆಗಳು ಹಾಗೂ ಮಾನವರಿಗೆ ನಾನಾ ರೀತಿಯ ಕಿರುಕುಳ ನೀಡುತ್ತಿದ್ದಾಗ ಸುಬ್ರಹ್ಮಣ್ಯ ಸ್ವಾಮಿಯು ತಾರಕಸುರ ಮತ್ತಿತರ ದುಷ್ಟರನ್ನು ಸಂಹಾರ ಮಾಡಿ ಲೋಕಕ್ಕೆ ನೆಮ್ಮದಿಯನ್ನು ಕರುಣಿಸಿದನೆಂದು ಪುರಾಣಗಳಲ್ಲಿ ಉಲ್ಲೇಖವಿದೆ. ಶ್ರಿ ಸುಬ್ರಹ್ಮಣ್ಯ ಷಷ್ಠಿಯಂದು ಬಡವರು, ನಿರ್ಗತಿಕರಿಗೆ ಬಟ್ಟೆ ಹಾಗೂ ಅನ್ನದಾನ ಮಾಡಿದಲ್ಲಿ ಪುಣ್ಯ ಪ್ರಾಪ್ತಿಯಾಗುವುದೆಂಬ ನಂಬಿಕೆಯಿದೆ. ಶ್ರಿ ಸುಬ್ರಹ್ಮಣ್ಯ ಷಷ್ಠಿಯಂದು ಭಕ್ತರು ಈರುಳ್ಳಿ, ಬೆಳ್ಳುಳ್ಳಿ ಬೆರೆಸದ ಸಾತ್ವಿಕ ಆಹಾರ ಸೇವಿಸುವುದು ಅಥವಾ ಉಪವಾಸ ವೃತದೊಂದಿಗೆ ಪೂಜೆ, ಭಜನೆ, ಧ್ಯಾನ,…
ನಾಪೋಕ್ಲು ಡಿ.16 : ಮಡಿಕೇರಿ ತಾಲೂಕಿನ ಎರಡನೆಯ ಮುಖ್ಯ ಪಟ್ಟಣವಾಗಿರುವ ನಾಪೋಕ್ಲುವಿನಿಂದ ಬೇತು ಮಾರ್ಗವಾಗಿ ಎರಡು ಕಿ.ಮೀ. ಅಂತರನವನು ಕ್ರಮಿಸಿದರೆ ಸಿಗುವ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನ ಒಂದು ಸುಂದರ ಪರಿಸರ. ದೇಗುಲ ಎಂದೊಡನೆ ತಟ್ಟನೆ ನೆನಪಾಗುವ ಗುಡಿಗೋಪುರಗಳು ಇಲ್ಲಿಲ್ಲ. ಎತ್ತರದ ಸಮತಟ್ಟು ಸ್ಥಳದಲ್ಲಿ ಹಚ್ಚ ಹಸಿರ ಪರಿಸರದ ನಡುವೆ 6 ಅಡಿ ಎತ್ತರದ ವೃತ್ತಾಕಾರದ ಕಟ್ಟೆ. ಇದರ ನಡುವೆ ತ್ರಿಶೂಲಧಾರಿ ಶಿಲಾಮೂರ್ತಿ ಶಾಸ್ತಾವು ದೇವರಿಗೆ ಕೊಡೆ ಹಿಡಿದಂತೆ ತೋರುವ ಒಂದು ಹಲಸಿನ ಮರ. ಸುತ್ತಲೂ ಸಹಸ್ರಾರು ಹರಕೆಯ ನಾಯಿಗಳು. ಮಕ್ಕಿ ಶಾಸ್ತಾವು ನಿಸರ್ಗ ದೇವಾಲಯಗಳಲ್ಲಿ ಒಂದು. ವರ್ಷಕ್ಕೆರಡು ಬಾರಿ ಆಕರ್ಷಕ ಹಬ್ಬ ಜರುಗುತ್ತದೆ. ಅದೇ ಅಲ್ಲಿನ ಪ್ರಮುಖ ಆಕರ್ಷಣೆ. ಅಸಂಖ್ಯ ಭಕ್ತರು ಸೇರಿ ಸಂಭ್ರಮಿಸುವ ವಿಭಿನ್ನ ಆಚರಣೆಗಳ ಹಬ್ಬ. ಒಮ್ಮೆ ಮೇ ತಿಂಗಳಲ್ಲಿ ಜರುಗಿದರೆ ಮತ್ತೊಮ್ಮೆ ಡಿಸೆಂಬರ್ನಲ್ಲಿ ನಡೆಯುತ್ತದೆ. ಎತ್ತು ಪೋರಾಟ, ದೀಪಾರಾಧನೆ, ಅಜ್ಜಪ್ಪ ಕೋಲ ಹಾಗೂ ವಿಷ್ಣುಮೂರ್ತಿ ಕೋಲಗಳು, ಮೇಲೆರಿ ಮುಂತಾದ ಹಲವು ಆಚರಣೆಗಳೊಂದಿಗೆ ಶ್ರೀ ಶಾಸ್ತಾವು ಹಬ್ಬ…
ಮಡಿಕೇರಿ ಡಿ.16 : ಸುಸಂಸ್ಕೃತ ಕೊಡವ ಜನಾಂಗಕ್ಕೆ ಜೀವನಾದರ್ಶ ಮತ್ತು ಸಂಸ್ಕೃತಿಯ ಪ್ರತೀಕವಾಗಿರುವ ಐನ್ಮನೆಯೇ ಆಧಾರ ಸ್ತಂಭವಾಗಿದೆ. ಕೊಡಗಿನ ಐನ್ಮನೆಗಳು ಚೇತರಿಸಿಕೊಳ್ಳುವ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟ ಪ್ರಕಟಿಸಿದ 77ನೇ ಪುಸ್ತಕ ಹಾಗೂ ಲೇಖಕಿ ಐಚಂಡ ರಶ್ಮಿ ಮೇದಪ್ಪ ಅವರು ಬರೆದಿರುವ 2ನೇ ಪುಸ್ತಕ “ಸಾಂಸ್ಕೃತಿಕ ಪಿಂಞ ಧಾರ್ಮಿಕ ಹಿನ್ನಲೆಲ್ ಕೊಡವಡ ಐನ್ಮನೆ” ಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಐನ್ಮನೆಗಳು ಕೊಡವರ ಜೀವನಾದರ್ಶ, ಸಂಸ್ಕೃತಿ, ಸಭ್ಯತೆಗಳ ಪ್ರತೀಕವಾಗಿದ್ದು, ವಂಶದ ಮೂಲ ಕಾರಣ ಪುರುಷರನ್ನು ಇಲ್ಲಿ ನೆಲೆಗೊಳಿಸಿ ಪೂಜಿಸುವುದರಿಂದ ಈ ಮನೆಗೆ ಪೂಜನೀಯ ಸ್ಥಾನಮಾನವಿದೆ. ಕೊಡವ ಜನಾಂಗದ ಸಂಸ್ಕೃತಿಗೆ ಜೀವ ತುಂಬಿರುವ ಐನ್ಮನೆಯ ಕುರಿತು ಪುಸ್ತಕ ರಚಿಸಿರುವುದು ಶ್ಲಾಘನೀಯವೆಂದರು. ಐನ್ಮನೆಯಲ್ಲಿ ಕಲಾತ್ಮಕತೆ ಇದೆ, ಕೊಡವ ಸಂಸ್ಕೃತಿಯ ಜೀವವಿದೆ, ಕೊಡವ ಜನಾಂಗದ ಜೀವಮಾನ ಅಡಗಿದೆ. ಈ ಪೂಜನೀಯ ಮತ್ತು ಭಾವನೀಯ ಐನ್ಮನೆಯನ್ನು ಉಳಿಸಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ಎಲ್ಲರ ಮೇಲಿದೆ.…
ಸುಂಟಿಕೊಪ್ಪ,ಡಿ.16: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್-ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ ದಳಗಳ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು. ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಗೈಡ್ಸ್ನ ಸಂಘಟಕರಾದ ದಮಯಂತಿ ಧ್ವಜಾರೋಹಣ ನೇರವೇರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ನ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಅದೇ ರೀತಿಯಲ್ಲಿ ಸಮಾಜದಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಸೇವೆಯನ್ನು ಸಲ್ಲಿಸುವ ಮೂಲಕ ಸೇವಾ ಮನೋಭಾವನೆಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು. ಕಾವೇರಿ ನಿಸರ್ಗಧಾಮದ ವನರಕ್ಷಕರು ಅರಣ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡಿದರು. ನಂತರ 4 ದಳಗಳ ಸದಸ್ಯರು ವಿವಿಧ ಚಟುವಟಿಕೆಗಳಾದ ಪರಿಸರ ವೀಕ್ಷಣೆ, ಸಾಹಸ ಕ್ರೀಡೆ ಮೂಲಕ ಮನರಂಜಿಸಿ ಉತ್ತಮ ಮೌಲ್ಯಗಳ ವಿಚಾರದ ಕುರಿತು ಮಾಹಿತಿಯನ್ನು ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾದ್ಯಯಿನಿ ವೀರಾ…
ಮಡಿಕೇರಿ ಡಿ.16 : ಧನ್ಯಶ್ರೀ ನೃತ್ಯ ಕಲಾನಿಕೇತನ ವತಿಯಿಂದ ಭರತನಾಟ್ಯ ಕಲಾವಿದೆ ಪ್ರೇಕ್ಷ ಭಟ್ ಅವರ “ಭರತನಾಟ್ಯ ರಂಗಪ್ರವೇಶ” ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಶ್ರೀಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಹಾಸನದ “ನಾಟ್ಯಶ್ರೀ” ಭಾರತೀಯ ಸಂಗೀತ ನೃತ್ಯ ಕಲಾ ಶಾಲೆಯ ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ ಹಾಗೂ ಪೊನ್ನಂಪೇಟೆ ನಿನಾದ ವಿದ್ಯಾಸಂಸ್ಥೆಯ ಚೇಂದಿರ ನಿರ್ಮಲ ಬೋಪಣ್ಣ ಅವರು ಭರತನಾಟ್ಯ ಕಲೆ ಮತ್ತು ಭಾರತೀಯ ಸಂಸ್ಕೃತಿಯ ಕುರಿತು ಮಾತನಾಡಿದರು. ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ, ಚೇಂದಿರ ನಿರ್ಮಲ ಬೋಪಣ್ಣ, ಕೊಡಗಿನ ಹಿರಿಯ ಕಲಾವಿದರಾದ ಅಂಬಳೆ ಸತ್ಯಪ್ರಸಾದ್ ದಂಪತಿ, ಪ್ರೇಕ್ಷ ಭಟ್ ಅವರ ಗುರುಗಳಾದ ಬೆಂಗಳೂರಿನ ಧನ್ಯಶ್ರೀ, ಸೌತಡ್ಕ ಮಹಾ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ವೇದ ಪಂಡಿತರು ಆದ ಗೋಪಾಲಕೃಷ್ಣ ಗೋಕುಲ ಅಡಿಗ ದಂಪತಿ, ಕಾರ್ಯಕ್ರಮದಲ್ಲಿ ಹಿಮ್ಮೇಳದಲ್ಲಿ ಭಾಗವಹಿಸಿದ ಕಲಾವಿದರು, ರಂಗಸಜ್ಜಿಕೆ ಹಾಗೂ ಅಲಂಕಾರ ನಿರ್ವಹಿಸಿದ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಮಾರಿ ಪ್ರೇಕ್ಷ ಭಟ್ ಸತತ 2…
ಮಡಿಕೇರಿ ಡಿ.16 : ವನ್ಯಜೀವಿಗಳ ಸ್ವಚ್ಛಂದ ಬದುಕಿಗೆ ತೊಡಕಾಗಬಲ್ಲ ಅರಣ್ಯ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬಾರದೆಂದು ರೈತ ಸಂಘದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ತಿತಿಮತಿಯ ಅರಣ್ಯ ಇಲಾಖೆಯ ಅತಿಥಿಗೃಹದಲ್ಲಿ ನಾಗರಹೊಳೆ ವನ್ಯಜೀವಿ ವಿಭಾಗ, ಕೊಡಗು ಮತ್ತು ಹುಣಸೂರು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ರೈತ ಸಂಘದ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಮತ್ತಿಗೋಡು ಸಾಕಾನೆ ಶಿಬಿರದ ಪ್ರವಾಸೋದ್ಯಮ ಚಟುವಟಿಕೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು. ತಿತಿಮತಿ- ಹುಣಸೂರು ಹೆದ್ದಾರಿಯಲ್ಲಿ ವಾಹನದಟ್ಟಣೆ ಹೆಚ್ಚಾಗಿ ತೊಂದರೆಯಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಹೊಸ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ನೀಡಬಾರದು. ಅರಣ್ಯ ಪ್ರವಾಸೋದ್ಯಮದಿಂದ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾಡಾನೆ, ಹುಲಿ ಮತ್ತು ಚಿರತೆಗಳಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ದಾಳಿ ಹಾಗೂ ಕೃಷಿಕರು ಅನುಭವಿಸುತ್ತಿರುವ ನಷ್ಟದ ಕುರಿತು ವಿವರಿಸಿದ ರೈತ ಸಂಘದ ಪದಾಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಒತ್ತಾಯಿಸಿದರು. ಹಿರಿಯ ಅರಣ್ಯ ಅಧಿಕಾರಿಗಳು ಹಾಗೂ ರೈತ ಸಂಘದ…
ಮಡಿಕೇರಿ ಡಿ.16 : ಕಳೆದ ಒಂದೂವರೆ ತಿಂಗಳಿನಿಂದ ಆಹಾರಕ್ಕಾಗಿ ಪರದಾಡುತ್ತ ಹಾರಂಗಿ ಹಿನ್ನೀರಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ದೃಷ್ಟಿ ದೋಷದ ಹೆಣ್ಣು ಕಾಡಾನೆ ಮೃತಪಟ್ಟಿದೆ. ಸೋಮವಾರಪೇಟೆ ಸಮೀಪದ ಸಜ್ಜಳ್ಳಿ ಗ್ರಾಮದ ಹಾರಂಗಿ ಹಿನ್ನೀರು ಪ್ರದೇಶದಲ್ಲಿ ನಿತ್ರಾಣಗೊಂಡು ಬಿದ್ದಿದ್ದ 35 ವರ್ಷದ ಹೆಣ್ಣು ಕಾಡಾನೆಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚೇತರಿಸಿಕೊಳ್ಳದ ಕಾಡಾನೆ ಸಾವನ್ನಪ್ಪಿದೆ. ಆಹಾರವಿಲ್ಲದೆ ಅಸ್ವಸ್ಥಗೊಂಡಿದ್ದ ಹೆಣ್ಣಾನೆಗೆ ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದರು. ಒಂದು ಕಣ್ಣು ಸಂಪೂರ್ಣವಾಗಿ ಕುರುಡಾಗಿತ್ತು, ಮತ್ತೊಂದು ಕಣ್ಣು ಮಂದವಾಗಿತ್ತು. ಈ ಕಾರಣದಿಂದ ತನಗೆ ಬೇಕಾದ ಆಹಾರವನ್ನು ಪಡೆದುಕೊಳ್ಳಲು ಸಾಧ್ಯವಾಗದ ಕಾಡಾನೆ ನಿತ್ರಾಣಗೊಂಡಿತ್ತು. ಕುಡಿಯುವ ನೀರಿಗಾಗಿ ಹಾರಂಗಿ ಹಿನ್ನೀರಿಗೆ ಬಂದು ಕುಸಿದು ಬಿದ್ದಿತ್ತು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.






